Homeಚಳವಳಿಗುಜರಾತ್ ಗಲಭೆ ಸಂತ್ರಸ್ತೆ, ಹೋರಾಟಗಾರ್ತಿ ಝಕಿಯಾ ಜಾಫ್ರಿ (86) ನಿಧನ

ಗುಜರಾತ್ ಗಲಭೆ ಸಂತ್ರಸ್ತೆ, ಹೋರಾಟಗಾರ್ತಿ ಝಕಿಯಾ ಜಾಫ್ರಿ (86) ನಿಧನ

ಪ್ರಧಾನಿ ಮೋದಿ ವಿರುದ್ಧ ಕಾನೂನು ಹೋರಾಟ ನಡೆಸಿದ್ದ ದಿಟ್ಟ ಮಹಿಳೆ

- Advertisement -
- Advertisement -

ಮುಸ್ಲಿಮರ ವಿರುದ್ಧ 2002ರ ವೇಳೆಗೆ ನಡೆದ ಗುಜರಾತ್ ಗಲಭೆಯ ಸಂತ್ರಸ್ತೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನ್ಯಾಯಾಲಯಕ್ಕೆ ತೆರಳಿದ್ದ ಝಕಿಯಾ ಜಾಫ್ರಿ ಶನಿವಾರ ಅಹಮದಾಬಾದ್‌ನಲ್ಲಿ ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಫೆಬ್ರವರಿ 28, 2002 ರಂದು ಅಹಮದಾಬಾದ್‌ನ ಮುಸ್ಲಿಮರು ಇರುವ ಗುಲ್ಬರ್ಗ್ ಸೊಸೈಟಿಯೊಳಗೆ ಬಲಪಂಥೀಯ ಗುಂಪೊಂದು ಸುಟ್ಟುಹಾಕಿದ 69 ಜನರಲ್ಲಿ ಝಕಿಯಾ ಅವರ ಪತಿ ಮತ್ತು ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಕೂಡ ಇದ್ದರು. ಗುಜರಾತ್ ಗಲಭೆ

“ನನ್ನ ತಾಯಿ ಅಹಮದಾಬಾದ್‌ನಲ್ಲಿರುವ ನನ್ನ ಸಹೋದರಿಯ ಮನೆಯಲ್ಲಿದ್ದರು. ಅಲ್ಲಿ ಅವರು ತಮ್ಮ ದೈನಂದಿನ ದಿನಚರಿಯನ್ನು ಪೂರ್ಣಗೊಳಿಸಿ ಕುಟುಂಬ ಸದಸ್ಯರೊಂದಿಗೆ ಮಾತನಾಡುತ್ತಿದ್ದಾಗ ಅಸ್ವಸ್ಥರಾದರು. ಈ ವೇಳೆ ವೈದ್ಯರು ಆಗಮಿಸಿ ಅವರಿಗೆ ಚಿಕಿತ್ಸೆಯ ಪ್ರಯತ್ನ ಮಾಡಿದ್ದು, ನಂತರ ಬೆಳಿಗ್ಗೆ 11:30 ರ ಸುಮಾರಿಗೆ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು” ಎಂದು ಅವರ ಮಗ ತನ್ವೀರ್ ಜಾಫ್ರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಗ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯನ್ನು ಸುಮಾರು 2000 ಜನರನ್ನು, ಅದರಲ್ಲೂ ಮುಖ್ಯವಾಗಿ ಮುಸ್ಲಿಮರ ಹತ್ಯೆ ಮಾಡಿದ ಗಲಭೆಯ ಜವಾಬ್ದಾರಿಯಿಂದ ಮುಕ್ತಗೊಳಿಸಿದ್ದಕ್ಕಾಗಿ ತನಿಖಾ ಸಂಸ್ಥೆಗಳ ವಿರುದ್ಧ ಝಕಿಯಾ ಅವರು ಕಾನೂನು ಹೋರಾಟ ಮಾಡಿದ್ದರು.

ಝಕಿಯಾ ಅವರ ನಿಧನಕ್ಕೆ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರು ಸಂತಾಪ ಸೂಚಿಸಿದ್ದಾರೆ, “ಮಾನವ ಹಕ್ಕುಗಳ ಹೋರಾಟಗಾರ್ತಿ, ಸಮುದಾಯದ ಸಹಾನುಭೂತಿಯ ನಾಯಕಿ ‘ಝಕಿಯಾ ಆಪಾ’ 30 ನಿಮಿಷಗಳ ಹಿಂದೆ ನಿಧನರಾದರು! ಅವರ ದೂರದೃಷ್ಟಿಯನ್ನು ದೇಶ, ಕುಟುಂಬ, ಸ್ನೇಹಿತರು ಮತ್ತು ಜಗತ್ತು ಮಿಸ್ ಮಾಡಿಕೊಳ್ಳುತ್ತದೆ!” ಎಂದು ಹೇಳಿದ್ದಾರೆ.

“ತನ್ವೀರ್ ಭಾಯ್, ನಿಶ್ರಿನ್, ದುರೈಯಪ್ಪ, ಮೊಮ್ಮಕ್ಕಳೇ ನಾವು ನಿಮ್ಮೊಂದಿಗಿದ್ದೇವೆ!” ಎಂದು ತೀಸ್ತಾ ಅವರು ಹೇಳಿದ್ದಾರೆ. ತೀಸ್ತಾ ಅವರು ಸುಪ್ರೀಂ ಕೋರ್ಟ್‌ನಲ್ಲಿ ಝಕಿಯಾ ಅವರ ಅರ್ಜಿಯಲ್ಲಿ ಸಹ-ದೂರುದಾರರಾಗಿದ್ದರು.

ಗುಜರಾತ್ ಪ್ರಕರಣದ ತನಿಖೆ ನಡೆಸಿದ ಸುಪ್ರೀಂ ಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡ (SIT) ಗಲಭೆಯ ಬಗ್ಗೆ ಅಪೂರ್ಣ ಮತ್ತು ಪಕ್ಷಪಾತದ ತನಿಖೆಯನ್ನು ಮಾಡಿದೆ ಎಂದು ಝಕಿಯಾ ಮತ್ತು ತೀಸ್ತಾ ಅರ್ಜಿಯಲ್ಲಿ ಆರೋಪಿಸಿದ್ದರು. ಆದರೆ, ಈ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠವು ಜೂನ್ 4, 2022 ರಂದು ತಿರಸ್ಕರಿಸಿತ್ತು.

“ನನ್ನಲ್ಲಿ ಉಸಿರು ಇರುವವರೆಗೂ ನಾನು ಹೋರಾಡುತ್ತಲೇ ಇರುತ್ತೇನೆ” ಎಂದು ಝಾಕಿಯಾ ಎರಡು ವರ್ಷಗಳ ಹಿಂದೆ ಸಂದರ್ಶನವೊಂದರಲ್ಲಿ ಹೇಳಿದ್ದರು. ಗುಜರಾತ್ ಗಲಭೆ

ಇದನ್ನೂಓದಿ:  ಕೇಂದ್ರ ಬಜೆಟ್ 2025 | 12 ಲಕ್ಷ ರೂ.ಗಳವರೆಗೆ ಆದಾಯ ತೆರಿಗೆ ಮನ್ನಾ, ಗಿಗ್ ಕೆಲಸಗಾರರಿಗೆ ವಿಮೆ

ಕೇಂದ್ರ ಬಜೆಟ್ 2025 | 12 ಲಕ್ಷ ರೂ.ಗಳವರೆಗೆ ಆದಾಯ ತೆರಿಗೆ ಮನ್ನಾ, ಗಿಗ್ ಕೆಲಸಗಾರರಿಗೆ ವಿಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...