Homeಚಳವಳಿಗುಜರಾತ್ ಗಲಭೆ ಸಂತ್ರಸ್ತೆ, ಹೋರಾಟಗಾರ್ತಿ ಝಕಿಯಾ ಜಾಫ್ರಿ (86) ನಿಧನ

ಗುಜರಾತ್ ಗಲಭೆ ಸಂತ್ರಸ್ತೆ, ಹೋರಾಟಗಾರ್ತಿ ಝಕಿಯಾ ಜಾಫ್ರಿ (86) ನಿಧನ

ಪ್ರಧಾನಿ ಮೋದಿ ವಿರುದ್ಧ ಕಾನೂನು ಹೋರಾಟ ನಡೆಸಿದ್ದ ದಿಟ್ಟ ಮಹಿಳೆ

- Advertisement -
- Advertisement -

ಮುಸ್ಲಿಮರ ವಿರುದ್ಧ 2002ರ ವೇಳೆಗೆ ನಡೆದ ಗುಜರಾತ್ ಗಲಭೆಯ ಸಂತ್ರಸ್ತೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನ್ಯಾಯಾಲಯಕ್ಕೆ ತೆರಳಿದ್ದ ಝಕಿಯಾ ಜಾಫ್ರಿ ಶನಿವಾರ ಅಹಮದಾಬಾದ್‌ನಲ್ಲಿ ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಫೆಬ್ರವರಿ 28, 2002 ರಂದು ಅಹಮದಾಬಾದ್‌ನ ಮುಸ್ಲಿಮರು ಇರುವ ಗುಲ್ಬರ್ಗ್ ಸೊಸೈಟಿಯೊಳಗೆ ಬಲಪಂಥೀಯ ಗುಂಪೊಂದು ಸುಟ್ಟುಹಾಕಿದ 69 ಜನರಲ್ಲಿ ಝಕಿಯಾ ಅವರ ಪತಿ ಮತ್ತು ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಕೂಡ ಇದ್ದರು. ಗುಜರಾತ್ ಗಲಭೆ

“ನನ್ನ ತಾಯಿ ಅಹಮದಾಬಾದ್‌ನಲ್ಲಿರುವ ನನ್ನ ಸಹೋದರಿಯ ಮನೆಯಲ್ಲಿದ್ದರು. ಅಲ್ಲಿ ಅವರು ತಮ್ಮ ದೈನಂದಿನ ದಿನಚರಿಯನ್ನು ಪೂರ್ಣಗೊಳಿಸಿ ಕುಟುಂಬ ಸದಸ್ಯರೊಂದಿಗೆ ಮಾತನಾಡುತ್ತಿದ್ದಾಗ ಅಸ್ವಸ್ಥರಾದರು. ಈ ವೇಳೆ ವೈದ್ಯರು ಆಗಮಿಸಿ ಅವರಿಗೆ ಚಿಕಿತ್ಸೆಯ ಪ್ರಯತ್ನ ಮಾಡಿದ್ದು, ನಂತರ ಬೆಳಿಗ್ಗೆ 11:30 ರ ಸುಮಾರಿಗೆ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು” ಎಂದು ಅವರ ಮಗ ತನ್ವೀರ್ ಜಾಫ್ರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಗ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯನ್ನು ಸುಮಾರು 2000 ಜನರನ್ನು, ಅದರಲ್ಲೂ ಮುಖ್ಯವಾಗಿ ಮುಸ್ಲಿಮರ ಹತ್ಯೆ ಮಾಡಿದ ಗಲಭೆಯ ಜವಾಬ್ದಾರಿಯಿಂದ ಮುಕ್ತಗೊಳಿಸಿದ್ದಕ್ಕಾಗಿ ತನಿಖಾ ಸಂಸ್ಥೆಗಳ ವಿರುದ್ಧ ಝಕಿಯಾ ಅವರು ಕಾನೂನು ಹೋರಾಟ ಮಾಡಿದ್ದರು.

ಝಕಿಯಾ ಅವರ ನಿಧನಕ್ಕೆ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರು ಸಂತಾಪ ಸೂಚಿಸಿದ್ದಾರೆ, “ಮಾನವ ಹಕ್ಕುಗಳ ಹೋರಾಟಗಾರ್ತಿ, ಸಮುದಾಯದ ಸಹಾನುಭೂತಿಯ ನಾಯಕಿ ‘ಝಕಿಯಾ ಆಪಾ’ 30 ನಿಮಿಷಗಳ ಹಿಂದೆ ನಿಧನರಾದರು! ಅವರ ದೂರದೃಷ್ಟಿಯನ್ನು ದೇಶ, ಕುಟುಂಬ, ಸ್ನೇಹಿತರು ಮತ್ತು ಜಗತ್ತು ಮಿಸ್ ಮಾಡಿಕೊಳ್ಳುತ್ತದೆ!” ಎಂದು ಹೇಳಿದ್ದಾರೆ.

“ತನ್ವೀರ್ ಭಾಯ್, ನಿಶ್ರಿನ್, ದುರೈಯಪ್ಪ, ಮೊಮ್ಮಕ್ಕಳೇ ನಾವು ನಿಮ್ಮೊಂದಿಗಿದ್ದೇವೆ!” ಎಂದು ತೀಸ್ತಾ ಅವರು ಹೇಳಿದ್ದಾರೆ. ತೀಸ್ತಾ ಅವರು ಸುಪ್ರೀಂ ಕೋರ್ಟ್‌ನಲ್ಲಿ ಝಕಿಯಾ ಅವರ ಅರ್ಜಿಯಲ್ಲಿ ಸಹ-ದೂರುದಾರರಾಗಿದ್ದರು.

ಗುಜರಾತ್ ಪ್ರಕರಣದ ತನಿಖೆ ನಡೆಸಿದ ಸುಪ್ರೀಂ ಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡ (SIT) ಗಲಭೆಯ ಬಗ್ಗೆ ಅಪೂರ್ಣ ಮತ್ತು ಪಕ್ಷಪಾತದ ತನಿಖೆಯನ್ನು ಮಾಡಿದೆ ಎಂದು ಝಕಿಯಾ ಮತ್ತು ತೀಸ್ತಾ ಅರ್ಜಿಯಲ್ಲಿ ಆರೋಪಿಸಿದ್ದರು. ಆದರೆ, ಈ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠವು ಜೂನ್ 4, 2022 ರಂದು ತಿರಸ್ಕರಿಸಿತ್ತು.

“ನನ್ನಲ್ಲಿ ಉಸಿರು ಇರುವವರೆಗೂ ನಾನು ಹೋರಾಡುತ್ತಲೇ ಇರುತ್ತೇನೆ” ಎಂದು ಝಾಕಿಯಾ ಎರಡು ವರ್ಷಗಳ ಹಿಂದೆ ಸಂದರ್ಶನವೊಂದರಲ್ಲಿ ಹೇಳಿದ್ದರು. ಗುಜರಾತ್ ಗಲಭೆ

ಇದನ್ನೂಓದಿ:  ಕೇಂದ್ರ ಬಜೆಟ್ 2025 | 12 ಲಕ್ಷ ರೂ.ಗಳವರೆಗೆ ಆದಾಯ ತೆರಿಗೆ ಮನ್ನಾ, ಗಿಗ್ ಕೆಲಸಗಾರರಿಗೆ ವಿಮೆ

ಕೇಂದ್ರ ಬಜೆಟ್ 2025 | 12 ಲಕ್ಷ ರೂ.ಗಳವರೆಗೆ ಆದಾಯ ತೆರಿಗೆ ಮನ್ನಾ, ಗಿಗ್ ಕೆಲಸಗಾರರಿಗೆ ವಿಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...