Homeಮುಖಪುಟಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

- Advertisement -
- Advertisement -

ಗುಜರಾತ್ ರಾಜ್ಯದಲ್ಲಿನ ಕೆಲವು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ ಹೇರುವ ಸುದ್ದಿ ಹೊರಬಿದ್ದ ಬಳಿಕ, ಬಿಜೆಪಿ ನಾಯಕರಲ್ಲಿ ಭಿನ್ನಾಭಿಪ್ರಾಯ ಉಂಟಾಗಿದೆ.

ಗುಜರಾತ್‌ನಲ್ಲಿ ಮೂರು ಸ್ಥಳೀಯ ಸಂಸ್ಥೆಗಳಲ್ಲಿ ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ ಹೇರಲು ಸ್ಥಳೀಯ ಜನಪ್ರತಿನಿಧಿಗಳು ಮುಂದಾಗಿದ್ದಾರೆಂಬ ಸುದ್ದಿಗಳು ಹೊರಬಿದ್ದಿದ್ದವು.

ಬಿಜೆಪಿಯ ರಾಜ್ಯ ಮುಖ್ಯಸ್ಥ ಸಿ.ಆರ್.ಪಾಟೀಲ್ ಅವರು, “ವೈಯಕ್ತಿಕ ನಂಬಿಕೆಗಳ” ಆಧಾರದ ಮೇಲೆ ಪ್ರಕಟಣೆಗಳನ್ನು ಬದಿಗಿರಿಸಬೇಕು ಎಂದು ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ. ಆದರೆ ವಡೋದರಾ, ರಾಜ್‌ಕೋಟ್ ಮತ್ತು ಭಾವನಗರ ಸ್ಥಳೀಯ ಸಂಸ್ಥೆಗಳು ಬೀದಿಬದಿ ತೆರೆದಿಟ್ಟು ಮಾಂಸಾಹಾರ ಮಾರುವಂತಿಲ್ಲ ಎಂದಿವೆ. ಇದೇ ರೀತಿಯ ನಿರ್ಧಾರವನ್ನು ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ರಾಜಕೀಯ ಕಾರ್ಯಕಾರಿಯೊಬ್ಬರು ಕೈಗೊಂಡಿದ್ದಾರೆ.

ವಡೋದರಾ ನಾಗರಿಕ ಸಂಸ್ಥೆಯ ಸ್ಥಾಯಿ ಸಮಿತಿ ಅಧ್ಯಕ್ಷ ಹಿತೇಂದ್ರ ಪಟೇಲ್ ಗುರುವಾರ, ಮಾಂಸಾಹಾರವನ್ನು ಸಾರ್ವಜನಿಕವಾಗಿ ಪ್ರದರ್ಶಿಸುವುದನ್ನು ನಿಲ್ಲಿಸಲು ಆಹಾರ ಮಳಿಗೆಳಿಗೆ 15 ದಿನಗಳ ಗಡುವನ್ನು ನಿಗದಿಪಡಿಸಿದ್ದರು. ರಾಜ್‌ಕೋಟ್ ನಗರದ ಮೇಯರ್ ಇದೇ ರೀತಿಯ ಘೋಷಣೆ ಮಾಡಿದ ಒಂದು ದಿನದ ನಂತರ ಪಟೇಲ್‌ರ “ಮೌಖಿಕ ಸೂಚನೆ” ಹೊರಬಿದ್ದಿತ್ತು. “ಟ್ರಾಫಿಕ್ ದಟ್ಟಣೆ”, “ಧಾರ್ಮಿಕ ಭಾವನೆಗಳಿಗೆ ಧಕ್ಕೆ” ಆಧಾರದಲ್ಲಿ ಈ ಕ್ರಮಗಳನ್ನು ಸ್ಥಳೀಯ ಸಂಸ್ಥೆಗಳು ಜರುಗಿಸಲು ಮುಂದಾಗಿವೆ ಎನ್ನಲಾಗಿದೆ.

ಇದನ್ನೂ ಓದಿರಿ: ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

ಆದರೆ ಸಿ.ಆರ್‌.ಪಾಟೀಲ್ ಅವರು ಸಂಡೇ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿ, “ನಾನು ವಡೋದರಾ ಮತ್ತು ರಾಜ್‌ಕೋಟ್ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಮಾಂಸಾಹಾರದ ಗಾಡಿಗಳನ್ನು ಬೀದಿಗಳಿಂದ ತೆಗೆಯದಂತೆ ಅವರಿಗೆ ಹೇಳಿದ್ದೇನೆ. ಇದು ಮುಖಂಡರೊಬ್ಬರ ವೈಯಕ್ತಿಕ ಅಭಿಪ್ರಾಯವಾಗಿದ್ದು, ರಾಜ್ಯ ಬಿಜೆಪಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ನಾವು ಇದನ್ನು ರಾಜ್ಯಾದ್ಯಂತ ಜಾರಿಗೆ ತರುವುದಿಲ್ಲ” ಎಂದಿದ್ದಾರೆ. ರಾಜ್ಯದ ಎಲ್ಲಾ ಎಂಟು ಮುನ್ಸಿಪಲ್ ಕಾರ್ಪೊರೇಷನ್‌ಗಳು ಬಿಜೆಪಿಯ ಆಡಳಿತದಲ್ಲಿವೆ ಎಂಬುದು ಇಲ್ಲಿ ಉಲ್ಲೇಖನೀಯ.

ರಸ್ತೆಗಳಲ್ಲಿ ಮಾಂಸಾಹಾರ ಮಾರಾಟವನ್ನು ನಿಷೇಧಿಸುವಂತೆ ಎಎಂಸಿ ಕಂದಾಯ ಸಮಿತಿ ಅಧ್ಯಕ್ಷ ಜೈನಿಕ್ ವಕೀಲ್ ಅವರು ಶನಿವಾರ ಪಾಲಿಕೆ ಆಯುಕ್ತರು ಮತ್ತು ಸ್ಥಾಯಿ ಸಮಿತಿಗೆ ಪತ್ರ ಬರೆದಿದ್ದಾರೆ.

“ಗುಜರಾತ್‌ನ ಗುರುತು ಮತ್ತು ಕರ್ಣಾವತಿ (ಅಹಮದಾಬಾದ್) ನಗರದ ಸಾಂಸ್ಕೃತಿಕ ಸಂಪ್ರದಾಯವನ್ನು ಗಮನದಲ್ಲಿಟ್ಟುಕೊಂಡು, ಮಾಂಸಾಹಾರವನ್ನು ನಗರದ ಸಾರ್ವಜನಿಕ ರಸ್ತೆಗಳು, ಧಾರ್ಮಿಕ ಮತ್ತು ಶೈಕ್ಷಣಿಕ ಸ್ಥಳಗಳಲ್ಲಿ ಇಡದಂತೆ ನೋಡಿಕೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ನಾಗರಿಕರು ರಸ್ತೆಗಳಲ್ಲಿ ಸಂಚರಿಸದಂತಾಗಿದೆ. ಇದರ ಜತೆಗೆ ಇಲ್ಲಿನ ನಿವಾಸಿಗಳ ಧಾರ್ಮಿಕ ಭಾವನೆಗಳಿಗೂ ಧಕ್ಕೆಯಾಗಿದೆ. ಈ ನಿರ್ಬಂಧವು ಸ್ವಚ್ಛತೆ, ಜೀವನ ಮತ್ತು ನಮ್ಮ ಸಂಸ್ಕೃತಿಯ ಅನುಸರಣೆಯನ್ನು ಕಾಪಾಡಿಕೊಳ್ಳಲು ಮುಖ್ಯವಾಗಿದೆ” ಎಂದು ಪತ್ರದಲ್ಲಿ ಹೇಳಿದ್ದಾರೆ.

ಪಕ್ಷದಲ್ಲಿ ಈ ವಿಚಾರಕ್ಕೆ ಒಮ್ಮತವಿಲ್ಲ. ಮಗುವನ್ನು ಜಿಗುಟುವ ಹಾಗೂ ತೊಟ್ಟಿಲನ್ನು ತೂಗುವ ಕೆಲಸವನ್ನು ಬಿಜೆಪಿ ನಾಯಕರೇ ಮಾಡುತ್ತಿದ್ದಾರೆಂದು ಭಾಸವಾಗುತ್ತದೆ. ಆಹಾರ ಸ್ವತಂತ್ರವನ್ನು ಕೆಲವು ಬಿಜೆಪಿಯ ಜನಪ್ರತಿನಿಧಿಗಳು ಕಿತ್ತುಕೊಳ್ಳಲು ಯತ್ನಿಸುತ್ತಿದ್ದಾರೆ. ಮತ್ತೆ ಕೆಲವರು ಆಹಾರ ಸ್ವತಂತ್ರದ ಪರ ಮಾತನಾಡುತ್ತಿದ್ದಾರೆ.

ಖೇಡಾ ಜಿಲ್ಲೆಯ ಬಿಜೆಪಿ ಐಟಿ ಸೆಲ್ ಮಾಜಿ ಅಧ್ಯಕ್ಷೆ ನಂದಿತಾ ಠಾಕೂರ್ ಅವರು ಟ್ವೀಟ್ ಮಾಡಿ, “ಮೀನು ಮಾರಾಟ ಮಾಡುವ ಅನೇಕರು ನಮ್ಮವರೇ ಎಂಬ ಅಂಶವನ್ನು ನಾವು ನಿರ್ಲಕ್ಷಿಸಲಾಗುವುದಿಲ್ಲ. ಕಟ್ಟುನಿಟ್ಟಾದ ಸಸ್ಯಾಹಾರಿಯಾಗಿರುವ ನರೇಂದ್ರ ಮೋದಿ ಸಾಹೇಬ್ ಅವರು ಮಾಂಸಾಹಾರಿ ಆಹಾರದ ವ್ಯಾಪಾರದಲ್ಲಿ ತೊಡಗಿರುವವರಿಗೆ ಎಂದಿಗೂ ನಿರ್ಬಂಧಗಳನ್ನು ವಿಧಿಸಲಿಲ್ಲ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ವಡೋದರಾದ ಬಿಜೆಪಿಯ ಹಿರಿಯ ಚುನಾಯಿತ ಪ್ರತಿನಿಧಿಯೊಬ್ಬರು, “ನಾನು ಸಸ್ಯಾಹಾರಿ ಆದರೆ ನಾನು ನಿರ್ಧಾರವನ್ನು ಒಪ್ಪುವುದಿಲ್ಲ. ಮಾಂಸಾಹಾರಿ ಆಹಾರವನ್ನು ಮಾರಾಟ ಮಾಡುವ ಮಳಿಗೆಗಳು ಕೆಲವು ಕುಟುಂಬಗಳಿಗೆ ಜೀವನಾಧಾರವಾಗಿದೆ. ನೈರ್ಮಲ್ಯ ಕಾಪಾಡದಿರುವುದನ್ನು ಯಾರೂ ಒಪ್ಪುವುದಿಲ್ಲ, ಆದರೆ ಅದು ಗ್ರಾಹಕ ಕೇಂದ್ರಿತವಾಗುತ್ತದೆ” ಎಂದು ತಿಳಿಸಿದ್ದಾರೆ.

ಪಾಟೀಲ್ ನೀಡಿದ ಸೂಚನೆಯನ್ನು ಬಿಜೆಪಿ ಆಡಳಿತದ ವಿಎಂಸಿ ಸ್ವೀಕರಿಸಿದೆ ಎಂದು ವಡೋದರಾ ಮೇಯರ್ ಕೆಯೂರ್ ರೊಕಾಡಿಯಾ ಹೇಳಿದ್ದಾರೆ. ಜೊತೆಗೆ ಮೇಯರ್‌‌, “ನಾವು ಬೀದಿಗಳಿಂದ ಯಾವುದೇ ಮಳಿಗೆಗಳನ್ನು ತೆಗೆದುಹಾಕಲು ಅಥವಾ ನಿರ್ದಿಷ್ಟ ರೀತಿಯ ಆಹಾರವನ್ನು ಮಾರಾಟ ಮಾಡುವುದನ್ನು ನಿರಂಕುಶವಾಗಿ ತಡೆಯಲು ಸಾಧ್ಯವಿಲ್ಲ. ಆದರೆ ಮಾಂಸಾಹಾರವನ್ನು ಮುಚ್ಚಿಡುವುದರಿಂದ ಖಂಡಿತವಾಗಿಯೂ ಯಾವುದೇ ಹಾನಿ ಇಲ್ಲ…” ಎಂದಿದ್ದಾರೆ. ಮಾಂಸಾಹಾರದ ಅನೇಕ ಪದಾರ್ಥಗಳನ್ನು ಪ್ರದರ್ಶಿಸಿಯೇ ಮಾರಾಟ ಮಾಡಬೇಕು. ಬಿಜೆಪಿ ಮುಖಂಡರ ಪ್ರತಿಪಾದನೆಯನ್ನು ಜಾರಿಗೊಳಿಸುವುದು ಹೇಗೆ ಎಂಬುದು ಬಡ ವ್ಯಾಪಾರಿಗಳ ಯಕ್ಷ ಪ್ರಶ್ನೆಯಾಗಿದೆ.


ಇದನ್ನು ಓದಿರಿ: ಸಗಣಿ ಮತ್ತು ಗೋಮೂತ್ರ ದೇಶದ ಆರ್ಥಿಕತೆಯನ್ನು ಸಬಲಗೊಳಿಸುತ್ತದೆ: ಮಧ್ಯ ಪ್ರದೇಶ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...