Homeರಾಷ್ಟ್ರೀಯಗುಜರಾತ್ ಗಲಭೆ: ಪ್ರಧಾನಿಗೆ ಕ್ಲೀನ್ ಚಿಟ್ ದೃಢಪಡಿಸಿದ ಸುಪ್ರೀಂ ಕೋರ್ಟ್, ಮೇಲ್ಮನವಿ ವಜಾ

ಗುಜರಾತ್ ಗಲಭೆ: ಪ್ರಧಾನಿಗೆ ಕ್ಲೀನ್ ಚಿಟ್ ದೃಢಪಡಿಸಿದ ಸುಪ್ರೀಂ ಕೋರ್ಟ್, ಮೇಲ್ಮನವಿ ವಜಾ

- Advertisement -
- Advertisement -

2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೋಷಮುಕ್ತಗೊಳಿಸಿರುವುದನ್ನು ಪ್ರಶ್ನಿಸಿ, ಹಿಂಸಾಚಾರದಲ್ಲಿ ಹತರಾದ ಕಾಂಗ್ರೆಸ್ ಸಂಸದರೊಬ್ಬರ ಪತ್ನಿ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂಕೋರ್ಟ್‌ ಶುಕ್ರವಾರ ‘ಅರ್ಹವಲ್ಲ’ ಎಂದು ಹೇಳಿದೆ.

ವಿಶೇಷ ತನಿಖಾ ತಂಡವು ರಾಜ್ಯದ ಮುಖ್ಯಮಂತ್ರಿಗೆ ನೀಡಿದ್ದ ಕ್ಲೀನ್‌ಚಿಟ್‌ ಅನ್ನ ಎತ್ತಿಹಿಡಿದ ಸುಪ್ರೀಂ ಕೋರ್ಟ್, ಗುಲ್ಬರ್ಗ್ ಸಮಾಜದ ಹತ್ಯಾಕಾಂಡ ಎಂದು ಕರೆಯಲ್ಪಡುವ ಹಿಂಸಾಚಾರ ಪ್ರಕರಣದಲ್ಲಿ ಹತ್ಯೆಯಾದ 68 ಜನರಲ್ಲಿ ಒಬ್ಬರಾದ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

84ರ ವಯಸ್ಸಿನ ಜಾಕಿಯಾ ಜಾಫ್ರಿ ಅವರು ಕೋಮುಗಲಭೆಗಳ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್‌ ಅನ್ನು ಕೋರಿದ್ದರು. ಹತ್ಯಾಕಾಂಡವು ರಾಜಕಾರಣಿಗಳು ಮತ್ತು ಪೊಲೀಸರನ್ನು ಒಳಗೊಂಡ ದೊಡ್ಡ ಪಿತೂರಿಯಿಂದಾಗಿ ನಡೆದಿದೆ ಎಂದು ಅವರು ಆರೋಪಿಸಿದ್ದರು.

ಇದನ್ನೂ ಓದಿ: ಗುಜರಾತ್: ಗಲಭೆ ಪ್ರಕರಣದಲ್ಲಿ ಬಿಜೆಪಿ ಶಾಸಕನಿಗೆ 6 ತಿಂಗಳು ಜೈಲು ಶಿಕ್ಷೆ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಎಂ ಖಾನ್ವಿಲ್ಕರ್, ದಿನೇಶ್ ಮಾಹೇಶ್ವರಿ ಮತ್ತು ಸಿಟಿ ರವಿಕುಮಾರ್ ಅವರು ಕಳೆದ ಡಿಸೆಂಬರ್‌ನಲ್ಲಿ ತೀರ್ಪನ್ನು ಕಾಯ್ದಿರಿಸಿದ್ದರು.

ಹೆಚ್ಚಾಗಿ ಮುಸ್ಲಿಮರೇ ವಾಸಿಸುತ್ತಿದ್ದ 29 ಬಂಗಲೆಗಳು ಮತ್ತು 10 ಅಪಾರ್ಟ್‌ಮೆಂಟ್ ಕಟ್ಟಡಗಳ ಸಮೂಹವಾದ ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದ ಹತ್ಯಾಕಾಂಡ ಸೇರಿದಂತೆ 10 ಪ್ರಮುಖ ಗುಜರಾತ್ ಗಲಭೆ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ನೇಮಿಸಿದ ವಿಶೇಷ ತಂಡವು ಮರು ತನಿಖೆ ನಡೆಸಿದೆ.

ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಸೇರಿದಂತೆ 68 ಮಂದಿಯನ್ನು ಗಲಭೆಕೋರರು ಎಳೆದೊಯ್ದು, ಕತ್ತರಿಸಿ ಸುಟ್ಟು ಹಾಕಿದ್ದಾರೆ. ಸಹಾಯಕ್ಕಾಗಿ ಪೊಲೀಸ್ ಅಧಿಕಾರಿಗಳು ಮತ್ತು ಹಿರಿಯ ರಾಜಕಾರಣಿಗಳಿಗೆ ಫೋನ್ ಮಾಡಿದ್ದರೂ ಅವರಿಗೆ ಉತ್ತರಿಸಿರಲಿಲ್ಲ ಎಂದು ಜಾಕಿಯಾ ಜಾಫ್ರಿ ಆರೋಪಿಸಿದ್ದಾರೆ.

ವಿಶೇಷ ತನಿಖಾ ತಂಡ(ಎಸ್‌ಐಟಿ)ವು ಗಲಭೆಗಳ ಒಂದು ದಶಕದ ನಂತರ 2012 ರ ಫೆಬ್ರವರಿಯಲ್ಲಿ ‘ಯಾವುದೇ ಪ್ರಾಸಿಕ್ಯೂಟ್ ಮಾಡಬಹುದಾದ ಪುರಾವೆಗಳಿಲ್ಲ’ ಎಂದು ಉಲ್ಲೇಖಿಸಿ ತನ್ನ ‘ಮುಕ್ತಾಯದ ವರದಿ’ಯನ್ನು ಸಲ್ಲಿಸಿ ಪ್ರಧಾನಿ ಮೋದಿ ಮತ್ತು ಇತರ 63 ಜನರನ್ನು ದೋಷಮುಕ್ತಗೊಳಿಸಿತ್ತು.

ಇದನ್ನೂ ಓದಿ: ಬಂಗಾಳವನ್ನು’ಗಲಭೆ ಪೀಡಿತ ಗುಜರಾತ್’ ಮಾಡಲು ಎಂದಿಗೂ ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

2016 ರಲ್ಲಿ ಅಹಮದಾಬಾದ್‌ನ ವಿಶೇಷ ನ್ಯಾಯಾಲಯವು ಹತ್ಯಾಕಾಂಡಕ್ಕಾಗಿ 24 ದಾಳಿಕೋರರನ್ನು ದೋಷಿ ಎಂದು ತೀರ್ಪು ನೀಡಿತ್ತು. ಹತ್ಯಾಕಾಂಡವನ್ನು ನ್ಯಾಯಾಲಯವು ‘ನಾಗರಿಕ ಸಮಾಜದ ಇತಿಹಾಸದಲ್ಲಿ ಕರಾಳ ದಿನ’ ಎಂದು ಬಣ್ಣಿಸಿತ್ತು. ಆದರೆ ಈ ಪ್ರಕರಣದಲ್ಲಿ ಬಿಜೆಪಿ ಕಾರ್ಪೊರೇಟರ್ ಸೇರಿದಂತೆ 36 ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ, ದೊಡ್ಡ ಪಿತೂರಿ ಇಲ್ಲ ಎಂದು ಒತ್ತಿ ಹೇಳಿತ್ತು.

2002ರಲ್ಲಿ ಮೂರು ದಿನಗಳ ಕಾಲ ಗುಜರಾತ್‌ನಲ್ಲಿ ನಡೆದ ಹಿಂಸಾಚಾರದಿಂದಾಗಿ 1,000 ಕ್ಕೂ ಹೆಚ್ಚು ಜನರು, ಅದರಲ್ಲೂ ಹೆಚ್ಚಾಗಿ ಮುಸ್ಲಿಮರು ಕೊಲ್ಲಲ್ಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...