Homeಮುಖಪುಟಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

- Advertisement -
- Advertisement -

ಗುಜರಾತ್ ರಾಜ್ಯದಲ್ಲಿನ ಕೆಲವು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ ಹೇರುವ ಸುದ್ದಿ ಹೊರಬಿದ್ದ ಬಳಿಕ, ಬಿಜೆಪಿ ನಾಯಕರಲ್ಲಿ ಭಿನ್ನಾಭಿಪ್ರಾಯ ಉಂಟಾಗಿದೆ.

ಗುಜರಾತ್‌ನಲ್ಲಿ ಮೂರು ಸ್ಥಳೀಯ ಸಂಸ್ಥೆಗಳಲ್ಲಿ ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ ಹೇರಲು ಸ್ಥಳೀಯ ಜನಪ್ರತಿನಿಧಿಗಳು ಮುಂದಾಗಿದ್ದಾರೆಂಬ ಸುದ್ದಿಗಳು ಹೊರಬಿದ್ದಿದ್ದವು.

ಬಿಜೆಪಿಯ ರಾಜ್ಯ ಮುಖ್ಯಸ್ಥ ಸಿ.ಆರ್.ಪಾಟೀಲ್ ಅವರು, “ವೈಯಕ್ತಿಕ ನಂಬಿಕೆಗಳ” ಆಧಾರದ ಮೇಲೆ ಪ್ರಕಟಣೆಗಳನ್ನು ಬದಿಗಿರಿಸಬೇಕು ಎಂದು ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ. ಆದರೆ ವಡೋದರಾ, ರಾಜ್‌ಕೋಟ್ ಮತ್ತು ಭಾವನಗರ ಸ್ಥಳೀಯ ಸಂಸ್ಥೆಗಳು ಬೀದಿಬದಿ ತೆರೆದಿಟ್ಟು ಮಾಂಸಾಹಾರ ಮಾರುವಂತಿಲ್ಲ ಎಂದಿವೆ. ಇದೇ ರೀತಿಯ ನಿರ್ಧಾರವನ್ನು ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ರಾಜಕೀಯ ಕಾರ್ಯಕಾರಿಯೊಬ್ಬರು ಕೈಗೊಂಡಿದ್ದಾರೆ.

ವಡೋದರಾ ನಾಗರಿಕ ಸಂಸ್ಥೆಯ ಸ್ಥಾಯಿ ಸಮಿತಿ ಅಧ್ಯಕ್ಷ ಹಿತೇಂದ್ರ ಪಟೇಲ್ ಗುರುವಾರ, ಮಾಂಸಾಹಾರವನ್ನು ಸಾರ್ವಜನಿಕವಾಗಿ ಪ್ರದರ್ಶಿಸುವುದನ್ನು ನಿಲ್ಲಿಸಲು ಆಹಾರ ಮಳಿಗೆಳಿಗೆ 15 ದಿನಗಳ ಗಡುವನ್ನು ನಿಗದಿಪಡಿಸಿದ್ದರು. ರಾಜ್‌ಕೋಟ್ ನಗರದ ಮೇಯರ್ ಇದೇ ರೀತಿಯ ಘೋಷಣೆ ಮಾಡಿದ ಒಂದು ದಿನದ ನಂತರ ಪಟೇಲ್‌ರ “ಮೌಖಿಕ ಸೂಚನೆ” ಹೊರಬಿದ್ದಿತ್ತು. “ಟ್ರಾಫಿಕ್ ದಟ್ಟಣೆ”, “ಧಾರ್ಮಿಕ ಭಾವನೆಗಳಿಗೆ ಧಕ್ಕೆ” ಆಧಾರದಲ್ಲಿ ಈ ಕ್ರಮಗಳನ್ನು ಸ್ಥಳೀಯ ಸಂಸ್ಥೆಗಳು ಜರುಗಿಸಲು ಮುಂದಾಗಿವೆ ಎನ್ನಲಾಗಿದೆ.

ಇದನ್ನೂ ಓದಿರಿ: ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

ಆದರೆ ಸಿ.ಆರ್‌.ಪಾಟೀಲ್ ಅವರು ಸಂಡೇ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿ, “ನಾನು ವಡೋದರಾ ಮತ್ತು ರಾಜ್‌ಕೋಟ್ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಮಾಂಸಾಹಾರದ ಗಾಡಿಗಳನ್ನು ಬೀದಿಗಳಿಂದ ತೆಗೆಯದಂತೆ ಅವರಿಗೆ ಹೇಳಿದ್ದೇನೆ. ಇದು ಮುಖಂಡರೊಬ್ಬರ ವೈಯಕ್ತಿಕ ಅಭಿಪ್ರಾಯವಾಗಿದ್ದು, ರಾಜ್ಯ ಬಿಜೆಪಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ನಾವು ಇದನ್ನು ರಾಜ್ಯಾದ್ಯಂತ ಜಾರಿಗೆ ತರುವುದಿಲ್ಲ” ಎಂದಿದ್ದಾರೆ. ರಾಜ್ಯದ ಎಲ್ಲಾ ಎಂಟು ಮುನ್ಸಿಪಲ್ ಕಾರ್ಪೊರೇಷನ್‌ಗಳು ಬಿಜೆಪಿಯ ಆಡಳಿತದಲ್ಲಿವೆ ಎಂಬುದು ಇಲ್ಲಿ ಉಲ್ಲೇಖನೀಯ.

ರಸ್ತೆಗಳಲ್ಲಿ ಮಾಂಸಾಹಾರ ಮಾರಾಟವನ್ನು ನಿಷೇಧಿಸುವಂತೆ ಎಎಂಸಿ ಕಂದಾಯ ಸಮಿತಿ ಅಧ್ಯಕ್ಷ ಜೈನಿಕ್ ವಕೀಲ್ ಅವರು ಶನಿವಾರ ಪಾಲಿಕೆ ಆಯುಕ್ತರು ಮತ್ತು ಸ್ಥಾಯಿ ಸಮಿತಿಗೆ ಪತ್ರ ಬರೆದಿದ್ದಾರೆ.

“ಗುಜರಾತ್‌ನ ಗುರುತು ಮತ್ತು ಕರ್ಣಾವತಿ (ಅಹಮದಾಬಾದ್) ನಗರದ ಸಾಂಸ್ಕೃತಿಕ ಸಂಪ್ರದಾಯವನ್ನು ಗಮನದಲ್ಲಿಟ್ಟುಕೊಂಡು, ಮಾಂಸಾಹಾರವನ್ನು ನಗರದ ಸಾರ್ವಜನಿಕ ರಸ್ತೆಗಳು, ಧಾರ್ಮಿಕ ಮತ್ತು ಶೈಕ್ಷಣಿಕ ಸ್ಥಳಗಳಲ್ಲಿ ಇಡದಂತೆ ನೋಡಿಕೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ನಾಗರಿಕರು ರಸ್ತೆಗಳಲ್ಲಿ ಸಂಚರಿಸದಂತಾಗಿದೆ. ಇದರ ಜತೆಗೆ ಇಲ್ಲಿನ ನಿವಾಸಿಗಳ ಧಾರ್ಮಿಕ ಭಾವನೆಗಳಿಗೂ ಧಕ್ಕೆಯಾಗಿದೆ. ಈ ನಿರ್ಬಂಧವು ಸ್ವಚ್ಛತೆ, ಜೀವನ ಮತ್ತು ನಮ್ಮ ಸಂಸ್ಕೃತಿಯ ಅನುಸರಣೆಯನ್ನು ಕಾಪಾಡಿಕೊಳ್ಳಲು ಮುಖ್ಯವಾಗಿದೆ” ಎಂದು ಪತ್ರದಲ್ಲಿ ಹೇಳಿದ್ದಾರೆ.

ಪಕ್ಷದಲ್ಲಿ ಈ ವಿಚಾರಕ್ಕೆ ಒಮ್ಮತವಿಲ್ಲ. ಮಗುವನ್ನು ಜಿಗುಟುವ ಹಾಗೂ ತೊಟ್ಟಿಲನ್ನು ತೂಗುವ ಕೆಲಸವನ್ನು ಬಿಜೆಪಿ ನಾಯಕರೇ ಮಾಡುತ್ತಿದ್ದಾರೆಂದು ಭಾಸವಾಗುತ್ತದೆ. ಆಹಾರ ಸ್ವತಂತ್ರವನ್ನು ಕೆಲವು ಬಿಜೆಪಿಯ ಜನಪ್ರತಿನಿಧಿಗಳು ಕಿತ್ತುಕೊಳ್ಳಲು ಯತ್ನಿಸುತ್ತಿದ್ದಾರೆ. ಮತ್ತೆ ಕೆಲವರು ಆಹಾರ ಸ್ವತಂತ್ರದ ಪರ ಮಾತನಾಡುತ್ತಿದ್ದಾರೆ.

ಖೇಡಾ ಜಿಲ್ಲೆಯ ಬಿಜೆಪಿ ಐಟಿ ಸೆಲ್ ಮಾಜಿ ಅಧ್ಯಕ್ಷೆ ನಂದಿತಾ ಠಾಕೂರ್ ಅವರು ಟ್ವೀಟ್ ಮಾಡಿ, “ಮೀನು ಮಾರಾಟ ಮಾಡುವ ಅನೇಕರು ನಮ್ಮವರೇ ಎಂಬ ಅಂಶವನ್ನು ನಾವು ನಿರ್ಲಕ್ಷಿಸಲಾಗುವುದಿಲ್ಲ. ಕಟ್ಟುನಿಟ್ಟಾದ ಸಸ್ಯಾಹಾರಿಯಾಗಿರುವ ನರೇಂದ್ರ ಮೋದಿ ಸಾಹೇಬ್ ಅವರು ಮಾಂಸಾಹಾರಿ ಆಹಾರದ ವ್ಯಾಪಾರದಲ್ಲಿ ತೊಡಗಿರುವವರಿಗೆ ಎಂದಿಗೂ ನಿರ್ಬಂಧಗಳನ್ನು ವಿಧಿಸಲಿಲ್ಲ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ವಡೋದರಾದ ಬಿಜೆಪಿಯ ಹಿರಿಯ ಚುನಾಯಿತ ಪ್ರತಿನಿಧಿಯೊಬ್ಬರು, “ನಾನು ಸಸ್ಯಾಹಾರಿ ಆದರೆ ನಾನು ನಿರ್ಧಾರವನ್ನು ಒಪ್ಪುವುದಿಲ್ಲ. ಮಾಂಸಾಹಾರಿ ಆಹಾರವನ್ನು ಮಾರಾಟ ಮಾಡುವ ಮಳಿಗೆಗಳು ಕೆಲವು ಕುಟುಂಬಗಳಿಗೆ ಜೀವನಾಧಾರವಾಗಿದೆ. ನೈರ್ಮಲ್ಯ ಕಾಪಾಡದಿರುವುದನ್ನು ಯಾರೂ ಒಪ್ಪುವುದಿಲ್ಲ, ಆದರೆ ಅದು ಗ್ರಾಹಕ ಕೇಂದ್ರಿತವಾಗುತ್ತದೆ” ಎಂದು ತಿಳಿಸಿದ್ದಾರೆ.

ಪಾಟೀಲ್ ನೀಡಿದ ಸೂಚನೆಯನ್ನು ಬಿಜೆಪಿ ಆಡಳಿತದ ವಿಎಂಸಿ ಸ್ವೀಕರಿಸಿದೆ ಎಂದು ವಡೋದರಾ ಮೇಯರ್ ಕೆಯೂರ್ ರೊಕಾಡಿಯಾ ಹೇಳಿದ್ದಾರೆ. ಜೊತೆಗೆ ಮೇಯರ್‌‌, “ನಾವು ಬೀದಿಗಳಿಂದ ಯಾವುದೇ ಮಳಿಗೆಗಳನ್ನು ತೆಗೆದುಹಾಕಲು ಅಥವಾ ನಿರ್ದಿಷ್ಟ ರೀತಿಯ ಆಹಾರವನ್ನು ಮಾರಾಟ ಮಾಡುವುದನ್ನು ನಿರಂಕುಶವಾಗಿ ತಡೆಯಲು ಸಾಧ್ಯವಿಲ್ಲ. ಆದರೆ ಮಾಂಸಾಹಾರವನ್ನು ಮುಚ್ಚಿಡುವುದರಿಂದ ಖಂಡಿತವಾಗಿಯೂ ಯಾವುದೇ ಹಾನಿ ಇಲ್ಲ…” ಎಂದಿದ್ದಾರೆ. ಮಾಂಸಾಹಾರದ ಅನೇಕ ಪದಾರ್ಥಗಳನ್ನು ಪ್ರದರ್ಶಿಸಿಯೇ ಮಾರಾಟ ಮಾಡಬೇಕು. ಬಿಜೆಪಿ ಮುಖಂಡರ ಪ್ರತಿಪಾದನೆಯನ್ನು ಜಾರಿಗೊಳಿಸುವುದು ಹೇಗೆ ಎಂಬುದು ಬಡ ವ್ಯಾಪಾರಿಗಳ ಯಕ್ಷ ಪ್ರಶ್ನೆಯಾಗಿದೆ.


ಇದನ್ನು ಓದಿರಿ: ಸಗಣಿ ಮತ್ತು ಗೋಮೂತ್ರ ದೇಶದ ಆರ್ಥಿಕತೆಯನ್ನು ಸಬಲಗೊಳಿಸುತ್ತದೆ: ಮಧ್ಯ ಪ್ರದೇಶ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...