Homeಮುಖಪುಟಗುಜರಾತ್‌: LSD ಸೋಂಕಿನಿಂದ 1240ಕ್ಕೂ ಅಧಿಕ ಹಸುಗಳ ಸಾವು

ಗುಜರಾತ್‌: LSD ಸೋಂಕಿನಿಂದ 1240ಕ್ಕೂ ಅಧಿಕ ಹಸುಗಳ ಸಾವು

- Advertisement -
- Advertisement -

Lumpy skin disease ಎಂದು ಕರೆಯುವ ರೋಗ ತಗಲಿ 1240ಕ್ಕೂ ಅಧಿಕ ಹಸುಗಳು ಸಾವನಪ್ಪಿರುವ ಘಟನೆ ಗುಜರಾತ್‌ನಲ್ಲಿ ವರದಿಯಾಗಿದೆ. ಈ ರೋಗದ ಸೋಂಕು ರಾಜ್ಯದ 17 ಜಿಲ್ಲೆಗಳಲ್ಲಿ ವ್ಯಾಪಿಸಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಜ್ಯ ಕೃಷಿ ಮತ್ತು ಪಶುಸಂಗೋಪನೆ ಇಲಾಕೆಯ ಸಚಿವ ರಾಘವ್‌ಜಿ ಪಟೇಲ್ ಮಾತನಾಡಿ, “ಈ ವೈರಲ್ ಕಾಯಿಲೆಗೆ ತುತ್ತಾಗಿ ಶನಿವಾರದವರೆಗೆ 1240 ಹಸುಗಳು ಸಾವನಪ್ಪಿವೆ. ರಾಜ್ಯದ 33 ಜಿಲ್ಲೆಗಳಲ್ಲಿ 17 ಜಿಲ್ಲೆಗಳಿಗೆ, ಅದರಲ್ಲಿಯೂ ಸೌರಾಷ್ಟ್ರ ಪ್ರಾಂತ್ಯದಲ್ಲಿ ಈ ವೈರಸ್ ಹರಡಿದೆ. ಆದರೂ 5.74 ಲಕ್ಷ ಪ್ರಾಣಿಗಳಿಗೆ ಕಾಯಿಲೆಯ ವಿರುದ್ಧ ಲಸಿಕೆ ಹಾಕಲಾಗಿದೆ” ಎಂದಿದ್ದಾರೆ.

ಈ ವೈರಸ್ ದಾಳಿಯಿಂದ ಹಸುಗಳನ್ನು ಉಳಿಸುವುದಕ್ಕಾಗಿ ಹಲವು ಜಿಲ್ಲಾಡಳಿತಗಳು ತುರ್ತುಕ್ರಮಕ್ಕೆ ಮುಂದಾಗಿವೆ. ಹಸುಗಳ ಜಾತ್ರೆಗಳನ್ನು ರದ್ದುಪಡಿಸಿದ್ದು, ಆಗಸ್ಟ್ 21ರವರೆಗೆ ಹಸುಗಳ ಸಾಗಾಣೆಯನ್ನು ನಿಷೇಧಿಸಲಾಗಿದೆ.

ಸಾವನಪ್ಪಿದ ಹಸುಗಳ ರಾಶಿ ಎಲ್ಲೆಂದರಲ್ಲಿ ಕೊಳೆಯುತ್ತಿದ್ದು ಅವುಗಳ ಫೋಟೊ ಮತ್ತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಹಸುಗಳ ಸಾವಿನ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಆಡಳಿತರೂಢ ಬಿಜೆಪಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದೆ. “ಹಸುಗಳ ಸಾವಿನ ಸಂಖ್ಯೆಯನ್ನು ಮುಚ್ಚಿಡಲಾಗುತ್ತಿದೆ ಮತ್ತು ಕಡಿಮೆ ತೋರಿಸಲಾಗುತ್ತಿದೆ. ಈ ರೋಗಕ್ಕೆ ಹಸುಗಳನ್ನು ಕಳೆದುಕೊಂಡ ರೈತರಿಗೆ ಯಾವುದೇ ಪರಿಹಾರ ನೀಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಸರ್ಕಾರವು ಆಯಾ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸಿ ಕಾಯಿಲೆಯಿಂದ ಹಸುಗಳನ್ನು ರಕ್ಷಿಸುವಂತೆ ಆದೇಶಿಸಿದೆ. ಸಮಿತಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರು, ಪಶುವೈದ್ಯರು ಮತ್ತು ಇನ್ನಿತರ ಅಧಿಕಾರಿಗಳ ಸೇರಿದ್ದಾರೆ ಎನ್ನಲಾಗಿದೆ.

ರಾಜ್ಯದ 1746 ಹಳ್ಳಿಗಳಲ್ಲಿ ಒಟ್ಟು 50,328 ಹಸುಗಳಿಗೆ ಈ ಸೋಂಕು ತಗುಲಿದೆ. ಪ್ರತಿ 10 ಹಳ್ಳಿಗೆ ಒಂದು ಮೊಬೈಲ್ ವಾಹನದ ಪಶು ಆಸ್ಪತ್ರೆ ತೆರೆಯಲಾಗಿದೆ. ರಾಜ್ಯದ ಪಶು ಸಂಗೋಪನಾ ಕಾಲೇಜುಗಳ ವಿದ್ಯಾರ್ಥಿಗಳನ್ನು ಸಹ ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಏನಿದು Lumpy skin disease?

ಸೊಳ್ಳೆಗಳು, ನೊಣಗಳು, ಕೀಟಗಳು ಇತ್ಯಾದಿಗಳಿಂದ ಅಥವಾ ನೇರ ಸಂಪರ್ಕ, ಕಲುಷಿತ ಆಹಾರ ಮತ್ತು ನೀರಿನಿಂದ ಹರಡುವ ವೈರಲ್ ಸೋಂಕು ಲಂಪಿ ಚರ್ಮದ ಕಾಯಿಲೆಯಾಗಿದೆ. ಇದರ ಮುಖ್ಯ ಲಕ್ಷಣಗಳೆಂದರೆ ಪ್ರಾಣಿಗಳಲ್ಲಿ ಸಾಮಾನ್ಯ ಜ್ವರ, ಕಣ್ಣು ಮತ್ತು ಮೂಗಿನಿಂದ ಸ್ರವಿಸುವಿಕೆ, ಅತಿಯಾದ ಜೊಲ್ಲು ಸುರಿಸುವುದು, ದೇಹದಲ್ಲಿ ಗಂಟುಗಳಂತಹ ಮೃದುವಾದ ಗುಳ್ಳೆಗಳು, ಕಡಿಮೆ ಹಾಲು ಉತ್ಪಾದನೆ ಕಂಡುಬರುತ್ತದೆ. ಆ ಪ್ರಾಣಿಗಳು ಆಹಾರ ತಿನ್ನಲು ತೊಂದರೆಯಾಗುತ್ತದೆ. ಇದು ಕೆಲವೊಮ್ಮೆ ಪ್ರಾಣಿಗಳ ಸಾವಿಗೆ ಕಾರಣವಾಗಬಹುದು.

ಇದನ್ನೂ ಓದಿ: ಮಧ್ಯಪ್ರದೇಶ: ಬೈಕ್‌ನಲ್ಲಿ 80 ಕಿ.ಮೀ ದೂರ ತಾಯಿಯ ಶವ ಸಾಗಿಸಿದ ಅಮಾನವೀಯ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....