Homeಮುಖಪುಟಮಾನವ ಕಳ್ಳಸಾಗಾಣಿಕೆ ಆರೋಪ: 14 ಟ್ರಾವೆಲ್ ಏಜೆಂಟ್‌ಗಳ ವಿರುದ್ಧ ಎಫ್‌ಐಆರ್ ದಾಖಲು

ಮಾನವ ಕಳ್ಳಸಾಗಾಣಿಕೆ ಆರೋಪ: 14 ಟ್ರಾವೆಲ್ ಏಜೆಂಟ್‌ಗಳ ವಿರುದ್ಧ ಎಫ್‌ಐಆರ್ ದಾಖಲು

- Advertisement -
ಯುಎಯಿಂದ ನಿಕರಾಗುವಾಕ್ಕೆ 303 ಭಾರತೀಯರನ್ನು ಹೊತ್ತು ಸಾಗುತ್ತಿದ್ದ ವಿಮಾನವನ್ನು ಪ್ಯಾರಿಸ್‌ನಲ್ಲಿ ತಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ, 14 ಟ್ರಾವೆಲ್ ಏಜೆಂಟ್‌ಗಳ ವಿರುದ್ದ ಮಾನವ ಕಳ್ಳಸಾಗಣಿಕೆ ಆರೋಪದ ಮೇಲೆ ಗುಜರಾತ್ ಪೊಲೀಸರ ಅಪರಾಧ ತನಿಖಾ ವಿಭಾಗ(ಸಿಐಡಿ) ಎಫ್‌ಐಆರ್‌ ದಾಖಲಿಸಿದೆ.
ಡಿಸೆಂಬರ್ 22, 2023ರಂದು ಮಾನವ ಕಳ್ಳಸಾಗಾಣಿಕೆ ಶಂಕೆ ಮೇಲೆ ಯುಎಯಿಂದ ಹೊರಟ್ಟಿದ್ದ ವಿಮಾನವನ್ನು ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಎರಡು ದಿನಗಳ ಕಾಲ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಕೂಲಂಕುಶವಾಗಿ ಪರಿಶೀಲನೆ ನಡೆಸಿದ ಬಳಿಕ 275 ಮಂದಿಯನ್ನು ವಾಪಸ್ ಭಾರತಕ್ಕೆ ಕಳುಹಿಸಿಕೊಡಲಾಗಿತ್ತು.
ಒಟ್ಟು ಪ್ರಯಾಣಿಕರ ಪೈಕಿ ಗುಜರಾತ್‌ನ ನಿವಾಸಿಗಳಾದ 66 ಮಂದಿಯನ್ನು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೂಡಲೇ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು.
ದಿ ಹಿಂದೂ ವರದಿ ಪ್ರಕಾರ, ಪ್ರಸ್ತುತ ಪೊಲೀಸರು ಎಫ್‌ಐಆರ್‌ ದಾಖಲಿಸಿರುವ ಟ್ರಾವೆಲ್ ಏಜೆಂಟ್‌ಗಳು ಗುಜರಾತ್, ಮುಂಬೈ ಮತ್ತು ನವದೆಹಲಿ ಮೂಲದವರು. ಇವರು ಪಂಜಾಬ್ ಮತ್ತು ಗುಜರಾತ್‌ನ ಪ್ರಯಾಣಿಕರಿಂದ 60-70 ಲಕ್ಷ ರೂ. ಹಣ ಪಡೆದು ಅಮೆರಿಕಾಗೆ ಅಕ್ರಮ ಪ್ರವೇಶ ಕಲ್ಪಿಸಲು ಕರೆದುಕೊಂಡು ಹೋಗುತ್ತಿದ್ದರು.
ಪ್ರಯಾಣಿಕರನ್ನು ಯುಎಯಿಂದ ಮಧ್ಯ ಅಮೆರಿಕದ ನಿಕರಾಗುವಾಕ್ಕೆ ಕರೆದೊಯ್ದು,ಅಲ್ಲಿಂದ ಮೆಕ್ಸಿಕೋ ಮೂಲಕ ಗಡಿ ದಾಟಿಸುವ ಯೋಜನೆ ರೂಪಿಸಲಾಗಿತ್ತು. ಅಮೆರಿಕ ತಲುಪುವ ಜನರಿಗೆ ಭಾರತೀಯರು ನಡೆಸುವ ವ್ಯವಹಾರಗಳಲ್ಲಿ ಉದ್ಯೋಗಗಳನ್ನು ಹುಡುಕಲು ಏಜೆಂಟರು ಸಹಾಯ ಮಾಡುವ ಭರವಸೆ ನೀಡಿದ್ದರು ಎಂದು ಆರೋಪಿಸಲಾಗಿದೆ.
“ಇದು ಗುಜರಾತ್ ಸೇರಿದಂತೆ ಭಾರತದ ವಿವಿಧ ಭಾಗಗಳಿಂದ ಯುಎಸ್‌ಗೆ ಮಾನವ ಕಳ್ಳಸಾಗಾಣಿಕೆ ಮಾಡುವ ಅಂತಾರಾಷ್ಟ್ರೀಯ ಏಜೆಂಟ್‌ಗಳೂ ಒಳಗೊಂಡಿರುವ ಬಹು ದೊಡ್ಡ ದಂಧೆಯಾಗಿದೆ. ಭಾರತದಿಂದ ಯುಎಸ್‌ಗೆ ಕಳ್ಳದಾರಿಯ ಮೂಲಕ ಜನರನ್ನು ಕರೆಯೊಯ್ಯವ ಸಂಘಟಿತ ಜಾಲವಾಗಿದೆ” ಎಂದು ಗುಜರಾತ್‌ನ ಅಪರಾಧ ತನಿಖಾ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕ ಎಸ್ ಪಾಂಡಿಯಾ ರಾಜ್‌ಕುಮಾರ್ ತಿಳಿಸಿದ್ದಾರೆ.
ಭಾರತೀಯರು ಮಾತ್ರವಲ್ಲದೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಯುನೈಟೆಡ್ ಸ್ಟೇಟ್ಸ್(ಯುಎಸ್‌) ಮೆಕ್ಸಿಕೊ ಮತ್ತು ನಿಕರಾಗುವಾ ಮೂಲದ ಜನರೂ ಈ ಜಾಲದಲ್ಲಿ ಒಳಗೊಂಡಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಈ ರೀತಿಯ ಮೂರು ವಿಮಾನಗಳು ಜನರನ್ನು ಮಧ್ಯ ಅಮೆರಿಕಕ್ಕೆ ಯಶಸ್ವಿಯಾಗಿ ಕರೆದೊಯ್ದಿವೆ ಎಂದು ಪಾಂಡಿಯಾ ರಾಜ್‌ಕುಮಾರ್ ಮಾಹಿತಿ ನೀಡಿದ್ದಾರೆ.
ಗಡಿ ದಾಟುವಾಗ ಸಿಕ್ಕಿ ಬಿದ್ದರೆ ಏನಾದರು ಸಬೂಬು ಹೇಳಲು ಏಜೆಂಟ್‌ಗಳು ಪ್ರಯಾಣಿಕರಿಗೆ ಮೊದಲೇ ಹೇಳಿ ಕೊಡುತ್ತಿದ್ದರು. ಉದಾಹರಣೆಗೆ ಪಂಜಾಬ್‌ನವರು ಸಿಕ್ಕಿ ಬಿದ್ದರೆ ಖಲಿಸ್ತಾನಿಗಳು ಎಂದು ಹೇಳುತ್ತಿದ್ದರು ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.
ಪ್ಯಾರಿಸ್‌ನಿಂದ ಗುಜರಾತ್‌ಗೆ ಬಂದಿಳಿದ 66 ಪ್ರಯಾಣಿಕರು ಅಹಮದಾಬಾದ್, ಮುಂಬೈ ಮತ್ತು ದೆಹಲಿಯಿಂದ ಡಿಸೆಂಬರ್ 10 ಮತ್ತು ಡಿಸೆಂಬರ್ 20ರ ನಡುವೆ ಮಾನ್ಯ ಪ್ರವಾಸಿ ವೀಸಾದಲ್ಲಿ ದುಬೈ ತಲುಪಿದ್ದರು. ಡಿಸೆಂಬರ್ 21 ರಂದು  ಯುಎಇಯ ಫುಜೈರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೊಮೇನಿಯನ್ ಚಾರ್ಟರ್ ಕಂಪನಿ ಲೆಜೆಂಡ್ ಏರ್‌ಲೈನ್ಸ್ ನಿರ್ವಹಿಸುವ ನಿಕರಾಗುವಾಗೆ ಹೋಗುವ ವಿಮಾನವನ್ನು ಹತ್ತಿದ್ದರು ತಿಳಿದು ಬಂದಿದೆ.
14 ಟ್ರಾವೆಲ್‌ ಏಜೆಂಟ್‌ಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 370 (ಮಾನವ ಕಳ್ಳಸಾಗಣೆ), 201 (ಸಾಕ್ಷ್ಯ ನಾಶಪಡಿಸುವುದು) ಮತ್ತು 120-ಬಿ (ಅಪರಾಧ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...