Homeಮುಖಪುಟಬೇಲಿಮ್ ವಾಸ್ ಹಿಂಸಾಚಾರ: ಮುಸ್ಲಿಂ ಯುವಕರ ಬಂಧನ, ಕುಟುಂಬಸ್ಥರ ಮೇಲೆ ಪೊಲೀಸ್‌ ದೌರ್ಜನ್ಯದ ಆರೋಪ

ಬೇಲಿಮ್ ವಾಸ್ ಹಿಂಸಾಚಾರ: ಮುಸ್ಲಿಂ ಯುವಕರ ಬಂಧನ, ಕುಟುಂಬಸ್ಥರ ಮೇಲೆ ಪೊಲೀಸ್‌ ದೌರ್ಜನ್ಯದ ಆರೋಪ

- Advertisement -
- Advertisement -

ಉತ್ತರ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಖೇರಾಲು ಎಂಬಲ್ಲಿ ಬೇಲಿಮ್ ವಾಸ್ ಮುಸ್ಲಿಂ ಬಾಹುಳ್ಯದ ಪ್ರದೇಶವಾಗಿದೆ. ಇಲ್ಲಿ ಸ್ಥಳೀಯ ಮುಸ್ಲಿಮರು ಭಯದಿಂದ ದಿನದೂಡುತ್ತಿದ್ದು, ಆ ಪ್ರದೇಶದಲ್ಲಿ ಪೊಲೀಸರು ಬೀಡುಬಿಟ್ಟಿದ್ದಾರೆ.

ಜನವರಿ 21ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಮುನ್ನಾದಿನದಂದು ಆ ಪ್ರದೇಶದ ಹಿಂದೂ ನಿವಾಸಿಗಳು ‘ಶೋಭಾ ಯಾತ್ರೆ’ ರ್ಯಾಲಿಯನ್ನು ನಡೆಸಿದ್ದಾರೆ. ಸ್ಥಳೀಯರ ಅಂದಾಜಿನ ಪ್ರಕಾರ ಈ ರ್ಯಾಲಿಯಲ್ಲಿ ಕನಿಷ್ಠ 600-700 ಜನರು ಭಾಗವಹಿಸಿದ್ದರು. ರ್ಯಾಲಿಯು ತನ್ನ ನಿಗದಿತ  ಹಾದಿಯನ್ನು ಬಿಟ್ಟು ಬೇರೆ ದಾರಿಯಲ್ಲಿ ಸಾಗಿ ಆ ಪ್ರದೇಶದ ಮಸೀದಿಯನ್ನು ತಲುಪಿದೆ. ಮಸೀದಿಯ ಹೊರಗೆ ಜೋರಾಗಿ ಸಂಗೀತ ನುಡಿಸದಂತೆ ಹಾಗೂ ಪಟಾಕಿ ಸಿಡಿಸದಂತೆ ಸ್ಥಳೀಯ ಮುಸ್ಲಿಮರು ಮೆರವಣಿಗೆಯಲ್ಲಿ ಪಾಲ್ಗೊಂಡವರಿಗೆ ಮನವಿ ಮಾಡಿದ್ದಾರೆ. ಆ ಮನವಿಗಳನ್ನು ಯಾತ್ರೆಯಲ್ಲಿ ಮೋಜು-ಮಸ್ತಿನಿಂದ ಇದ್ದ ಜನರು ನಿರ್ಲಕ್ಷಿಸಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಮಾತಿನ ಚಕಮಕಿ ನಡೆದು ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿದೆ. ರ್ಯಾಲಿಯಲ್ಲಿ ಭಾಗವಹಿಸಿದವರು ಕತ್ತಿ, ಕೋಲು, ಕಲ್ಲುಗಳನ್ನು ಬಳಸಿದ್ದಾರೆ. ಹಿಂಸಾಚಾರ ಉಲ್ಬಣಗೊಳ್ಳುತ್ತಿದ್ದಂತೆ ಮೆಹ್ಸಾನಾ ಪೊಲೀಸರು ಅಶ್ರುವಾಯು ಬಳಸಿ ಜನರನ್ನು ಚದುರಿಸಲು ಪ್ರಾರಂಭಿಸಿದರು.

ಬೆಲಿಮ್ ವಾಸ್‌ನಲ್ಲಿನ ಸ್ಥಳೀಯ ಮುಸ್ಲಿಮರು ಪೊಲೀಸರು ತಮ್ಮೊಂದಿಗೆ ಕೆಟ್ಟದಾಗಿ ನಡೆದುಕೊಂಡರು ಎಂದು ಹೇಳಿದ್ದಾರೆ. ಪೊಲೀಸರು 13 ಮಂದಿಯನ್ನು ಬಂಧಿಸಿದ್ದು, ಇದರಲ್ಲಿ ಇಬ್ಬರು ಅಪ್ರಾಪ್ತರು ಸೇರಿದ್ದಾರೆ. ಬಂಧಿತ ಎಲ್ಲರೂ ಬೆಲಿಮ್ ವಾಸ್ ನಿವಾಸಿಗಳಾಗಿದ್ದು, ಮುಸ್ಲಿಮ್‌ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಪೊಲೀಸ್ ಅಧಿಕಾರಿಗಳು ತಮ್ಮ ಮನೆಗಳಿಗೆ ನುಗ್ಗಿ, ಮನೆಗಳ ಬಾಗಿಲುಗಳನ್ನು ಒಡೆದು ಹಾಕಿದ್ದಾರೆ, ಕಾರುಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಮುಸ್ಲಿಂ ಮಹಿಳೆಯರು ಆರೋಪಿಸಿದ್ದಾರೆ.

ರುಬಿನಾ ಅವರ ಪತಿ ಮೊಹಮ್ಮದ್ ಹುಸೇನ್(30) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹಿಂಸಾಚಾರ ನಡೆದ ಕೆಲವೇ ಗಂಟೆಗಳಲ್ಲಿ ಅವರ ಮನೆಗೆ ಪೊಲೀಸರು ನುಗ್ಗಿದ್ದರು. ಪೊಲೀಸರು ಹುಸೇನ್ ಅವರನ್ನು ಮನೆಯಿಂದ ಹೊರಗೆ ಎಳೆದುಕೊಂಡು ಹೋಗುವಾಗ ತೀವ್ರವಾಗಿ ಥಳಿಸಿದ್ದಾರೆ. ಅವರು ನಮ್ಮ ಗೇಟುಗಳು, ಬಾಗಿಲುಗಳನ್ನು ಮುರಿದರು ಮತ್ತು ಸುತ್ತಲೂ ಎಲ್ಲವನ್ನೂ ಚದುರಿಸಿದ್ದಾರೆ. ಇದಕ್ಕೆ ಮಹಿಳೆಯರು ವಿರೋಧಿಸಿದಾಗ ಅವರನ್ನು ಕೂಡ ಬಂಧಿಸುವುದಾಗಿ ಪೊಲೀಸರು ಬೆದರಿಕೆ ಹಾಕಿದ್ದಾರೆ. ರುಬಿನಾಳ ಪತಿ ಮೆಹ್ಸಾನಾದ ವಸಾಯಿ ಜೈಲಿನಲ್ಲಿ ಇತರ 12 ಮುಸ್ಲಿಮರೊಂದಿಗೆ ಇದ್ದಾರೆ. ಹುಸೇನ್ ಖಿನ್ನತೆಯಿಂದ ಬಳಲುತ್ತಿದ್ದು, ಔಷಧಿಯನ್ನು ಸೇವಿಸುತ್ತಿದ್ದರು, ಆದರೆ ಈಗ ಜೈಲಿನಲ್ಲಿ ಔಷಧಿಗಳನ್ನು ನೀಡಲಾಗುತ್ತಿಲ್ಲ ಎಂದು ಹೇಳಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿ ಮೊಹಮ್ಮದ್ ಸಿದ್ದಿಕ್ ಎಂಬವರ 16 ವರ್ಷದ ಮಗ ರೆಹಮತುಲ್ಲಾನನ್ನು ಮೆಹ್ಸಾನಾ ಪೊಲೀಸರು ಬಂಧಿಸಿ ಐದು ದಿನಗಳಾಗಿವೆ. ಅವರು ನನ್ನ ಮಗನನ್ನು ಬಂಧಿಸಿ ಎಲ್ಲಿಗೆ ಕರೆದೊಯ್ದರು ಎಂಬ ಬಗ್ಗೆ ಯಾವುದೇ ಕುಟುಂಬ ಸದಸ್ಯರಿಗೆ ತಿಳಿಸಲಿಲ್ಲ. ಇಂದು, ಐದು ದಿನಗಳ ನಂತರ ವಿಷಯ ಸ್ಪಷ್ಟವಾಗುವವರೆಗೆ ಅವರನ್ನು ಮಕ್ಕಳ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ನಮಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮಾಜಿ ಕಾರ್ಪೊರೇಟರ್ ಜುಬೇರ್ ಬೆಲಿಮ್, ಈ ಹಿಂದೆ ಶಾಂತಿಯುತವಾಗಿದ್ದ ಖೇರಾಲು ನೆರೆಹೊರೆ ಇಂತಹ ಉದ್ದೇಶಿತ ಕ್ರಮಕ್ಕೆ ಹೇಗೆ ಸಾಕ್ಷಿಯಾಯಿತು ಎಂದು ಪ್ರದೇಶದ ಜನರು ದಿಗ್ಭ್ರಮೆಗೊಂಡಿದ್ದಾರೆ. ಮುಸ್ಲಿಮರು ಇಲ್ಲಿ ಅಲ್ಪಸಂಖ್ಯಾತರಾಗಿದ್ದಾರೆ, ನಾವು ಎಂದಿಗೂ ಅಸುರಕ್ಷಿತರಾಗಿದ್ದೇವೆ ಎಂದು ಭಾವಿಸಿರಲಿಲ್ಲ. ಅವರು ಕತ್ತಿಗಳು ಮತ್ತು ರಾಡ್‌ಗಳನ್ನು ಹೊಂದಿದ್ದರು ಮತ್ತು ನಂತರ ಅವರು ಕಲ್ಲುಗಳನ್ನು ತೂರಿದರು. ಅವರು ನನ್ನ ಮನೆಯ ಟಿವಿಯನ್ನು ಒಡೆದರು, ಅವರು ಹತ್ತಿರದ ಉಪಾಹಾರ ಗೃಹವನ್ನು ಸುಟ್ಟು ಹಾಕಿದರು. ಇದು ತುಂಬಾ ಅಪಾಯಕಾರಿ. ದೇವಾಲಯದ ಶಂಕು ಸ್ಥಾಪನೆ ಹಿನ್ನೆಲೆ ನಾವು ರ್ಯಾಲಿಯನ್ನು ನಿರೀಕ್ಷಿಸಿದ್ದೇವೆ, ಆದರೆ ಈ ರೀತಿ ಗುರಿಯಾಗಬಹುದೆಂದು ನಿರೀಕ್ಷಿಸಿರಲಿಲ್ಲ ಎಂದು ಬೆಲಿಮ್ ಅವರು ಹೇಳಿದ್ದಾರೆ.

ಇನ್ನೊಬ್ಬ ಸ್ಥಳೀಯರು ಈ ಬಗ್ಗೆ ಮಾತನಾಡಿ, ರ್ಯಾಲಿಯಲ್ಲಿ ಭಾಗವಹಿಸಿದ್ದವರ ವೀಡಿಯೊಗಳನ್ನು ಹೊಂದಿದ್ದೇವೆ. ಆದರೆ ಪುತ್ರ ಬಂಧನದಲ್ಲಿರುವುದರಿಂದ ಅದನ್ನು ಪೊಲೀಸರಿಗೆ ಅದನ್ನು ನೀಡಲು ಬಯಸುವುದಿಲ್ಲ. ನನ್ನ ಮಗ ಅವನ ಕಾಲೇಜಿನಲ್ಲಿ ಒಬ್ಬನೇ ಮುಸ್ಲಿಂ, ಅವನು ಕ್ರೀಡೆಯಲ್ಲಿ ಚಿನ್ನದ ಪದಕ ವಿಜೇತ, ವಿಶ್ವ ಹಿಂದೂ ಪರಿಷತ್ತಿನ ಗೂಂಡಾಗಳು ಅವನ ಮೇಲೆ ಬಹಳ ಕಾಲದಿಂದ ಕಣ್ಣಿಟ್ಟಿದ್ದರು ಮತ್ತು ಈಗ ಅವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಸ್ಥಳೀಯರು ಕತ್ತಿ ಹಿಡಿದು ನಮ್ಮ ಮನೆಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿರುವ ವೀಡಿಯೊಗಳು ನನ್ನ ಬಳಿ ಇವೆ. ಆದರೆ ನಾನು ಹಿಂದೂಗಳ ವಿರುದ್ಧ ದೂರು ನೀಡಿದರೆ ನನ್ನನ್ನು ಬಂಧಿಸಲಾಗುತ್ತದೆ ಅಥವಾ ನನ್ನ ಕುಟುಂಬವು ಭದ್ರತಾ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ನಾನು ಹೆದರುತ್ತೇನೆ. ಇದು ಯೋಜಿತ ದಾಳಿ ಎಂದು ನಮಗೆಲ್ಲರಿಗೂ ತಿಳಿದಿದೆ ಮತ್ತು ನಮ್ಮನ್ನು ಪ್ರಚೋದಿಸಲು ಉದ್ದೇಶಿಸಲಾಗಿತ್ತು ಎಂದು ಹೇಳಿದ್ದಾರೆ.

ಅವರ ನೆರೆಹೊರೆಯವರಾದ ಶೈಸ್ತಾ ಕೂಡ ಇದೇ ರೀತಿಯಾಗಿ ಪೊಲೀಸ್‌ ದೌರ್ಜನ್ಯವನ್ನು ಬಿಚ್ಚಿಟ್ಟಿದ್ದಾರೆ.  ನನ್ನ ಪತಿ ವಜೀರ್ ಮೊಹಮ್ಮದ್ ಸಾದಿಕ್ ಅಲಿ ಅವರನ್ನು ಥಳಿಸಲಾಗಿದೆ. ಅವರ ತಲೆಗೆ ಆರು ಹೊಲಿಗೆಗಳನ್ನು ಹಾಕಲಾಗಿದೆ. ಪೊಲೀಸರು ನಮ್ಮ ಮನೆಗೆ ನುಗ್ಗಿ ನನ್ನ ಪತಿಯನ್ನು ಎಳೆದೊಯ್ದು ಹಲ್ಲೆ ನಡೆಸಿದ್ದಾರೆ. ಅವರು ನಮ್ಮ ಎಲ್ಲಾ ಫೋನ್‌ಗಳನ್ನು ಸೀಜ್‌ ಮಾಡಿದ್ದಾರೆ. ನಮ್ಮ ಮಗಳು 4ನೇ ತರಗತಿಯಲ್ಲಿ ಓದುತ್ತಿದ್ದು, ಹಿಂಸಾಚಾರ ಮತ್ತು ತಂದೆಯ ಬಂಧನದ ಬಳಿಕ ಆಕೆಯನ್ನು ಶಾಲೆಗೆ ಕಳಹಿಸಲು ಭಯವಾಗುತ್ತಿದೆ ಎಂದು ಹೇಳಿದ್ದಾರೆ. ಹಿಂಸಾಚಾರದ ದಿನದಂದು ಹಿಂದೂ ಯುವಕರನ್ನು ಸಜ್ಜುಗೊಳಿಸಿರುವುದರ ಹಿಂದೆ ಸ್ಥಳೀಯ ಹಿಂದುತ್ವ ಗುಂಪುಗಳ ಕೈವಾಡ ಇದೆ ಎಂದು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ರಾಜ್ಯ ಮೀಸಲು ಪೊಲೀಸ್ ಪಡೆ ಕಮಾಂಡೆಂಟ್ ರುಶಿಕೇಶ್ ಬಿ.ಉಪಾಧ್ಯಾಯ ಈ ಕುರಿತು ಪ್ರತಿಕ್ರಿಯಿಸಿದ್ದು,  ಮೆಹ್ಸಾನಾದಲ್ಲಿ 13 ಮಂದಿಯ ಬಂಧನವನ್ನು ದೃಢಪಡಿಸಿದ್ದಾರೆ. ಉದ್ವಿಗ್ನತೆಯನ್ನು ತಡೆಯಲು ಪೊಲೀಸರು ಶಾಂತಿ ಸಭೆಗಳನ್ನು ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

 ಇದನ್ನು ಓದಿ: ಗಣರಾಜ್ಯೋತ್ಸವದ ಭಾಷಣದಲ್ಲಿ ‘ಜೈ ಭೀಮ್-ಜೈ ಭಾರತ್’ ಹೇಳಿದ್ದಕ್ಕೆ ದಲಿತ ವಿದ್ಯಾರ್ಥಿಗೆ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...