Homeಮುಖಪುಟಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

- Advertisement -
- Advertisement -

ಗುಜರಾತ್ ರಾಜ್ಯದಲ್ಲಿನ ಕೆಲವು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ ಹೇರುವ ಸುದ್ದಿ ಹೊರಬಿದ್ದ ಬಳಿಕ, ಬಿಜೆಪಿ ನಾಯಕರಲ್ಲಿ ಭಿನ್ನಾಭಿಪ್ರಾಯ ಉಂಟಾಗಿದೆ.

ಗುಜರಾತ್‌ನಲ್ಲಿ ಮೂರು ಸ್ಥಳೀಯ ಸಂಸ್ಥೆಗಳಲ್ಲಿ ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ ಹೇರಲು ಸ್ಥಳೀಯ ಜನಪ್ರತಿನಿಧಿಗಳು ಮುಂದಾಗಿದ್ದಾರೆಂಬ ಸುದ್ದಿಗಳು ಹೊರಬಿದ್ದಿದ್ದವು.

ಬಿಜೆಪಿಯ ರಾಜ್ಯ ಮುಖ್ಯಸ್ಥ ಸಿ.ಆರ್.ಪಾಟೀಲ್ ಅವರು, “ವೈಯಕ್ತಿಕ ನಂಬಿಕೆಗಳ” ಆಧಾರದ ಮೇಲೆ ಪ್ರಕಟಣೆಗಳನ್ನು ಬದಿಗಿರಿಸಬೇಕು ಎಂದು ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ. ಆದರೆ ವಡೋದರಾ, ರಾಜ್‌ಕೋಟ್ ಮತ್ತು ಭಾವನಗರ ಸ್ಥಳೀಯ ಸಂಸ್ಥೆಗಳು ಬೀದಿಬದಿ ತೆರೆದಿಟ್ಟು ಮಾಂಸಾಹಾರ ಮಾರುವಂತಿಲ್ಲ ಎಂದಿವೆ. ಇದೇ ರೀತಿಯ ನಿರ್ಧಾರವನ್ನು ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ರಾಜಕೀಯ ಕಾರ್ಯಕಾರಿಯೊಬ್ಬರು ಕೈಗೊಂಡಿದ್ದಾರೆ.

ವಡೋದರಾ ನಾಗರಿಕ ಸಂಸ್ಥೆಯ ಸ್ಥಾಯಿ ಸಮಿತಿ ಅಧ್ಯಕ್ಷ ಹಿತೇಂದ್ರ ಪಟೇಲ್ ಗುರುವಾರ, ಮಾಂಸಾಹಾರವನ್ನು ಸಾರ್ವಜನಿಕವಾಗಿ ಪ್ರದರ್ಶಿಸುವುದನ್ನು ನಿಲ್ಲಿಸಲು ಆಹಾರ ಮಳಿಗೆಳಿಗೆ 15 ದಿನಗಳ ಗಡುವನ್ನು ನಿಗದಿಪಡಿಸಿದ್ದರು. ರಾಜ್‌ಕೋಟ್ ನಗರದ ಮೇಯರ್ ಇದೇ ರೀತಿಯ ಘೋಷಣೆ ಮಾಡಿದ ಒಂದು ದಿನದ ನಂತರ ಪಟೇಲ್‌ರ “ಮೌಖಿಕ ಸೂಚನೆ” ಹೊರಬಿದ್ದಿತ್ತು. “ಟ್ರಾಫಿಕ್ ದಟ್ಟಣೆ”, “ಧಾರ್ಮಿಕ ಭಾವನೆಗಳಿಗೆ ಧಕ್ಕೆ” ಆಧಾರದಲ್ಲಿ ಈ ಕ್ರಮಗಳನ್ನು ಸ್ಥಳೀಯ ಸಂಸ್ಥೆಗಳು ಜರುಗಿಸಲು ಮುಂದಾಗಿವೆ ಎನ್ನಲಾಗಿದೆ.

ಇದನ್ನೂ ಓದಿರಿ: ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

ಆದರೆ ಸಿ.ಆರ್‌.ಪಾಟೀಲ್ ಅವರು ಸಂಡೇ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿ, “ನಾನು ವಡೋದರಾ ಮತ್ತು ರಾಜ್‌ಕೋಟ್ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಮಾಂಸಾಹಾರದ ಗಾಡಿಗಳನ್ನು ಬೀದಿಗಳಿಂದ ತೆಗೆಯದಂತೆ ಅವರಿಗೆ ಹೇಳಿದ್ದೇನೆ. ಇದು ಮುಖಂಡರೊಬ್ಬರ ವೈಯಕ್ತಿಕ ಅಭಿಪ್ರಾಯವಾಗಿದ್ದು, ರಾಜ್ಯ ಬಿಜೆಪಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ನಾವು ಇದನ್ನು ರಾಜ್ಯಾದ್ಯಂತ ಜಾರಿಗೆ ತರುವುದಿಲ್ಲ” ಎಂದಿದ್ದಾರೆ. ರಾಜ್ಯದ ಎಲ್ಲಾ ಎಂಟು ಮುನ್ಸಿಪಲ್ ಕಾರ್ಪೊರೇಷನ್‌ಗಳು ಬಿಜೆಪಿಯ ಆಡಳಿತದಲ್ಲಿವೆ ಎಂಬುದು ಇಲ್ಲಿ ಉಲ್ಲೇಖನೀಯ.

ರಸ್ತೆಗಳಲ್ಲಿ ಮಾಂಸಾಹಾರ ಮಾರಾಟವನ್ನು ನಿಷೇಧಿಸುವಂತೆ ಎಎಂಸಿ ಕಂದಾಯ ಸಮಿತಿ ಅಧ್ಯಕ್ಷ ಜೈನಿಕ್ ವಕೀಲ್ ಅವರು ಶನಿವಾರ ಪಾಲಿಕೆ ಆಯುಕ್ತರು ಮತ್ತು ಸ್ಥಾಯಿ ಸಮಿತಿಗೆ ಪತ್ರ ಬರೆದಿದ್ದಾರೆ.

“ಗುಜರಾತ್‌ನ ಗುರುತು ಮತ್ತು ಕರ್ಣಾವತಿ (ಅಹಮದಾಬಾದ್) ನಗರದ ಸಾಂಸ್ಕೃತಿಕ ಸಂಪ್ರದಾಯವನ್ನು ಗಮನದಲ್ಲಿಟ್ಟುಕೊಂಡು, ಮಾಂಸಾಹಾರವನ್ನು ನಗರದ ಸಾರ್ವಜನಿಕ ರಸ್ತೆಗಳು, ಧಾರ್ಮಿಕ ಮತ್ತು ಶೈಕ್ಷಣಿಕ ಸ್ಥಳಗಳಲ್ಲಿ ಇಡದಂತೆ ನೋಡಿಕೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ನಾಗರಿಕರು ರಸ್ತೆಗಳಲ್ಲಿ ಸಂಚರಿಸದಂತಾಗಿದೆ. ಇದರ ಜತೆಗೆ ಇಲ್ಲಿನ ನಿವಾಸಿಗಳ ಧಾರ್ಮಿಕ ಭಾವನೆಗಳಿಗೂ ಧಕ್ಕೆಯಾಗಿದೆ. ಈ ನಿರ್ಬಂಧವು ಸ್ವಚ್ಛತೆ, ಜೀವನ ಮತ್ತು ನಮ್ಮ ಸಂಸ್ಕೃತಿಯ ಅನುಸರಣೆಯನ್ನು ಕಾಪಾಡಿಕೊಳ್ಳಲು ಮುಖ್ಯವಾಗಿದೆ” ಎಂದು ಪತ್ರದಲ್ಲಿ ಹೇಳಿದ್ದಾರೆ.

ಪಕ್ಷದಲ್ಲಿ ಈ ವಿಚಾರಕ್ಕೆ ಒಮ್ಮತವಿಲ್ಲ. ಮಗುವನ್ನು ಜಿಗುಟುವ ಹಾಗೂ ತೊಟ್ಟಿಲನ್ನು ತೂಗುವ ಕೆಲಸವನ್ನು ಬಿಜೆಪಿ ನಾಯಕರೇ ಮಾಡುತ್ತಿದ್ದಾರೆಂದು ಭಾಸವಾಗುತ್ತದೆ. ಆಹಾರ ಸ್ವತಂತ್ರವನ್ನು ಕೆಲವು ಬಿಜೆಪಿಯ ಜನಪ್ರತಿನಿಧಿಗಳು ಕಿತ್ತುಕೊಳ್ಳಲು ಯತ್ನಿಸುತ್ತಿದ್ದಾರೆ. ಮತ್ತೆ ಕೆಲವರು ಆಹಾರ ಸ್ವತಂತ್ರದ ಪರ ಮಾತನಾಡುತ್ತಿದ್ದಾರೆ.

ಖೇಡಾ ಜಿಲ್ಲೆಯ ಬಿಜೆಪಿ ಐಟಿ ಸೆಲ್ ಮಾಜಿ ಅಧ್ಯಕ್ಷೆ ನಂದಿತಾ ಠಾಕೂರ್ ಅವರು ಟ್ವೀಟ್ ಮಾಡಿ, “ಮೀನು ಮಾರಾಟ ಮಾಡುವ ಅನೇಕರು ನಮ್ಮವರೇ ಎಂಬ ಅಂಶವನ್ನು ನಾವು ನಿರ್ಲಕ್ಷಿಸಲಾಗುವುದಿಲ್ಲ. ಕಟ್ಟುನಿಟ್ಟಾದ ಸಸ್ಯಾಹಾರಿಯಾಗಿರುವ ನರೇಂದ್ರ ಮೋದಿ ಸಾಹೇಬ್ ಅವರು ಮಾಂಸಾಹಾರಿ ಆಹಾರದ ವ್ಯಾಪಾರದಲ್ಲಿ ತೊಡಗಿರುವವರಿಗೆ ಎಂದಿಗೂ ನಿರ್ಬಂಧಗಳನ್ನು ವಿಧಿಸಲಿಲ್ಲ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ವಡೋದರಾದ ಬಿಜೆಪಿಯ ಹಿರಿಯ ಚುನಾಯಿತ ಪ್ರತಿನಿಧಿಯೊಬ್ಬರು, “ನಾನು ಸಸ್ಯಾಹಾರಿ ಆದರೆ ನಾನು ನಿರ್ಧಾರವನ್ನು ಒಪ್ಪುವುದಿಲ್ಲ. ಮಾಂಸಾಹಾರಿ ಆಹಾರವನ್ನು ಮಾರಾಟ ಮಾಡುವ ಮಳಿಗೆಗಳು ಕೆಲವು ಕುಟುಂಬಗಳಿಗೆ ಜೀವನಾಧಾರವಾಗಿದೆ. ನೈರ್ಮಲ್ಯ ಕಾಪಾಡದಿರುವುದನ್ನು ಯಾರೂ ಒಪ್ಪುವುದಿಲ್ಲ, ಆದರೆ ಅದು ಗ್ರಾಹಕ ಕೇಂದ್ರಿತವಾಗುತ್ತದೆ” ಎಂದು ತಿಳಿಸಿದ್ದಾರೆ.

ಪಾಟೀಲ್ ನೀಡಿದ ಸೂಚನೆಯನ್ನು ಬಿಜೆಪಿ ಆಡಳಿತದ ವಿಎಂಸಿ ಸ್ವೀಕರಿಸಿದೆ ಎಂದು ವಡೋದರಾ ಮೇಯರ್ ಕೆಯೂರ್ ರೊಕಾಡಿಯಾ ಹೇಳಿದ್ದಾರೆ. ಜೊತೆಗೆ ಮೇಯರ್‌‌, “ನಾವು ಬೀದಿಗಳಿಂದ ಯಾವುದೇ ಮಳಿಗೆಗಳನ್ನು ತೆಗೆದುಹಾಕಲು ಅಥವಾ ನಿರ್ದಿಷ್ಟ ರೀತಿಯ ಆಹಾರವನ್ನು ಮಾರಾಟ ಮಾಡುವುದನ್ನು ನಿರಂಕುಶವಾಗಿ ತಡೆಯಲು ಸಾಧ್ಯವಿಲ್ಲ. ಆದರೆ ಮಾಂಸಾಹಾರವನ್ನು ಮುಚ್ಚಿಡುವುದರಿಂದ ಖಂಡಿತವಾಗಿಯೂ ಯಾವುದೇ ಹಾನಿ ಇಲ್ಲ…” ಎಂದಿದ್ದಾರೆ. ಮಾಂಸಾಹಾರದ ಅನೇಕ ಪದಾರ್ಥಗಳನ್ನು ಪ್ರದರ್ಶಿಸಿಯೇ ಮಾರಾಟ ಮಾಡಬೇಕು. ಬಿಜೆಪಿ ಮುಖಂಡರ ಪ್ರತಿಪಾದನೆಯನ್ನು ಜಾರಿಗೊಳಿಸುವುದು ಹೇಗೆ ಎಂಬುದು ಬಡ ವ್ಯಾಪಾರಿಗಳ ಯಕ್ಷ ಪ್ರಶ್ನೆಯಾಗಿದೆ.


ಇದನ್ನು ಓದಿರಿ: ಸಗಣಿ ಮತ್ತು ಗೋಮೂತ್ರ ದೇಶದ ಆರ್ಥಿಕತೆಯನ್ನು ಸಬಲಗೊಳಿಸುತ್ತದೆ: ಮಧ್ಯ ಪ್ರದೇಶ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...