Homeಮುಖಪುಟಮಾನವ ಕಳ್ಳಸಾಗಾಣಿಕೆ ಆರೋಪ: 14 ಟ್ರಾವೆಲ್ ಏಜೆಂಟ್‌ಗಳ ವಿರುದ್ಧ ಎಫ್‌ಐಆರ್ ದಾಖಲು

ಮಾನವ ಕಳ್ಳಸಾಗಾಣಿಕೆ ಆರೋಪ: 14 ಟ್ರಾವೆಲ್ ಏಜೆಂಟ್‌ಗಳ ವಿರುದ್ಧ ಎಫ್‌ಐಆರ್ ದಾಖಲು

- Advertisement -
ಯುಎಯಿಂದ ನಿಕರಾಗುವಾಕ್ಕೆ 303 ಭಾರತೀಯರನ್ನು ಹೊತ್ತು ಸಾಗುತ್ತಿದ್ದ ವಿಮಾನವನ್ನು ಪ್ಯಾರಿಸ್‌ನಲ್ಲಿ ತಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ, 14 ಟ್ರಾವೆಲ್ ಏಜೆಂಟ್‌ಗಳ ವಿರುದ್ದ ಮಾನವ ಕಳ್ಳಸಾಗಣಿಕೆ ಆರೋಪದ ಮೇಲೆ ಗುಜರಾತ್ ಪೊಲೀಸರ ಅಪರಾಧ ತನಿಖಾ ವಿಭಾಗ(ಸಿಐಡಿ) ಎಫ್‌ಐಆರ್‌ ದಾಖಲಿಸಿದೆ.
ಡಿಸೆಂಬರ್ 22, 2023ರಂದು ಮಾನವ ಕಳ್ಳಸಾಗಾಣಿಕೆ ಶಂಕೆ ಮೇಲೆ ಯುಎಯಿಂದ ಹೊರಟ್ಟಿದ್ದ ವಿಮಾನವನ್ನು ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಎರಡು ದಿನಗಳ ಕಾಲ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಕೂಲಂಕುಶವಾಗಿ ಪರಿಶೀಲನೆ ನಡೆಸಿದ ಬಳಿಕ 275 ಮಂದಿಯನ್ನು ವಾಪಸ್ ಭಾರತಕ್ಕೆ ಕಳುಹಿಸಿಕೊಡಲಾಗಿತ್ತು.
ಒಟ್ಟು ಪ್ರಯಾಣಿಕರ ಪೈಕಿ ಗುಜರಾತ್‌ನ ನಿವಾಸಿಗಳಾದ 66 ಮಂದಿಯನ್ನು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೂಡಲೇ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು.
ದಿ ಹಿಂದೂ ವರದಿ ಪ್ರಕಾರ, ಪ್ರಸ್ತುತ ಪೊಲೀಸರು ಎಫ್‌ಐಆರ್‌ ದಾಖಲಿಸಿರುವ ಟ್ರಾವೆಲ್ ಏಜೆಂಟ್‌ಗಳು ಗುಜರಾತ್, ಮುಂಬೈ ಮತ್ತು ನವದೆಹಲಿ ಮೂಲದವರು. ಇವರು ಪಂಜಾಬ್ ಮತ್ತು ಗುಜರಾತ್‌ನ ಪ್ರಯಾಣಿಕರಿಂದ 60-70 ಲಕ್ಷ ರೂ. ಹಣ ಪಡೆದು ಅಮೆರಿಕಾಗೆ ಅಕ್ರಮ ಪ್ರವೇಶ ಕಲ್ಪಿಸಲು ಕರೆದುಕೊಂಡು ಹೋಗುತ್ತಿದ್ದರು.
ಪ್ರಯಾಣಿಕರನ್ನು ಯುಎಯಿಂದ ಮಧ್ಯ ಅಮೆರಿಕದ ನಿಕರಾಗುವಾಕ್ಕೆ ಕರೆದೊಯ್ದು,ಅಲ್ಲಿಂದ ಮೆಕ್ಸಿಕೋ ಮೂಲಕ ಗಡಿ ದಾಟಿಸುವ ಯೋಜನೆ ರೂಪಿಸಲಾಗಿತ್ತು. ಅಮೆರಿಕ ತಲುಪುವ ಜನರಿಗೆ ಭಾರತೀಯರು ನಡೆಸುವ ವ್ಯವಹಾರಗಳಲ್ಲಿ ಉದ್ಯೋಗಗಳನ್ನು ಹುಡುಕಲು ಏಜೆಂಟರು ಸಹಾಯ ಮಾಡುವ ಭರವಸೆ ನೀಡಿದ್ದರು ಎಂದು ಆರೋಪಿಸಲಾಗಿದೆ.
“ಇದು ಗುಜರಾತ್ ಸೇರಿದಂತೆ ಭಾರತದ ವಿವಿಧ ಭಾಗಗಳಿಂದ ಯುಎಸ್‌ಗೆ ಮಾನವ ಕಳ್ಳಸಾಗಾಣಿಕೆ ಮಾಡುವ ಅಂತಾರಾಷ್ಟ್ರೀಯ ಏಜೆಂಟ್‌ಗಳೂ ಒಳಗೊಂಡಿರುವ ಬಹು ದೊಡ್ಡ ದಂಧೆಯಾಗಿದೆ. ಭಾರತದಿಂದ ಯುಎಸ್‌ಗೆ ಕಳ್ಳದಾರಿಯ ಮೂಲಕ ಜನರನ್ನು ಕರೆಯೊಯ್ಯವ ಸಂಘಟಿತ ಜಾಲವಾಗಿದೆ” ಎಂದು ಗುಜರಾತ್‌ನ ಅಪರಾಧ ತನಿಖಾ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕ ಎಸ್ ಪಾಂಡಿಯಾ ರಾಜ್‌ಕುಮಾರ್ ತಿಳಿಸಿದ್ದಾರೆ.
ಭಾರತೀಯರು ಮಾತ್ರವಲ್ಲದೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಯುನೈಟೆಡ್ ಸ್ಟೇಟ್ಸ್(ಯುಎಸ್‌) ಮೆಕ್ಸಿಕೊ ಮತ್ತು ನಿಕರಾಗುವಾ ಮೂಲದ ಜನರೂ ಈ ಜಾಲದಲ್ಲಿ ಒಳಗೊಂಡಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಈ ರೀತಿಯ ಮೂರು ವಿಮಾನಗಳು ಜನರನ್ನು ಮಧ್ಯ ಅಮೆರಿಕಕ್ಕೆ ಯಶಸ್ವಿಯಾಗಿ ಕರೆದೊಯ್ದಿವೆ ಎಂದು ಪಾಂಡಿಯಾ ರಾಜ್‌ಕುಮಾರ್ ಮಾಹಿತಿ ನೀಡಿದ್ದಾರೆ.
ಗಡಿ ದಾಟುವಾಗ ಸಿಕ್ಕಿ ಬಿದ್ದರೆ ಏನಾದರು ಸಬೂಬು ಹೇಳಲು ಏಜೆಂಟ್‌ಗಳು ಪ್ರಯಾಣಿಕರಿಗೆ ಮೊದಲೇ ಹೇಳಿ ಕೊಡುತ್ತಿದ್ದರು. ಉದಾಹರಣೆಗೆ ಪಂಜಾಬ್‌ನವರು ಸಿಕ್ಕಿ ಬಿದ್ದರೆ ಖಲಿಸ್ತಾನಿಗಳು ಎಂದು ಹೇಳುತ್ತಿದ್ದರು ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.
ಪ್ಯಾರಿಸ್‌ನಿಂದ ಗುಜರಾತ್‌ಗೆ ಬಂದಿಳಿದ 66 ಪ್ರಯಾಣಿಕರು ಅಹಮದಾಬಾದ್, ಮುಂಬೈ ಮತ್ತು ದೆಹಲಿಯಿಂದ ಡಿಸೆಂಬರ್ 10 ಮತ್ತು ಡಿಸೆಂಬರ್ 20ರ ನಡುವೆ ಮಾನ್ಯ ಪ್ರವಾಸಿ ವೀಸಾದಲ್ಲಿ ದುಬೈ ತಲುಪಿದ್ದರು. ಡಿಸೆಂಬರ್ 21 ರಂದು  ಯುಎಇಯ ಫುಜೈರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೊಮೇನಿಯನ್ ಚಾರ್ಟರ್ ಕಂಪನಿ ಲೆಜೆಂಡ್ ಏರ್‌ಲೈನ್ಸ್ ನಿರ್ವಹಿಸುವ ನಿಕರಾಗುವಾಗೆ ಹೋಗುವ ವಿಮಾನವನ್ನು ಹತ್ತಿದ್ದರು ತಿಳಿದು ಬಂದಿದೆ.
14 ಟ್ರಾವೆಲ್‌ ಏಜೆಂಟ್‌ಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 370 (ಮಾನವ ಕಳ್ಳಸಾಗಣೆ), 201 (ಸಾಕ್ಷ್ಯ ನಾಶಪಡಿಸುವುದು) ಮತ್ತು 120-ಬಿ (ಅಪರಾಧ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...