Homeರಾಷ್ಟ್ರೀಯಗುಜರಾತ್ ಗಲಭೆ: ಪ್ರಧಾನಿಗೆ ಕ್ಲೀನ್ ಚಿಟ್ ದೃಢಪಡಿಸಿದ ಸುಪ್ರೀಂ ಕೋರ್ಟ್, ಮೇಲ್ಮನವಿ ವಜಾ

ಗುಜರಾತ್ ಗಲಭೆ: ಪ್ರಧಾನಿಗೆ ಕ್ಲೀನ್ ಚಿಟ್ ದೃಢಪಡಿಸಿದ ಸುಪ್ರೀಂ ಕೋರ್ಟ್, ಮೇಲ್ಮನವಿ ವಜಾ

- Advertisement -
- Advertisement -

2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೋಷಮುಕ್ತಗೊಳಿಸಿರುವುದನ್ನು ಪ್ರಶ್ನಿಸಿ, ಹಿಂಸಾಚಾರದಲ್ಲಿ ಹತರಾದ ಕಾಂಗ್ರೆಸ್ ಸಂಸದರೊಬ್ಬರ ಪತ್ನಿ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂಕೋರ್ಟ್‌ ಶುಕ್ರವಾರ ‘ಅರ್ಹವಲ್ಲ’ ಎಂದು ಹೇಳಿದೆ.

ವಿಶೇಷ ತನಿಖಾ ತಂಡವು ರಾಜ್ಯದ ಮುಖ್ಯಮಂತ್ರಿಗೆ ನೀಡಿದ್ದ ಕ್ಲೀನ್‌ಚಿಟ್‌ ಅನ್ನ ಎತ್ತಿಹಿಡಿದ ಸುಪ್ರೀಂ ಕೋರ್ಟ್, ಗುಲ್ಬರ್ಗ್ ಸಮಾಜದ ಹತ್ಯಾಕಾಂಡ ಎಂದು ಕರೆಯಲ್ಪಡುವ ಹಿಂಸಾಚಾರ ಪ್ರಕರಣದಲ್ಲಿ ಹತ್ಯೆಯಾದ 68 ಜನರಲ್ಲಿ ಒಬ್ಬರಾದ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

84ರ ವಯಸ್ಸಿನ ಜಾಕಿಯಾ ಜಾಫ್ರಿ ಅವರು ಕೋಮುಗಲಭೆಗಳ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್‌ ಅನ್ನು ಕೋರಿದ್ದರು. ಹತ್ಯಾಕಾಂಡವು ರಾಜಕಾರಣಿಗಳು ಮತ್ತು ಪೊಲೀಸರನ್ನು ಒಳಗೊಂಡ ದೊಡ್ಡ ಪಿತೂರಿಯಿಂದಾಗಿ ನಡೆದಿದೆ ಎಂದು ಅವರು ಆರೋಪಿಸಿದ್ದರು.

ಇದನ್ನೂ ಓದಿ: ಗುಜರಾತ್: ಗಲಭೆ ಪ್ರಕರಣದಲ್ಲಿ ಬಿಜೆಪಿ ಶಾಸಕನಿಗೆ 6 ತಿಂಗಳು ಜೈಲು ಶಿಕ್ಷೆ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಎಂ ಖಾನ್ವಿಲ್ಕರ್, ದಿನೇಶ್ ಮಾಹೇಶ್ವರಿ ಮತ್ತು ಸಿಟಿ ರವಿಕುಮಾರ್ ಅವರು ಕಳೆದ ಡಿಸೆಂಬರ್‌ನಲ್ಲಿ ತೀರ್ಪನ್ನು ಕಾಯ್ದಿರಿಸಿದ್ದರು.

ಹೆಚ್ಚಾಗಿ ಮುಸ್ಲಿಮರೇ ವಾಸಿಸುತ್ತಿದ್ದ 29 ಬಂಗಲೆಗಳು ಮತ್ತು 10 ಅಪಾರ್ಟ್‌ಮೆಂಟ್ ಕಟ್ಟಡಗಳ ಸಮೂಹವಾದ ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದ ಹತ್ಯಾಕಾಂಡ ಸೇರಿದಂತೆ 10 ಪ್ರಮುಖ ಗುಜರಾತ್ ಗಲಭೆ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ನೇಮಿಸಿದ ವಿಶೇಷ ತಂಡವು ಮರು ತನಿಖೆ ನಡೆಸಿದೆ.

ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಸೇರಿದಂತೆ 68 ಮಂದಿಯನ್ನು ಗಲಭೆಕೋರರು ಎಳೆದೊಯ್ದು, ಕತ್ತರಿಸಿ ಸುಟ್ಟು ಹಾಕಿದ್ದಾರೆ. ಸಹಾಯಕ್ಕಾಗಿ ಪೊಲೀಸ್ ಅಧಿಕಾರಿಗಳು ಮತ್ತು ಹಿರಿಯ ರಾಜಕಾರಣಿಗಳಿಗೆ ಫೋನ್ ಮಾಡಿದ್ದರೂ ಅವರಿಗೆ ಉತ್ತರಿಸಿರಲಿಲ್ಲ ಎಂದು ಜಾಕಿಯಾ ಜಾಫ್ರಿ ಆರೋಪಿಸಿದ್ದಾರೆ.

ವಿಶೇಷ ತನಿಖಾ ತಂಡ(ಎಸ್‌ಐಟಿ)ವು ಗಲಭೆಗಳ ಒಂದು ದಶಕದ ನಂತರ 2012 ರ ಫೆಬ್ರವರಿಯಲ್ಲಿ ‘ಯಾವುದೇ ಪ್ರಾಸಿಕ್ಯೂಟ್ ಮಾಡಬಹುದಾದ ಪುರಾವೆಗಳಿಲ್ಲ’ ಎಂದು ಉಲ್ಲೇಖಿಸಿ ತನ್ನ ‘ಮುಕ್ತಾಯದ ವರದಿ’ಯನ್ನು ಸಲ್ಲಿಸಿ ಪ್ರಧಾನಿ ಮೋದಿ ಮತ್ತು ಇತರ 63 ಜನರನ್ನು ದೋಷಮುಕ್ತಗೊಳಿಸಿತ್ತು.

ಇದನ್ನೂ ಓದಿ: ಬಂಗಾಳವನ್ನು’ಗಲಭೆ ಪೀಡಿತ ಗುಜರಾತ್’ ಮಾಡಲು ಎಂದಿಗೂ ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

2016 ರಲ್ಲಿ ಅಹಮದಾಬಾದ್‌ನ ವಿಶೇಷ ನ್ಯಾಯಾಲಯವು ಹತ್ಯಾಕಾಂಡಕ್ಕಾಗಿ 24 ದಾಳಿಕೋರರನ್ನು ದೋಷಿ ಎಂದು ತೀರ್ಪು ನೀಡಿತ್ತು. ಹತ್ಯಾಕಾಂಡವನ್ನು ನ್ಯಾಯಾಲಯವು ‘ನಾಗರಿಕ ಸಮಾಜದ ಇತಿಹಾಸದಲ್ಲಿ ಕರಾಳ ದಿನ’ ಎಂದು ಬಣ್ಣಿಸಿತ್ತು. ಆದರೆ ಈ ಪ್ರಕರಣದಲ್ಲಿ ಬಿಜೆಪಿ ಕಾರ್ಪೊರೇಟರ್ ಸೇರಿದಂತೆ 36 ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ, ದೊಡ್ಡ ಪಿತೂರಿ ಇಲ್ಲ ಎಂದು ಒತ್ತಿ ಹೇಳಿತ್ತು.

2002ರಲ್ಲಿ ಮೂರು ದಿನಗಳ ಕಾಲ ಗುಜರಾತ್‌ನಲ್ಲಿ ನಡೆದ ಹಿಂಸಾಚಾರದಿಂದಾಗಿ 1,000 ಕ್ಕೂ ಹೆಚ್ಚು ಜನರು, ಅದರಲ್ಲೂ ಹೆಚ್ಚಾಗಿ ಮುಸ್ಲಿಮರು ಕೊಲ್ಲಲ್ಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...