Homeಮುಖಪುಟಬೇಲಿಮ್ ವಾಸ್ ಹಿಂಸಾಚಾರ: ಮುಸ್ಲಿಂ ಯುವಕರ ಬಂಧನ, ಕುಟುಂಬಸ್ಥರ ಮೇಲೆ ಪೊಲೀಸ್‌ ದೌರ್ಜನ್ಯದ ಆರೋಪ

ಬೇಲಿಮ್ ವಾಸ್ ಹಿಂಸಾಚಾರ: ಮುಸ್ಲಿಂ ಯುವಕರ ಬಂಧನ, ಕುಟುಂಬಸ್ಥರ ಮೇಲೆ ಪೊಲೀಸ್‌ ದೌರ್ಜನ್ಯದ ಆರೋಪ

- Advertisement -
- Advertisement -

ಉತ್ತರ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಖೇರಾಲು ಎಂಬಲ್ಲಿ ಬೇಲಿಮ್ ವಾಸ್ ಮುಸ್ಲಿಂ ಬಾಹುಳ್ಯದ ಪ್ರದೇಶವಾಗಿದೆ. ಇಲ್ಲಿ ಸ್ಥಳೀಯ ಮುಸ್ಲಿಮರು ಭಯದಿಂದ ದಿನದೂಡುತ್ತಿದ್ದು, ಆ ಪ್ರದೇಶದಲ್ಲಿ ಪೊಲೀಸರು ಬೀಡುಬಿಟ್ಟಿದ್ದಾರೆ.

ಜನವರಿ 21ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಮುನ್ನಾದಿನದಂದು ಆ ಪ್ರದೇಶದ ಹಿಂದೂ ನಿವಾಸಿಗಳು ‘ಶೋಭಾ ಯಾತ್ರೆ’ ರ್ಯಾಲಿಯನ್ನು ನಡೆಸಿದ್ದಾರೆ. ಸ್ಥಳೀಯರ ಅಂದಾಜಿನ ಪ್ರಕಾರ ಈ ರ್ಯಾಲಿಯಲ್ಲಿ ಕನಿಷ್ಠ 600-700 ಜನರು ಭಾಗವಹಿಸಿದ್ದರು. ರ್ಯಾಲಿಯು ತನ್ನ ನಿಗದಿತ  ಹಾದಿಯನ್ನು ಬಿಟ್ಟು ಬೇರೆ ದಾರಿಯಲ್ಲಿ ಸಾಗಿ ಆ ಪ್ರದೇಶದ ಮಸೀದಿಯನ್ನು ತಲುಪಿದೆ. ಮಸೀದಿಯ ಹೊರಗೆ ಜೋರಾಗಿ ಸಂಗೀತ ನುಡಿಸದಂತೆ ಹಾಗೂ ಪಟಾಕಿ ಸಿಡಿಸದಂತೆ ಸ್ಥಳೀಯ ಮುಸ್ಲಿಮರು ಮೆರವಣಿಗೆಯಲ್ಲಿ ಪಾಲ್ಗೊಂಡವರಿಗೆ ಮನವಿ ಮಾಡಿದ್ದಾರೆ. ಆ ಮನವಿಗಳನ್ನು ಯಾತ್ರೆಯಲ್ಲಿ ಮೋಜು-ಮಸ್ತಿನಿಂದ ಇದ್ದ ಜನರು ನಿರ್ಲಕ್ಷಿಸಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಮಾತಿನ ಚಕಮಕಿ ನಡೆದು ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿದೆ. ರ್ಯಾಲಿಯಲ್ಲಿ ಭಾಗವಹಿಸಿದವರು ಕತ್ತಿ, ಕೋಲು, ಕಲ್ಲುಗಳನ್ನು ಬಳಸಿದ್ದಾರೆ. ಹಿಂಸಾಚಾರ ಉಲ್ಬಣಗೊಳ್ಳುತ್ತಿದ್ದಂತೆ ಮೆಹ್ಸಾನಾ ಪೊಲೀಸರು ಅಶ್ರುವಾಯು ಬಳಸಿ ಜನರನ್ನು ಚದುರಿಸಲು ಪ್ರಾರಂಭಿಸಿದರು.

ಬೆಲಿಮ್ ವಾಸ್‌ನಲ್ಲಿನ ಸ್ಥಳೀಯ ಮುಸ್ಲಿಮರು ಪೊಲೀಸರು ತಮ್ಮೊಂದಿಗೆ ಕೆಟ್ಟದಾಗಿ ನಡೆದುಕೊಂಡರು ಎಂದು ಹೇಳಿದ್ದಾರೆ. ಪೊಲೀಸರು 13 ಮಂದಿಯನ್ನು ಬಂಧಿಸಿದ್ದು, ಇದರಲ್ಲಿ ಇಬ್ಬರು ಅಪ್ರಾಪ್ತರು ಸೇರಿದ್ದಾರೆ. ಬಂಧಿತ ಎಲ್ಲರೂ ಬೆಲಿಮ್ ವಾಸ್ ನಿವಾಸಿಗಳಾಗಿದ್ದು, ಮುಸ್ಲಿಮ್‌ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಪೊಲೀಸ್ ಅಧಿಕಾರಿಗಳು ತಮ್ಮ ಮನೆಗಳಿಗೆ ನುಗ್ಗಿ, ಮನೆಗಳ ಬಾಗಿಲುಗಳನ್ನು ಒಡೆದು ಹಾಕಿದ್ದಾರೆ, ಕಾರುಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಮುಸ್ಲಿಂ ಮಹಿಳೆಯರು ಆರೋಪಿಸಿದ್ದಾರೆ.

ರುಬಿನಾ ಅವರ ಪತಿ ಮೊಹಮ್ಮದ್ ಹುಸೇನ್(30) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹಿಂಸಾಚಾರ ನಡೆದ ಕೆಲವೇ ಗಂಟೆಗಳಲ್ಲಿ ಅವರ ಮನೆಗೆ ಪೊಲೀಸರು ನುಗ್ಗಿದ್ದರು. ಪೊಲೀಸರು ಹುಸೇನ್ ಅವರನ್ನು ಮನೆಯಿಂದ ಹೊರಗೆ ಎಳೆದುಕೊಂಡು ಹೋಗುವಾಗ ತೀವ್ರವಾಗಿ ಥಳಿಸಿದ್ದಾರೆ. ಅವರು ನಮ್ಮ ಗೇಟುಗಳು, ಬಾಗಿಲುಗಳನ್ನು ಮುರಿದರು ಮತ್ತು ಸುತ್ತಲೂ ಎಲ್ಲವನ್ನೂ ಚದುರಿಸಿದ್ದಾರೆ. ಇದಕ್ಕೆ ಮಹಿಳೆಯರು ವಿರೋಧಿಸಿದಾಗ ಅವರನ್ನು ಕೂಡ ಬಂಧಿಸುವುದಾಗಿ ಪೊಲೀಸರು ಬೆದರಿಕೆ ಹಾಕಿದ್ದಾರೆ. ರುಬಿನಾಳ ಪತಿ ಮೆಹ್ಸಾನಾದ ವಸಾಯಿ ಜೈಲಿನಲ್ಲಿ ಇತರ 12 ಮುಸ್ಲಿಮರೊಂದಿಗೆ ಇದ್ದಾರೆ. ಹುಸೇನ್ ಖಿನ್ನತೆಯಿಂದ ಬಳಲುತ್ತಿದ್ದು, ಔಷಧಿಯನ್ನು ಸೇವಿಸುತ್ತಿದ್ದರು, ಆದರೆ ಈಗ ಜೈಲಿನಲ್ಲಿ ಔಷಧಿಗಳನ್ನು ನೀಡಲಾಗುತ್ತಿಲ್ಲ ಎಂದು ಹೇಳಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿ ಮೊಹಮ್ಮದ್ ಸಿದ್ದಿಕ್ ಎಂಬವರ 16 ವರ್ಷದ ಮಗ ರೆಹಮತುಲ್ಲಾನನ್ನು ಮೆಹ್ಸಾನಾ ಪೊಲೀಸರು ಬಂಧಿಸಿ ಐದು ದಿನಗಳಾಗಿವೆ. ಅವರು ನನ್ನ ಮಗನನ್ನು ಬಂಧಿಸಿ ಎಲ್ಲಿಗೆ ಕರೆದೊಯ್ದರು ಎಂಬ ಬಗ್ಗೆ ಯಾವುದೇ ಕುಟುಂಬ ಸದಸ್ಯರಿಗೆ ತಿಳಿಸಲಿಲ್ಲ. ಇಂದು, ಐದು ದಿನಗಳ ನಂತರ ವಿಷಯ ಸ್ಪಷ್ಟವಾಗುವವರೆಗೆ ಅವರನ್ನು ಮಕ್ಕಳ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ನಮಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮಾಜಿ ಕಾರ್ಪೊರೇಟರ್ ಜುಬೇರ್ ಬೆಲಿಮ್, ಈ ಹಿಂದೆ ಶಾಂತಿಯುತವಾಗಿದ್ದ ಖೇರಾಲು ನೆರೆಹೊರೆ ಇಂತಹ ಉದ್ದೇಶಿತ ಕ್ರಮಕ್ಕೆ ಹೇಗೆ ಸಾಕ್ಷಿಯಾಯಿತು ಎಂದು ಪ್ರದೇಶದ ಜನರು ದಿಗ್ಭ್ರಮೆಗೊಂಡಿದ್ದಾರೆ. ಮುಸ್ಲಿಮರು ಇಲ್ಲಿ ಅಲ್ಪಸಂಖ್ಯಾತರಾಗಿದ್ದಾರೆ, ನಾವು ಎಂದಿಗೂ ಅಸುರಕ್ಷಿತರಾಗಿದ್ದೇವೆ ಎಂದು ಭಾವಿಸಿರಲಿಲ್ಲ. ಅವರು ಕತ್ತಿಗಳು ಮತ್ತು ರಾಡ್‌ಗಳನ್ನು ಹೊಂದಿದ್ದರು ಮತ್ತು ನಂತರ ಅವರು ಕಲ್ಲುಗಳನ್ನು ತೂರಿದರು. ಅವರು ನನ್ನ ಮನೆಯ ಟಿವಿಯನ್ನು ಒಡೆದರು, ಅವರು ಹತ್ತಿರದ ಉಪಾಹಾರ ಗೃಹವನ್ನು ಸುಟ್ಟು ಹಾಕಿದರು. ಇದು ತುಂಬಾ ಅಪಾಯಕಾರಿ. ದೇವಾಲಯದ ಶಂಕು ಸ್ಥಾಪನೆ ಹಿನ್ನೆಲೆ ನಾವು ರ್ಯಾಲಿಯನ್ನು ನಿರೀಕ್ಷಿಸಿದ್ದೇವೆ, ಆದರೆ ಈ ರೀತಿ ಗುರಿಯಾಗಬಹುದೆಂದು ನಿರೀಕ್ಷಿಸಿರಲಿಲ್ಲ ಎಂದು ಬೆಲಿಮ್ ಅವರು ಹೇಳಿದ್ದಾರೆ.

ಇನ್ನೊಬ್ಬ ಸ್ಥಳೀಯರು ಈ ಬಗ್ಗೆ ಮಾತನಾಡಿ, ರ್ಯಾಲಿಯಲ್ಲಿ ಭಾಗವಹಿಸಿದ್ದವರ ವೀಡಿಯೊಗಳನ್ನು ಹೊಂದಿದ್ದೇವೆ. ಆದರೆ ಪುತ್ರ ಬಂಧನದಲ್ಲಿರುವುದರಿಂದ ಅದನ್ನು ಪೊಲೀಸರಿಗೆ ಅದನ್ನು ನೀಡಲು ಬಯಸುವುದಿಲ್ಲ. ನನ್ನ ಮಗ ಅವನ ಕಾಲೇಜಿನಲ್ಲಿ ಒಬ್ಬನೇ ಮುಸ್ಲಿಂ, ಅವನು ಕ್ರೀಡೆಯಲ್ಲಿ ಚಿನ್ನದ ಪದಕ ವಿಜೇತ, ವಿಶ್ವ ಹಿಂದೂ ಪರಿಷತ್ತಿನ ಗೂಂಡಾಗಳು ಅವನ ಮೇಲೆ ಬಹಳ ಕಾಲದಿಂದ ಕಣ್ಣಿಟ್ಟಿದ್ದರು ಮತ್ತು ಈಗ ಅವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಸ್ಥಳೀಯರು ಕತ್ತಿ ಹಿಡಿದು ನಮ್ಮ ಮನೆಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿರುವ ವೀಡಿಯೊಗಳು ನನ್ನ ಬಳಿ ಇವೆ. ಆದರೆ ನಾನು ಹಿಂದೂಗಳ ವಿರುದ್ಧ ದೂರು ನೀಡಿದರೆ ನನ್ನನ್ನು ಬಂಧಿಸಲಾಗುತ್ತದೆ ಅಥವಾ ನನ್ನ ಕುಟುಂಬವು ಭದ್ರತಾ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ನಾನು ಹೆದರುತ್ತೇನೆ. ಇದು ಯೋಜಿತ ದಾಳಿ ಎಂದು ನಮಗೆಲ್ಲರಿಗೂ ತಿಳಿದಿದೆ ಮತ್ತು ನಮ್ಮನ್ನು ಪ್ರಚೋದಿಸಲು ಉದ್ದೇಶಿಸಲಾಗಿತ್ತು ಎಂದು ಹೇಳಿದ್ದಾರೆ.

ಅವರ ನೆರೆಹೊರೆಯವರಾದ ಶೈಸ್ತಾ ಕೂಡ ಇದೇ ರೀತಿಯಾಗಿ ಪೊಲೀಸ್‌ ದೌರ್ಜನ್ಯವನ್ನು ಬಿಚ್ಚಿಟ್ಟಿದ್ದಾರೆ.  ನನ್ನ ಪತಿ ವಜೀರ್ ಮೊಹಮ್ಮದ್ ಸಾದಿಕ್ ಅಲಿ ಅವರನ್ನು ಥಳಿಸಲಾಗಿದೆ. ಅವರ ತಲೆಗೆ ಆರು ಹೊಲಿಗೆಗಳನ್ನು ಹಾಕಲಾಗಿದೆ. ಪೊಲೀಸರು ನಮ್ಮ ಮನೆಗೆ ನುಗ್ಗಿ ನನ್ನ ಪತಿಯನ್ನು ಎಳೆದೊಯ್ದು ಹಲ್ಲೆ ನಡೆಸಿದ್ದಾರೆ. ಅವರು ನಮ್ಮ ಎಲ್ಲಾ ಫೋನ್‌ಗಳನ್ನು ಸೀಜ್‌ ಮಾಡಿದ್ದಾರೆ. ನಮ್ಮ ಮಗಳು 4ನೇ ತರಗತಿಯಲ್ಲಿ ಓದುತ್ತಿದ್ದು, ಹಿಂಸಾಚಾರ ಮತ್ತು ತಂದೆಯ ಬಂಧನದ ಬಳಿಕ ಆಕೆಯನ್ನು ಶಾಲೆಗೆ ಕಳಹಿಸಲು ಭಯವಾಗುತ್ತಿದೆ ಎಂದು ಹೇಳಿದ್ದಾರೆ. ಹಿಂಸಾಚಾರದ ದಿನದಂದು ಹಿಂದೂ ಯುವಕರನ್ನು ಸಜ್ಜುಗೊಳಿಸಿರುವುದರ ಹಿಂದೆ ಸ್ಥಳೀಯ ಹಿಂದುತ್ವ ಗುಂಪುಗಳ ಕೈವಾಡ ಇದೆ ಎಂದು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ರಾಜ್ಯ ಮೀಸಲು ಪೊಲೀಸ್ ಪಡೆ ಕಮಾಂಡೆಂಟ್ ರುಶಿಕೇಶ್ ಬಿ.ಉಪಾಧ್ಯಾಯ ಈ ಕುರಿತು ಪ್ರತಿಕ್ರಿಯಿಸಿದ್ದು,  ಮೆಹ್ಸಾನಾದಲ್ಲಿ 13 ಮಂದಿಯ ಬಂಧನವನ್ನು ದೃಢಪಡಿಸಿದ್ದಾರೆ. ಉದ್ವಿಗ್ನತೆಯನ್ನು ತಡೆಯಲು ಪೊಲೀಸರು ಶಾಂತಿ ಸಭೆಗಳನ್ನು ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

 ಇದನ್ನು ಓದಿ: ಗಣರಾಜ್ಯೋತ್ಸವದ ಭಾಷಣದಲ್ಲಿ ‘ಜೈ ಭೀಮ್-ಜೈ ಭಾರತ್’ ಹೇಳಿದ್ದಕ್ಕೆ ದಲಿತ ವಿದ್ಯಾರ್ಥಿಗೆ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...