Homeರಾಷ್ಟ್ರೀಯಗುಜರಾತ್ ಗಲಭೆ: ಪ್ರಧಾನಿಗೆ ಕ್ಲೀನ್ ಚಿಟ್ ದೃಢಪಡಿಸಿದ ಸುಪ್ರೀಂ ಕೋರ್ಟ್, ಮೇಲ್ಮನವಿ ವಜಾ

ಗುಜರಾತ್ ಗಲಭೆ: ಪ್ರಧಾನಿಗೆ ಕ್ಲೀನ್ ಚಿಟ್ ದೃಢಪಡಿಸಿದ ಸುಪ್ರೀಂ ಕೋರ್ಟ್, ಮೇಲ್ಮನವಿ ವಜಾ

- Advertisement -
- Advertisement -

2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೋಷಮುಕ್ತಗೊಳಿಸಿರುವುದನ್ನು ಪ್ರಶ್ನಿಸಿ, ಹಿಂಸಾಚಾರದಲ್ಲಿ ಹತರಾದ ಕಾಂಗ್ರೆಸ್ ಸಂಸದರೊಬ್ಬರ ಪತ್ನಿ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂಕೋರ್ಟ್‌ ಶುಕ್ರವಾರ ‘ಅರ್ಹವಲ್ಲ’ ಎಂದು ಹೇಳಿದೆ.

ವಿಶೇಷ ತನಿಖಾ ತಂಡವು ರಾಜ್ಯದ ಮುಖ್ಯಮಂತ್ರಿಗೆ ನೀಡಿದ್ದ ಕ್ಲೀನ್‌ಚಿಟ್‌ ಅನ್ನ ಎತ್ತಿಹಿಡಿದ ಸುಪ್ರೀಂ ಕೋರ್ಟ್, ಗುಲ್ಬರ್ಗ್ ಸಮಾಜದ ಹತ್ಯಾಕಾಂಡ ಎಂದು ಕರೆಯಲ್ಪಡುವ ಹಿಂಸಾಚಾರ ಪ್ರಕರಣದಲ್ಲಿ ಹತ್ಯೆಯಾದ 68 ಜನರಲ್ಲಿ ಒಬ್ಬರಾದ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

84ರ ವಯಸ್ಸಿನ ಜಾಕಿಯಾ ಜಾಫ್ರಿ ಅವರು ಕೋಮುಗಲಭೆಗಳ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್‌ ಅನ್ನು ಕೋರಿದ್ದರು. ಹತ್ಯಾಕಾಂಡವು ರಾಜಕಾರಣಿಗಳು ಮತ್ತು ಪೊಲೀಸರನ್ನು ಒಳಗೊಂಡ ದೊಡ್ಡ ಪಿತೂರಿಯಿಂದಾಗಿ ನಡೆದಿದೆ ಎಂದು ಅವರು ಆರೋಪಿಸಿದ್ದರು.

ಇದನ್ನೂ ಓದಿ: ಗುಜರಾತ್: ಗಲಭೆ ಪ್ರಕರಣದಲ್ಲಿ ಬಿಜೆಪಿ ಶಾಸಕನಿಗೆ 6 ತಿಂಗಳು ಜೈಲು ಶಿಕ್ಷೆ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಎಂ ಖಾನ್ವಿಲ್ಕರ್, ದಿನೇಶ್ ಮಾಹೇಶ್ವರಿ ಮತ್ತು ಸಿಟಿ ರವಿಕುಮಾರ್ ಅವರು ಕಳೆದ ಡಿಸೆಂಬರ್‌ನಲ್ಲಿ ತೀರ್ಪನ್ನು ಕಾಯ್ದಿರಿಸಿದ್ದರು.

ಹೆಚ್ಚಾಗಿ ಮುಸ್ಲಿಮರೇ ವಾಸಿಸುತ್ತಿದ್ದ 29 ಬಂಗಲೆಗಳು ಮತ್ತು 10 ಅಪಾರ್ಟ್‌ಮೆಂಟ್ ಕಟ್ಟಡಗಳ ಸಮೂಹವಾದ ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದ ಹತ್ಯಾಕಾಂಡ ಸೇರಿದಂತೆ 10 ಪ್ರಮುಖ ಗುಜರಾತ್ ಗಲಭೆ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ನೇಮಿಸಿದ ವಿಶೇಷ ತಂಡವು ಮರು ತನಿಖೆ ನಡೆಸಿದೆ.

ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಸೇರಿದಂತೆ 68 ಮಂದಿಯನ್ನು ಗಲಭೆಕೋರರು ಎಳೆದೊಯ್ದು, ಕತ್ತರಿಸಿ ಸುಟ್ಟು ಹಾಕಿದ್ದಾರೆ. ಸಹಾಯಕ್ಕಾಗಿ ಪೊಲೀಸ್ ಅಧಿಕಾರಿಗಳು ಮತ್ತು ಹಿರಿಯ ರಾಜಕಾರಣಿಗಳಿಗೆ ಫೋನ್ ಮಾಡಿದ್ದರೂ ಅವರಿಗೆ ಉತ್ತರಿಸಿರಲಿಲ್ಲ ಎಂದು ಜಾಕಿಯಾ ಜಾಫ್ರಿ ಆರೋಪಿಸಿದ್ದಾರೆ.

ವಿಶೇಷ ತನಿಖಾ ತಂಡ(ಎಸ್‌ಐಟಿ)ವು ಗಲಭೆಗಳ ಒಂದು ದಶಕದ ನಂತರ 2012 ರ ಫೆಬ್ರವರಿಯಲ್ಲಿ ‘ಯಾವುದೇ ಪ್ರಾಸಿಕ್ಯೂಟ್ ಮಾಡಬಹುದಾದ ಪುರಾವೆಗಳಿಲ್ಲ’ ಎಂದು ಉಲ್ಲೇಖಿಸಿ ತನ್ನ ‘ಮುಕ್ತಾಯದ ವರದಿ’ಯನ್ನು ಸಲ್ಲಿಸಿ ಪ್ರಧಾನಿ ಮೋದಿ ಮತ್ತು ಇತರ 63 ಜನರನ್ನು ದೋಷಮುಕ್ತಗೊಳಿಸಿತ್ತು.

ಇದನ್ನೂ ಓದಿ: ಬಂಗಾಳವನ್ನು’ಗಲಭೆ ಪೀಡಿತ ಗುಜರಾತ್’ ಮಾಡಲು ಎಂದಿಗೂ ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

2016 ರಲ್ಲಿ ಅಹಮದಾಬಾದ್‌ನ ವಿಶೇಷ ನ್ಯಾಯಾಲಯವು ಹತ್ಯಾಕಾಂಡಕ್ಕಾಗಿ 24 ದಾಳಿಕೋರರನ್ನು ದೋಷಿ ಎಂದು ತೀರ್ಪು ನೀಡಿತ್ತು. ಹತ್ಯಾಕಾಂಡವನ್ನು ನ್ಯಾಯಾಲಯವು ‘ನಾಗರಿಕ ಸಮಾಜದ ಇತಿಹಾಸದಲ್ಲಿ ಕರಾಳ ದಿನ’ ಎಂದು ಬಣ್ಣಿಸಿತ್ತು. ಆದರೆ ಈ ಪ್ರಕರಣದಲ್ಲಿ ಬಿಜೆಪಿ ಕಾರ್ಪೊರೇಟರ್ ಸೇರಿದಂತೆ 36 ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ, ದೊಡ್ಡ ಪಿತೂರಿ ಇಲ್ಲ ಎಂದು ಒತ್ತಿ ಹೇಳಿತ್ತು.

2002ರಲ್ಲಿ ಮೂರು ದಿನಗಳ ಕಾಲ ಗುಜರಾತ್‌ನಲ್ಲಿ ನಡೆದ ಹಿಂಸಾಚಾರದಿಂದಾಗಿ 1,000 ಕ್ಕೂ ಹೆಚ್ಚು ಜನರು, ಅದರಲ್ಲೂ ಹೆಚ್ಚಾಗಿ ಮುಸ್ಲಿಮರು ಕೊಲ್ಲಲ್ಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...