Homeಮುಖಪುಟಭದ್ರತೆ ಹಿಂಪಡೆದ ಬಳಿಕ ಭಯದಿಂದ ಬದುಕುತ್ತಿರುವ ಗುಜರಾತ್‌ ಗಲಭೆ ಸಾಕ್ಷಿಗಳು

ಭದ್ರತೆ ಹಿಂಪಡೆದ ಬಳಿಕ ಭಯದಿಂದ ಬದುಕುತ್ತಿರುವ ಗುಜರಾತ್‌ ಗಲಭೆ ಸಾಕ್ಷಿಗಳು

- Advertisement -
- Advertisement -

ಗುಜರಾತ್‌ನಲ್ಲಿ ನಡೆದಿದ್ದ ಗೋಧ್ರಾ ರೈಲು ದಹನ ಮತ್ತು ನಂತರದ ದಂಗೆ ಪ್ರಕರಣಗಳಲ್ಲಿನ ಎಲ್ಲಾ 131 ಸಾಕ್ಷಿಗಳಿಗೆ ನೀಡಿದ್ದ ಭದ್ರತೆಯನ್ನು ಇತ್ತೀಚೆಗೆ ಹಿಂತೆಗೆದುಕೊಳ್ಳಲಾಗಿತ್ತು. ಗಲಭೆ ಪ್ರಕರಣದ ಸಾಕ್ಷಿಗಳು, ದೂರುದಾರರು ಇದೀಗ ಭದ್ರತೆಯ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಗುಜರಾತ್‌ ಗಲಭೆ ನಡೆದು 22 ವರ್ಷಗಳೇ ಕಳೆದಿವೆ. ಆದರೂ ನಾನು ಹಿಂದೂ ಪ್ರಾಬಲ್ಯದ ಪ್ರದೇಶಗಳಿಗೆ ಹೋಗಲು ಹೆದರುತ್ತೇನೆ. ನಾನು ಅಲ್ಲಿ ವಾಸಿಸುವ ಬಗ್ಗೆ ಯೋಚಿಸಲು ಕೂಡ ಸಾಧ್ಯವಿಲ್ಲ ಎಂದು 2002ರ ಗುಜರಾತ್ ಗಲಭೆಯಲ್ಲಿ ಬದುಕುಳಿದ ಸೈಯದ್ ನೂರ್ ಬಾನೊ ಹೇಳಿದ್ದಾರೆ.

ಬಾನೋ ಅವರು ನರೋಡಾ ಪಾಟಿಯಾದ ಮಾಜಿ ನಿವಾಸಿಯಾಗಿದ್ದಾರೆ. ಗೋಧ್ರಾದಲ್ಲಿ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದ ನಂತರ ನಡೆದ ಹಿಂಸಾಚಾರದಲ್ಲಿ ಬದುಕುಳಿದವರು ಮತ್ತು ನರೋಡಾ ಪಾಟಿಯಾ ಹತ್ಯಾಕಾಂಡದ ಸಾಕ್ಷಿಯೂ ಆಗಿದ್ದಾರೆ. ಆ ಪ್ರದೇಶದಲ್ಲಿ ಮುಸ್ಲಿಮರ ಅತ್ಯಾಚಾರ-ಕೊಲೆ ಪ್ರಕರಣ ಎಸಗಿದ್ದ ಕನಿಷ್ಠ 4 ಗಲಭೆಕೋರರ ಗುರುತನ್ನು ಕೂಡ ಅವರು ಪತ್ತೆಹಚ್ಚಿದ್ದರು. ಬಾನೊ ಅವರಲ್ಲದೆ ಗುಜರಾತ್‌ ಹತ್ಯಾಕಾಂಡದ ಇತರ ಕೆಲ ಸಾಕ್ಷಿಗಳಿಗೆ ನೀಡಿದ್ದ ಭದ್ರತೆಯನ್ನು ಡಿಸೆಂಬರ್‌ನಲ್ಲಿ ಪೊಲೀಸರು ಹಿಂತೆಗೆದುಕೊಂಡಿದ್ದರು.

ಸುಪ್ರೀಂಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡವು 2002ರ ಗಲಭೆಯ ದೂರುದಾರರು, ಸಾಕ್ಷಿಗಳು, ವಕೀಲರು, ಜಡ್ಜ್‌ ಸೇರಿ 131 ಸಾಕ್ಷಿಗಳಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆದಿತ್ತು, ಸಾಕ್ಷಿಗಳಿಗೆ ಯಾವುದೇ ಬೆದರಿಕೆಗಳು ಸುದೀರ್ಘ ಅವಧಿಯಲ್ಲಿ ಬಂದಿಲ್ಲ ಎಂದು ಹೇಳಿಕೊಂಡಿತ್ತು. ಸಂತ್ರಸ್ತರಿಗೆ ಕಾನೂನು ಹೋರಾಟದಲ್ಲಿ ಸಹಾಯ ಮಾಡಿದ ಇಬ್ಬರು ವಕೀಲರಾದ ಎಂ ಎಂ ತಿರ್ಮಿಜಿ ಮತ್ತು ಎಸ್ ಎಂ ವೋಹ್ರಾ  ಮತ್ತು ನರೋಡಾ ಪಾಟಿಯಾ ಪ್ರಕರಣದಲ್ಲಿ 32 ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿದ್ದ ಜಡ್ಜ್‌ ಜ್ಯೋತ್ಸ್ನಾ ಯಾಗ್ನಿಕ್‌ ಅವರ ಭದ್ರತೆಯನ್ನು ಕೂಡ ಹಿಂಪಡೆಯಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ ಗುಜರಾತ್‌ ಹತ್ಯಾಕಾಂಡದ ಸಾಕ್ಷಿ ಹಾಗೂ ಅಹಮದಾಬಾದ್‌ನ ಸಿಟಿಝನ್ ನಗರದಲ್ಲಿ ವಾಸಿಸುತ್ತಿರುವ ಮೊಹಮ್ಮದ್ ಅಬ್ದುಲ್ ಹಮೀದ್ ಶೇಖ್, ಈ ಪ್ರದೇಶದಲ್ಲಿ ಸರಿಯಾದ ರಸ್ತೆಗಳಿಲ್ಲ, ಅಗಾಧವಾದ ದುರ್ವಾಸನೆಯಿಂದ ಕೂಡಿದೆ ಮತ್ತು ಕಸದ ರಾಶಿಗಳ ಮಧ್ಯೆ ಜನರು ಬದುಕುತ್ತಿದ್ದಾರೆ. 2002ರ ಗಲಭೆಯಲ್ಲಿ ನಿರಾಶ್ರಿತರಾದ 50ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು ಕಳೆದ 22 ವರ್ಷಗಳಿಂದ ಸಿಟಿಝನ್ ನಗರದಲ್ಲಿ ವಾಸಿಸುತ್ತಿದ್ದಾರೆ. ಸಾಕ್ಷಿಗಳ ಭದ್ರತೆಯನ್ನು ಹಿಂತೆಗೆದುಕೊಳ್ಳುವ ನಿರ್ಧಾರವು ಯೋಜಿತವಾಗಿದೆ. ನಮ್ಮ ಮಾತು ಕೇಳುವವರು ಯಾರು? ನಮ್ಮ ಭದ್ರತೆಯನ್ನು ಮರುಸ್ಥಾಪಿಸಲು ನಾವು ಅವರನ್ನು ಒತ್ತಾಯಿಸಿದರೆ, ಅವರು ಸ್ಪಂದಿಸುತ್ತಾರೆ ಎಂದು ನಾನು ಭಾವಿಸುವುದಿಲ್ಲ ಎಂದು ಶೇಖ್ ಹೇಳಿದ್ದಾರೆ.

2002ರ ಫೆ.27ರಂದು ಅಯೋಧ್ಯೆಯಿಂದ ಕರಸೇವಕರು ಬರುವಾಗ ಸಬರಮತಿ ಎಕ್ಸ್‌ಪ್ರೆಸ್ ರೈಲು ಗುಜರಾತ್‌ನ ಗೋಧ್ರಾ ರೈಲ್ವೆ ನಿಲ್ದಾಣದ ಬಳಿ ನಿಲ್ಲಿಸಿತ್ತು. ಆಗ ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ತಗುಲಿ 59 ಮಂದಿ ಮೃತಪಟ್ಟಿದ್ದರು. ಅವರಲ್ಲಿ 29 ಮಂದಿ ಪುರುಷರು, 22 ಮಂದಿ ಮಹಿಳೆಯರು ಹಾಗೂ 8 ಮಕ್ಕಳು ಸೇರಿದ್ದರು. ಘಟನೆಗೆ ಕಾರಣ ಇಂದಿಗೂ ಅಸ್ಪಷ್ಟವಾಗಿದೆ. ನರೇಂದ್ರ ಮೋದಿ ನೇತೃತ್ವದ ಗುಜರಾತ್ ರಾಜ್ಯ ಸರ್ಕಾರವು, ಸತ್ತವರಲ್ಲಿ ಹೆಚ್ಚಿನವರು ಕರಸೇವಕರು ಎಂದು ಹೇಳಿದ್ದರು. ಗೋಧ್ರಾದಲ್ಲಿ ರೈಲಿಗೆ ಬೆಂಕಿ ಹಚ್ಚಿದ ಸುದ್ದಿ ಹರಡಿದ ನಂತರ ಸ್ವತಂತ್ರ ಭಾರತದ ಇತಿಹಾಸದಲ್ಲಿ ಅತ್ಯಂತ ಭೀಕರವಾದ ಹಿಂಸಾಚಾರ ಗುಜರಾತ್‌ನಲ್ಲಿ ನಡೆದಿತ್ತು. ಇದರಲ್ಲಿ ಸುಮಾರು 2,000 ಜನರು ಕೊಲ್ಲಲ್ಪಟ್ಟಿದ್ದರು. ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ನಡೆದಿತ್ತು. ರಾಜ್ಯಾದ್ಯಂತ ಸಾವಿರಾರು ಮನೆಗಳು ಮತ್ತು ಮಸೀದಿಗಳನ್ನು ಕಡೆವಲಾಗಿತ್ತು.

ಅಂದಿನ ಘಟನೆಯನ್ನು ನೆನಪಿಸಿಕೊಂಡ ಬಾನೊ, ಇಂದು ಅದೇ ವಾತಾವರಣ ನಿರ್ಮಾಣವಾಗುತ್ತಿದೆ, ಅದೇ ಕೇಸರಿ ಧ್ವಜಗಳು ಹಾರಾಡುತ್ತಿದೆ, ಇದಕ್ಕೆ ನಾವು ಹೆದರುತ್ತೇವೆ ಎಂದು ಹೇಳಿದರು. ಶೇಖ್‌, ಬಾನೊ ಅವರು ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಹೊಸ್ತಿಲಲ್ಲಿ ತಮ್ಮ ಭದ್ರತೆ ಹಿಂಪಡೆಯುವಿಕೆ ಬಗ್ಗೆ ಭಯವನ್ನು ವ್ಯಕ್ತಪಡಿಸಿದ್ದಾರೆ. ಗಲಭೆಯ ಮತ್ತೋರ್ವ ಸಾಕ್ಷಿಯಾದ ಮರೂಫ್ ಪಠಾಣ್ ತಮಗೆ ಕೊಟ್ಟ ರಕ್ಷಣೆಯನ್ನು ಹಿಂತೆಗೆದುಕೊಂಡಿರುವುದರಿಂದ ತನ್ನ ಕುಟುಂಬ ಅಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ. ಪಠಣ್‌ ಗಲಭೆ ಪ್ರಕರಣದಲ್ಲಿ ಗುಡ್ಡುಚಾರ, ಭವಾನಿ ಸಿನ್ಹ್, ಮಾಯಾ ಕೊಡ್ನಾನಿ ಮತ್ತು ಬಾಬು ಬಜರಂಗಿ ಅವರ ಕೈವಾಡದ ಬಗ್ಗೆ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದರು. 2002ರಲ್ಲಿ ಅವರು ಮಕ್ಕಳನ್ನು ಕೊಲೆ ಮಾಡಿದ್ದನ್ನು ಮತ್ತು ಮುಸ್ಲಿಂ ಮಹಿಳೆಯರನ್ನು ಅತ್ಯಾಚಾರ ಮಾಡಿದ್ದನ್ನು ನಾನು ನೋಡಿದ್ದೇನೆ. ನಮಗೆ ಯಾವುದೇ ಮಂದಿರದಿಂದ ಯಾವುದೇ ಸಮಸ್ಯೆಗಳಿಲ್ಲ. ನಮ್ಮವರನ್ನು ಕೊಲೆ ಮಾಡಲಾಗಿದೆ. ನಮಗೆ ಯಾವುದೇ ಕಾರಣವನ್ನು ನೀಡಲಾಗಿಲ್ಲ ಮತ್ತು ಪ್ರಸ್ತುತ ಪರಿಸ್ಥಿತಿಯಿಂದ ನಾವು ಭಯಭೀತರಾಗಿದ್ದೇವೆ. ಎರಡು ದಶಕಗಳಿಂದ ಭಯದಿಂದಲೇ ಬದುಕುತ್ತಿವೆ ಎಂದು ಪಠಾಣ್ ಹೇಳಿದ್ದಾರೆ.

ಇದನ್ನು ಓದಿ: ರಾಮಮಂದಿರ ಉದ್ಘಾಟನೆ: ಸಂವಿಧಾನದ ಪೀಠಿಕೆ ಹಂಚಿಕೊಂಡ ಮಲಯಾಳಂ ಚಿತ್ರರಂಗದ ದಿಗ್ಗಜರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...