Homeರಾಷ್ಟ್ರೀಯಗುಜರಾತ್‌: NEP ಮೂಲಕ 1ನೇ ತರಗತಿಯಿಂದಲೇ ಸಂಸ್ಕೃತ ಕಡ್ಡಾಯಕ್ಕೆ ಪ್ರಯತ್ನಿಸುತ್ತಿರುವ ಆರೆಸ್ಸೆಸ್‌‌

ಗುಜರಾತ್‌: NEP ಮೂಲಕ 1ನೇ ತರಗತಿಯಿಂದಲೇ ಸಂಸ್ಕೃತ ಕಡ್ಡಾಯಕ್ಕೆ ಪ್ರಯತ್ನಿಸುತ್ತಿರುವ ಆರೆಸ್ಸೆಸ್‌‌

- Advertisement -
- Advertisement -

ಗುಜರಾತ್‌‌ ಶಿಕ್ಷಣ ಸಚಿವ ಮತ್ತು ಇಲಾಖೆಯ ಇತರ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ, ರಾಜ್ಯದ ಶಾಲೆಗಳಲ್ಲಿ 1 ನೇ ತರಗತಿಯಿಂದಲೇ ಸಂಸ್ಕೃತವನ್ನು ಕಡ್ಡಾಯ ವಿಷಯವನ್ನಾಗಿ ಮಾಡಲು ಆರೆಸ್ಸೆಸ್‌ ಒತ್ತಾಯಿಸಿದೆ ಎಂದು ವರದಿಯಾಗಿದೆ.

ಆರೆಸ್ಸೆಸ್‌‌ ಮತ್ತು ರಾಜ್ಯ ಶಿಕ್ಷಣ ಸಚಿವ ಜಿತು ವಘಾನಿ, ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಗುಜರಾತ್‌ ಬಿಜೆಪಿ ಪ್ರಧಾನ ಕಾರ್ಯದರ್ಶಿ ರತ್ನಾಕರ್ ನಡುವೆ ಕಳೆದ ಎಪ್ರಿಲ್‌ನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020(ಎನ್‌ಇಪಿ) ಅನುಷ್ಠಾನದ ವಿಷಯದ ಕುರಿತು ಸಭೆ ನಡೆದಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

NEP-2020 ಭಾರತದ ಮೂರನೇ ಶಿಕ್ಷಣ ನೀತಿಯಾಗಿದ್ದು, ಅದನ್ನು 2020ರ ಜುಲೈನಲ್ಲಿ ಅಂಗೀಕರಿಸಲಾಗಿದೆ. ಹೊಸ ನೀತಿಯೂ ದೇಶದ ಶೈಕ್ಷಣಿಕ ಸಂರಚನೆಯಲ್ಲಿ ಹಲವಾರು ವ್ಯಾಪಕ ಬದಲಾವಣೆಗಳನ್ನು ಪ್ರಸ್ತಾಪಿಸಿದೆ. ಮುಖ್ಯವಾಗಿ, 5 ನೇ ತರಗತಿಯವರೆಗೆ ವಿದ್ಯಾರ್ಥಿಯ ಮಾತೃಭಾಷೆ ಅಥವಾ ಸ್ಥಳೀಯ ಭಾಷೆಯನ್ನು ಪ್ರಾಥಮಿಕ ಬೋಧನಾ ಮಾಧ್ಯಮವನ್ನಾಗಿ ಮಾಡಲು NEP ಶಿಫಾರಸು ಮಾಡುತ್ತದೆ. ಜೊತೆಗೆ ಅದನ್ನು 8 ನೇ ತರಗತಿಯವರೆಗೆ “ಸಾಧ್ಯವಾದಲ್ಲೆಲ್ಲಾ” ಮುಂದುವರಿಸುವಂತೆ ಶಿಫಾರಸು ಮಾಡುತ್ತದೆ.

ಇದನ್ನೂ ಓದಿ: ಪಠ್ಯಪರಿಷ್ಕರಣೆಯ ಬೇರಡಗಿರುವುದು ’ರಾಷ್ಟ್ರೀಯ ಶಿಕ್ಷಣ ನೀತಿ 2020’ರಲ್ಲಿ

ನೀತಿಯೂ ‘ಮೂರು ಭಾಷಾ ಸೂತ್ರ’ವನ್ನು ಪರಿಚಯಿಸಿದ್ದು, ಅದರ ಭಾಗವಾಗಿ ವಿದ್ಯಾರ್ಥಿಯು ಶಾಲೆಯಲ್ಲಿ ಕಲಿಯುವ ಮೂರು ಭಾಷೆಗಳಲ್ಲಿ ಎರಡು ಭಾರತೀಯ ಭಾಷೆಯಾಗಿರಬೇಕು. ಇದರ ಕರಡು ನೀತಿಯು, ಭಾಷೆಯ ಆಯ್ಕೆಯು ಶಾಲೆ ಮತ್ತು ವಿದ್ಯಾರ್ಥಿಗಳದ್ದಾಗಿರುತ್ತದೆ ಎಂದು ಹೇಳುತ್ತದೆ. ಆದರೆ ವಿದ್ಯಾರ್ಥಿಗಳು ಎಷ್ಟರ ಮಟ್ಟಿಗೆ ನಿರ್ಧರಿಸಲು ಸಾಧ್ಯವಾಗುತ್ತದೆ ಎಂಬುದು ಅಸ್ಪಷ್ಟವಾಗಿದೆ.

ಇದಲ್ಲದೆ, NEP ಯ ಹಿಂದಿನ ಕರಡು ಹಿಂದಿ ಭಾಷೆಯನ್ನು ಹಿಂದಿಯೇತರ ಭಾಷಾ ರಾಜ್ಯಗಳಲ್ಲಿ 8 ನೇ ತರಗತಿಯವರೆಗೆ ಕಡ್ಡಾಯಗೊಳಿಸಬೇಕೆಂದು ಕರೆ ನೀಡಿತ್ತು. ಆದರೆ ದಕ್ಷಿಣದ ರಾಜ್ಯಗಳು ತೀವ್ರವಾಗಿ ಪ್ರತಿಭಟನೆ ನಡೆಸಿದ ನಂತರ ಈ ನಿಬಂಧನೆಯನ್ನು ತೆಗೆದುಹಾಕಲಾಯಿತು.

ಶಿಕ್ಷಣವು ಸಮಕಾಲೀನ ಪಟ್ಟಿಯಲ್ಲಿ ಶಾಸಕಾಂಗ ವಿಷಯವಾಗಿರುವುದರಿಂದ (ಅಂದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಅದರ ಮೇಲೆ ಕಾನೂನುಗಳನ್ನು ಮಾಡಲು ಅರ್ಹವಾಗಿವೆ) NEP ಯ ನಿಬಂಧನೆಗಳು ಮತ್ತು ಅದರ ಅನುಷ್ಠಾನವನ್ನು ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ರಾಜ್ಯ ಸರ್ಕಾರದ ನಡುವೆ ಸಮಾಲೋಚನೆಗಳ ಮೂಲಕ ಮಾಡಲಾಗುತ್ತದೆ. ಕೇಂದ್ರ ಸರ್ಕಾರವು 2040 ನೇ ವರ್ಷವನ್ನು NEP ಯ ಸಂಪೂರ್ಣ ಅನುಷ್ಠಾನಕ್ಕೆ ಗಡುವು ಎಂದು ಸೂಚಿಸಿತ್ತು.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ 2020; ಶಿಕ್ಷಕರ ಮೇಲಿನ ಪರಿಣಾಮ

ಗುಜರಾತ್‌ ಶಿಕ್ಷಣ ಸಚಿವ ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ, ಆರ್‌ಎಸ್‌ಎಸ್ ಮತ್ತು ಅದರ ಅಂಗಸಂಸ್ಥೆಗಳು ರಾಜ್ಯ ಸರ್ಕಾರಕ್ಕೆ ವಾರಕ್ಕೆ ಕನಿಷ್ಠ ಆರು ಅವಧಿಗಳನ್ನು ಸಂಸ್ಕೃತ ಕಲಿಸಲು ಮೀಸಲಿಡುವಂತೆ ಒತ್ತಾಯಿಸಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಸಭೆಯಲ್ಲಿ ಉಪಸ್ಥಿತರಿದ್ದ ಆರ್‌ಎಸ್‌ಎಸ್‌ ಅಂಗಸಂಸ್ಥೆಗಳಾದ ವಿದ್ಯಾಭಾರತಿ, ಶೈಶಿಕ್ ಮಹಾಸಂಘ, ಸಂಸ್ಕೃತ ಭಾರತಿ, ಭಾರತೀಯ ಶಿಕ್ಷಣ ಮಂಡಲ್, ಸಭೆಯನ್ನು ಪ್ರಾಥಮಿಕವಾಗಿ ಸಂಸ್ಕೃತ ಬೋಧನೆಯ ಮೇಲೆ ಕೇಂದ್ರೀಕರಿಸಿದ್ದರು.

ರಾಮಾಯಣ, ಮಹಾಭಾರತ ಮತ್ತು ಭಗವದ್ಗೀತೆಗಳನ್ನು ಶಾಲೆಗಳಲ್ಲಿ ಕಲಿಸಬೇಕೆಂದು ಈ ಸಂಘಟನೆಗಳು ಒತ್ತಾಯಿಸಿದೆ ಎಂದು ವರದಿಯಾಗಿದೆ. ‘ವೈದಿಕ ಗಣಿತ’ವನ್ನು ಕಡ್ಡಾಯಗೊಳಿಸಬೇಕು; ಉಪನಿಷತ್ತುಗಳು ಮತ್ತು ವೇದಗಳಿಂದ ಮೌಲ್ಯಾಧಾರಿತ ಶಿಕ್ಷಣವನ್ನು ಪರಿಚಯಿಸುವುದು; ಮತ್ತು ಖಾಸಗಿ ವಿಶ್ವವಿದ್ಯಾಲಯಗಳನ್ನು ನಿಯಂತ್ರಿಸಬೇಕು ಎಂದು ಅದು ಸಭೆಯಲ್ಲಿ ಆಗ್ರಹಿಸಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ರಾಶ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020: ಹಿಂದು-ಮುಂದು

ಪ್ರಾಥಮಿಕ ಶಾಲಾ ಶಿಕ್ಷಣದ ಹೊರತಾಗಿ, ಗುಜರಾತಿಯನ್ನು ಪ್ರಥಮ ಭಾಷೆಯಾಗಿ ಮತ್ತು ಸಂಸ್ಕೃತವನ್ನು ಮಾಧ್ಯಮಿಕ ಮತ್ತು ಉನ್ನತ ಮಾಧ್ಯಮಿಕ ಶಿಕ್ಷಣದಲ್ಲಿ ಎರಡನೆ ಭಾಷೆಯಾಗಿ ಕಲಿಸಲು ಆರೆಸ್ಸೆಸ್‌‌ ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ. ಮೂರನೇ ಭಾಷೆಯಾಗಿ ರಾಜ್ಯ ಸರ್ಕಾರವನ್ನು ಆಯ್ಕೆ ಮಾಡಲು ಬಿಟ್ಟಿದೆ.

ಇದಲ್ಲದೆ, ಬ್ಯಾಚುಲರ್ ಆಫ್ ಆಯುರ್ವೇದಿಕ್ ಮೆಡಿಸಿನ್ ಮತ್ತು ಸರ್ಜರಿ (BAMS) ಕಾರ್ಯಕ್ರಮಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ 11 ಮತ್ತು 12 ನೇ ತರಗತಿಗಳಲ್ಲಿ ಸಂಸ್ಕೃತವನ್ನು ಕಡ್ಡಾಯಗೊಳಿಸಲು ಪ್ರಯತ್ನಿಸಿದೆ.

ಶಿಕ್ಷಣದಲ್ಲಿ ಸಂಸ್ಕೃತದ ಪಾತ್ರದ ಬಗ್ಗೆ ಎನ್‌ಇಪಿ ಅಸ್ಪಷ್ಟವಾಗಿದೆ ಮತ್ತು ಆದ್ದರಿಂದ ಈ ವಿಷಯದ ಬಗ್ಗೆ ಸಮಾಲೋಚನೆ ಅಗತ್ಯವಿದೆ ಎಂದು ಆರೆಸ್ಸೆಸ್‌‌ ಅಂಗಸಂಸ್ಥೆ ಸಂಸ್ಕೃತ ಭಾರತಿಯ ಸದಸ್ಯರೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದು, ‘‘ಇದಲ್ಲದೆ, ಯಾವುದೇ ಭಾಷೆಯನ್ನು ಕಡ್ಡಾಯಗೊಳಿಸುವುದಿಲ್ಲ ಎಂದು NEP ಹೇಳಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕಲಿಸಲಾಗುತ್ತದೆ” ಎಂದು ಸದಸ್ಯರು ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ 2020: ಪ್ರಭುತ್ವ ಹಿತಾಸಕ್ತಿ v/s ಸಾರ್ವಜನಿಕ ಹಿತಾಸಕ್ತಿ

ಈ ವರ್ಷ ಜುಲೈನಲ್ಲಿ ಕೂಡಾ ಆರ್‌ಎಸ್‌ಎಸ್ ಮತ್ತು ರಾಜ್ಯ ಸರ್ಕಾರದ ನಡುವೆ ಎನ್‌ಇಪಿ ಕುರಿತ ಮುಂದಿನ ಸಭೆ ನಡೆಯಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಿರುವ ಮೂಲಗಳು ಹೇಳಿಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...