Homeಮುಖಪುಟಭದ್ರತೆ ಹಿಂಪಡೆದ ಬಳಿಕ ಭಯದಿಂದ ಬದುಕುತ್ತಿರುವ ಗುಜರಾತ್‌ ಗಲಭೆ ಸಾಕ್ಷಿಗಳು

ಭದ್ರತೆ ಹಿಂಪಡೆದ ಬಳಿಕ ಭಯದಿಂದ ಬದುಕುತ್ತಿರುವ ಗುಜರಾತ್‌ ಗಲಭೆ ಸಾಕ್ಷಿಗಳು

- Advertisement -
- Advertisement -

ಗುಜರಾತ್‌ನಲ್ಲಿ ನಡೆದಿದ್ದ ಗೋಧ್ರಾ ರೈಲು ದಹನ ಮತ್ತು ನಂತರದ ದಂಗೆ ಪ್ರಕರಣಗಳಲ್ಲಿನ ಎಲ್ಲಾ 131 ಸಾಕ್ಷಿಗಳಿಗೆ ನೀಡಿದ್ದ ಭದ್ರತೆಯನ್ನು ಇತ್ತೀಚೆಗೆ ಹಿಂತೆಗೆದುಕೊಳ್ಳಲಾಗಿತ್ತು. ಗಲಭೆ ಪ್ರಕರಣದ ಸಾಕ್ಷಿಗಳು, ದೂರುದಾರರು ಇದೀಗ ಭದ್ರತೆಯ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಗುಜರಾತ್‌ ಗಲಭೆ ನಡೆದು 22 ವರ್ಷಗಳೇ ಕಳೆದಿವೆ. ಆದರೂ ನಾನು ಹಿಂದೂ ಪ್ರಾಬಲ್ಯದ ಪ್ರದೇಶಗಳಿಗೆ ಹೋಗಲು ಹೆದರುತ್ತೇನೆ. ನಾನು ಅಲ್ಲಿ ವಾಸಿಸುವ ಬಗ್ಗೆ ಯೋಚಿಸಲು ಕೂಡ ಸಾಧ್ಯವಿಲ್ಲ ಎಂದು 2002ರ ಗುಜರಾತ್ ಗಲಭೆಯಲ್ಲಿ ಬದುಕುಳಿದ ಸೈಯದ್ ನೂರ್ ಬಾನೊ ಹೇಳಿದ್ದಾರೆ.

ಬಾನೋ ಅವರು ನರೋಡಾ ಪಾಟಿಯಾದ ಮಾಜಿ ನಿವಾಸಿಯಾಗಿದ್ದಾರೆ. ಗೋಧ್ರಾದಲ್ಲಿ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದ ನಂತರ ನಡೆದ ಹಿಂಸಾಚಾರದಲ್ಲಿ ಬದುಕುಳಿದವರು ಮತ್ತು ನರೋಡಾ ಪಾಟಿಯಾ ಹತ್ಯಾಕಾಂಡದ ಸಾಕ್ಷಿಯೂ ಆಗಿದ್ದಾರೆ. ಆ ಪ್ರದೇಶದಲ್ಲಿ ಮುಸ್ಲಿಮರ ಅತ್ಯಾಚಾರ-ಕೊಲೆ ಪ್ರಕರಣ ಎಸಗಿದ್ದ ಕನಿಷ್ಠ 4 ಗಲಭೆಕೋರರ ಗುರುತನ್ನು ಕೂಡ ಅವರು ಪತ್ತೆಹಚ್ಚಿದ್ದರು. ಬಾನೊ ಅವರಲ್ಲದೆ ಗುಜರಾತ್‌ ಹತ್ಯಾಕಾಂಡದ ಇತರ ಕೆಲ ಸಾಕ್ಷಿಗಳಿಗೆ ನೀಡಿದ್ದ ಭದ್ರತೆಯನ್ನು ಡಿಸೆಂಬರ್‌ನಲ್ಲಿ ಪೊಲೀಸರು ಹಿಂತೆಗೆದುಕೊಂಡಿದ್ದರು.

ಸುಪ್ರೀಂಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡವು 2002ರ ಗಲಭೆಯ ದೂರುದಾರರು, ಸಾಕ್ಷಿಗಳು, ವಕೀಲರು, ಜಡ್ಜ್‌ ಸೇರಿ 131 ಸಾಕ್ಷಿಗಳಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆದಿತ್ತು, ಸಾಕ್ಷಿಗಳಿಗೆ ಯಾವುದೇ ಬೆದರಿಕೆಗಳು ಸುದೀರ್ಘ ಅವಧಿಯಲ್ಲಿ ಬಂದಿಲ್ಲ ಎಂದು ಹೇಳಿಕೊಂಡಿತ್ತು. ಸಂತ್ರಸ್ತರಿಗೆ ಕಾನೂನು ಹೋರಾಟದಲ್ಲಿ ಸಹಾಯ ಮಾಡಿದ ಇಬ್ಬರು ವಕೀಲರಾದ ಎಂ ಎಂ ತಿರ್ಮಿಜಿ ಮತ್ತು ಎಸ್ ಎಂ ವೋಹ್ರಾ  ಮತ್ತು ನರೋಡಾ ಪಾಟಿಯಾ ಪ್ರಕರಣದಲ್ಲಿ 32 ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿದ್ದ ಜಡ್ಜ್‌ ಜ್ಯೋತ್ಸ್ನಾ ಯಾಗ್ನಿಕ್‌ ಅವರ ಭದ್ರತೆಯನ್ನು ಕೂಡ ಹಿಂಪಡೆಯಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ ಗುಜರಾತ್‌ ಹತ್ಯಾಕಾಂಡದ ಸಾಕ್ಷಿ ಹಾಗೂ ಅಹಮದಾಬಾದ್‌ನ ಸಿಟಿಝನ್ ನಗರದಲ್ಲಿ ವಾಸಿಸುತ್ತಿರುವ ಮೊಹಮ್ಮದ್ ಅಬ್ದುಲ್ ಹಮೀದ್ ಶೇಖ್, ಈ ಪ್ರದೇಶದಲ್ಲಿ ಸರಿಯಾದ ರಸ್ತೆಗಳಿಲ್ಲ, ಅಗಾಧವಾದ ದುರ್ವಾಸನೆಯಿಂದ ಕೂಡಿದೆ ಮತ್ತು ಕಸದ ರಾಶಿಗಳ ಮಧ್ಯೆ ಜನರು ಬದುಕುತ್ತಿದ್ದಾರೆ. 2002ರ ಗಲಭೆಯಲ್ಲಿ ನಿರಾಶ್ರಿತರಾದ 50ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು ಕಳೆದ 22 ವರ್ಷಗಳಿಂದ ಸಿಟಿಝನ್ ನಗರದಲ್ಲಿ ವಾಸಿಸುತ್ತಿದ್ದಾರೆ. ಸಾಕ್ಷಿಗಳ ಭದ್ರತೆಯನ್ನು ಹಿಂತೆಗೆದುಕೊಳ್ಳುವ ನಿರ್ಧಾರವು ಯೋಜಿತವಾಗಿದೆ. ನಮ್ಮ ಮಾತು ಕೇಳುವವರು ಯಾರು? ನಮ್ಮ ಭದ್ರತೆಯನ್ನು ಮರುಸ್ಥಾಪಿಸಲು ನಾವು ಅವರನ್ನು ಒತ್ತಾಯಿಸಿದರೆ, ಅವರು ಸ್ಪಂದಿಸುತ್ತಾರೆ ಎಂದು ನಾನು ಭಾವಿಸುವುದಿಲ್ಲ ಎಂದು ಶೇಖ್ ಹೇಳಿದ್ದಾರೆ.

2002ರ ಫೆ.27ರಂದು ಅಯೋಧ್ಯೆಯಿಂದ ಕರಸೇವಕರು ಬರುವಾಗ ಸಬರಮತಿ ಎಕ್ಸ್‌ಪ್ರೆಸ್ ರೈಲು ಗುಜರಾತ್‌ನ ಗೋಧ್ರಾ ರೈಲ್ವೆ ನಿಲ್ದಾಣದ ಬಳಿ ನಿಲ್ಲಿಸಿತ್ತು. ಆಗ ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ತಗುಲಿ 59 ಮಂದಿ ಮೃತಪಟ್ಟಿದ್ದರು. ಅವರಲ್ಲಿ 29 ಮಂದಿ ಪುರುಷರು, 22 ಮಂದಿ ಮಹಿಳೆಯರು ಹಾಗೂ 8 ಮಕ್ಕಳು ಸೇರಿದ್ದರು. ಘಟನೆಗೆ ಕಾರಣ ಇಂದಿಗೂ ಅಸ್ಪಷ್ಟವಾಗಿದೆ. ನರೇಂದ್ರ ಮೋದಿ ನೇತೃತ್ವದ ಗುಜರಾತ್ ರಾಜ್ಯ ಸರ್ಕಾರವು, ಸತ್ತವರಲ್ಲಿ ಹೆಚ್ಚಿನವರು ಕರಸೇವಕರು ಎಂದು ಹೇಳಿದ್ದರು. ಗೋಧ್ರಾದಲ್ಲಿ ರೈಲಿಗೆ ಬೆಂಕಿ ಹಚ್ಚಿದ ಸುದ್ದಿ ಹರಡಿದ ನಂತರ ಸ್ವತಂತ್ರ ಭಾರತದ ಇತಿಹಾಸದಲ್ಲಿ ಅತ್ಯಂತ ಭೀಕರವಾದ ಹಿಂಸಾಚಾರ ಗುಜರಾತ್‌ನಲ್ಲಿ ನಡೆದಿತ್ತು. ಇದರಲ್ಲಿ ಸುಮಾರು 2,000 ಜನರು ಕೊಲ್ಲಲ್ಪಟ್ಟಿದ್ದರು. ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ನಡೆದಿತ್ತು. ರಾಜ್ಯಾದ್ಯಂತ ಸಾವಿರಾರು ಮನೆಗಳು ಮತ್ತು ಮಸೀದಿಗಳನ್ನು ಕಡೆವಲಾಗಿತ್ತು.

ಅಂದಿನ ಘಟನೆಯನ್ನು ನೆನಪಿಸಿಕೊಂಡ ಬಾನೊ, ಇಂದು ಅದೇ ವಾತಾವರಣ ನಿರ್ಮಾಣವಾಗುತ್ತಿದೆ, ಅದೇ ಕೇಸರಿ ಧ್ವಜಗಳು ಹಾರಾಡುತ್ತಿದೆ, ಇದಕ್ಕೆ ನಾವು ಹೆದರುತ್ತೇವೆ ಎಂದು ಹೇಳಿದರು. ಶೇಖ್‌, ಬಾನೊ ಅವರು ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಹೊಸ್ತಿಲಲ್ಲಿ ತಮ್ಮ ಭದ್ರತೆ ಹಿಂಪಡೆಯುವಿಕೆ ಬಗ್ಗೆ ಭಯವನ್ನು ವ್ಯಕ್ತಪಡಿಸಿದ್ದಾರೆ. ಗಲಭೆಯ ಮತ್ತೋರ್ವ ಸಾಕ್ಷಿಯಾದ ಮರೂಫ್ ಪಠಾಣ್ ತಮಗೆ ಕೊಟ್ಟ ರಕ್ಷಣೆಯನ್ನು ಹಿಂತೆಗೆದುಕೊಂಡಿರುವುದರಿಂದ ತನ್ನ ಕುಟುಂಬ ಅಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ. ಪಠಣ್‌ ಗಲಭೆ ಪ್ರಕರಣದಲ್ಲಿ ಗುಡ್ಡುಚಾರ, ಭವಾನಿ ಸಿನ್ಹ್, ಮಾಯಾ ಕೊಡ್ನಾನಿ ಮತ್ತು ಬಾಬು ಬಜರಂಗಿ ಅವರ ಕೈವಾಡದ ಬಗ್ಗೆ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದರು. 2002ರಲ್ಲಿ ಅವರು ಮಕ್ಕಳನ್ನು ಕೊಲೆ ಮಾಡಿದ್ದನ್ನು ಮತ್ತು ಮುಸ್ಲಿಂ ಮಹಿಳೆಯರನ್ನು ಅತ್ಯಾಚಾರ ಮಾಡಿದ್ದನ್ನು ನಾನು ನೋಡಿದ್ದೇನೆ. ನಮಗೆ ಯಾವುದೇ ಮಂದಿರದಿಂದ ಯಾವುದೇ ಸಮಸ್ಯೆಗಳಿಲ್ಲ. ನಮ್ಮವರನ್ನು ಕೊಲೆ ಮಾಡಲಾಗಿದೆ. ನಮಗೆ ಯಾವುದೇ ಕಾರಣವನ್ನು ನೀಡಲಾಗಿಲ್ಲ ಮತ್ತು ಪ್ರಸ್ತುತ ಪರಿಸ್ಥಿತಿಯಿಂದ ನಾವು ಭಯಭೀತರಾಗಿದ್ದೇವೆ. ಎರಡು ದಶಕಗಳಿಂದ ಭಯದಿಂದಲೇ ಬದುಕುತ್ತಿವೆ ಎಂದು ಪಠಾಣ್ ಹೇಳಿದ್ದಾರೆ.

ಇದನ್ನು ಓದಿ: ರಾಮಮಂದಿರ ಉದ್ಘಾಟನೆ: ಸಂವಿಧಾನದ ಪೀಠಿಕೆ ಹಂಚಿಕೊಂಡ ಮಲಯಾಳಂ ಚಿತ್ರರಂಗದ ದಿಗ್ಗಜರು

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...