Homeಮುಖಪುಟಮಾನವ ಕಳ್ಳಸಾಗಾಣಿಕೆ ಆರೋಪ: 14 ಟ್ರಾವೆಲ್ ಏಜೆಂಟ್‌ಗಳ ವಿರುದ್ಧ ಎಫ್‌ಐಆರ್ ದಾಖಲು

ಮಾನವ ಕಳ್ಳಸಾಗಾಣಿಕೆ ಆರೋಪ: 14 ಟ್ರಾವೆಲ್ ಏಜೆಂಟ್‌ಗಳ ವಿರುದ್ಧ ಎಫ್‌ಐಆರ್ ದಾಖಲು

- Advertisement -
ಯುಎಯಿಂದ ನಿಕರಾಗುವಾಕ್ಕೆ 303 ಭಾರತೀಯರನ್ನು ಹೊತ್ತು ಸಾಗುತ್ತಿದ್ದ ವಿಮಾನವನ್ನು ಪ್ಯಾರಿಸ್‌ನಲ್ಲಿ ತಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ, 14 ಟ್ರಾವೆಲ್ ಏಜೆಂಟ್‌ಗಳ ವಿರುದ್ದ ಮಾನವ ಕಳ್ಳಸಾಗಣಿಕೆ ಆರೋಪದ ಮೇಲೆ ಗುಜರಾತ್ ಪೊಲೀಸರ ಅಪರಾಧ ತನಿಖಾ ವಿಭಾಗ(ಸಿಐಡಿ) ಎಫ್‌ಐಆರ್‌ ದಾಖಲಿಸಿದೆ.
ಡಿಸೆಂಬರ್ 22, 2023ರಂದು ಮಾನವ ಕಳ್ಳಸಾಗಾಣಿಕೆ ಶಂಕೆ ಮೇಲೆ ಯುಎಯಿಂದ ಹೊರಟ್ಟಿದ್ದ ವಿಮಾನವನ್ನು ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಎರಡು ದಿನಗಳ ಕಾಲ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಕೂಲಂಕುಶವಾಗಿ ಪರಿಶೀಲನೆ ನಡೆಸಿದ ಬಳಿಕ 275 ಮಂದಿಯನ್ನು ವಾಪಸ್ ಭಾರತಕ್ಕೆ ಕಳುಹಿಸಿಕೊಡಲಾಗಿತ್ತು.
ಒಟ್ಟು ಪ್ರಯಾಣಿಕರ ಪೈಕಿ ಗುಜರಾತ್‌ನ ನಿವಾಸಿಗಳಾದ 66 ಮಂದಿಯನ್ನು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೂಡಲೇ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು.
ದಿ ಹಿಂದೂ ವರದಿ ಪ್ರಕಾರ, ಪ್ರಸ್ತುತ ಪೊಲೀಸರು ಎಫ್‌ಐಆರ್‌ ದಾಖಲಿಸಿರುವ ಟ್ರಾವೆಲ್ ಏಜೆಂಟ್‌ಗಳು ಗುಜರಾತ್, ಮುಂಬೈ ಮತ್ತು ನವದೆಹಲಿ ಮೂಲದವರು. ಇವರು ಪಂಜಾಬ್ ಮತ್ತು ಗುಜರಾತ್‌ನ ಪ್ರಯಾಣಿಕರಿಂದ 60-70 ಲಕ್ಷ ರೂ. ಹಣ ಪಡೆದು ಅಮೆರಿಕಾಗೆ ಅಕ್ರಮ ಪ್ರವೇಶ ಕಲ್ಪಿಸಲು ಕರೆದುಕೊಂಡು ಹೋಗುತ್ತಿದ್ದರು.
ಪ್ರಯಾಣಿಕರನ್ನು ಯುಎಯಿಂದ ಮಧ್ಯ ಅಮೆರಿಕದ ನಿಕರಾಗುವಾಕ್ಕೆ ಕರೆದೊಯ್ದು,ಅಲ್ಲಿಂದ ಮೆಕ್ಸಿಕೋ ಮೂಲಕ ಗಡಿ ದಾಟಿಸುವ ಯೋಜನೆ ರೂಪಿಸಲಾಗಿತ್ತು. ಅಮೆರಿಕ ತಲುಪುವ ಜನರಿಗೆ ಭಾರತೀಯರು ನಡೆಸುವ ವ್ಯವಹಾರಗಳಲ್ಲಿ ಉದ್ಯೋಗಗಳನ್ನು ಹುಡುಕಲು ಏಜೆಂಟರು ಸಹಾಯ ಮಾಡುವ ಭರವಸೆ ನೀಡಿದ್ದರು ಎಂದು ಆರೋಪಿಸಲಾಗಿದೆ.
“ಇದು ಗುಜರಾತ್ ಸೇರಿದಂತೆ ಭಾರತದ ವಿವಿಧ ಭಾಗಗಳಿಂದ ಯುಎಸ್‌ಗೆ ಮಾನವ ಕಳ್ಳಸಾಗಾಣಿಕೆ ಮಾಡುವ ಅಂತಾರಾಷ್ಟ್ರೀಯ ಏಜೆಂಟ್‌ಗಳೂ ಒಳಗೊಂಡಿರುವ ಬಹು ದೊಡ್ಡ ದಂಧೆಯಾಗಿದೆ. ಭಾರತದಿಂದ ಯುಎಸ್‌ಗೆ ಕಳ್ಳದಾರಿಯ ಮೂಲಕ ಜನರನ್ನು ಕರೆಯೊಯ್ಯವ ಸಂಘಟಿತ ಜಾಲವಾಗಿದೆ” ಎಂದು ಗುಜರಾತ್‌ನ ಅಪರಾಧ ತನಿಖಾ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕ ಎಸ್ ಪಾಂಡಿಯಾ ರಾಜ್‌ಕುಮಾರ್ ತಿಳಿಸಿದ್ದಾರೆ.
ಭಾರತೀಯರು ಮಾತ್ರವಲ್ಲದೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಯುನೈಟೆಡ್ ಸ್ಟೇಟ್ಸ್(ಯುಎಸ್‌) ಮೆಕ್ಸಿಕೊ ಮತ್ತು ನಿಕರಾಗುವಾ ಮೂಲದ ಜನರೂ ಈ ಜಾಲದಲ್ಲಿ ಒಳಗೊಂಡಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಈ ರೀತಿಯ ಮೂರು ವಿಮಾನಗಳು ಜನರನ್ನು ಮಧ್ಯ ಅಮೆರಿಕಕ್ಕೆ ಯಶಸ್ವಿಯಾಗಿ ಕರೆದೊಯ್ದಿವೆ ಎಂದು ಪಾಂಡಿಯಾ ರಾಜ್‌ಕುಮಾರ್ ಮಾಹಿತಿ ನೀಡಿದ್ದಾರೆ.
ಗಡಿ ದಾಟುವಾಗ ಸಿಕ್ಕಿ ಬಿದ್ದರೆ ಏನಾದರು ಸಬೂಬು ಹೇಳಲು ಏಜೆಂಟ್‌ಗಳು ಪ್ರಯಾಣಿಕರಿಗೆ ಮೊದಲೇ ಹೇಳಿ ಕೊಡುತ್ತಿದ್ದರು. ಉದಾಹರಣೆಗೆ ಪಂಜಾಬ್‌ನವರು ಸಿಕ್ಕಿ ಬಿದ್ದರೆ ಖಲಿಸ್ತಾನಿಗಳು ಎಂದು ಹೇಳುತ್ತಿದ್ದರು ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.
ಪ್ಯಾರಿಸ್‌ನಿಂದ ಗುಜರಾತ್‌ಗೆ ಬಂದಿಳಿದ 66 ಪ್ರಯಾಣಿಕರು ಅಹಮದಾಬಾದ್, ಮುಂಬೈ ಮತ್ತು ದೆಹಲಿಯಿಂದ ಡಿಸೆಂಬರ್ 10 ಮತ್ತು ಡಿಸೆಂಬರ್ 20ರ ನಡುವೆ ಮಾನ್ಯ ಪ್ರವಾಸಿ ವೀಸಾದಲ್ಲಿ ದುಬೈ ತಲುಪಿದ್ದರು. ಡಿಸೆಂಬರ್ 21 ರಂದು  ಯುಎಇಯ ಫುಜೈರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೊಮೇನಿಯನ್ ಚಾರ್ಟರ್ ಕಂಪನಿ ಲೆಜೆಂಡ್ ಏರ್‌ಲೈನ್ಸ್ ನಿರ್ವಹಿಸುವ ನಿಕರಾಗುವಾಗೆ ಹೋಗುವ ವಿಮಾನವನ್ನು ಹತ್ತಿದ್ದರು ತಿಳಿದು ಬಂದಿದೆ.
14 ಟ್ರಾವೆಲ್‌ ಏಜೆಂಟ್‌ಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 370 (ಮಾನವ ಕಳ್ಳಸಾಗಣೆ), 201 (ಸಾಕ್ಷ್ಯ ನಾಶಪಡಿಸುವುದು) ಮತ್ತು 120-ಬಿ (ಅಪರಾಧ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...