Homeಮುಖಪುಟಭದ್ರತೆ ಹಿಂಪಡೆದ ಬಳಿಕ ಭಯದಿಂದ ಬದುಕುತ್ತಿರುವ ಗುಜರಾತ್‌ ಗಲಭೆ ಸಾಕ್ಷಿಗಳು

ಭದ್ರತೆ ಹಿಂಪಡೆದ ಬಳಿಕ ಭಯದಿಂದ ಬದುಕುತ್ತಿರುವ ಗುಜರಾತ್‌ ಗಲಭೆ ಸಾಕ್ಷಿಗಳು

- Advertisement -
- Advertisement -

ಗುಜರಾತ್‌ನಲ್ಲಿ ನಡೆದಿದ್ದ ಗೋಧ್ರಾ ರೈಲು ದಹನ ಮತ್ತು ನಂತರದ ದಂಗೆ ಪ್ರಕರಣಗಳಲ್ಲಿನ ಎಲ್ಲಾ 131 ಸಾಕ್ಷಿಗಳಿಗೆ ನೀಡಿದ್ದ ಭದ್ರತೆಯನ್ನು ಇತ್ತೀಚೆಗೆ ಹಿಂತೆಗೆದುಕೊಳ್ಳಲಾಗಿತ್ತು. ಗಲಭೆ ಪ್ರಕರಣದ ಸಾಕ್ಷಿಗಳು, ದೂರುದಾರರು ಇದೀಗ ಭದ್ರತೆಯ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಗುಜರಾತ್‌ ಗಲಭೆ ನಡೆದು 22 ವರ್ಷಗಳೇ ಕಳೆದಿವೆ. ಆದರೂ ನಾನು ಹಿಂದೂ ಪ್ರಾಬಲ್ಯದ ಪ್ರದೇಶಗಳಿಗೆ ಹೋಗಲು ಹೆದರುತ್ತೇನೆ. ನಾನು ಅಲ್ಲಿ ವಾಸಿಸುವ ಬಗ್ಗೆ ಯೋಚಿಸಲು ಕೂಡ ಸಾಧ್ಯವಿಲ್ಲ ಎಂದು 2002ರ ಗುಜರಾತ್ ಗಲಭೆಯಲ್ಲಿ ಬದುಕುಳಿದ ಸೈಯದ್ ನೂರ್ ಬಾನೊ ಹೇಳಿದ್ದಾರೆ.

ಬಾನೋ ಅವರು ನರೋಡಾ ಪಾಟಿಯಾದ ಮಾಜಿ ನಿವಾಸಿಯಾಗಿದ್ದಾರೆ. ಗೋಧ್ರಾದಲ್ಲಿ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದ ನಂತರ ನಡೆದ ಹಿಂಸಾಚಾರದಲ್ಲಿ ಬದುಕುಳಿದವರು ಮತ್ತು ನರೋಡಾ ಪಾಟಿಯಾ ಹತ್ಯಾಕಾಂಡದ ಸಾಕ್ಷಿಯೂ ಆಗಿದ್ದಾರೆ. ಆ ಪ್ರದೇಶದಲ್ಲಿ ಮುಸ್ಲಿಮರ ಅತ್ಯಾಚಾರ-ಕೊಲೆ ಪ್ರಕರಣ ಎಸಗಿದ್ದ ಕನಿಷ್ಠ 4 ಗಲಭೆಕೋರರ ಗುರುತನ್ನು ಕೂಡ ಅವರು ಪತ್ತೆಹಚ್ಚಿದ್ದರು. ಬಾನೊ ಅವರಲ್ಲದೆ ಗುಜರಾತ್‌ ಹತ್ಯಾಕಾಂಡದ ಇತರ ಕೆಲ ಸಾಕ್ಷಿಗಳಿಗೆ ನೀಡಿದ್ದ ಭದ್ರತೆಯನ್ನು ಡಿಸೆಂಬರ್‌ನಲ್ಲಿ ಪೊಲೀಸರು ಹಿಂತೆಗೆದುಕೊಂಡಿದ್ದರು.

ಸುಪ್ರೀಂಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡವು 2002ರ ಗಲಭೆಯ ದೂರುದಾರರು, ಸಾಕ್ಷಿಗಳು, ವಕೀಲರು, ಜಡ್ಜ್‌ ಸೇರಿ 131 ಸಾಕ್ಷಿಗಳಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆದಿತ್ತು, ಸಾಕ್ಷಿಗಳಿಗೆ ಯಾವುದೇ ಬೆದರಿಕೆಗಳು ಸುದೀರ್ಘ ಅವಧಿಯಲ್ಲಿ ಬಂದಿಲ್ಲ ಎಂದು ಹೇಳಿಕೊಂಡಿತ್ತು. ಸಂತ್ರಸ್ತರಿಗೆ ಕಾನೂನು ಹೋರಾಟದಲ್ಲಿ ಸಹಾಯ ಮಾಡಿದ ಇಬ್ಬರು ವಕೀಲರಾದ ಎಂ ಎಂ ತಿರ್ಮಿಜಿ ಮತ್ತು ಎಸ್ ಎಂ ವೋಹ್ರಾ  ಮತ್ತು ನರೋಡಾ ಪಾಟಿಯಾ ಪ್ರಕರಣದಲ್ಲಿ 32 ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿದ್ದ ಜಡ್ಜ್‌ ಜ್ಯೋತ್ಸ್ನಾ ಯಾಗ್ನಿಕ್‌ ಅವರ ಭದ್ರತೆಯನ್ನು ಕೂಡ ಹಿಂಪಡೆಯಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ ಗುಜರಾತ್‌ ಹತ್ಯಾಕಾಂಡದ ಸಾಕ್ಷಿ ಹಾಗೂ ಅಹಮದಾಬಾದ್‌ನ ಸಿಟಿಝನ್ ನಗರದಲ್ಲಿ ವಾಸಿಸುತ್ತಿರುವ ಮೊಹಮ್ಮದ್ ಅಬ್ದುಲ್ ಹಮೀದ್ ಶೇಖ್, ಈ ಪ್ರದೇಶದಲ್ಲಿ ಸರಿಯಾದ ರಸ್ತೆಗಳಿಲ್ಲ, ಅಗಾಧವಾದ ದುರ್ವಾಸನೆಯಿಂದ ಕೂಡಿದೆ ಮತ್ತು ಕಸದ ರಾಶಿಗಳ ಮಧ್ಯೆ ಜನರು ಬದುಕುತ್ತಿದ್ದಾರೆ. 2002ರ ಗಲಭೆಯಲ್ಲಿ ನಿರಾಶ್ರಿತರಾದ 50ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು ಕಳೆದ 22 ವರ್ಷಗಳಿಂದ ಸಿಟಿಝನ್ ನಗರದಲ್ಲಿ ವಾಸಿಸುತ್ತಿದ್ದಾರೆ. ಸಾಕ್ಷಿಗಳ ಭದ್ರತೆಯನ್ನು ಹಿಂತೆಗೆದುಕೊಳ್ಳುವ ನಿರ್ಧಾರವು ಯೋಜಿತವಾಗಿದೆ. ನಮ್ಮ ಮಾತು ಕೇಳುವವರು ಯಾರು? ನಮ್ಮ ಭದ್ರತೆಯನ್ನು ಮರುಸ್ಥಾಪಿಸಲು ನಾವು ಅವರನ್ನು ಒತ್ತಾಯಿಸಿದರೆ, ಅವರು ಸ್ಪಂದಿಸುತ್ತಾರೆ ಎಂದು ನಾನು ಭಾವಿಸುವುದಿಲ್ಲ ಎಂದು ಶೇಖ್ ಹೇಳಿದ್ದಾರೆ.

2002ರ ಫೆ.27ರಂದು ಅಯೋಧ್ಯೆಯಿಂದ ಕರಸೇವಕರು ಬರುವಾಗ ಸಬರಮತಿ ಎಕ್ಸ್‌ಪ್ರೆಸ್ ರೈಲು ಗುಜರಾತ್‌ನ ಗೋಧ್ರಾ ರೈಲ್ವೆ ನಿಲ್ದಾಣದ ಬಳಿ ನಿಲ್ಲಿಸಿತ್ತು. ಆಗ ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ತಗುಲಿ 59 ಮಂದಿ ಮೃತಪಟ್ಟಿದ್ದರು. ಅವರಲ್ಲಿ 29 ಮಂದಿ ಪುರುಷರು, 22 ಮಂದಿ ಮಹಿಳೆಯರು ಹಾಗೂ 8 ಮಕ್ಕಳು ಸೇರಿದ್ದರು. ಘಟನೆಗೆ ಕಾರಣ ಇಂದಿಗೂ ಅಸ್ಪಷ್ಟವಾಗಿದೆ. ನರೇಂದ್ರ ಮೋದಿ ನೇತೃತ್ವದ ಗುಜರಾತ್ ರಾಜ್ಯ ಸರ್ಕಾರವು, ಸತ್ತವರಲ್ಲಿ ಹೆಚ್ಚಿನವರು ಕರಸೇವಕರು ಎಂದು ಹೇಳಿದ್ದರು. ಗೋಧ್ರಾದಲ್ಲಿ ರೈಲಿಗೆ ಬೆಂಕಿ ಹಚ್ಚಿದ ಸುದ್ದಿ ಹರಡಿದ ನಂತರ ಸ್ವತಂತ್ರ ಭಾರತದ ಇತಿಹಾಸದಲ್ಲಿ ಅತ್ಯಂತ ಭೀಕರವಾದ ಹಿಂಸಾಚಾರ ಗುಜರಾತ್‌ನಲ್ಲಿ ನಡೆದಿತ್ತು. ಇದರಲ್ಲಿ ಸುಮಾರು 2,000 ಜನರು ಕೊಲ್ಲಲ್ಪಟ್ಟಿದ್ದರು. ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ನಡೆದಿತ್ತು. ರಾಜ್ಯಾದ್ಯಂತ ಸಾವಿರಾರು ಮನೆಗಳು ಮತ್ತು ಮಸೀದಿಗಳನ್ನು ಕಡೆವಲಾಗಿತ್ತು.

ಅಂದಿನ ಘಟನೆಯನ್ನು ನೆನಪಿಸಿಕೊಂಡ ಬಾನೊ, ಇಂದು ಅದೇ ವಾತಾವರಣ ನಿರ್ಮಾಣವಾಗುತ್ತಿದೆ, ಅದೇ ಕೇಸರಿ ಧ್ವಜಗಳು ಹಾರಾಡುತ್ತಿದೆ, ಇದಕ್ಕೆ ನಾವು ಹೆದರುತ್ತೇವೆ ಎಂದು ಹೇಳಿದರು. ಶೇಖ್‌, ಬಾನೊ ಅವರು ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಹೊಸ್ತಿಲಲ್ಲಿ ತಮ್ಮ ಭದ್ರತೆ ಹಿಂಪಡೆಯುವಿಕೆ ಬಗ್ಗೆ ಭಯವನ್ನು ವ್ಯಕ್ತಪಡಿಸಿದ್ದಾರೆ. ಗಲಭೆಯ ಮತ್ತೋರ್ವ ಸಾಕ್ಷಿಯಾದ ಮರೂಫ್ ಪಠಾಣ್ ತಮಗೆ ಕೊಟ್ಟ ರಕ್ಷಣೆಯನ್ನು ಹಿಂತೆಗೆದುಕೊಂಡಿರುವುದರಿಂದ ತನ್ನ ಕುಟುಂಬ ಅಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ. ಪಠಣ್‌ ಗಲಭೆ ಪ್ರಕರಣದಲ್ಲಿ ಗುಡ್ಡುಚಾರ, ಭವಾನಿ ಸಿನ್ಹ್, ಮಾಯಾ ಕೊಡ್ನಾನಿ ಮತ್ತು ಬಾಬು ಬಜರಂಗಿ ಅವರ ಕೈವಾಡದ ಬಗ್ಗೆ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದರು. 2002ರಲ್ಲಿ ಅವರು ಮಕ್ಕಳನ್ನು ಕೊಲೆ ಮಾಡಿದ್ದನ್ನು ಮತ್ತು ಮುಸ್ಲಿಂ ಮಹಿಳೆಯರನ್ನು ಅತ್ಯಾಚಾರ ಮಾಡಿದ್ದನ್ನು ನಾನು ನೋಡಿದ್ದೇನೆ. ನಮಗೆ ಯಾವುದೇ ಮಂದಿರದಿಂದ ಯಾವುದೇ ಸಮಸ್ಯೆಗಳಿಲ್ಲ. ನಮ್ಮವರನ್ನು ಕೊಲೆ ಮಾಡಲಾಗಿದೆ. ನಮಗೆ ಯಾವುದೇ ಕಾರಣವನ್ನು ನೀಡಲಾಗಿಲ್ಲ ಮತ್ತು ಪ್ರಸ್ತುತ ಪರಿಸ್ಥಿತಿಯಿಂದ ನಾವು ಭಯಭೀತರಾಗಿದ್ದೇವೆ. ಎರಡು ದಶಕಗಳಿಂದ ಭಯದಿಂದಲೇ ಬದುಕುತ್ತಿವೆ ಎಂದು ಪಠಾಣ್ ಹೇಳಿದ್ದಾರೆ.

ಇದನ್ನು ಓದಿ: ರಾಮಮಂದಿರ ಉದ್ಘಾಟನೆ: ಸಂವಿಧಾನದ ಪೀಠಿಕೆ ಹಂಚಿಕೊಂಡ ಮಲಯಾಳಂ ಚಿತ್ರರಂಗದ ದಿಗ್ಗಜರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....