Homeಮುಖಪುಟಗುಜರಾತ್‌ ಗಲಭೆ: 17 ಜನರ ಕೊಂದ ಪ್ರಕರಣದಲ್ಲಿ 22 ಆರೋಪಿಗಳು ಖಲಾಸೆ

ಗುಜರಾತ್‌ ಗಲಭೆ: 17 ಜನರ ಕೊಂದ ಪ್ರಕರಣದಲ್ಲಿ 22 ಆರೋಪಿಗಳು ಖಲಾಸೆ

- Advertisement -
- Advertisement -

2002ರಲ್ಲಿ ಗುಜರಾತ್‌ನಲ್ಲಿ ನಡೆದ ಗೋಧ್ರೋತ್ತರ ಕೋಮು ಗಲಭೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ 17 ಜನರನ್ನು ಕೊಂದ ಆರೋಪ ಎದುರಿಸುತ್ತಿದ್ದ 22 ಜನರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಸ್ಥಳೀಯ ನ್ಯಾಯಾಲಯ ಖುಲಾಸೆಗೊಳಿಸಿದೆ.

ಇಬ್ಬರು ಮಕ್ಕಳು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ 17 ಸದಸ್ಯರನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಹಲೋಲ್ ಪಟ್ಟಣದ ನ್ಯಾಯಾಲಯವು ಮಂಗಳವಾರ ತೀರ್ಪು ನೀಡಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ಷ್ ತ್ರಿವೇದಿ ಅವರಿದ್ದ ನ್ಯಾಯಾಲಯವು ಎಲ್ಲಾ 22 ಆರೋಪಿಗಳನ್ನು ಖುಲಾಸೆಗೊಳಿಸಿದೆ, ಅವರಲ್ಲಿ ಎಂಟು ಮಂದಿ ಪ್ರಕರಣದ ವಿಚಾರಣೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪ್ರತಿವಾದಿ ವಕೀಲ ಗೋಪಾಲಸಿಂಹ ಸೋಲಂಕಿ ಹೇಳಿದ್ದಾರೆ.

ನ್ಯಾಯಾಲಯವು ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಜಿಲ್ಲೆಯ ಡೆಲೋಲ್ ಗ್ರಾಮದಲ್ಲಿ ಗಲಭೆ ಮತ್ತು ಇಬ್ಬರು ಮಕ್ಕಳು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ 17 ಜನರ ಕೊಲೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದಿದೆ.

ಸಂತ್ರಸ್ತರನ್ನು ಫೆಬ್ರವರಿ 28, 2002 ರಂದು ಕೊಲ್ಲಲಾಯಿತು ಮತ್ತು ಸಾಕ್ಷ್ಯವನ್ನು ನಾಶಪಡಿಸುವ ಉದ್ದೇಶದಿಂದ ಅವರ ದೇಹಗಳನ್ನು ಸುಡಲಾಯಿತು. ಫೆಬ್ರವರಿ 27, 2002ರಂದು ಪಂಚಮಹಲ್ ಜಿಲ್ಲೆಯ ಗೋಧ್ರಾ ಪಟ್ಟಣದ ಬಳಿ ಸಬರಮತಿ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ ಹಚ್ಚಿ 59 ಮಂದಿ ಕರಸೇವಕರನ್ನು ಕೊಂದ ಒಂದು ದಿನದ ನಂತರ ಕೋಮು ಹಿಂಸಾಚಾರ ರಾಜ್ಯದ ವಿವಿಧೆಡೆ ಭುಗಿಲೆದ್ದಿತ್ತು.

ಡೆಲೋಲ್ ಗ್ರಾಮದಲ್ಲಾದ ಹಿಂಸಾಚಾರದ ನಂತರ, ಕೊಲೆ ಮತ್ತು ಗಲಭೆಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲಾಯಿತು.

ಘಟನೆಯ ಸುಮಾರು ಎರಡು ವರ್ಷಗಳ ನಂತರ, ಪೊಲೀಸ್ ಇನ್ಸ್‌ಪೆಕ್ಟರ್ ಹೊಸ ದೂರನ್ನು ದಾಖಲಿಸಿದರು. ಗಲಭೆಯಲ್ಲಿ ಭಾಗಿಯಾಗಿದ್ದಕ್ಕಾಗಿ 22 ಜನರನ್ನು ಬಂಧಿಸಿದರು. ವಕೀಲರಾದ ಸೋಲಂಕಿ ಅವರ ಪ್ರಕಾರ, “ಆರೋಪಿಗಳ ವಿರುದ್ಧ ಸಾಕಷ್ಟು ಸಾಕ್ಷ್ಯಗಳನ್ನು ಸಂಗ್ರಹಿಸಲು ಕಾನೂನು ಪ್ರಕ್ರಿಯೆಗೆ ಸಾಧ್ಯವಾಗಲಿಲ್ಲ. ಸಾಕ್ಷಿಗಳೂ ವ್ಯತಿರಿಕ್ತ ಹೇಳಿಕೆಗಳನ್ನು ನುಡಿದರು” ಎಂದಿದ್ದಾರೆ.

ಸಂತ್ರಸ್ತರ ಪರ ವಕೀಲರ ಪ್ರಕಾರ ಸಂತ್ರಸ್ತರಿಗೆ ಸಂಬಂಧಿಸಿದ ಅವಶೇಷಗಳು ಎಂದಿಗೂ ಪತ್ತೆಯಾಗಿಲ್ಲ. ಪೊಲೀಸರು ನದಿಯ ದಡದಲ್ಲಿರುವ ಪ್ರತ್ಯೇಕ ಸ್ಥಳಗಳಿಂದ ಮೂಳೆಗಳನ್ನು ವಶಪಡಿಸಿಕೊಂಡರು. ಆದರೆ ಸಂತ್ರಸ್ತರ ಗುರುತುಗಳನ್ನು ಅವುಗಳಿಂದ ಪತ್ತೆಹಚ್ಚಲು ಸಾಧ್ಯವಾಗದ ಮಟ್ಟಿಗೆ ಅವು ಸುಟ್ಟುಹೋಗಿವೆ.

ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ, ನ್ಯಾಯಾಲಯವು ಎಲ್ಲಾ 22 ಆರೋಪಿಗಳನ್ನು ಖುಲಾಸೆಗೊಳಿಸಿತು, ಅವರಲ್ಲಿ ಎಂಟು ಮಂದಿ ವಿಚಾರಣೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...