Homeಮುಖಪುಟಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

- Advertisement -
- Advertisement -

ಗುಜರಾತ್ ರಾಜ್ಯದಲ್ಲಿನ ಕೆಲವು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ ಹೇರುವ ಸುದ್ದಿ ಹೊರಬಿದ್ದ ಬಳಿಕ, ಬಿಜೆಪಿ ನಾಯಕರಲ್ಲಿ ಭಿನ್ನಾಭಿಪ್ರಾಯ ಉಂಟಾಗಿದೆ.

ಗುಜರಾತ್‌ನಲ್ಲಿ ಮೂರು ಸ್ಥಳೀಯ ಸಂಸ್ಥೆಗಳಲ್ಲಿ ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ ಹೇರಲು ಸ್ಥಳೀಯ ಜನಪ್ರತಿನಿಧಿಗಳು ಮುಂದಾಗಿದ್ದಾರೆಂಬ ಸುದ್ದಿಗಳು ಹೊರಬಿದ್ದಿದ್ದವು.

ಬಿಜೆಪಿಯ ರಾಜ್ಯ ಮುಖ್ಯಸ್ಥ ಸಿ.ಆರ್.ಪಾಟೀಲ್ ಅವರು, “ವೈಯಕ್ತಿಕ ನಂಬಿಕೆಗಳ” ಆಧಾರದ ಮೇಲೆ ಪ್ರಕಟಣೆಗಳನ್ನು ಬದಿಗಿರಿಸಬೇಕು ಎಂದು ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ. ಆದರೆ ವಡೋದರಾ, ರಾಜ್‌ಕೋಟ್ ಮತ್ತು ಭಾವನಗರ ಸ್ಥಳೀಯ ಸಂಸ್ಥೆಗಳು ಬೀದಿಬದಿ ತೆರೆದಿಟ್ಟು ಮಾಂಸಾಹಾರ ಮಾರುವಂತಿಲ್ಲ ಎಂದಿವೆ. ಇದೇ ರೀತಿಯ ನಿರ್ಧಾರವನ್ನು ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ರಾಜಕೀಯ ಕಾರ್ಯಕಾರಿಯೊಬ್ಬರು ಕೈಗೊಂಡಿದ್ದಾರೆ.

ವಡೋದರಾ ನಾಗರಿಕ ಸಂಸ್ಥೆಯ ಸ್ಥಾಯಿ ಸಮಿತಿ ಅಧ್ಯಕ್ಷ ಹಿತೇಂದ್ರ ಪಟೇಲ್ ಗುರುವಾರ, ಮಾಂಸಾಹಾರವನ್ನು ಸಾರ್ವಜನಿಕವಾಗಿ ಪ್ರದರ್ಶಿಸುವುದನ್ನು ನಿಲ್ಲಿಸಲು ಆಹಾರ ಮಳಿಗೆಳಿಗೆ 15 ದಿನಗಳ ಗಡುವನ್ನು ನಿಗದಿಪಡಿಸಿದ್ದರು. ರಾಜ್‌ಕೋಟ್ ನಗರದ ಮೇಯರ್ ಇದೇ ರೀತಿಯ ಘೋಷಣೆ ಮಾಡಿದ ಒಂದು ದಿನದ ನಂತರ ಪಟೇಲ್‌ರ “ಮೌಖಿಕ ಸೂಚನೆ” ಹೊರಬಿದ್ದಿತ್ತು. “ಟ್ರಾಫಿಕ್ ದಟ್ಟಣೆ”, “ಧಾರ್ಮಿಕ ಭಾವನೆಗಳಿಗೆ ಧಕ್ಕೆ” ಆಧಾರದಲ್ಲಿ ಈ ಕ್ರಮಗಳನ್ನು ಸ್ಥಳೀಯ ಸಂಸ್ಥೆಗಳು ಜರುಗಿಸಲು ಮುಂದಾಗಿವೆ ಎನ್ನಲಾಗಿದೆ.

ಇದನ್ನೂ ಓದಿರಿ: ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

ಆದರೆ ಸಿ.ಆರ್‌.ಪಾಟೀಲ್ ಅವರು ಸಂಡೇ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿ, “ನಾನು ವಡೋದರಾ ಮತ್ತು ರಾಜ್‌ಕೋಟ್ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಮಾಂಸಾಹಾರದ ಗಾಡಿಗಳನ್ನು ಬೀದಿಗಳಿಂದ ತೆಗೆಯದಂತೆ ಅವರಿಗೆ ಹೇಳಿದ್ದೇನೆ. ಇದು ಮುಖಂಡರೊಬ್ಬರ ವೈಯಕ್ತಿಕ ಅಭಿಪ್ರಾಯವಾಗಿದ್ದು, ರಾಜ್ಯ ಬಿಜೆಪಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ನಾವು ಇದನ್ನು ರಾಜ್ಯಾದ್ಯಂತ ಜಾರಿಗೆ ತರುವುದಿಲ್ಲ” ಎಂದಿದ್ದಾರೆ. ರಾಜ್ಯದ ಎಲ್ಲಾ ಎಂಟು ಮುನ್ಸಿಪಲ್ ಕಾರ್ಪೊರೇಷನ್‌ಗಳು ಬಿಜೆಪಿಯ ಆಡಳಿತದಲ್ಲಿವೆ ಎಂಬುದು ಇಲ್ಲಿ ಉಲ್ಲೇಖನೀಯ.

ರಸ್ತೆಗಳಲ್ಲಿ ಮಾಂಸಾಹಾರ ಮಾರಾಟವನ್ನು ನಿಷೇಧಿಸುವಂತೆ ಎಎಂಸಿ ಕಂದಾಯ ಸಮಿತಿ ಅಧ್ಯಕ್ಷ ಜೈನಿಕ್ ವಕೀಲ್ ಅವರು ಶನಿವಾರ ಪಾಲಿಕೆ ಆಯುಕ್ತರು ಮತ್ತು ಸ್ಥಾಯಿ ಸಮಿತಿಗೆ ಪತ್ರ ಬರೆದಿದ್ದಾರೆ.

“ಗುಜರಾತ್‌ನ ಗುರುತು ಮತ್ತು ಕರ್ಣಾವತಿ (ಅಹಮದಾಬಾದ್) ನಗರದ ಸಾಂಸ್ಕೃತಿಕ ಸಂಪ್ರದಾಯವನ್ನು ಗಮನದಲ್ಲಿಟ್ಟುಕೊಂಡು, ಮಾಂಸಾಹಾರವನ್ನು ನಗರದ ಸಾರ್ವಜನಿಕ ರಸ್ತೆಗಳು, ಧಾರ್ಮಿಕ ಮತ್ತು ಶೈಕ್ಷಣಿಕ ಸ್ಥಳಗಳಲ್ಲಿ ಇಡದಂತೆ ನೋಡಿಕೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ನಾಗರಿಕರು ರಸ್ತೆಗಳಲ್ಲಿ ಸಂಚರಿಸದಂತಾಗಿದೆ. ಇದರ ಜತೆಗೆ ಇಲ್ಲಿನ ನಿವಾಸಿಗಳ ಧಾರ್ಮಿಕ ಭಾವನೆಗಳಿಗೂ ಧಕ್ಕೆಯಾಗಿದೆ. ಈ ನಿರ್ಬಂಧವು ಸ್ವಚ್ಛತೆ, ಜೀವನ ಮತ್ತು ನಮ್ಮ ಸಂಸ್ಕೃತಿಯ ಅನುಸರಣೆಯನ್ನು ಕಾಪಾಡಿಕೊಳ್ಳಲು ಮುಖ್ಯವಾಗಿದೆ” ಎಂದು ಪತ್ರದಲ್ಲಿ ಹೇಳಿದ್ದಾರೆ.

ಪಕ್ಷದಲ್ಲಿ ಈ ವಿಚಾರಕ್ಕೆ ಒಮ್ಮತವಿಲ್ಲ. ಮಗುವನ್ನು ಜಿಗುಟುವ ಹಾಗೂ ತೊಟ್ಟಿಲನ್ನು ತೂಗುವ ಕೆಲಸವನ್ನು ಬಿಜೆಪಿ ನಾಯಕರೇ ಮಾಡುತ್ತಿದ್ದಾರೆಂದು ಭಾಸವಾಗುತ್ತದೆ. ಆಹಾರ ಸ್ವತಂತ್ರವನ್ನು ಕೆಲವು ಬಿಜೆಪಿಯ ಜನಪ್ರತಿನಿಧಿಗಳು ಕಿತ್ತುಕೊಳ್ಳಲು ಯತ್ನಿಸುತ್ತಿದ್ದಾರೆ. ಮತ್ತೆ ಕೆಲವರು ಆಹಾರ ಸ್ವತಂತ್ರದ ಪರ ಮಾತನಾಡುತ್ತಿದ್ದಾರೆ.

ಖೇಡಾ ಜಿಲ್ಲೆಯ ಬಿಜೆಪಿ ಐಟಿ ಸೆಲ್ ಮಾಜಿ ಅಧ್ಯಕ್ಷೆ ನಂದಿತಾ ಠಾಕೂರ್ ಅವರು ಟ್ವೀಟ್ ಮಾಡಿ, “ಮೀನು ಮಾರಾಟ ಮಾಡುವ ಅನೇಕರು ನಮ್ಮವರೇ ಎಂಬ ಅಂಶವನ್ನು ನಾವು ನಿರ್ಲಕ್ಷಿಸಲಾಗುವುದಿಲ್ಲ. ಕಟ್ಟುನಿಟ್ಟಾದ ಸಸ್ಯಾಹಾರಿಯಾಗಿರುವ ನರೇಂದ್ರ ಮೋದಿ ಸಾಹೇಬ್ ಅವರು ಮಾಂಸಾಹಾರಿ ಆಹಾರದ ವ್ಯಾಪಾರದಲ್ಲಿ ತೊಡಗಿರುವವರಿಗೆ ಎಂದಿಗೂ ನಿರ್ಬಂಧಗಳನ್ನು ವಿಧಿಸಲಿಲ್ಲ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ವಡೋದರಾದ ಬಿಜೆಪಿಯ ಹಿರಿಯ ಚುನಾಯಿತ ಪ್ರತಿನಿಧಿಯೊಬ್ಬರು, “ನಾನು ಸಸ್ಯಾಹಾರಿ ಆದರೆ ನಾನು ನಿರ್ಧಾರವನ್ನು ಒಪ್ಪುವುದಿಲ್ಲ. ಮಾಂಸಾಹಾರಿ ಆಹಾರವನ್ನು ಮಾರಾಟ ಮಾಡುವ ಮಳಿಗೆಗಳು ಕೆಲವು ಕುಟುಂಬಗಳಿಗೆ ಜೀವನಾಧಾರವಾಗಿದೆ. ನೈರ್ಮಲ್ಯ ಕಾಪಾಡದಿರುವುದನ್ನು ಯಾರೂ ಒಪ್ಪುವುದಿಲ್ಲ, ಆದರೆ ಅದು ಗ್ರಾಹಕ ಕೇಂದ್ರಿತವಾಗುತ್ತದೆ” ಎಂದು ತಿಳಿಸಿದ್ದಾರೆ.

ಪಾಟೀಲ್ ನೀಡಿದ ಸೂಚನೆಯನ್ನು ಬಿಜೆಪಿ ಆಡಳಿತದ ವಿಎಂಸಿ ಸ್ವೀಕರಿಸಿದೆ ಎಂದು ವಡೋದರಾ ಮೇಯರ್ ಕೆಯೂರ್ ರೊಕಾಡಿಯಾ ಹೇಳಿದ್ದಾರೆ. ಜೊತೆಗೆ ಮೇಯರ್‌‌, “ನಾವು ಬೀದಿಗಳಿಂದ ಯಾವುದೇ ಮಳಿಗೆಗಳನ್ನು ತೆಗೆದುಹಾಕಲು ಅಥವಾ ನಿರ್ದಿಷ್ಟ ರೀತಿಯ ಆಹಾರವನ್ನು ಮಾರಾಟ ಮಾಡುವುದನ್ನು ನಿರಂಕುಶವಾಗಿ ತಡೆಯಲು ಸಾಧ್ಯವಿಲ್ಲ. ಆದರೆ ಮಾಂಸಾಹಾರವನ್ನು ಮುಚ್ಚಿಡುವುದರಿಂದ ಖಂಡಿತವಾಗಿಯೂ ಯಾವುದೇ ಹಾನಿ ಇಲ್ಲ…” ಎಂದಿದ್ದಾರೆ. ಮಾಂಸಾಹಾರದ ಅನೇಕ ಪದಾರ್ಥಗಳನ್ನು ಪ್ರದರ್ಶಿಸಿಯೇ ಮಾರಾಟ ಮಾಡಬೇಕು. ಬಿಜೆಪಿ ಮುಖಂಡರ ಪ್ರತಿಪಾದನೆಯನ್ನು ಜಾರಿಗೊಳಿಸುವುದು ಹೇಗೆ ಎಂಬುದು ಬಡ ವ್ಯಾಪಾರಿಗಳ ಯಕ್ಷ ಪ್ರಶ್ನೆಯಾಗಿದೆ.


ಇದನ್ನು ಓದಿರಿ: ಸಗಣಿ ಮತ್ತು ಗೋಮೂತ್ರ ದೇಶದ ಆರ್ಥಿಕತೆಯನ್ನು ಸಬಲಗೊಳಿಸುತ್ತದೆ: ಮಧ್ಯ ಪ್ರದೇಶ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....