Homeಮುಖಪುಟಬೇಲಿಮ್ ವಾಸ್ ಹಿಂಸಾಚಾರ: ಮುಸ್ಲಿಂ ಯುವಕರ ಬಂಧನ, ಕುಟುಂಬಸ್ಥರ ಮೇಲೆ ಪೊಲೀಸ್‌ ದೌರ್ಜನ್ಯದ ಆರೋಪ

ಬೇಲಿಮ್ ವಾಸ್ ಹಿಂಸಾಚಾರ: ಮುಸ್ಲಿಂ ಯುವಕರ ಬಂಧನ, ಕುಟುಂಬಸ್ಥರ ಮೇಲೆ ಪೊಲೀಸ್‌ ದೌರ್ಜನ್ಯದ ಆರೋಪ

- Advertisement -
- Advertisement -

ಉತ್ತರ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಖೇರಾಲು ಎಂಬಲ್ಲಿ ಬೇಲಿಮ್ ವಾಸ್ ಮುಸ್ಲಿಂ ಬಾಹುಳ್ಯದ ಪ್ರದೇಶವಾಗಿದೆ. ಇಲ್ಲಿ ಸ್ಥಳೀಯ ಮುಸ್ಲಿಮರು ಭಯದಿಂದ ದಿನದೂಡುತ್ತಿದ್ದು, ಆ ಪ್ರದೇಶದಲ್ಲಿ ಪೊಲೀಸರು ಬೀಡುಬಿಟ್ಟಿದ್ದಾರೆ.

ಜನವರಿ 21ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಮುನ್ನಾದಿನದಂದು ಆ ಪ್ರದೇಶದ ಹಿಂದೂ ನಿವಾಸಿಗಳು ‘ಶೋಭಾ ಯಾತ್ರೆ’ ರ್ಯಾಲಿಯನ್ನು ನಡೆಸಿದ್ದಾರೆ. ಸ್ಥಳೀಯರ ಅಂದಾಜಿನ ಪ್ರಕಾರ ಈ ರ್ಯಾಲಿಯಲ್ಲಿ ಕನಿಷ್ಠ 600-700 ಜನರು ಭಾಗವಹಿಸಿದ್ದರು. ರ್ಯಾಲಿಯು ತನ್ನ ನಿಗದಿತ  ಹಾದಿಯನ್ನು ಬಿಟ್ಟು ಬೇರೆ ದಾರಿಯಲ್ಲಿ ಸಾಗಿ ಆ ಪ್ರದೇಶದ ಮಸೀದಿಯನ್ನು ತಲುಪಿದೆ. ಮಸೀದಿಯ ಹೊರಗೆ ಜೋರಾಗಿ ಸಂಗೀತ ನುಡಿಸದಂತೆ ಹಾಗೂ ಪಟಾಕಿ ಸಿಡಿಸದಂತೆ ಸ್ಥಳೀಯ ಮುಸ್ಲಿಮರು ಮೆರವಣಿಗೆಯಲ್ಲಿ ಪಾಲ್ಗೊಂಡವರಿಗೆ ಮನವಿ ಮಾಡಿದ್ದಾರೆ. ಆ ಮನವಿಗಳನ್ನು ಯಾತ್ರೆಯಲ್ಲಿ ಮೋಜು-ಮಸ್ತಿನಿಂದ ಇದ್ದ ಜನರು ನಿರ್ಲಕ್ಷಿಸಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಮಾತಿನ ಚಕಮಕಿ ನಡೆದು ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿದೆ. ರ್ಯಾಲಿಯಲ್ಲಿ ಭಾಗವಹಿಸಿದವರು ಕತ್ತಿ, ಕೋಲು, ಕಲ್ಲುಗಳನ್ನು ಬಳಸಿದ್ದಾರೆ. ಹಿಂಸಾಚಾರ ಉಲ್ಬಣಗೊಳ್ಳುತ್ತಿದ್ದಂತೆ ಮೆಹ್ಸಾನಾ ಪೊಲೀಸರು ಅಶ್ರುವಾಯು ಬಳಸಿ ಜನರನ್ನು ಚದುರಿಸಲು ಪ್ರಾರಂಭಿಸಿದರು.

ಬೆಲಿಮ್ ವಾಸ್‌ನಲ್ಲಿನ ಸ್ಥಳೀಯ ಮುಸ್ಲಿಮರು ಪೊಲೀಸರು ತಮ್ಮೊಂದಿಗೆ ಕೆಟ್ಟದಾಗಿ ನಡೆದುಕೊಂಡರು ಎಂದು ಹೇಳಿದ್ದಾರೆ. ಪೊಲೀಸರು 13 ಮಂದಿಯನ್ನು ಬಂಧಿಸಿದ್ದು, ಇದರಲ್ಲಿ ಇಬ್ಬರು ಅಪ್ರಾಪ್ತರು ಸೇರಿದ್ದಾರೆ. ಬಂಧಿತ ಎಲ್ಲರೂ ಬೆಲಿಮ್ ವಾಸ್ ನಿವಾಸಿಗಳಾಗಿದ್ದು, ಮುಸ್ಲಿಮ್‌ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಪೊಲೀಸ್ ಅಧಿಕಾರಿಗಳು ತಮ್ಮ ಮನೆಗಳಿಗೆ ನುಗ್ಗಿ, ಮನೆಗಳ ಬಾಗಿಲುಗಳನ್ನು ಒಡೆದು ಹಾಕಿದ್ದಾರೆ, ಕಾರುಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಮುಸ್ಲಿಂ ಮಹಿಳೆಯರು ಆರೋಪಿಸಿದ್ದಾರೆ.

ರುಬಿನಾ ಅವರ ಪತಿ ಮೊಹಮ್ಮದ್ ಹುಸೇನ್(30) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹಿಂಸಾಚಾರ ನಡೆದ ಕೆಲವೇ ಗಂಟೆಗಳಲ್ಲಿ ಅವರ ಮನೆಗೆ ಪೊಲೀಸರು ನುಗ್ಗಿದ್ದರು. ಪೊಲೀಸರು ಹುಸೇನ್ ಅವರನ್ನು ಮನೆಯಿಂದ ಹೊರಗೆ ಎಳೆದುಕೊಂಡು ಹೋಗುವಾಗ ತೀವ್ರವಾಗಿ ಥಳಿಸಿದ್ದಾರೆ. ಅವರು ನಮ್ಮ ಗೇಟುಗಳು, ಬಾಗಿಲುಗಳನ್ನು ಮುರಿದರು ಮತ್ತು ಸುತ್ತಲೂ ಎಲ್ಲವನ್ನೂ ಚದುರಿಸಿದ್ದಾರೆ. ಇದಕ್ಕೆ ಮಹಿಳೆಯರು ವಿರೋಧಿಸಿದಾಗ ಅವರನ್ನು ಕೂಡ ಬಂಧಿಸುವುದಾಗಿ ಪೊಲೀಸರು ಬೆದರಿಕೆ ಹಾಕಿದ್ದಾರೆ. ರುಬಿನಾಳ ಪತಿ ಮೆಹ್ಸಾನಾದ ವಸಾಯಿ ಜೈಲಿನಲ್ಲಿ ಇತರ 12 ಮುಸ್ಲಿಮರೊಂದಿಗೆ ಇದ್ದಾರೆ. ಹುಸೇನ್ ಖಿನ್ನತೆಯಿಂದ ಬಳಲುತ್ತಿದ್ದು, ಔಷಧಿಯನ್ನು ಸೇವಿಸುತ್ತಿದ್ದರು, ಆದರೆ ಈಗ ಜೈಲಿನಲ್ಲಿ ಔಷಧಿಗಳನ್ನು ನೀಡಲಾಗುತ್ತಿಲ್ಲ ಎಂದು ಹೇಳಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿ ಮೊಹಮ್ಮದ್ ಸಿದ್ದಿಕ್ ಎಂಬವರ 16 ವರ್ಷದ ಮಗ ರೆಹಮತುಲ್ಲಾನನ್ನು ಮೆಹ್ಸಾನಾ ಪೊಲೀಸರು ಬಂಧಿಸಿ ಐದು ದಿನಗಳಾಗಿವೆ. ಅವರು ನನ್ನ ಮಗನನ್ನು ಬಂಧಿಸಿ ಎಲ್ಲಿಗೆ ಕರೆದೊಯ್ದರು ಎಂಬ ಬಗ್ಗೆ ಯಾವುದೇ ಕುಟುಂಬ ಸದಸ್ಯರಿಗೆ ತಿಳಿಸಲಿಲ್ಲ. ಇಂದು, ಐದು ದಿನಗಳ ನಂತರ ವಿಷಯ ಸ್ಪಷ್ಟವಾಗುವವರೆಗೆ ಅವರನ್ನು ಮಕ್ಕಳ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ನಮಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮಾಜಿ ಕಾರ್ಪೊರೇಟರ್ ಜುಬೇರ್ ಬೆಲಿಮ್, ಈ ಹಿಂದೆ ಶಾಂತಿಯುತವಾಗಿದ್ದ ಖೇರಾಲು ನೆರೆಹೊರೆ ಇಂತಹ ಉದ್ದೇಶಿತ ಕ್ರಮಕ್ಕೆ ಹೇಗೆ ಸಾಕ್ಷಿಯಾಯಿತು ಎಂದು ಪ್ರದೇಶದ ಜನರು ದಿಗ್ಭ್ರಮೆಗೊಂಡಿದ್ದಾರೆ. ಮುಸ್ಲಿಮರು ಇಲ್ಲಿ ಅಲ್ಪಸಂಖ್ಯಾತರಾಗಿದ್ದಾರೆ, ನಾವು ಎಂದಿಗೂ ಅಸುರಕ್ಷಿತರಾಗಿದ್ದೇವೆ ಎಂದು ಭಾವಿಸಿರಲಿಲ್ಲ. ಅವರು ಕತ್ತಿಗಳು ಮತ್ತು ರಾಡ್‌ಗಳನ್ನು ಹೊಂದಿದ್ದರು ಮತ್ತು ನಂತರ ಅವರು ಕಲ್ಲುಗಳನ್ನು ತೂರಿದರು. ಅವರು ನನ್ನ ಮನೆಯ ಟಿವಿಯನ್ನು ಒಡೆದರು, ಅವರು ಹತ್ತಿರದ ಉಪಾಹಾರ ಗೃಹವನ್ನು ಸುಟ್ಟು ಹಾಕಿದರು. ಇದು ತುಂಬಾ ಅಪಾಯಕಾರಿ. ದೇವಾಲಯದ ಶಂಕು ಸ್ಥಾಪನೆ ಹಿನ್ನೆಲೆ ನಾವು ರ್ಯಾಲಿಯನ್ನು ನಿರೀಕ್ಷಿಸಿದ್ದೇವೆ, ಆದರೆ ಈ ರೀತಿ ಗುರಿಯಾಗಬಹುದೆಂದು ನಿರೀಕ್ಷಿಸಿರಲಿಲ್ಲ ಎಂದು ಬೆಲಿಮ್ ಅವರು ಹೇಳಿದ್ದಾರೆ.

ಇನ್ನೊಬ್ಬ ಸ್ಥಳೀಯರು ಈ ಬಗ್ಗೆ ಮಾತನಾಡಿ, ರ್ಯಾಲಿಯಲ್ಲಿ ಭಾಗವಹಿಸಿದ್ದವರ ವೀಡಿಯೊಗಳನ್ನು ಹೊಂದಿದ್ದೇವೆ. ಆದರೆ ಪುತ್ರ ಬಂಧನದಲ್ಲಿರುವುದರಿಂದ ಅದನ್ನು ಪೊಲೀಸರಿಗೆ ಅದನ್ನು ನೀಡಲು ಬಯಸುವುದಿಲ್ಲ. ನನ್ನ ಮಗ ಅವನ ಕಾಲೇಜಿನಲ್ಲಿ ಒಬ್ಬನೇ ಮುಸ್ಲಿಂ, ಅವನು ಕ್ರೀಡೆಯಲ್ಲಿ ಚಿನ್ನದ ಪದಕ ವಿಜೇತ, ವಿಶ್ವ ಹಿಂದೂ ಪರಿಷತ್ತಿನ ಗೂಂಡಾಗಳು ಅವನ ಮೇಲೆ ಬಹಳ ಕಾಲದಿಂದ ಕಣ್ಣಿಟ್ಟಿದ್ದರು ಮತ್ತು ಈಗ ಅವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಸ್ಥಳೀಯರು ಕತ್ತಿ ಹಿಡಿದು ನಮ್ಮ ಮನೆಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿರುವ ವೀಡಿಯೊಗಳು ನನ್ನ ಬಳಿ ಇವೆ. ಆದರೆ ನಾನು ಹಿಂದೂಗಳ ವಿರುದ್ಧ ದೂರು ನೀಡಿದರೆ ನನ್ನನ್ನು ಬಂಧಿಸಲಾಗುತ್ತದೆ ಅಥವಾ ನನ್ನ ಕುಟುಂಬವು ಭದ್ರತಾ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ನಾನು ಹೆದರುತ್ತೇನೆ. ಇದು ಯೋಜಿತ ದಾಳಿ ಎಂದು ನಮಗೆಲ್ಲರಿಗೂ ತಿಳಿದಿದೆ ಮತ್ತು ನಮ್ಮನ್ನು ಪ್ರಚೋದಿಸಲು ಉದ್ದೇಶಿಸಲಾಗಿತ್ತು ಎಂದು ಹೇಳಿದ್ದಾರೆ.

ಅವರ ನೆರೆಹೊರೆಯವರಾದ ಶೈಸ್ತಾ ಕೂಡ ಇದೇ ರೀತಿಯಾಗಿ ಪೊಲೀಸ್‌ ದೌರ್ಜನ್ಯವನ್ನು ಬಿಚ್ಚಿಟ್ಟಿದ್ದಾರೆ.  ನನ್ನ ಪತಿ ವಜೀರ್ ಮೊಹಮ್ಮದ್ ಸಾದಿಕ್ ಅಲಿ ಅವರನ್ನು ಥಳಿಸಲಾಗಿದೆ. ಅವರ ತಲೆಗೆ ಆರು ಹೊಲಿಗೆಗಳನ್ನು ಹಾಕಲಾಗಿದೆ. ಪೊಲೀಸರು ನಮ್ಮ ಮನೆಗೆ ನುಗ್ಗಿ ನನ್ನ ಪತಿಯನ್ನು ಎಳೆದೊಯ್ದು ಹಲ್ಲೆ ನಡೆಸಿದ್ದಾರೆ. ಅವರು ನಮ್ಮ ಎಲ್ಲಾ ಫೋನ್‌ಗಳನ್ನು ಸೀಜ್‌ ಮಾಡಿದ್ದಾರೆ. ನಮ್ಮ ಮಗಳು 4ನೇ ತರಗತಿಯಲ್ಲಿ ಓದುತ್ತಿದ್ದು, ಹಿಂಸಾಚಾರ ಮತ್ತು ತಂದೆಯ ಬಂಧನದ ಬಳಿಕ ಆಕೆಯನ್ನು ಶಾಲೆಗೆ ಕಳಹಿಸಲು ಭಯವಾಗುತ್ತಿದೆ ಎಂದು ಹೇಳಿದ್ದಾರೆ. ಹಿಂಸಾಚಾರದ ದಿನದಂದು ಹಿಂದೂ ಯುವಕರನ್ನು ಸಜ್ಜುಗೊಳಿಸಿರುವುದರ ಹಿಂದೆ ಸ್ಥಳೀಯ ಹಿಂದುತ್ವ ಗುಂಪುಗಳ ಕೈವಾಡ ಇದೆ ಎಂದು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ರಾಜ್ಯ ಮೀಸಲು ಪೊಲೀಸ್ ಪಡೆ ಕಮಾಂಡೆಂಟ್ ರುಶಿಕೇಶ್ ಬಿ.ಉಪಾಧ್ಯಾಯ ಈ ಕುರಿತು ಪ್ರತಿಕ್ರಿಯಿಸಿದ್ದು,  ಮೆಹ್ಸಾನಾದಲ್ಲಿ 13 ಮಂದಿಯ ಬಂಧನವನ್ನು ದೃಢಪಡಿಸಿದ್ದಾರೆ. ಉದ್ವಿಗ್ನತೆಯನ್ನು ತಡೆಯಲು ಪೊಲೀಸರು ಶಾಂತಿ ಸಭೆಗಳನ್ನು ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

 ಇದನ್ನು ಓದಿ: ಗಣರಾಜ್ಯೋತ್ಸವದ ಭಾಷಣದಲ್ಲಿ ‘ಜೈ ಭೀಮ್-ಜೈ ಭಾರತ್’ ಹೇಳಿದ್ದಕ್ಕೆ ದಲಿತ ವಿದ್ಯಾರ್ಥಿಗೆ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...