Homeಮುಖಪುಟಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

- Advertisement -
- Advertisement -

ಗುಜರಾತ್ ರಾಜ್ಯದಲ್ಲಿನ ಕೆಲವು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ ಹೇರುವ ಸುದ್ದಿ ಹೊರಬಿದ್ದ ಬಳಿಕ, ಬಿಜೆಪಿ ನಾಯಕರಲ್ಲಿ ಭಿನ್ನಾಭಿಪ್ರಾಯ ಉಂಟಾಗಿದೆ.

ಗುಜರಾತ್‌ನಲ್ಲಿ ಮೂರು ಸ್ಥಳೀಯ ಸಂಸ್ಥೆಗಳಲ್ಲಿ ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ ಹೇರಲು ಸ್ಥಳೀಯ ಜನಪ್ರತಿನಿಧಿಗಳು ಮುಂದಾಗಿದ್ದಾರೆಂಬ ಸುದ್ದಿಗಳು ಹೊರಬಿದ್ದಿದ್ದವು.

ಬಿಜೆಪಿಯ ರಾಜ್ಯ ಮುಖ್ಯಸ್ಥ ಸಿ.ಆರ್.ಪಾಟೀಲ್ ಅವರು, “ವೈಯಕ್ತಿಕ ನಂಬಿಕೆಗಳ” ಆಧಾರದ ಮೇಲೆ ಪ್ರಕಟಣೆಗಳನ್ನು ಬದಿಗಿರಿಸಬೇಕು ಎಂದು ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ. ಆದರೆ ವಡೋದರಾ, ರಾಜ್‌ಕೋಟ್ ಮತ್ತು ಭಾವನಗರ ಸ್ಥಳೀಯ ಸಂಸ್ಥೆಗಳು ಬೀದಿಬದಿ ತೆರೆದಿಟ್ಟು ಮಾಂಸಾಹಾರ ಮಾರುವಂತಿಲ್ಲ ಎಂದಿವೆ. ಇದೇ ರೀತಿಯ ನಿರ್ಧಾರವನ್ನು ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ರಾಜಕೀಯ ಕಾರ್ಯಕಾರಿಯೊಬ್ಬರು ಕೈಗೊಂಡಿದ್ದಾರೆ.

ವಡೋದರಾ ನಾಗರಿಕ ಸಂಸ್ಥೆಯ ಸ್ಥಾಯಿ ಸಮಿತಿ ಅಧ್ಯಕ್ಷ ಹಿತೇಂದ್ರ ಪಟೇಲ್ ಗುರುವಾರ, ಮಾಂಸಾಹಾರವನ್ನು ಸಾರ್ವಜನಿಕವಾಗಿ ಪ್ರದರ್ಶಿಸುವುದನ್ನು ನಿಲ್ಲಿಸಲು ಆಹಾರ ಮಳಿಗೆಳಿಗೆ 15 ದಿನಗಳ ಗಡುವನ್ನು ನಿಗದಿಪಡಿಸಿದ್ದರು. ರಾಜ್‌ಕೋಟ್ ನಗರದ ಮೇಯರ್ ಇದೇ ರೀತಿಯ ಘೋಷಣೆ ಮಾಡಿದ ಒಂದು ದಿನದ ನಂತರ ಪಟೇಲ್‌ರ “ಮೌಖಿಕ ಸೂಚನೆ” ಹೊರಬಿದ್ದಿತ್ತು. “ಟ್ರಾಫಿಕ್ ದಟ್ಟಣೆ”, “ಧಾರ್ಮಿಕ ಭಾವನೆಗಳಿಗೆ ಧಕ್ಕೆ” ಆಧಾರದಲ್ಲಿ ಈ ಕ್ರಮಗಳನ್ನು ಸ್ಥಳೀಯ ಸಂಸ್ಥೆಗಳು ಜರುಗಿಸಲು ಮುಂದಾಗಿವೆ ಎನ್ನಲಾಗಿದೆ.

ಇದನ್ನೂ ಓದಿರಿ: ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

ಆದರೆ ಸಿ.ಆರ್‌.ಪಾಟೀಲ್ ಅವರು ಸಂಡೇ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿ, “ನಾನು ವಡೋದರಾ ಮತ್ತು ರಾಜ್‌ಕೋಟ್ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಮಾಂಸಾಹಾರದ ಗಾಡಿಗಳನ್ನು ಬೀದಿಗಳಿಂದ ತೆಗೆಯದಂತೆ ಅವರಿಗೆ ಹೇಳಿದ್ದೇನೆ. ಇದು ಮುಖಂಡರೊಬ್ಬರ ವೈಯಕ್ತಿಕ ಅಭಿಪ್ರಾಯವಾಗಿದ್ದು, ರಾಜ್ಯ ಬಿಜೆಪಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ನಾವು ಇದನ್ನು ರಾಜ್ಯಾದ್ಯಂತ ಜಾರಿಗೆ ತರುವುದಿಲ್ಲ” ಎಂದಿದ್ದಾರೆ. ರಾಜ್ಯದ ಎಲ್ಲಾ ಎಂಟು ಮುನ್ಸಿಪಲ್ ಕಾರ್ಪೊರೇಷನ್‌ಗಳು ಬಿಜೆಪಿಯ ಆಡಳಿತದಲ್ಲಿವೆ ಎಂಬುದು ಇಲ್ಲಿ ಉಲ್ಲೇಖನೀಯ.

ರಸ್ತೆಗಳಲ್ಲಿ ಮಾಂಸಾಹಾರ ಮಾರಾಟವನ್ನು ನಿಷೇಧಿಸುವಂತೆ ಎಎಂಸಿ ಕಂದಾಯ ಸಮಿತಿ ಅಧ್ಯಕ್ಷ ಜೈನಿಕ್ ವಕೀಲ್ ಅವರು ಶನಿವಾರ ಪಾಲಿಕೆ ಆಯುಕ್ತರು ಮತ್ತು ಸ್ಥಾಯಿ ಸಮಿತಿಗೆ ಪತ್ರ ಬರೆದಿದ್ದಾರೆ.

“ಗುಜರಾತ್‌ನ ಗುರುತು ಮತ್ತು ಕರ್ಣಾವತಿ (ಅಹಮದಾಬಾದ್) ನಗರದ ಸಾಂಸ್ಕೃತಿಕ ಸಂಪ್ರದಾಯವನ್ನು ಗಮನದಲ್ಲಿಟ್ಟುಕೊಂಡು, ಮಾಂಸಾಹಾರವನ್ನು ನಗರದ ಸಾರ್ವಜನಿಕ ರಸ್ತೆಗಳು, ಧಾರ್ಮಿಕ ಮತ್ತು ಶೈಕ್ಷಣಿಕ ಸ್ಥಳಗಳಲ್ಲಿ ಇಡದಂತೆ ನೋಡಿಕೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ನಾಗರಿಕರು ರಸ್ತೆಗಳಲ್ಲಿ ಸಂಚರಿಸದಂತಾಗಿದೆ. ಇದರ ಜತೆಗೆ ಇಲ್ಲಿನ ನಿವಾಸಿಗಳ ಧಾರ್ಮಿಕ ಭಾವನೆಗಳಿಗೂ ಧಕ್ಕೆಯಾಗಿದೆ. ಈ ನಿರ್ಬಂಧವು ಸ್ವಚ್ಛತೆ, ಜೀವನ ಮತ್ತು ನಮ್ಮ ಸಂಸ್ಕೃತಿಯ ಅನುಸರಣೆಯನ್ನು ಕಾಪಾಡಿಕೊಳ್ಳಲು ಮುಖ್ಯವಾಗಿದೆ” ಎಂದು ಪತ್ರದಲ್ಲಿ ಹೇಳಿದ್ದಾರೆ.

ಪಕ್ಷದಲ್ಲಿ ಈ ವಿಚಾರಕ್ಕೆ ಒಮ್ಮತವಿಲ್ಲ. ಮಗುವನ್ನು ಜಿಗುಟುವ ಹಾಗೂ ತೊಟ್ಟಿಲನ್ನು ತೂಗುವ ಕೆಲಸವನ್ನು ಬಿಜೆಪಿ ನಾಯಕರೇ ಮಾಡುತ್ತಿದ್ದಾರೆಂದು ಭಾಸವಾಗುತ್ತದೆ. ಆಹಾರ ಸ್ವತಂತ್ರವನ್ನು ಕೆಲವು ಬಿಜೆಪಿಯ ಜನಪ್ರತಿನಿಧಿಗಳು ಕಿತ್ತುಕೊಳ್ಳಲು ಯತ್ನಿಸುತ್ತಿದ್ದಾರೆ. ಮತ್ತೆ ಕೆಲವರು ಆಹಾರ ಸ್ವತಂತ್ರದ ಪರ ಮಾತನಾಡುತ್ತಿದ್ದಾರೆ.

ಖೇಡಾ ಜಿಲ್ಲೆಯ ಬಿಜೆಪಿ ಐಟಿ ಸೆಲ್ ಮಾಜಿ ಅಧ್ಯಕ್ಷೆ ನಂದಿತಾ ಠಾಕೂರ್ ಅವರು ಟ್ವೀಟ್ ಮಾಡಿ, “ಮೀನು ಮಾರಾಟ ಮಾಡುವ ಅನೇಕರು ನಮ್ಮವರೇ ಎಂಬ ಅಂಶವನ್ನು ನಾವು ನಿರ್ಲಕ್ಷಿಸಲಾಗುವುದಿಲ್ಲ. ಕಟ್ಟುನಿಟ್ಟಾದ ಸಸ್ಯಾಹಾರಿಯಾಗಿರುವ ನರೇಂದ್ರ ಮೋದಿ ಸಾಹೇಬ್ ಅವರು ಮಾಂಸಾಹಾರಿ ಆಹಾರದ ವ್ಯಾಪಾರದಲ್ಲಿ ತೊಡಗಿರುವವರಿಗೆ ಎಂದಿಗೂ ನಿರ್ಬಂಧಗಳನ್ನು ವಿಧಿಸಲಿಲ್ಲ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ವಡೋದರಾದ ಬಿಜೆಪಿಯ ಹಿರಿಯ ಚುನಾಯಿತ ಪ್ರತಿನಿಧಿಯೊಬ್ಬರು, “ನಾನು ಸಸ್ಯಾಹಾರಿ ಆದರೆ ನಾನು ನಿರ್ಧಾರವನ್ನು ಒಪ್ಪುವುದಿಲ್ಲ. ಮಾಂಸಾಹಾರಿ ಆಹಾರವನ್ನು ಮಾರಾಟ ಮಾಡುವ ಮಳಿಗೆಗಳು ಕೆಲವು ಕುಟುಂಬಗಳಿಗೆ ಜೀವನಾಧಾರವಾಗಿದೆ. ನೈರ್ಮಲ್ಯ ಕಾಪಾಡದಿರುವುದನ್ನು ಯಾರೂ ಒಪ್ಪುವುದಿಲ್ಲ, ಆದರೆ ಅದು ಗ್ರಾಹಕ ಕೇಂದ್ರಿತವಾಗುತ್ತದೆ” ಎಂದು ತಿಳಿಸಿದ್ದಾರೆ.

ಪಾಟೀಲ್ ನೀಡಿದ ಸೂಚನೆಯನ್ನು ಬಿಜೆಪಿ ಆಡಳಿತದ ವಿಎಂಸಿ ಸ್ವೀಕರಿಸಿದೆ ಎಂದು ವಡೋದರಾ ಮೇಯರ್ ಕೆಯೂರ್ ರೊಕಾಡಿಯಾ ಹೇಳಿದ್ದಾರೆ. ಜೊತೆಗೆ ಮೇಯರ್‌‌, “ನಾವು ಬೀದಿಗಳಿಂದ ಯಾವುದೇ ಮಳಿಗೆಗಳನ್ನು ತೆಗೆದುಹಾಕಲು ಅಥವಾ ನಿರ್ದಿಷ್ಟ ರೀತಿಯ ಆಹಾರವನ್ನು ಮಾರಾಟ ಮಾಡುವುದನ್ನು ನಿರಂಕುಶವಾಗಿ ತಡೆಯಲು ಸಾಧ್ಯವಿಲ್ಲ. ಆದರೆ ಮಾಂಸಾಹಾರವನ್ನು ಮುಚ್ಚಿಡುವುದರಿಂದ ಖಂಡಿತವಾಗಿಯೂ ಯಾವುದೇ ಹಾನಿ ಇಲ್ಲ…” ಎಂದಿದ್ದಾರೆ. ಮಾಂಸಾಹಾರದ ಅನೇಕ ಪದಾರ್ಥಗಳನ್ನು ಪ್ರದರ್ಶಿಸಿಯೇ ಮಾರಾಟ ಮಾಡಬೇಕು. ಬಿಜೆಪಿ ಮುಖಂಡರ ಪ್ರತಿಪಾದನೆಯನ್ನು ಜಾರಿಗೊಳಿಸುವುದು ಹೇಗೆ ಎಂಬುದು ಬಡ ವ್ಯಾಪಾರಿಗಳ ಯಕ್ಷ ಪ್ರಶ್ನೆಯಾಗಿದೆ.


ಇದನ್ನು ಓದಿರಿ: ಸಗಣಿ ಮತ್ತು ಗೋಮೂತ್ರ ದೇಶದ ಆರ್ಥಿಕತೆಯನ್ನು ಸಬಲಗೊಳಿಸುತ್ತದೆ: ಮಧ್ಯ ಪ್ರದೇಶ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...