Homeಚಳವಳಿಗುಜರಾತ್ ಗಲಭೆ ಸಂತ್ರಸ್ತೆ, ಹೋರಾಟಗಾರ್ತಿ ಝಕಿಯಾ ಜಾಫ್ರಿ (86) ನಿಧನ

ಗುಜರಾತ್ ಗಲಭೆ ಸಂತ್ರಸ್ತೆ, ಹೋರಾಟಗಾರ್ತಿ ಝಕಿಯಾ ಜಾಫ್ರಿ (86) ನಿಧನ

ಪ್ರಧಾನಿ ಮೋದಿ ವಿರುದ್ಧ ಕಾನೂನು ಹೋರಾಟ ನಡೆಸಿದ್ದ ದಿಟ್ಟ ಮಹಿಳೆ

- Advertisement -
- Advertisement -

ಮುಸ್ಲಿಮರ ವಿರುದ್ಧ 2002ರ ವೇಳೆಗೆ ನಡೆದ ಗುಜರಾತ್ ಗಲಭೆಯ ಸಂತ್ರಸ್ತೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನ್ಯಾಯಾಲಯಕ್ಕೆ ತೆರಳಿದ್ದ ಝಕಿಯಾ ಜಾಫ್ರಿ ಶನಿವಾರ ಅಹಮದಾಬಾದ್‌ನಲ್ಲಿ ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಫೆಬ್ರವರಿ 28, 2002 ರಂದು ಅಹಮದಾಬಾದ್‌ನ ಮುಸ್ಲಿಮರು ಇರುವ ಗುಲ್ಬರ್ಗ್ ಸೊಸೈಟಿಯೊಳಗೆ ಬಲಪಂಥೀಯ ಗುಂಪೊಂದು ಸುಟ್ಟುಹಾಕಿದ 69 ಜನರಲ್ಲಿ ಝಕಿಯಾ ಅವರ ಪತಿ ಮತ್ತು ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಕೂಡ ಇದ್ದರು. ಗುಜರಾತ್ ಗಲಭೆ

“ನನ್ನ ತಾಯಿ ಅಹಮದಾಬಾದ್‌ನಲ್ಲಿರುವ ನನ್ನ ಸಹೋದರಿಯ ಮನೆಯಲ್ಲಿದ್ದರು. ಅಲ್ಲಿ ಅವರು ತಮ್ಮ ದೈನಂದಿನ ದಿನಚರಿಯನ್ನು ಪೂರ್ಣಗೊಳಿಸಿ ಕುಟುಂಬ ಸದಸ್ಯರೊಂದಿಗೆ ಮಾತನಾಡುತ್ತಿದ್ದಾಗ ಅಸ್ವಸ್ಥರಾದರು. ಈ ವೇಳೆ ವೈದ್ಯರು ಆಗಮಿಸಿ ಅವರಿಗೆ ಚಿಕಿತ್ಸೆಯ ಪ್ರಯತ್ನ ಮಾಡಿದ್ದು, ನಂತರ ಬೆಳಿಗ್ಗೆ 11:30 ರ ಸುಮಾರಿಗೆ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು” ಎಂದು ಅವರ ಮಗ ತನ್ವೀರ್ ಜಾಫ್ರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಗ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯನ್ನು ಸುಮಾರು 2000 ಜನರನ್ನು, ಅದರಲ್ಲೂ ಮುಖ್ಯವಾಗಿ ಮುಸ್ಲಿಮರ ಹತ್ಯೆ ಮಾಡಿದ ಗಲಭೆಯ ಜವಾಬ್ದಾರಿಯಿಂದ ಮುಕ್ತಗೊಳಿಸಿದ್ದಕ್ಕಾಗಿ ತನಿಖಾ ಸಂಸ್ಥೆಗಳ ವಿರುದ್ಧ ಝಕಿಯಾ ಅವರು ಕಾನೂನು ಹೋರಾಟ ಮಾಡಿದ್ದರು.

ಝಕಿಯಾ ಅವರ ನಿಧನಕ್ಕೆ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರು ಸಂತಾಪ ಸೂಚಿಸಿದ್ದಾರೆ, “ಮಾನವ ಹಕ್ಕುಗಳ ಹೋರಾಟಗಾರ್ತಿ, ಸಮುದಾಯದ ಸಹಾನುಭೂತಿಯ ನಾಯಕಿ ‘ಝಕಿಯಾ ಆಪಾ’ 30 ನಿಮಿಷಗಳ ಹಿಂದೆ ನಿಧನರಾದರು! ಅವರ ದೂರದೃಷ್ಟಿಯನ್ನು ದೇಶ, ಕುಟುಂಬ, ಸ್ನೇಹಿತರು ಮತ್ತು ಜಗತ್ತು ಮಿಸ್ ಮಾಡಿಕೊಳ್ಳುತ್ತದೆ!” ಎಂದು ಹೇಳಿದ್ದಾರೆ.

“ತನ್ವೀರ್ ಭಾಯ್, ನಿಶ್ರಿನ್, ದುರೈಯಪ್ಪ, ಮೊಮ್ಮಕ್ಕಳೇ ನಾವು ನಿಮ್ಮೊಂದಿಗಿದ್ದೇವೆ!” ಎಂದು ತೀಸ್ತಾ ಅವರು ಹೇಳಿದ್ದಾರೆ. ತೀಸ್ತಾ ಅವರು ಸುಪ್ರೀಂ ಕೋರ್ಟ್‌ನಲ್ಲಿ ಝಕಿಯಾ ಅವರ ಅರ್ಜಿಯಲ್ಲಿ ಸಹ-ದೂರುದಾರರಾಗಿದ್ದರು.

ಗುಜರಾತ್ ಪ್ರಕರಣದ ತನಿಖೆ ನಡೆಸಿದ ಸುಪ್ರೀಂ ಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡ (SIT) ಗಲಭೆಯ ಬಗ್ಗೆ ಅಪೂರ್ಣ ಮತ್ತು ಪಕ್ಷಪಾತದ ತನಿಖೆಯನ್ನು ಮಾಡಿದೆ ಎಂದು ಝಕಿಯಾ ಮತ್ತು ತೀಸ್ತಾ ಅರ್ಜಿಯಲ್ಲಿ ಆರೋಪಿಸಿದ್ದರು. ಆದರೆ, ಈ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠವು ಜೂನ್ 4, 2022 ರಂದು ತಿರಸ್ಕರಿಸಿತ್ತು.

“ನನ್ನಲ್ಲಿ ಉಸಿರು ಇರುವವರೆಗೂ ನಾನು ಹೋರಾಡುತ್ತಲೇ ಇರುತ್ತೇನೆ” ಎಂದು ಝಾಕಿಯಾ ಎರಡು ವರ್ಷಗಳ ಹಿಂದೆ ಸಂದರ್ಶನವೊಂದರಲ್ಲಿ ಹೇಳಿದ್ದರು. ಗುಜರಾತ್ ಗಲಭೆ

ಇದನ್ನೂಓದಿ:  ಕೇಂದ್ರ ಬಜೆಟ್ 2025 | 12 ಲಕ್ಷ ರೂ.ಗಳವರೆಗೆ ಆದಾಯ ತೆರಿಗೆ ಮನ್ನಾ, ಗಿಗ್ ಕೆಲಸಗಾರರಿಗೆ ವಿಮೆ

ಕೇಂದ್ರ ಬಜೆಟ್ 2025 | 12 ಲಕ್ಷ ರೂ.ಗಳವರೆಗೆ ಆದಾಯ ತೆರಿಗೆ ಮನ್ನಾ, ಗಿಗ್ ಕೆಲಸಗಾರರಿಗೆ ವಿಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...