Homeಮುಖಪುಟಗುಜರಾತ್‌: LSD ಸೋಂಕಿನಿಂದ 1240ಕ್ಕೂ ಅಧಿಕ ಹಸುಗಳ ಸಾವು

ಗುಜರಾತ್‌: LSD ಸೋಂಕಿನಿಂದ 1240ಕ್ಕೂ ಅಧಿಕ ಹಸುಗಳ ಸಾವು

- Advertisement -
- Advertisement -

Lumpy skin disease ಎಂದು ಕರೆಯುವ ರೋಗ ತಗಲಿ 1240ಕ್ಕೂ ಅಧಿಕ ಹಸುಗಳು ಸಾವನಪ್ಪಿರುವ ಘಟನೆ ಗುಜರಾತ್‌ನಲ್ಲಿ ವರದಿಯಾಗಿದೆ. ಈ ರೋಗದ ಸೋಂಕು ರಾಜ್ಯದ 17 ಜಿಲ್ಲೆಗಳಲ್ಲಿ ವ್ಯಾಪಿಸಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಜ್ಯ ಕೃಷಿ ಮತ್ತು ಪಶುಸಂಗೋಪನೆ ಇಲಾಕೆಯ ಸಚಿವ ರಾಘವ್‌ಜಿ ಪಟೇಲ್ ಮಾತನಾಡಿ, “ಈ ವೈರಲ್ ಕಾಯಿಲೆಗೆ ತುತ್ತಾಗಿ ಶನಿವಾರದವರೆಗೆ 1240 ಹಸುಗಳು ಸಾವನಪ್ಪಿವೆ. ರಾಜ್ಯದ 33 ಜಿಲ್ಲೆಗಳಲ್ಲಿ 17 ಜಿಲ್ಲೆಗಳಿಗೆ, ಅದರಲ್ಲಿಯೂ ಸೌರಾಷ್ಟ್ರ ಪ್ರಾಂತ್ಯದಲ್ಲಿ ಈ ವೈರಸ್ ಹರಡಿದೆ. ಆದರೂ 5.74 ಲಕ್ಷ ಪ್ರಾಣಿಗಳಿಗೆ ಕಾಯಿಲೆಯ ವಿರುದ್ಧ ಲಸಿಕೆ ಹಾಕಲಾಗಿದೆ” ಎಂದಿದ್ದಾರೆ.

ಈ ವೈರಸ್ ದಾಳಿಯಿಂದ ಹಸುಗಳನ್ನು ಉಳಿಸುವುದಕ್ಕಾಗಿ ಹಲವು ಜಿಲ್ಲಾಡಳಿತಗಳು ತುರ್ತುಕ್ರಮಕ್ಕೆ ಮುಂದಾಗಿವೆ. ಹಸುಗಳ ಜಾತ್ರೆಗಳನ್ನು ರದ್ದುಪಡಿಸಿದ್ದು, ಆಗಸ್ಟ್ 21ರವರೆಗೆ ಹಸುಗಳ ಸಾಗಾಣೆಯನ್ನು ನಿಷೇಧಿಸಲಾಗಿದೆ.

ಸಾವನಪ್ಪಿದ ಹಸುಗಳ ರಾಶಿ ಎಲ್ಲೆಂದರಲ್ಲಿ ಕೊಳೆಯುತ್ತಿದ್ದು ಅವುಗಳ ಫೋಟೊ ಮತ್ತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಹಸುಗಳ ಸಾವಿನ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಆಡಳಿತರೂಢ ಬಿಜೆಪಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದೆ. “ಹಸುಗಳ ಸಾವಿನ ಸಂಖ್ಯೆಯನ್ನು ಮುಚ್ಚಿಡಲಾಗುತ್ತಿದೆ ಮತ್ತು ಕಡಿಮೆ ತೋರಿಸಲಾಗುತ್ತಿದೆ. ಈ ರೋಗಕ್ಕೆ ಹಸುಗಳನ್ನು ಕಳೆದುಕೊಂಡ ರೈತರಿಗೆ ಯಾವುದೇ ಪರಿಹಾರ ನೀಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಸರ್ಕಾರವು ಆಯಾ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸಿ ಕಾಯಿಲೆಯಿಂದ ಹಸುಗಳನ್ನು ರಕ್ಷಿಸುವಂತೆ ಆದೇಶಿಸಿದೆ. ಸಮಿತಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರು, ಪಶುವೈದ್ಯರು ಮತ್ತು ಇನ್ನಿತರ ಅಧಿಕಾರಿಗಳ ಸೇರಿದ್ದಾರೆ ಎನ್ನಲಾಗಿದೆ.

ರಾಜ್ಯದ 1746 ಹಳ್ಳಿಗಳಲ್ಲಿ ಒಟ್ಟು 50,328 ಹಸುಗಳಿಗೆ ಈ ಸೋಂಕು ತಗುಲಿದೆ. ಪ್ರತಿ 10 ಹಳ್ಳಿಗೆ ಒಂದು ಮೊಬೈಲ್ ವಾಹನದ ಪಶು ಆಸ್ಪತ್ರೆ ತೆರೆಯಲಾಗಿದೆ. ರಾಜ್ಯದ ಪಶು ಸಂಗೋಪನಾ ಕಾಲೇಜುಗಳ ವಿದ್ಯಾರ್ಥಿಗಳನ್ನು ಸಹ ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಏನಿದು Lumpy skin disease?

ಸೊಳ್ಳೆಗಳು, ನೊಣಗಳು, ಕೀಟಗಳು ಇತ್ಯಾದಿಗಳಿಂದ ಅಥವಾ ನೇರ ಸಂಪರ್ಕ, ಕಲುಷಿತ ಆಹಾರ ಮತ್ತು ನೀರಿನಿಂದ ಹರಡುವ ವೈರಲ್ ಸೋಂಕು ಲಂಪಿ ಚರ್ಮದ ಕಾಯಿಲೆಯಾಗಿದೆ. ಇದರ ಮುಖ್ಯ ಲಕ್ಷಣಗಳೆಂದರೆ ಪ್ರಾಣಿಗಳಲ್ಲಿ ಸಾಮಾನ್ಯ ಜ್ವರ, ಕಣ್ಣು ಮತ್ತು ಮೂಗಿನಿಂದ ಸ್ರವಿಸುವಿಕೆ, ಅತಿಯಾದ ಜೊಲ್ಲು ಸುರಿಸುವುದು, ದೇಹದಲ್ಲಿ ಗಂಟುಗಳಂತಹ ಮೃದುವಾದ ಗುಳ್ಳೆಗಳು, ಕಡಿಮೆ ಹಾಲು ಉತ್ಪಾದನೆ ಕಂಡುಬರುತ್ತದೆ. ಆ ಪ್ರಾಣಿಗಳು ಆಹಾರ ತಿನ್ನಲು ತೊಂದರೆಯಾಗುತ್ತದೆ. ಇದು ಕೆಲವೊಮ್ಮೆ ಪ್ರಾಣಿಗಳ ಸಾವಿಗೆ ಕಾರಣವಾಗಬಹುದು.

ಇದನ್ನೂ ಓದಿ: ಮಧ್ಯಪ್ರದೇಶ: ಬೈಕ್‌ನಲ್ಲಿ 80 ಕಿ.ಮೀ ದೂರ ತಾಯಿಯ ಶವ ಸಾಗಿಸಿದ ಅಮಾನವೀಯ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...