Homeಮುಖಪುಟಗುಜರಾತ್‌ ಗಲಭೆ: 17 ಜನರ ಕೊಂದ ಪ್ರಕರಣದಲ್ಲಿ 22 ಆರೋಪಿಗಳು ಖಲಾಸೆ

ಗುಜರಾತ್‌ ಗಲಭೆ: 17 ಜನರ ಕೊಂದ ಪ್ರಕರಣದಲ್ಲಿ 22 ಆರೋಪಿಗಳು ಖಲಾಸೆ

- Advertisement -
- Advertisement -

2002ರಲ್ಲಿ ಗುಜರಾತ್‌ನಲ್ಲಿ ನಡೆದ ಗೋಧ್ರೋತ್ತರ ಕೋಮು ಗಲಭೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ 17 ಜನರನ್ನು ಕೊಂದ ಆರೋಪ ಎದುರಿಸುತ್ತಿದ್ದ 22 ಜನರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಸ್ಥಳೀಯ ನ್ಯಾಯಾಲಯ ಖುಲಾಸೆಗೊಳಿಸಿದೆ.

ಇಬ್ಬರು ಮಕ್ಕಳು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ 17 ಸದಸ್ಯರನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಹಲೋಲ್ ಪಟ್ಟಣದ ನ್ಯಾಯಾಲಯವು ಮಂಗಳವಾರ ತೀರ್ಪು ನೀಡಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ಷ್ ತ್ರಿವೇದಿ ಅವರಿದ್ದ ನ್ಯಾಯಾಲಯವು ಎಲ್ಲಾ 22 ಆರೋಪಿಗಳನ್ನು ಖುಲಾಸೆಗೊಳಿಸಿದೆ, ಅವರಲ್ಲಿ ಎಂಟು ಮಂದಿ ಪ್ರಕರಣದ ವಿಚಾರಣೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪ್ರತಿವಾದಿ ವಕೀಲ ಗೋಪಾಲಸಿಂಹ ಸೋಲಂಕಿ ಹೇಳಿದ್ದಾರೆ.

ನ್ಯಾಯಾಲಯವು ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಜಿಲ್ಲೆಯ ಡೆಲೋಲ್ ಗ್ರಾಮದಲ್ಲಿ ಗಲಭೆ ಮತ್ತು ಇಬ್ಬರು ಮಕ್ಕಳು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ 17 ಜನರ ಕೊಲೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದಿದೆ.

ಸಂತ್ರಸ್ತರನ್ನು ಫೆಬ್ರವರಿ 28, 2002 ರಂದು ಕೊಲ್ಲಲಾಯಿತು ಮತ್ತು ಸಾಕ್ಷ್ಯವನ್ನು ನಾಶಪಡಿಸುವ ಉದ್ದೇಶದಿಂದ ಅವರ ದೇಹಗಳನ್ನು ಸುಡಲಾಯಿತು. ಫೆಬ್ರವರಿ 27, 2002ರಂದು ಪಂಚಮಹಲ್ ಜಿಲ್ಲೆಯ ಗೋಧ್ರಾ ಪಟ್ಟಣದ ಬಳಿ ಸಬರಮತಿ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ ಹಚ್ಚಿ 59 ಮಂದಿ ಕರಸೇವಕರನ್ನು ಕೊಂದ ಒಂದು ದಿನದ ನಂತರ ಕೋಮು ಹಿಂಸಾಚಾರ ರಾಜ್ಯದ ವಿವಿಧೆಡೆ ಭುಗಿಲೆದ್ದಿತ್ತು.

ಡೆಲೋಲ್ ಗ್ರಾಮದಲ್ಲಾದ ಹಿಂಸಾಚಾರದ ನಂತರ, ಕೊಲೆ ಮತ್ತು ಗಲಭೆಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲಾಯಿತು.

ಘಟನೆಯ ಸುಮಾರು ಎರಡು ವರ್ಷಗಳ ನಂತರ, ಪೊಲೀಸ್ ಇನ್ಸ್‌ಪೆಕ್ಟರ್ ಹೊಸ ದೂರನ್ನು ದಾಖಲಿಸಿದರು. ಗಲಭೆಯಲ್ಲಿ ಭಾಗಿಯಾಗಿದ್ದಕ್ಕಾಗಿ 22 ಜನರನ್ನು ಬಂಧಿಸಿದರು. ವಕೀಲರಾದ ಸೋಲಂಕಿ ಅವರ ಪ್ರಕಾರ, “ಆರೋಪಿಗಳ ವಿರುದ್ಧ ಸಾಕಷ್ಟು ಸಾಕ್ಷ್ಯಗಳನ್ನು ಸಂಗ್ರಹಿಸಲು ಕಾನೂನು ಪ್ರಕ್ರಿಯೆಗೆ ಸಾಧ್ಯವಾಗಲಿಲ್ಲ. ಸಾಕ್ಷಿಗಳೂ ವ್ಯತಿರಿಕ್ತ ಹೇಳಿಕೆಗಳನ್ನು ನುಡಿದರು” ಎಂದಿದ್ದಾರೆ.

ಸಂತ್ರಸ್ತರ ಪರ ವಕೀಲರ ಪ್ರಕಾರ ಸಂತ್ರಸ್ತರಿಗೆ ಸಂಬಂಧಿಸಿದ ಅವಶೇಷಗಳು ಎಂದಿಗೂ ಪತ್ತೆಯಾಗಿಲ್ಲ. ಪೊಲೀಸರು ನದಿಯ ದಡದಲ್ಲಿರುವ ಪ್ರತ್ಯೇಕ ಸ್ಥಳಗಳಿಂದ ಮೂಳೆಗಳನ್ನು ವಶಪಡಿಸಿಕೊಂಡರು. ಆದರೆ ಸಂತ್ರಸ್ತರ ಗುರುತುಗಳನ್ನು ಅವುಗಳಿಂದ ಪತ್ತೆಹಚ್ಚಲು ಸಾಧ್ಯವಾಗದ ಮಟ್ಟಿಗೆ ಅವು ಸುಟ್ಟುಹೋಗಿವೆ.

ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ, ನ್ಯಾಯಾಲಯವು ಎಲ್ಲಾ 22 ಆರೋಪಿಗಳನ್ನು ಖುಲಾಸೆಗೊಳಿಸಿತು, ಅವರಲ್ಲಿ ಎಂಟು ಮಂದಿ ವಿಚಾರಣೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...