Homeಮುಖಪುಟಗುಜರಾತ್‌ | 64 ವರ್ಷಗಳ ನಂತರ ಪಕ್ಷದ ರಾಷ್ಟ್ರೀಯ ಅಧಿವೇಶನ ನಡೆಸಲಿರುವ ಕಾಂಗ್ರೆಸ್!

ಗುಜರಾತ್‌ | 64 ವರ್ಷಗಳ ನಂತರ ಪಕ್ಷದ ರಾಷ್ಟ್ರೀಯ ಅಧಿವೇಶನ ನಡೆಸಲಿರುವ ಕಾಂಗ್ರೆಸ್!

- Advertisement -
- Advertisement -

ಬರೋಬ್ಬರಿ 64 ವರ್ಷಗಳ ನಂತರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತನ್ನ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧಿವೇಶನವನ್ನು ಗುಜರಾತ್‌ನ ಅಹಮದಾಬಾದ್‌ನಲ್ಲಿ ಏಪ್ರಿಲ್ 8, 9ರಂದು 2025 ರಂದು ನಡೆಸಲಿದೆ ಎಂದು ವರದಿಯಾಗಿದೆ. ರಾಜ್ಯದಲ್ಲಿ ಕೊನೆಯ ಬಾರಿಗೆ ಇಂತಹ ಅಧಿವೇಶನವು 1961 ರಲ್ಲಿ ಭಾವನಗರದಲ್ಲಿ ನಡೆದಿತ್ತು. ಗುಜರಾತ್‌

ದೇಶಾದ್ಯಂತದ ಪಕ್ಷದ ಪ್ರತಿನಿಧಿಗಳು ಒಟ್ಟುಗೂಡುತ್ತಿರುವ ಈ ಸಭೆಯಲ್ಲಿ, ಸಂವಿಧಾನ ಮತ್ತು ಅದರ ಮೌಲ್ಯಗಳ ಮೇಲಿನ ನಿರಂತರ ದಾಳಿಗಳು ಹಾಗೂ ಬಿಜೆಪಿಯ ಜನ ವಿರೋಧಿ ನೀತಿಗಳ ವಿಷಯಗಳನ್ನು ಕಾಂಗ್ರೆಸ್ ಕೇಂದ್ರೀಕರಿಸಲಿದೆ. ಜೊತೆಗೆ ಅಧಿವೇಶನವು ಪಕ್ಷದ ಭವಿಷ್ಯದ ಕಾರ್ಯತಂತ್ರವನ್ನು ರೂಪಿಸುವ ನಿರೀಕ್ಷೆಯಿದೆ.

ಆದಾಗ್ಯೂ, ಕಾಂಗ್ರೆಸ್ ಗುಜರಾತ್‌ನಲ್ಲಿ ಪದೇ ಪದೇ ಚುನಾವಣಾ ಹಿನ್ನಡೆಗಳನ್ನು ಎದುರಿಸುತ್ತಿದೆ. ಇತ್ತೀಚಿನ ಪುರಸಭೆ ಚುನಾವಣೆಗಳಲ್ಲಿ ಪಕ್ಷವು ಕಳಪೆ ಪ್ರದರ್ಶನ ಮಾಡಿದೆ. ಈ ಫಲಿತಾಂಶವೆ ರಾಜ್ಯದಲ್ಲಿ ಅದು ಎದುರಿಸುತ್ತಿರುವ ಸವಾಲನ್ನು ಒತ್ತಿಹೇಳುತ್ತದೆ. ಈ ಹಿನ್ನೆಲೆಯಲ್ಲಿ, ಮುಂಬರುವ ಅಧಿವೇಶನವು ಮಿಷನ್ -2027 ಗಾಗಿ ಪಕ್ಷವು ಸಜ್ಜಾಗುತ್ತಿದೆ.

ಸೋಮವಾರ ಗುಜರಾತ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಶಕ್ತಿ ಸಿಂಗ್ ಗೋಹಿಲ್, “ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) 51 ನೇ ಅಧಿವೇಶನವು ಗುಜರಾತ್‌ನಲ್ಲಿ ಫೆಬ್ರವರಿ 19 ರಿಂದ 22, 1938 ರವರೆಗೆ ಬಾರ್ಡೋಲಿಯ ಬಳಿಯ ಹರಿಪುರದಲ್ಲಿ ನಡೆಯಿತು. ಸರ್ದಾರ್ ಪಟೇಲ್ ಈ ಅಧಿವೇಶನಕ್ಕೆ ಒತ್ತಾಯಿಸಿದ್ದರು. ಆ ಸಮಯದಲ್ಲಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆಯೂ ಆ ಅಧಿವೇಶನದಲ್ಲಿ ನಡೆಯಿತು. ಅಲ್ಲಿ ಸುಭಾಷ್ ಚಂದ್ರ ಬೋಸ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದರು.” ಎಂದು ಹೇಳಿದ್ದಾರೆ.

ಐತಿಹಾಸಿಕ ಸಮಾವೇಶವನ್ನು ನೆನಪಿಸಿಕೊಂಡ ಗೋಹಿಲ್, “ಹರಿಪುರದಲ್ಲಿ, ಸ್ವಾತಂತ್ರ್ಯಕ್ಕೆ ಬಹಳ ಹಿಂದೆಯೇ, ಕಾಂಗ್ರೆಸ್ ‘ಪೂರ್ಣ ಸ್ವರಾಜ್’ ಘೋಷಣೆಯನ್ನು ಪುನರುಚ್ಚರಿಸಿದರು. ಸುಭಾಷ್ ಚಂದ್ರ ಬೋಸ್ ಯೋಜನಾ ಆಯೋಗಕ್ಕಾಗಿ ನೀಲನಕ್ಷೆಯನ್ನು ರೂಪಿಸಿದರು. ಸ್ವಾತಂತ್ರ್ಯದ 12 ವರ್ಷಗಳ ನಂತರ ಪ್ರಧಾನಿ ಜವಾಹರಲಾಲ್ ನೆಹರು ಅವರ ಅಡಿಯಲ್ಲಿ ಈ ಕಲ್ಪನೆ ರೂಪುಗೊಂಡಿತು.” ಎಂದು ಅವರು ಹೇಳಿದ್ದಾರೆ.

“ಗುಜರಾತ್‌ನಲ್ಲಿ ಎರಡನೇ ಎಐಸಿಸಿ ಅಧಿವೇಶನವು 1961 ರಲ್ಲಿ ಭಾವನಗರದಲ್ಲಿ ನೀಲಂ ಸಂಜೀವ ರೆಡ್ಡಿ ಅವರ ನಾಯಕತ್ವದಲ್ಲಿ ನಡೆಯಿತು. 1961 ರ ನಂತರ, ಗುಜರಾತ್‌ ಮತ್ತೊಮ್ಮೆ 2025 ರಲ್ಲಿ AICC ಅಧಿವೇಶನವನ್ನು ಆಯೋಜಿಸಲಿದೆ. ಈ ಅವಕಾಶಕ್ಕಾಗಿ ನಾನು ಕಾಂಗ್ರೆಸ್ ಹೈಕಮಾಂಡ್‌ಗೆ ಧನ್ಯವಾದ ಹೇಳುತ್ತೇನೆ” ಎಂದು ಗೋಹಿಲ್ ಹೇಳಿದ್ದಾರೆ.

ಏಪ್ರಿಲ್ 8 ರಂದು ವಿಸ್ತೃತ CWC ಸಭೆಯೊಂದಿಗೆ ಅಧಿವೇಶನ ಪ್ರಾರಂಭವಾಗಲಿದೆ ಎಂದು ಕಾಂಗ್ರೆಸ್ ಘೋಷಿಸಿದೆ. ಏಪ್ರಿಲ್ 9 ರಂದು AICC ಪ್ರತಿನಿಧಿಗಳ ಸಭೆಯೊಂದಿಗೆ ಅಧಿವೇಶನ ಮುಂದುವರಿಯಲಿದೆ. ಎರಡೂ ಸಭೆಯು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯಲಿದ್ದು, ಕಾಂಗ್ರೆಸ್ ಸಂಸದೀಯ ಪಕ್ಷದ ನೇತೃತ್ವ ವಹಿಸಿರುವ ಸೋನಿಯಾ ಗಾಂಧಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಂತಹ ಪ್ರಮುಖರು ಈ ಚರ್ಚೆಗಳಲ್ಲಿ ಭಾಗವಹಿಸಲಿದ್ದಾರೆ.

ಕಾಂಗ್ರೆಸ್ ಮುಖ್ಯಮಂತ್ರಿಗಳು, ರಾಷ್ಟ್ರೀಯ ಪದಾಧಿಕಾರಿಗಳು, ಹಿರಿಯ ನಾಯಕರು ಮತ್ತು AICC ಪ್ರತಿನಿಧಿಗಳು ಈ ಸಭೆಯಲ್ಲಿ ಹಾಜರಿರುತ್ತಾರೆ ಮತ್ತು ಪಕ್ಷದ ಮುಂದಿನ ನಡೆಗಳನ್ನು ರೂಪಿಸಲಿದ್ದಾರೆ. ಕಾಂಗ್ರೆಸ್ ಮುಖ್ಯಮಂತ್ರಿಗಳು, ರಾಷ್ಟ್ರೀಯ ಪದಾಧಿಕಾರಿಗಳು, ಹಿರಿಯ ನಾಯಕರು ಮತ್ತು AICC ಪ್ರತಿನಿಧಿಗಳು ಈ ಸಭೆಯಲ್ಲಿ ಹಾಜರಿರುತ್ತಾರೆ ಮತ್ತು ಪಕ್ಷದ ಮುಂದಿನ ನಡೆಗಳನ್ನು ರೂಪಿಸಲಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಮೈಸೂರು ಚಲೋ’ ಮೆರವಣಿಗೆಗೆ ಹೈಕೋರ್ಟ್‌ ನಕಾರ : ಒಂದೂವರೆ ತಾಸು ಸಮಾವೇಶ ನಡೆಸಲು ಅನುಮತಿ

‘ಮೈಸೂರು ಚಲೋ’ ಮೆರವಣಿಗೆಗೆ ಹೈಕೋರ್ಟ್‌ ನಕಾರ : ಒಂದೂವರೆ ತಾಸು ಸಮಾವೇಶ ನಡೆಸಲು ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...