Homeಚಳವಳಿಗುಜರಾತ್ ಗಲಭೆ ಸಂತ್ರಸ್ತೆ, ಹೋರಾಟಗಾರ್ತಿ ಝಕಿಯಾ ಜಾಫ್ರಿ (86) ನಿಧನ

ಗುಜರಾತ್ ಗಲಭೆ ಸಂತ್ರಸ್ತೆ, ಹೋರಾಟಗಾರ್ತಿ ಝಕಿಯಾ ಜಾಫ್ರಿ (86) ನಿಧನ

ಪ್ರಧಾನಿ ಮೋದಿ ವಿರುದ್ಧ ಕಾನೂನು ಹೋರಾಟ ನಡೆಸಿದ್ದ ದಿಟ್ಟ ಮಹಿಳೆ

- Advertisement -
- Advertisement -

ಮುಸ್ಲಿಮರ ವಿರುದ್ಧ 2002ರ ವೇಳೆಗೆ ನಡೆದ ಗುಜರಾತ್ ಗಲಭೆಯ ಸಂತ್ರಸ್ತೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನ್ಯಾಯಾಲಯಕ್ಕೆ ತೆರಳಿದ್ದ ಝಕಿಯಾ ಜಾಫ್ರಿ ಶನಿವಾರ ಅಹಮದಾಬಾದ್‌ನಲ್ಲಿ ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಫೆಬ್ರವರಿ 28, 2002 ರಂದು ಅಹಮದಾಬಾದ್‌ನ ಮುಸ್ಲಿಮರು ಇರುವ ಗುಲ್ಬರ್ಗ್ ಸೊಸೈಟಿಯೊಳಗೆ ಬಲಪಂಥೀಯ ಗುಂಪೊಂದು ಸುಟ್ಟುಹಾಕಿದ 69 ಜನರಲ್ಲಿ ಝಕಿಯಾ ಅವರ ಪತಿ ಮತ್ತು ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಕೂಡ ಇದ್ದರು. ಗುಜರಾತ್ ಗಲಭೆ

“ನನ್ನ ತಾಯಿ ಅಹಮದಾಬಾದ್‌ನಲ್ಲಿರುವ ನನ್ನ ಸಹೋದರಿಯ ಮನೆಯಲ್ಲಿದ್ದರು. ಅಲ್ಲಿ ಅವರು ತಮ್ಮ ದೈನಂದಿನ ದಿನಚರಿಯನ್ನು ಪೂರ್ಣಗೊಳಿಸಿ ಕುಟುಂಬ ಸದಸ್ಯರೊಂದಿಗೆ ಮಾತನಾಡುತ್ತಿದ್ದಾಗ ಅಸ್ವಸ್ಥರಾದರು. ಈ ವೇಳೆ ವೈದ್ಯರು ಆಗಮಿಸಿ ಅವರಿಗೆ ಚಿಕಿತ್ಸೆಯ ಪ್ರಯತ್ನ ಮಾಡಿದ್ದು, ನಂತರ ಬೆಳಿಗ್ಗೆ 11:30 ರ ಸುಮಾರಿಗೆ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು” ಎಂದು ಅವರ ಮಗ ತನ್ವೀರ್ ಜಾಫ್ರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಗ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯನ್ನು ಸುಮಾರು 2000 ಜನರನ್ನು, ಅದರಲ್ಲೂ ಮುಖ್ಯವಾಗಿ ಮುಸ್ಲಿಮರ ಹತ್ಯೆ ಮಾಡಿದ ಗಲಭೆಯ ಜವಾಬ್ದಾರಿಯಿಂದ ಮುಕ್ತಗೊಳಿಸಿದ್ದಕ್ಕಾಗಿ ತನಿಖಾ ಸಂಸ್ಥೆಗಳ ವಿರುದ್ಧ ಝಕಿಯಾ ಅವರು ಕಾನೂನು ಹೋರಾಟ ಮಾಡಿದ್ದರು.

ಝಕಿಯಾ ಅವರ ನಿಧನಕ್ಕೆ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರು ಸಂತಾಪ ಸೂಚಿಸಿದ್ದಾರೆ, “ಮಾನವ ಹಕ್ಕುಗಳ ಹೋರಾಟಗಾರ್ತಿ, ಸಮುದಾಯದ ಸಹಾನುಭೂತಿಯ ನಾಯಕಿ ‘ಝಕಿಯಾ ಆಪಾ’ 30 ನಿಮಿಷಗಳ ಹಿಂದೆ ನಿಧನರಾದರು! ಅವರ ದೂರದೃಷ್ಟಿಯನ್ನು ದೇಶ, ಕುಟುಂಬ, ಸ್ನೇಹಿತರು ಮತ್ತು ಜಗತ್ತು ಮಿಸ್ ಮಾಡಿಕೊಳ್ಳುತ್ತದೆ!” ಎಂದು ಹೇಳಿದ್ದಾರೆ.

“ತನ್ವೀರ್ ಭಾಯ್, ನಿಶ್ರಿನ್, ದುರೈಯಪ್ಪ, ಮೊಮ್ಮಕ್ಕಳೇ ನಾವು ನಿಮ್ಮೊಂದಿಗಿದ್ದೇವೆ!” ಎಂದು ತೀಸ್ತಾ ಅವರು ಹೇಳಿದ್ದಾರೆ. ತೀಸ್ತಾ ಅವರು ಸುಪ್ರೀಂ ಕೋರ್ಟ್‌ನಲ್ಲಿ ಝಕಿಯಾ ಅವರ ಅರ್ಜಿಯಲ್ಲಿ ಸಹ-ದೂರುದಾರರಾಗಿದ್ದರು.

ಗುಜರಾತ್ ಪ್ರಕರಣದ ತನಿಖೆ ನಡೆಸಿದ ಸುಪ್ರೀಂ ಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡ (SIT) ಗಲಭೆಯ ಬಗ್ಗೆ ಅಪೂರ್ಣ ಮತ್ತು ಪಕ್ಷಪಾತದ ತನಿಖೆಯನ್ನು ಮಾಡಿದೆ ಎಂದು ಝಕಿಯಾ ಮತ್ತು ತೀಸ್ತಾ ಅರ್ಜಿಯಲ್ಲಿ ಆರೋಪಿಸಿದ್ದರು. ಆದರೆ, ಈ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠವು ಜೂನ್ 4, 2022 ರಂದು ತಿರಸ್ಕರಿಸಿತ್ತು.

“ನನ್ನಲ್ಲಿ ಉಸಿರು ಇರುವವರೆಗೂ ನಾನು ಹೋರಾಡುತ್ತಲೇ ಇರುತ್ತೇನೆ” ಎಂದು ಝಾಕಿಯಾ ಎರಡು ವರ್ಷಗಳ ಹಿಂದೆ ಸಂದರ್ಶನವೊಂದರಲ್ಲಿ ಹೇಳಿದ್ದರು. ಗುಜರಾತ್ ಗಲಭೆ

ಇದನ್ನೂಓದಿ:  ಕೇಂದ್ರ ಬಜೆಟ್ 2025 | 12 ಲಕ್ಷ ರೂ.ಗಳವರೆಗೆ ಆದಾಯ ತೆರಿಗೆ ಮನ್ನಾ, ಗಿಗ್ ಕೆಲಸಗಾರರಿಗೆ ವಿಮೆ

ಕೇಂದ್ರ ಬಜೆಟ್ 2025 | 12 ಲಕ್ಷ ರೂ.ಗಳವರೆಗೆ ಆದಾಯ ತೆರಿಗೆ ಮನ್ನಾ, ಗಿಗ್ ಕೆಲಸಗಾರರಿಗೆ ವಿಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...