Homeಮುಖಪುಟಗುಜರಾತ್‌: LSD ಸೋಂಕಿನಿಂದ 1240ಕ್ಕೂ ಅಧಿಕ ಹಸುಗಳ ಸಾವು

ಗುಜರಾತ್‌: LSD ಸೋಂಕಿನಿಂದ 1240ಕ್ಕೂ ಅಧಿಕ ಹಸುಗಳ ಸಾವು

- Advertisement -
- Advertisement -

Lumpy skin disease ಎಂದು ಕರೆಯುವ ರೋಗ ತಗಲಿ 1240ಕ್ಕೂ ಅಧಿಕ ಹಸುಗಳು ಸಾವನಪ್ಪಿರುವ ಘಟನೆ ಗುಜರಾತ್‌ನಲ್ಲಿ ವರದಿಯಾಗಿದೆ. ಈ ರೋಗದ ಸೋಂಕು ರಾಜ್ಯದ 17 ಜಿಲ್ಲೆಗಳಲ್ಲಿ ವ್ಯಾಪಿಸಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಜ್ಯ ಕೃಷಿ ಮತ್ತು ಪಶುಸಂಗೋಪನೆ ಇಲಾಕೆಯ ಸಚಿವ ರಾಘವ್‌ಜಿ ಪಟೇಲ್ ಮಾತನಾಡಿ, “ಈ ವೈರಲ್ ಕಾಯಿಲೆಗೆ ತುತ್ತಾಗಿ ಶನಿವಾರದವರೆಗೆ 1240 ಹಸುಗಳು ಸಾವನಪ್ಪಿವೆ. ರಾಜ್ಯದ 33 ಜಿಲ್ಲೆಗಳಲ್ಲಿ 17 ಜಿಲ್ಲೆಗಳಿಗೆ, ಅದರಲ್ಲಿಯೂ ಸೌರಾಷ್ಟ್ರ ಪ್ರಾಂತ್ಯದಲ್ಲಿ ಈ ವೈರಸ್ ಹರಡಿದೆ. ಆದರೂ 5.74 ಲಕ್ಷ ಪ್ರಾಣಿಗಳಿಗೆ ಕಾಯಿಲೆಯ ವಿರುದ್ಧ ಲಸಿಕೆ ಹಾಕಲಾಗಿದೆ” ಎಂದಿದ್ದಾರೆ.

ಈ ವೈರಸ್ ದಾಳಿಯಿಂದ ಹಸುಗಳನ್ನು ಉಳಿಸುವುದಕ್ಕಾಗಿ ಹಲವು ಜಿಲ್ಲಾಡಳಿತಗಳು ತುರ್ತುಕ್ರಮಕ್ಕೆ ಮುಂದಾಗಿವೆ. ಹಸುಗಳ ಜಾತ್ರೆಗಳನ್ನು ರದ್ದುಪಡಿಸಿದ್ದು, ಆಗಸ್ಟ್ 21ರವರೆಗೆ ಹಸುಗಳ ಸಾಗಾಣೆಯನ್ನು ನಿಷೇಧಿಸಲಾಗಿದೆ.

ಸಾವನಪ್ಪಿದ ಹಸುಗಳ ರಾಶಿ ಎಲ್ಲೆಂದರಲ್ಲಿ ಕೊಳೆಯುತ್ತಿದ್ದು ಅವುಗಳ ಫೋಟೊ ಮತ್ತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಹಸುಗಳ ಸಾವಿನ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಆಡಳಿತರೂಢ ಬಿಜೆಪಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದೆ. “ಹಸುಗಳ ಸಾವಿನ ಸಂಖ್ಯೆಯನ್ನು ಮುಚ್ಚಿಡಲಾಗುತ್ತಿದೆ ಮತ್ತು ಕಡಿಮೆ ತೋರಿಸಲಾಗುತ್ತಿದೆ. ಈ ರೋಗಕ್ಕೆ ಹಸುಗಳನ್ನು ಕಳೆದುಕೊಂಡ ರೈತರಿಗೆ ಯಾವುದೇ ಪರಿಹಾರ ನೀಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಸರ್ಕಾರವು ಆಯಾ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸಿ ಕಾಯಿಲೆಯಿಂದ ಹಸುಗಳನ್ನು ರಕ್ಷಿಸುವಂತೆ ಆದೇಶಿಸಿದೆ. ಸಮಿತಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರು, ಪಶುವೈದ್ಯರು ಮತ್ತು ಇನ್ನಿತರ ಅಧಿಕಾರಿಗಳ ಸೇರಿದ್ದಾರೆ ಎನ್ನಲಾಗಿದೆ.

ರಾಜ್ಯದ 1746 ಹಳ್ಳಿಗಳಲ್ಲಿ ಒಟ್ಟು 50,328 ಹಸುಗಳಿಗೆ ಈ ಸೋಂಕು ತಗುಲಿದೆ. ಪ್ರತಿ 10 ಹಳ್ಳಿಗೆ ಒಂದು ಮೊಬೈಲ್ ವಾಹನದ ಪಶು ಆಸ್ಪತ್ರೆ ತೆರೆಯಲಾಗಿದೆ. ರಾಜ್ಯದ ಪಶು ಸಂಗೋಪನಾ ಕಾಲೇಜುಗಳ ವಿದ್ಯಾರ್ಥಿಗಳನ್ನು ಸಹ ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಏನಿದು Lumpy skin disease?

ಸೊಳ್ಳೆಗಳು, ನೊಣಗಳು, ಕೀಟಗಳು ಇತ್ಯಾದಿಗಳಿಂದ ಅಥವಾ ನೇರ ಸಂಪರ್ಕ, ಕಲುಷಿತ ಆಹಾರ ಮತ್ತು ನೀರಿನಿಂದ ಹರಡುವ ವೈರಲ್ ಸೋಂಕು ಲಂಪಿ ಚರ್ಮದ ಕಾಯಿಲೆಯಾಗಿದೆ. ಇದರ ಮುಖ್ಯ ಲಕ್ಷಣಗಳೆಂದರೆ ಪ್ರಾಣಿಗಳಲ್ಲಿ ಸಾಮಾನ್ಯ ಜ್ವರ, ಕಣ್ಣು ಮತ್ತು ಮೂಗಿನಿಂದ ಸ್ರವಿಸುವಿಕೆ, ಅತಿಯಾದ ಜೊಲ್ಲು ಸುರಿಸುವುದು, ದೇಹದಲ್ಲಿ ಗಂಟುಗಳಂತಹ ಮೃದುವಾದ ಗುಳ್ಳೆಗಳು, ಕಡಿಮೆ ಹಾಲು ಉತ್ಪಾದನೆ ಕಂಡುಬರುತ್ತದೆ. ಆ ಪ್ರಾಣಿಗಳು ಆಹಾರ ತಿನ್ನಲು ತೊಂದರೆಯಾಗುತ್ತದೆ. ಇದು ಕೆಲವೊಮ್ಮೆ ಪ್ರಾಣಿಗಳ ಸಾವಿಗೆ ಕಾರಣವಾಗಬಹುದು.

ಇದನ್ನೂ ಓದಿ: ಮಧ್ಯಪ್ರದೇಶ: ಬೈಕ್‌ನಲ್ಲಿ 80 ಕಿ.ಮೀ ದೂರ ತಾಯಿಯ ಶವ ಸಾಗಿಸಿದ ಅಮಾನವೀಯ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...