Homeರಾಷ್ಟ್ರೀಯಗುಜರಾತ್‌: NEP ಮೂಲಕ 1ನೇ ತರಗತಿಯಿಂದಲೇ ಸಂಸ್ಕೃತ ಕಡ್ಡಾಯಕ್ಕೆ ಪ್ರಯತ್ನಿಸುತ್ತಿರುವ ಆರೆಸ್ಸೆಸ್‌‌

ಗುಜರಾತ್‌: NEP ಮೂಲಕ 1ನೇ ತರಗತಿಯಿಂದಲೇ ಸಂಸ್ಕೃತ ಕಡ್ಡಾಯಕ್ಕೆ ಪ್ರಯತ್ನಿಸುತ್ತಿರುವ ಆರೆಸ್ಸೆಸ್‌‌

- Advertisement -
- Advertisement -

ಗುಜರಾತ್‌‌ ಶಿಕ್ಷಣ ಸಚಿವ ಮತ್ತು ಇಲಾಖೆಯ ಇತರ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ, ರಾಜ್ಯದ ಶಾಲೆಗಳಲ್ಲಿ 1 ನೇ ತರಗತಿಯಿಂದಲೇ ಸಂಸ್ಕೃತವನ್ನು ಕಡ್ಡಾಯ ವಿಷಯವನ್ನಾಗಿ ಮಾಡಲು ಆರೆಸ್ಸೆಸ್‌ ಒತ್ತಾಯಿಸಿದೆ ಎಂದು ವರದಿಯಾಗಿದೆ.

ಆರೆಸ್ಸೆಸ್‌‌ ಮತ್ತು ರಾಜ್ಯ ಶಿಕ್ಷಣ ಸಚಿವ ಜಿತು ವಘಾನಿ, ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಗುಜರಾತ್‌ ಬಿಜೆಪಿ ಪ್ರಧಾನ ಕಾರ್ಯದರ್ಶಿ ರತ್ನಾಕರ್ ನಡುವೆ ಕಳೆದ ಎಪ್ರಿಲ್‌ನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020(ಎನ್‌ಇಪಿ) ಅನುಷ್ಠಾನದ ವಿಷಯದ ಕುರಿತು ಸಭೆ ನಡೆದಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

NEP-2020 ಭಾರತದ ಮೂರನೇ ಶಿಕ್ಷಣ ನೀತಿಯಾಗಿದ್ದು, ಅದನ್ನು 2020ರ ಜುಲೈನಲ್ಲಿ ಅಂಗೀಕರಿಸಲಾಗಿದೆ. ಹೊಸ ನೀತಿಯೂ ದೇಶದ ಶೈಕ್ಷಣಿಕ ಸಂರಚನೆಯಲ್ಲಿ ಹಲವಾರು ವ್ಯಾಪಕ ಬದಲಾವಣೆಗಳನ್ನು ಪ್ರಸ್ತಾಪಿಸಿದೆ. ಮುಖ್ಯವಾಗಿ, 5 ನೇ ತರಗತಿಯವರೆಗೆ ವಿದ್ಯಾರ್ಥಿಯ ಮಾತೃಭಾಷೆ ಅಥವಾ ಸ್ಥಳೀಯ ಭಾಷೆಯನ್ನು ಪ್ರಾಥಮಿಕ ಬೋಧನಾ ಮಾಧ್ಯಮವನ್ನಾಗಿ ಮಾಡಲು NEP ಶಿಫಾರಸು ಮಾಡುತ್ತದೆ. ಜೊತೆಗೆ ಅದನ್ನು 8 ನೇ ತರಗತಿಯವರೆಗೆ “ಸಾಧ್ಯವಾದಲ್ಲೆಲ್ಲಾ” ಮುಂದುವರಿಸುವಂತೆ ಶಿಫಾರಸು ಮಾಡುತ್ತದೆ.

ಇದನ್ನೂ ಓದಿ: ಪಠ್ಯಪರಿಷ್ಕರಣೆಯ ಬೇರಡಗಿರುವುದು ’ರಾಷ್ಟ್ರೀಯ ಶಿಕ್ಷಣ ನೀತಿ 2020’ರಲ್ಲಿ

ನೀತಿಯೂ ‘ಮೂರು ಭಾಷಾ ಸೂತ್ರ’ವನ್ನು ಪರಿಚಯಿಸಿದ್ದು, ಅದರ ಭಾಗವಾಗಿ ವಿದ್ಯಾರ್ಥಿಯು ಶಾಲೆಯಲ್ಲಿ ಕಲಿಯುವ ಮೂರು ಭಾಷೆಗಳಲ್ಲಿ ಎರಡು ಭಾರತೀಯ ಭಾಷೆಯಾಗಿರಬೇಕು. ಇದರ ಕರಡು ನೀತಿಯು, ಭಾಷೆಯ ಆಯ್ಕೆಯು ಶಾಲೆ ಮತ್ತು ವಿದ್ಯಾರ್ಥಿಗಳದ್ದಾಗಿರುತ್ತದೆ ಎಂದು ಹೇಳುತ್ತದೆ. ಆದರೆ ವಿದ್ಯಾರ್ಥಿಗಳು ಎಷ್ಟರ ಮಟ್ಟಿಗೆ ನಿರ್ಧರಿಸಲು ಸಾಧ್ಯವಾಗುತ್ತದೆ ಎಂಬುದು ಅಸ್ಪಷ್ಟವಾಗಿದೆ.

ಇದಲ್ಲದೆ, NEP ಯ ಹಿಂದಿನ ಕರಡು ಹಿಂದಿ ಭಾಷೆಯನ್ನು ಹಿಂದಿಯೇತರ ಭಾಷಾ ರಾಜ್ಯಗಳಲ್ಲಿ 8 ನೇ ತರಗತಿಯವರೆಗೆ ಕಡ್ಡಾಯಗೊಳಿಸಬೇಕೆಂದು ಕರೆ ನೀಡಿತ್ತು. ಆದರೆ ದಕ್ಷಿಣದ ರಾಜ್ಯಗಳು ತೀವ್ರವಾಗಿ ಪ್ರತಿಭಟನೆ ನಡೆಸಿದ ನಂತರ ಈ ನಿಬಂಧನೆಯನ್ನು ತೆಗೆದುಹಾಕಲಾಯಿತು.

ಶಿಕ್ಷಣವು ಸಮಕಾಲೀನ ಪಟ್ಟಿಯಲ್ಲಿ ಶಾಸಕಾಂಗ ವಿಷಯವಾಗಿರುವುದರಿಂದ (ಅಂದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಅದರ ಮೇಲೆ ಕಾನೂನುಗಳನ್ನು ಮಾಡಲು ಅರ್ಹವಾಗಿವೆ) NEP ಯ ನಿಬಂಧನೆಗಳು ಮತ್ತು ಅದರ ಅನುಷ್ಠಾನವನ್ನು ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ರಾಜ್ಯ ಸರ್ಕಾರದ ನಡುವೆ ಸಮಾಲೋಚನೆಗಳ ಮೂಲಕ ಮಾಡಲಾಗುತ್ತದೆ. ಕೇಂದ್ರ ಸರ್ಕಾರವು 2040 ನೇ ವರ್ಷವನ್ನು NEP ಯ ಸಂಪೂರ್ಣ ಅನುಷ್ಠಾನಕ್ಕೆ ಗಡುವು ಎಂದು ಸೂಚಿಸಿತ್ತು.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ 2020; ಶಿಕ್ಷಕರ ಮೇಲಿನ ಪರಿಣಾಮ

ಗುಜರಾತ್‌ ಶಿಕ್ಷಣ ಸಚಿವ ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ, ಆರ್‌ಎಸ್‌ಎಸ್ ಮತ್ತು ಅದರ ಅಂಗಸಂಸ್ಥೆಗಳು ರಾಜ್ಯ ಸರ್ಕಾರಕ್ಕೆ ವಾರಕ್ಕೆ ಕನಿಷ್ಠ ಆರು ಅವಧಿಗಳನ್ನು ಸಂಸ್ಕೃತ ಕಲಿಸಲು ಮೀಸಲಿಡುವಂತೆ ಒತ್ತಾಯಿಸಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಸಭೆಯಲ್ಲಿ ಉಪಸ್ಥಿತರಿದ್ದ ಆರ್‌ಎಸ್‌ಎಸ್‌ ಅಂಗಸಂಸ್ಥೆಗಳಾದ ವಿದ್ಯಾಭಾರತಿ, ಶೈಶಿಕ್ ಮಹಾಸಂಘ, ಸಂಸ್ಕೃತ ಭಾರತಿ, ಭಾರತೀಯ ಶಿಕ್ಷಣ ಮಂಡಲ್, ಸಭೆಯನ್ನು ಪ್ರಾಥಮಿಕವಾಗಿ ಸಂಸ್ಕೃತ ಬೋಧನೆಯ ಮೇಲೆ ಕೇಂದ್ರೀಕರಿಸಿದ್ದರು.

ರಾಮಾಯಣ, ಮಹಾಭಾರತ ಮತ್ತು ಭಗವದ್ಗೀತೆಗಳನ್ನು ಶಾಲೆಗಳಲ್ಲಿ ಕಲಿಸಬೇಕೆಂದು ಈ ಸಂಘಟನೆಗಳು ಒತ್ತಾಯಿಸಿದೆ ಎಂದು ವರದಿಯಾಗಿದೆ. ‘ವೈದಿಕ ಗಣಿತ’ವನ್ನು ಕಡ್ಡಾಯಗೊಳಿಸಬೇಕು; ಉಪನಿಷತ್ತುಗಳು ಮತ್ತು ವೇದಗಳಿಂದ ಮೌಲ್ಯಾಧಾರಿತ ಶಿಕ್ಷಣವನ್ನು ಪರಿಚಯಿಸುವುದು; ಮತ್ತು ಖಾಸಗಿ ವಿಶ್ವವಿದ್ಯಾಲಯಗಳನ್ನು ನಿಯಂತ್ರಿಸಬೇಕು ಎಂದು ಅದು ಸಭೆಯಲ್ಲಿ ಆಗ್ರಹಿಸಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ರಾಶ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020: ಹಿಂದು-ಮುಂದು

ಪ್ರಾಥಮಿಕ ಶಾಲಾ ಶಿಕ್ಷಣದ ಹೊರತಾಗಿ, ಗುಜರಾತಿಯನ್ನು ಪ್ರಥಮ ಭಾಷೆಯಾಗಿ ಮತ್ತು ಸಂಸ್ಕೃತವನ್ನು ಮಾಧ್ಯಮಿಕ ಮತ್ತು ಉನ್ನತ ಮಾಧ್ಯಮಿಕ ಶಿಕ್ಷಣದಲ್ಲಿ ಎರಡನೆ ಭಾಷೆಯಾಗಿ ಕಲಿಸಲು ಆರೆಸ್ಸೆಸ್‌‌ ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ. ಮೂರನೇ ಭಾಷೆಯಾಗಿ ರಾಜ್ಯ ಸರ್ಕಾರವನ್ನು ಆಯ್ಕೆ ಮಾಡಲು ಬಿಟ್ಟಿದೆ.

ಇದಲ್ಲದೆ, ಬ್ಯಾಚುಲರ್ ಆಫ್ ಆಯುರ್ವೇದಿಕ್ ಮೆಡಿಸಿನ್ ಮತ್ತು ಸರ್ಜರಿ (BAMS) ಕಾರ್ಯಕ್ರಮಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ 11 ಮತ್ತು 12 ನೇ ತರಗತಿಗಳಲ್ಲಿ ಸಂಸ್ಕೃತವನ್ನು ಕಡ್ಡಾಯಗೊಳಿಸಲು ಪ್ರಯತ್ನಿಸಿದೆ.

ಶಿಕ್ಷಣದಲ್ಲಿ ಸಂಸ್ಕೃತದ ಪಾತ್ರದ ಬಗ್ಗೆ ಎನ್‌ಇಪಿ ಅಸ್ಪಷ್ಟವಾಗಿದೆ ಮತ್ತು ಆದ್ದರಿಂದ ಈ ವಿಷಯದ ಬಗ್ಗೆ ಸಮಾಲೋಚನೆ ಅಗತ್ಯವಿದೆ ಎಂದು ಆರೆಸ್ಸೆಸ್‌‌ ಅಂಗಸಂಸ್ಥೆ ಸಂಸ್ಕೃತ ಭಾರತಿಯ ಸದಸ್ಯರೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದು, ‘‘ಇದಲ್ಲದೆ, ಯಾವುದೇ ಭಾಷೆಯನ್ನು ಕಡ್ಡಾಯಗೊಳಿಸುವುದಿಲ್ಲ ಎಂದು NEP ಹೇಳಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕಲಿಸಲಾಗುತ್ತದೆ” ಎಂದು ಸದಸ್ಯರು ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ 2020: ಪ್ರಭುತ್ವ ಹಿತಾಸಕ್ತಿ v/s ಸಾರ್ವಜನಿಕ ಹಿತಾಸಕ್ತಿ

ಈ ವರ್ಷ ಜುಲೈನಲ್ಲಿ ಕೂಡಾ ಆರ್‌ಎಸ್‌ಎಸ್ ಮತ್ತು ರಾಜ್ಯ ಸರ್ಕಾರದ ನಡುವೆ ಎನ್‌ಇಪಿ ಕುರಿತ ಮುಂದಿನ ಸಭೆ ನಡೆಯಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಿರುವ ಮೂಲಗಳು ಹೇಳಿಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...