Homeಮುಖಪುಟಬೇಲಿಮ್ ವಾಸ್ ಹಿಂಸಾಚಾರ: ಮುಸ್ಲಿಂ ಯುವಕರ ಬಂಧನ, ಕುಟುಂಬಸ್ಥರ ಮೇಲೆ ಪೊಲೀಸ್‌ ದೌರ್ಜನ್ಯದ ಆರೋಪ

ಬೇಲಿಮ್ ವಾಸ್ ಹಿಂಸಾಚಾರ: ಮುಸ್ಲಿಂ ಯುವಕರ ಬಂಧನ, ಕುಟುಂಬಸ್ಥರ ಮೇಲೆ ಪೊಲೀಸ್‌ ದೌರ್ಜನ್ಯದ ಆರೋಪ

- Advertisement -
- Advertisement -

ಉತ್ತರ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಖೇರಾಲು ಎಂಬಲ್ಲಿ ಬೇಲಿಮ್ ವಾಸ್ ಮುಸ್ಲಿಂ ಬಾಹುಳ್ಯದ ಪ್ರದೇಶವಾಗಿದೆ. ಇಲ್ಲಿ ಸ್ಥಳೀಯ ಮುಸ್ಲಿಮರು ಭಯದಿಂದ ದಿನದೂಡುತ್ತಿದ್ದು, ಆ ಪ್ರದೇಶದಲ್ಲಿ ಪೊಲೀಸರು ಬೀಡುಬಿಟ್ಟಿದ್ದಾರೆ.

ಜನವರಿ 21ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಮುನ್ನಾದಿನದಂದು ಆ ಪ್ರದೇಶದ ಹಿಂದೂ ನಿವಾಸಿಗಳು ‘ಶೋಭಾ ಯಾತ್ರೆ’ ರ್ಯಾಲಿಯನ್ನು ನಡೆಸಿದ್ದಾರೆ. ಸ್ಥಳೀಯರ ಅಂದಾಜಿನ ಪ್ರಕಾರ ಈ ರ್ಯಾಲಿಯಲ್ಲಿ ಕನಿಷ್ಠ 600-700 ಜನರು ಭಾಗವಹಿಸಿದ್ದರು. ರ್ಯಾಲಿಯು ತನ್ನ ನಿಗದಿತ  ಹಾದಿಯನ್ನು ಬಿಟ್ಟು ಬೇರೆ ದಾರಿಯಲ್ಲಿ ಸಾಗಿ ಆ ಪ್ರದೇಶದ ಮಸೀದಿಯನ್ನು ತಲುಪಿದೆ. ಮಸೀದಿಯ ಹೊರಗೆ ಜೋರಾಗಿ ಸಂಗೀತ ನುಡಿಸದಂತೆ ಹಾಗೂ ಪಟಾಕಿ ಸಿಡಿಸದಂತೆ ಸ್ಥಳೀಯ ಮುಸ್ಲಿಮರು ಮೆರವಣಿಗೆಯಲ್ಲಿ ಪಾಲ್ಗೊಂಡವರಿಗೆ ಮನವಿ ಮಾಡಿದ್ದಾರೆ. ಆ ಮನವಿಗಳನ್ನು ಯಾತ್ರೆಯಲ್ಲಿ ಮೋಜು-ಮಸ್ತಿನಿಂದ ಇದ್ದ ಜನರು ನಿರ್ಲಕ್ಷಿಸಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಮಾತಿನ ಚಕಮಕಿ ನಡೆದು ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿದೆ. ರ್ಯಾಲಿಯಲ್ಲಿ ಭಾಗವಹಿಸಿದವರು ಕತ್ತಿ, ಕೋಲು, ಕಲ್ಲುಗಳನ್ನು ಬಳಸಿದ್ದಾರೆ. ಹಿಂಸಾಚಾರ ಉಲ್ಬಣಗೊಳ್ಳುತ್ತಿದ್ದಂತೆ ಮೆಹ್ಸಾನಾ ಪೊಲೀಸರು ಅಶ್ರುವಾಯು ಬಳಸಿ ಜನರನ್ನು ಚದುರಿಸಲು ಪ್ರಾರಂಭಿಸಿದರು.

ಬೆಲಿಮ್ ವಾಸ್‌ನಲ್ಲಿನ ಸ್ಥಳೀಯ ಮುಸ್ಲಿಮರು ಪೊಲೀಸರು ತಮ್ಮೊಂದಿಗೆ ಕೆಟ್ಟದಾಗಿ ನಡೆದುಕೊಂಡರು ಎಂದು ಹೇಳಿದ್ದಾರೆ. ಪೊಲೀಸರು 13 ಮಂದಿಯನ್ನು ಬಂಧಿಸಿದ್ದು, ಇದರಲ್ಲಿ ಇಬ್ಬರು ಅಪ್ರಾಪ್ತರು ಸೇರಿದ್ದಾರೆ. ಬಂಧಿತ ಎಲ್ಲರೂ ಬೆಲಿಮ್ ವಾಸ್ ನಿವಾಸಿಗಳಾಗಿದ್ದು, ಮುಸ್ಲಿಮ್‌ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಪೊಲೀಸ್ ಅಧಿಕಾರಿಗಳು ತಮ್ಮ ಮನೆಗಳಿಗೆ ನುಗ್ಗಿ, ಮನೆಗಳ ಬಾಗಿಲುಗಳನ್ನು ಒಡೆದು ಹಾಕಿದ್ದಾರೆ, ಕಾರುಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಮುಸ್ಲಿಂ ಮಹಿಳೆಯರು ಆರೋಪಿಸಿದ್ದಾರೆ.

ರುಬಿನಾ ಅವರ ಪತಿ ಮೊಹಮ್ಮದ್ ಹುಸೇನ್(30) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹಿಂಸಾಚಾರ ನಡೆದ ಕೆಲವೇ ಗಂಟೆಗಳಲ್ಲಿ ಅವರ ಮನೆಗೆ ಪೊಲೀಸರು ನುಗ್ಗಿದ್ದರು. ಪೊಲೀಸರು ಹುಸೇನ್ ಅವರನ್ನು ಮನೆಯಿಂದ ಹೊರಗೆ ಎಳೆದುಕೊಂಡು ಹೋಗುವಾಗ ತೀವ್ರವಾಗಿ ಥಳಿಸಿದ್ದಾರೆ. ಅವರು ನಮ್ಮ ಗೇಟುಗಳು, ಬಾಗಿಲುಗಳನ್ನು ಮುರಿದರು ಮತ್ತು ಸುತ್ತಲೂ ಎಲ್ಲವನ್ನೂ ಚದುರಿಸಿದ್ದಾರೆ. ಇದಕ್ಕೆ ಮಹಿಳೆಯರು ವಿರೋಧಿಸಿದಾಗ ಅವರನ್ನು ಕೂಡ ಬಂಧಿಸುವುದಾಗಿ ಪೊಲೀಸರು ಬೆದರಿಕೆ ಹಾಕಿದ್ದಾರೆ. ರುಬಿನಾಳ ಪತಿ ಮೆಹ್ಸಾನಾದ ವಸಾಯಿ ಜೈಲಿನಲ್ಲಿ ಇತರ 12 ಮುಸ್ಲಿಮರೊಂದಿಗೆ ಇದ್ದಾರೆ. ಹುಸೇನ್ ಖಿನ್ನತೆಯಿಂದ ಬಳಲುತ್ತಿದ್ದು, ಔಷಧಿಯನ್ನು ಸೇವಿಸುತ್ತಿದ್ದರು, ಆದರೆ ಈಗ ಜೈಲಿನಲ್ಲಿ ಔಷಧಿಗಳನ್ನು ನೀಡಲಾಗುತ್ತಿಲ್ಲ ಎಂದು ಹೇಳಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿ ಮೊಹಮ್ಮದ್ ಸಿದ್ದಿಕ್ ಎಂಬವರ 16 ವರ್ಷದ ಮಗ ರೆಹಮತುಲ್ಲಾನನ್ನು ಮೆಹ್ಸಾನಾ ಪೊಲೀಸರು ಬಂಧಿಸಿ ಐದು ದಿನಗಳಾಗಿವೆ. ಅವರು ನನ್ನ ಮಗನನ್ನು ಬಂಧಿಸಿ ಎಲ್ಲಿಗೆ ಕರೆದೊಯ್ದರು ಎಂಬ ಬಗ್ಗೆ ಯಾವುದೇ ಕುಟುಂಬ ಸದಸ್ಯರಿಗೆ ತಿಳಿಸಲಿಲ್ಲ. ಇಂದು, ಐದು ದಿನಗಳ ನಂತರ ವಿಷಯ ಸ್ಪಷ್ಟವಾಗುವವರೆಗೆ ಅವರನ್ನು ಮಕ್ಕಳ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ನಮಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮಾಜಿ ಕಾರ್ಪೊರೇಟರ್ ಜುಬೇರ್ ಬೆಲಿಮ್, ಈ ಹಿಂದೆ ಶಾಂತಿಯುತವಾಗಿದ್ದ ಖೇರಾಲು ನೆರೆಹೊರೆ ಇಂತಹ ಉದ್ದೇಶಿತ ಕ್ರಮಕ್ಕೆ ಹೇಗೆ ಸಾಕ್ಷಿಯಾಯಿತು ಎಂದು ಪ್ರದೇಶದ ಜನರು ದಿಗ್ಭ್ರಮೆಗೊಂಡಿದ್ದಾರೆ. ಮುಸ್ಲಿಮರು ಇಲ್ಲಿ ಅಲ್ಪಸಂಖ್ಯಾತರಾಗಿದ್ದಾರೆ, ನಾವು ಎಂದಿಗೂ ಅಸುರಕ್ಷಿತರಾಗಿದ್ದೇವೆ ಎಂದು ಭಾವಿಸಿರಲಿಲ್ಲ. ಅವರು ಕತ್ತಿಗಳು ಮತ್ತು ರಾಡ್‌ಗಳನ್ನು ಹೊಂದಿದ್ದರು ಮತ್ತು ನಂತರ ಅವರು ಕಲ್ಲುಗಳನ್ನು ತೂರಿದರು. ಅವರು ನನ್ನ ಮನೆಯ ಟಿವಿಯನ್ನು ಒಡೆದರು, ಅವರು ಹತ್ತಿರದ ಉಪಾಹಾರ ಗೃಹವನ್ನು ಸುಟ್ಟು ಹಾಕಿದರು. ಇದು ತುಂಬಾ ಅಪಾಯಕಾರಿ. ದೇವಾಲಯದ ಶಂಕು ಸ್ಥಾಪನೆ ಹಿನ್ನೆಲೆ ನಾವು ರ್ಯಾಲಿಯನ್ನು ನಿರೀಕ್ಷಿಸಿದ್ದೇವೆ, ಆದರೆ ಈ ರೀತಿ ಗುರಿಯಾಗಬಹುದೆಂದು ನಿರೀಕ್ಷಿಸಿರಲಿಲ್ಲ ಎಂದು ಬೆಲಿಮ್ ಅವರು ಹೇಳಿದ್ದಾರೆ.

ಇನ್ನೊಬ್ಬ ಸ್ಥಳೀಯರು ಈ ಬಗ್ಗೆ ಮಾತನಾಡಿ, ರ್ಯಾಲಿಯಲ್ಲಿ ಭಾಗವಹಿಸಿದ್ದವರ ವೀಡಿಯೊಗಳನ್ನು ಹೊಂದಿದ್ದೇವೆ. ಆದರೆ ಪುತ್ರ ಬಂಧನದಲ್ಲಿರುವುದರಿಂದ ಅದನ್ನು ಪೊಲೀಸರಿಗೆ ಅದನ್ನು ನೀಡಲು ಬಯಸುವುದಿಲ್ಲ. ನನ್ನ ಮಗ ಅವನ ಕಾಲೇಜಿನಲ್ಲಿ ಒಬ್ಬನೇ ಮುಸ್ಲಿಂ, ಅವನು ಕ್ರೀಡೆಯಲ್ಲಿ ಚಿನ್ನದ ಪದಕ ವಿಜೇತ, ವಿಶ್ವ ಹಿಂದೂ ಪರಿಷತ್ತಿನ ಗೂಂಡಾಗಳು ಅವನ ಮೇಲೆ ಬಹಳ ಕಾಲದಿಂದ ಕಣ್ಣಿಟ್ಟಿದ್ದರು ಮತ್ತು ಈಗ ಅವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಸ್ಥಳೀಯರು ಕತ್ತಿ ಹಿಡಿದು ನಮ್ಮ ಮನೆಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿರುವ ವೀಡಿಯೊಗಳು ನನ್ನ ಬಳಿ ಇವೆ. ಆದರೆ ನಾನು ಹಿಂದೂಗಳ ವಿರುದ್ಧ ದೂರು ನೀಡಿದರೆ ನನ್ನನ್ನು ಬಂಧಿಸಲಾಗುತ್ತದೆ ಅಥವಾ ನನ್ನ ಕುಟುಂಬವು ಭದ್ರತಾ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ನಾನು ಹೆದರುತ್ತೇನೆ. ಇದು ಯೋಜಿತ ದಾಳಿ ಎಂದು ನಮಗೆಲ್ಲರಿಗೂ ತಿಳಿದಿದೆ ಮತ್ತು ನಮ್ಮನ್ನು ಪ್ರಚೋದಿಸಲು ಉದ್ದೇಶಿಸಲಾಗಿತ್ತು ಎಂದು ಹೇಳಿದ್ದಾರೆ.

ಅವರ ನೆರೆಹೊರೆಯವರಾದ ಶೈಸ್ತಾ ಕೂಡ ಇದೇ ರೀತಿಯಾಗಿ ಪೊಲೀಸ್‌ ದೌರ್ಜನ್ಯವನ್ನು ಬಿಚ್ಚಿಟ್ಟಿದ್ದಾರೆ.  ನನ್ನ ಪತಿ ವಜೀರ್ ಮೊಹಮ್ಮದ್ ಸಾದಿಕ್ ಅಲಿ ಅವರನ್ನು ಥಳಿಸಲಾಗಿದೆ. ಅವರ ತಲೆಗೆ ಆರು ಹೊಲಿಗೆಗಳನ್ನು ಹಾಕಲಾಗಿದೆ. ಪೊಲೀಸರು ನಮ್ಮ ಮನೆಗೆ ನುಗ್ಗಿ ನನ್ನ ಪತಿಯನ್ನು ಎಳೆದೊಯ್ದು ಹಲ್ಲೆ ನಡೆಸಿದ್ದಾರೆ. ಅವರು ನಮ್ಮ ಎಲ್ಲಾ ಫೋನ್‌ಗಳನ್ನು ಸೀಜ್‌ ಮಾಡಿದ್ದಾರೆ. ನಮ್ಮ ಮಗಳು 4ನೇ ತರಗತಿಯಲ್ಲಿ ಓದುತ್ತಿದ್ದು, ಹಿಂಸಾಚಾರ ಮತ್ತು ತಂದೆಯ ಬಂಧನದ ಬಳಿಕ ಆಕೆಯನ್ನು ಶಾಲೆಗೆ ಕಳಹಿಸಲು ಭಯವಾಗುತ್ತಿದೆ ಎಂದು ಹೇಳಿದ್ದಾರೆ. ಹಿಂಸಾಚಾರದ ದಿನದಂದು ಹಿಂದೂ ಯುವಕರನ್ನು ಸಜ್ಜುಗೊಳಿಸಿರುವುದರ ಹಿಂದೆ ಸ್ಥಳೀಯ ಹಿಂದುತ್ವ ಗುಂಪುಗಳ ಕೈವಾಡ ಇದೆ ಎಂದು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ರಾಜ್ಯ ಮೀಸಲು ಪೊಲೀಸ್ ಪಡೆ ಕಮಾಂಡೆಂಟ್ ರುಶಿಕೇಶ್ ಬಿ.ಉಪಾಧ್ಯಾಯ ಈ ಕುರಿತು ಪ್ರತಿಕ್ರಿಯಿಸಿದ್ದು,  ಮೆಹ್ಸಾನಾದಲ್ಲಿ 13 ಮಂದಿಯ ಬಂಧನವನ್ನು ದೃಢಪಡಿಸಿದ್ದಾರೆ. ಉದ್ವಿಗ್ನತೆಯನ್ನು ತಡೆಯಲು ಪೊಲೀಸರು ಶಾಂತಿ ಸಭೆಗಳನ್ನು ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

 ಇದನ್ನು ಓದಿ: ಗಣರಾಜ್ಯೋತ್ಸವದ ಭಾಷಣದಲ್ಲಿ ‘ಜೈ ಭೀಮ್-ಜೈ ಭಾರತ್’ ಹೇಳಿದ್ದಕ್ಕೆ ದಲಿತ ವಿದ್ಯಾರ್ಥಿಗೆ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...