Homeಮುಖಪುಟಮಾನವ ಕಳ್ಳಸಾಗಾಣಿಕೆ ಆರೋಪ: 14 ಟ್ರಾವೆಲ್ ಏಜೆಂಟ್‌ಗಳ ವಿರುದ್ಧ ಎಫ್‌ಐಆರ್ ದಾಖಲು

ಮಾನವ ಕಳ್ಳಸಾಗಾಣಿಕೆ ಆರೋಪ: 14 ಟ್ರಾವೆಲ್ ಏಜೆಂಟ್‌ಗಳ ವಿರುದ್ಧ ಎಫ್‌ಐಆರ್ ದಾಖಲು

- Advertisement -
ಯುಎಯಿಂದ ನಿಕರಾಗುವಾಕ್ಕೆ 303 ಭಾರತೀಯರನ್ನು ಹೊತ್ತು ಸಾಗುತ್ತಿದ್ದ ವಿಮಾನವನ್ನು ಪ್ಯಾರಿಸ್‌ನಲ್ಲಿ ತಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ, 14 ಟ್ರಾವೆಲ್ ಏಜೆಂಟ್‌ಗಳ ವಿರುದ್ದ ಮಾನವ ಕಳ್ಳಸಾಗಣಿಕೆ ಆರೋಪದ ಮೇಲೆ ಗುಜರಾತ್ ಪೊಲೀಸರ ಅಪರಾಧ ತನಿಖಾ ವಿಭಾಗ(ಸಿಐಡಿ) ಎಫ್‌ಐಆರ್‌ ದಾಖಲಿಸಿದೆ.
ಡಿಸೆಂಬರ್ 22, 2023ರಂದು ಮಾನವ ಕಳ್ಳಸಾಗಾಣಿಕೆ ಶಂಕೆ ಮೇಲೆ ಯುಎಯಿಂದ ಹೊರಟ್ಟಿದ್ದ ವಿಮಾನವನ್ನು ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಎರಡು ದಿನಗಳ ಕಾಲ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಕೂಲಂಕುಶವಾಗಿ ಪರಿಶೀಲನೆ ನಡೆಸಿದ ಬಳಿಕ 275 ಮಂದಿಯನ್ನು ವಾಪಸ್ ಭಾರತಕ್ಕೆ ಕಳುಹಿಸಿಕೊಡಲಾಗಿತ್ತು.
ಒಟ್ಟು ಪ್ರಯಾಣಿಕರ ಪೈಕಿ ಗುಜರಾತ್‌ನ ನಿವಾಸಿಗಳಾದ 66 ಮಂದಿಯನ್ನು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೂಡಲೇ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು.
ದಿ ಹಿಂದೂ ವರದಿ ಪ್ರಕಾರ, ಪ್ರಸ್ತುತ ಪೊಲೀಸರು ಎಫ್‌ಐಆರ್‌ ದಾಖಲಿಸಿರುವ ಟ್ರಾವೆಲ್ ಏಜೆಂಟ್‌ಗಳು ಗುಜರಾತ್, ಮುಂಬೈ ಮತ್ತು ನವದೆಹಲಿ ಮೂಲದವರು. ಇವರು ಪಂಜಾಬ್ ಮತ್ತು ಗುಜರಾತ್‌ನ ಪ್ರಯಾಣಿಕರಿಂದ 60-70 ಲಕ್ಷ ರೂ. ಹಣ ಪಡೆದು ಅಮೆರಿಕಾಗೆ ಅಕ್ರಮ ಪ್ರವೇಶ ಕಲ್ಪಿಸಲು ಕರೆದುಕೊಂಡು ಹೋಗುತ್ತಿದ್ದರು.
ಪ್ರಯಾಣಿಕರನ್ನು ಯುಎಯಿಂದ ಮಧ್ಯ ಅಮೆರಿಕದ ನಿಕರಾಗುವಾಕ್ಕೆ ಕರೆದೊಯ್ದು,ಅಲ್ಲಿಂದ ಮೆಕ್ಸಿಕೋ ಮೂಲಕ ಗಡಿ ದಾಟಿಸುವ ಯೋಜನೆ ರೂಪಿಸಲಾಗಿತ್ತು. ಅಮೆರಿಕ ತಲುಪುವ ಜನರಿಗೆ ಭಾರತೀಯರು ನಡೆಸುವ ವ್ಯವಹಾರಗಳಲ್ಲಿ ಉದ್ಯೋಗಗಳನ್ನು ಹುಡುಕಲು ಏಜೆಂಟರು ಸಹಾಯ ಮಾಡುವ ಭರವಸೆ ನೀಡಿದ್ದರು ಎಂದು ಆರೋಪಿಸಲಾಗಿದೆ.
“ಇದು ಗುಜರಾತ್ ಸೇರಿದಂತೆ ಭಾರತದ ವಿವಿಧ ಭಾಗಗಳಿಂದ ಯುಎಸ್‌ಗೆ ಮಾನವ ಕಳ್ಳಸಾಗಾಣಿಕೆ ಮಾಡುವ ಅಂತಾರಾಷ್ಟ್ರೀಯ ಏಜೆಂಟ್‌ಗಳೂ ಒಳಗೊಂಡಿರುವ ಬಹು ದೊಡ್ಡ ದಂಧೆಯಾಗಿದೆ. ಭಾರತದಿಂದ ಯುಎಸ್‌ಗೆ ಕಳ್ಳದಾರಿಯ ಮೂಲಕ ಜನರನ್ನು ಕರೆಯೊಯ್ಯವ ಸಂಘಟಿತ ಜಾಲವಾಗಿದೆ” ಎಂದು ಗುಜರಾತ್‌ನ ಅಪರಾಧ ತನಿಖಾ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕ ಎಸ್ ಪಾಂಡಿಯಾ ರಾಜ್‌ಕುಮಾರ್ ತಿಳಿಸಿದ್ದಾರೆ.
ಭಾರತೀಯರು ಮಾತ್ರವಲ್ಲದೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಯುನೈಟೆಡ್ ಸ್ಟೇಟ್ಸ್(ಯುಎಸ್‌) ಮೆಕ್ಸಿಕೊ ಮತ್ತು ನಿಕರಾಗುವಾ ಮೂಲದ ಜನರೂ ಈ ಜಾಲದಲ್ಲಿ ಒಳಗೊಂಡಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಈ ರೀತಿಯ ಮೂರು ವಿಮಾನಗಳು ಜನರನ್ನು ಮಧ್ಯ ಅಮೆರಿಕಕ್ಕೆ ಯಶಸ್ವಿಯಾಗಿ ಕರೆದೊಯ್ದಿವೆ ಎಂದು ಪಾಂಡಿಯಾ ರಾಜ್‌ಕುಮಾರ್ ಮಾಹಿತಿ ನೀಡಿದ್ದಾರೆ.
ಗಡಿ ದಾಟುವಾಗ ಸಿಕ್ಕಿ ಬಿದ್ದರೆ ಏನಾದರು ಸಬೂಬು ಹೇಳಲು ಏಜೆಂಟ್‌ಗಳು ಪ್ರಯಾಣಿಕರಿಗೆ ಮೊದಲೇ ಹೇಳಿ ಕೊಡುತ್ತಿದ್ದರು. ಉದಾಹರಣೆಗೆ ಪಂಜಾಬ್‌ನವರು ಸಿಕ್ಕಿ ಬಿದ್ದರೆ ಖಲಿಸ್ತಾನಿಗಳು ಎಂದು ಹೇಳುತ್ತಿದ್ದರು ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.
ಪ್ಯಾರಿಸ್‌ನಿಂದ ಗುಜರಾತ್‌ಗೆ ಬಂದಿಳಿದ 66 ಪ್ರಯಾಣಿಕರು ಅಹಮದಾಬಾದ್, ಮುಂಬೈ ಮತ್ತು ದೆಹಲಿಯಿಂದ ಡಿಸೆಂಬರ್ 10 ಮತ್ತು ಡಿಸೆಂಬರ್ 20ರ ನಡುವೆ ಮಾನ್ಯ ಪ್ರವಾಸಿ ವೀಸಾದಲ್ಲಿ ದುಬೈ ತಲುಪಿದ್ದರು. ಡಿಸೆಂಬರ್ 21 ರಂದು  ಯುಎಇಯ ಫುಜೈರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೊಮೇನಿಯನ್ ಚಾರ್ಟರ್ ಕಂಪನಿ ಲೆಜೆಂಡ್ ಏರ್‌ಲೈನ್ಸ್ ನಿರ್ವಹಿಸುವ ನಿಕರಾಗುವಾಗೆ ಹೋಗುವ ವಿಮಾನವನ್ನು ಹತ್ತಿದ್ದರು ತಿಳಿದು ಬಂದಿದೆ.
14 ಟ್ರಾವೆಲ್‌ ಏಜೆಂಟ್‌ಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 370 (ಮಾನವ ಕಳ್ಳಸಾಗಣೆ), 201 (ಸಾಕ್ಷ್ಯ ನಾಶಪಡಿಸುವುದು) ಮತ್ತು 120-ಬಿ (ಅಪರಾಧ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...