Homeರಾಷ್ಟ್ರೀಯಗುಜರಾತ್‌: NEP ಮೂಲಕ 1ನೇ ತರಗತಿಯಿಂದಲೇ ಸಂಸ್ಕೃತ ಕಡ್ಡಾಯಕ್ಕೆ ಪ್ರಯತ್ನಿಸುತ್ತಿರುವ ಆರೆಸ್ಸೆಸ್‌‌

ಗುಜರಾತ್‌: NEP ಮೂಲಕ 1ನೇ ತರಗತಿಯಿಂದಲೇ ಸಂಸ್ಕೃತ ಕಡ್ಡಾಯಕ್ಕೆ ಪ್ರಯತ್ನಿಸುತ್ತಿರುವ ಆರೆಸ್ಸೆಸ್‌‌

- Advertisement -
- Advertisement -

ಗುಜರಾತ್‌‌ ಶಿಕ್ಷಣ ಸಚಿವ ಮತ್ತು ಇಲಾಖೆಯ ಇತರ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ, ರಾಜ್ಯದ ಶಾಲೆಗಳಲ್ಲಿ 1 ನೇ ತರಗತಿಯಿಂದಲೇ ಸಂಸ್ಕೃತವನ್ನು ಕಡ್ಡಾಯ ವಿಷಯವನ್ನಾಗಿ ಮಾಡಲು ಆರೆಸ್ಸೆಸ್‌ ಒತ್ತಾಯಿಸಿದೆ ಎಂದು ವರದಿಯಾಗಿದೆ.

ಆರೆಸ್ಸೆಸ್‌‌ ಮತ್ತು ರಾಜ್ಯ ಶಿಕ್ಷಣ ಸಚಿವ ಜಿತು ವಘಾನಿ, ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಗುಜರಾತ್‌ ಬಿಜೆಪಿ ಪ್ರಧಾನ ಕಾರ್ಯದರ್ಶಿ ರತ್ನಾಕರ್ ನಡುವೆ ಕಳೆದ ಎಪ್ರಿಲ್‌ನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020(ಎನ್‌ಇಪಿ) ಅನುಷ್ಠಾನದ ವಿಷಯದ ಕುರಿತು ಸಭೆ ನಡೆದಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

NEP-2020 ಭಾರತದ ಮೂರನೇ ಶಿಕ್ಷಣ ನೀತಿಯಾಗಿದ್ದು, ಅದನ್ನು 2020ರ ಜುಲೈನಲ್ಲಿ ಅಂಗೀಕರಿಸಲಾಗಿದೆ. ಹೊಸ ನೀತಿಯೂ ದೇಶದ ಶೈಕ್ಷಣಿಕ ಸಂರಚನೆಯಲ್ಲಿ ಹಲವಾರು ವ್ಯಾಪಕ ಬದಲಾವಣೆಗಳನ್ನು ಪ್ರಸ್ತಾಪಿಸಿದೆ. ಮುಖ್ಯವಾಗಿ, 5 ನೇ ತರಗತಿಯವರೆಗೆ ವಿದ್ಯಾರ್ಥಿಯ ಮಾತೃಭಾಷೆ ಅಥವಾ ಸ್ಥಳೀಯ ಭಾಷೆಯನ್ನು ಪ್ರಾಥಮಿಕ ಬೋಧನಾ ಮಾಧ್ಯಮವನ್ನಾಗಿ ಮಾಡಲು NEP ಶಿಫಾರಸು ಮಾಡುತ್ತದೆ. ಜೊತೆಗೆ ಅದನ್ನು 8 ನೇ ತರಗತಿಯವರೆಗೆ “ಸಾಧ್ಯವಾದಲ್ಲೆಲ್ಲಾ” ಮುಂದುವರಿಸುವಂತೆ ಶಿಫಾರಸು ಮಾಡುತ್ತದೆ.

ಇದನ್ನೂ ಓದಿ: ಪಠ್ಯಪರಿಷ್ಕರಣೆಯ ಬೇರಡಗಿರುವುದು ’ರಾಷ್ಟ್ರೀಯ ಶಿಕ್ಷಣ ನೀತಿ 2020’ರಲ್ಲಿ

ನೀತಿಯೂ ‘ಮೂರು ಭಾಷಾ ಸೂತ್ರ’ವನ್ನು ಪರಿಚಯಿಸಿದ್ದು, ಅದರ ಭಾಗವಾಗಿ ವಿದ್ಯಾರ್ಥಿಯು ಶಾಲೆಯಲ್ಲಿ ಕಲಿಯುವ ಮೂರು ಭಾಷೆಗಳಲ್ಲಿ ಎರಡು ಭಾರತೀಯ ಭಾಷೆಯಾಗಿರಬೇಕು. ಇದರ ಕರಡು ನೀತಿಯು, ಭಾಷೆಯ ಆಯ್ಕೆಯು ಶಾಲೆ ಮತ್ತು ವಿದ್ಯಾರ್ಥಿಗಳದ್ದಾಗಿರುತ್ತದೆ ಎಂದು ಹೇಳುತ್ತದೆ. ಆದರೆ ವಿದ್ಯಾರ್ಥಿಗಳು ಎಷ್ಟರ ಮಟ್ಟಿಗೆ ನಿರ್ಧರಿಸಲು ಸಾಧ್ಯವಾಗುತ್ತದೆ ಎಂಬುದು ಅಸ್ಪಷ್ಟವಾಗಿದೆ.

ಇದಲ್ಲದೆ, NEP ಯ ಹಿಂದಿನ ಕರಡು ಹಿಂದಿ ಭಾಷೆಯನ್ನು ಹಿಂದಿಯೇತರ ಭಾಷಾ ರಾಜ್ಯಗಳಲ್ಲಿ 8 ನೇ ತರಗತಿಯವರೆಗೆ ಕಡ್ಡಾಯಗೊಳಿಸಬೇಕೆಂದು ಕರೆ ನೀಡಿತ್ತು. ಆದರೆ ದಕ್ಷಿಣದ ರಾಜ್ಯಗಳು ತೀವ್ರವಾಗಿ ಪ್ರತಿಭಟನೆ ನಡೆಸಿದ ನಂತರ ಈ ನಿಬಂಧನೆಯನ್ನು ತೆಗೆದುಹಾಕಲಾಯಿತು.

ಶಿಕ್ಷಣವು ಸಮಕಾಲೀನ ಪಟ್ಟಿಯಲ್ಲಿ ಶಾಸಕಾಂಗ ವಿಷಯವಾಗಿರುವುದರಿಂದ (ಅಂದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಅದರ ಮೇಲೆ ಕಾನೂನುಗಳನ್ನು ಮಾಡಲು ಅರ್ಹವಾಗಿವೆ) NEP ಯ ನಿಬಂಧನೆಗಳು ಮತ್ತು ಅದರ ಅನುಷ್ಠಾನವನ್ನು ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ರಾಜ್ಯ ಸರ್ಕಾರದ ನಡುವೆ ಸಮಾಲೋಚನೆಗಳ ಮೂಲಕ ಮಾಡಲಾಗುತ್ತದೆ. ಕೇಂದ್ರ ಸರ್ಕಾರವು 2040 ನೇ ವರ್ಷವನ್ನು NEP ಯ ಸಂಪೂರ್ಣ ಅನುಷ್ಠಾನಕ್ಕೆ ಗಡುವು ಎಂದು ಸೂಚಿಸಿತ್ತು.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ 2020; ಶಿಕ್ಷಕರ ಮೇಲಿನ ಪರಿಣಾಮ

ಗುಜರಾತ್‌ ಶಿಕ್ಷಣ ಸಚಿವ ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ, ಆರ್‌ಎಸ್‌ಎಸ್ ಮತ್ತು ಅದರ ಅಂಗಸಂಸ್ಥೆಗಳು ರಾಜ್ಯ ಸರ್ಕಾರಕ್ಕೆ ವಾರಕ್ಕೆ ಕನಿಷ್ಠ ಆರು ಅವಧಿಗಳನ್ನು ಸಂಸ್ಕೃತ ಕಲಿಸಲು ಮೀಸಲಿಡುವಂತೆ ಒತ್ತಾಯಿಸಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಸಭೆಯಲ್ಲಿ ಉಪಸ್ಥಿತರಿದ್ದ ಆರ್‌ಎಸ್‌ಎಸ್‌ ಅಂಗಸಂಸ್ಥೆಗಳಾದ ವಿದ್ಯಾಭಾರತಿ, ಶೈಶಿಕ್ ಮಹಾಸಂಘ, ಸಂಸ್ಕೃತ ಭಾರತಿ, ಭಾರತೀಯ ಶಿಕ್ಷಣ ಮಂಡಲ್, ಸಭೆಯನ್ನು ಪ್ರಾಥಮಿಕವಾಗಿ ಸಂಸ್ಕೃತ ಬೋಧನೆಯ ಮೇಲೆ ಕೇಂದ್ರೀಕರಿಸಿದ್ದರು.

ರಾಮಾಯಣ, ಮಹಾಭಾರತ ಮತ್ತು ಭಗವದ್ಗೀತೆಗಳನ್ನು ಶಾಲೆಗಳಲ್ಲಿ ಕಲಿಸಬೇಕೆಂದು ಈ ಸಂಘಟನೆಗಳು ಒತ್ತಾಯಿಸಿದೆ ಎಂದು ವರದಿಯಾಗಿದೆ. ‘ವೈದಿಕ ಗಣಿತ’ವನ್ನು ಕಡ್ಡಾಯಗೊಳಿಸಬೇಕು; ಉಪನಿಷತ್ತುಗಳು ಮತ್ತು ವೇದಗಳಿಂದ ಮೌಲ್ಯಾಧಾರಿತ ಶಿಕ್ಷಣವನ್ನು ಪರಿಚಯಿಸುವುದು; ಮತ್ತು ಖಾಸಗಿ ವಿಶ್ವವಿದ್ಯಾಲಯಗಳನ್ನು ನಿಯಂತ್ರಿಸಬೇಕು ಎಂದು ಅದು ಸಭೆಯಲ್ಲಿ ಆಗ್ರಹಿಸಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ರಾಶ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020: ಹಿಂದು-ಮುಂದು

ಪ್ರಾಥಮಿಕ ಶಾಲಾ ಶಿಕ್ಷಣದ ಹೊರತಾಗಿ, ಗುಜರಾತಿಯನ್ನು ಪ್ರಥಮ ಭಾಷೆಯಾಗಿ ಮತ್ತು ಸಂಸ್ಕೃತವನ್ನು ಮಾಧ್ಯಮಿಕ ಮತ್ತು ಉನ್ನತ ಮಾಧ್ಯಮಿಕ ಶಿಕ್ಷಣದಲ್ಲಿ ಎರಡನೆ ಭಾಷೆಯಾಗಿ ಕಲಿಸಲು ಆರೆಸ್ಸೆಸ್‌‌ ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ. ಮೂರನೇ ಭಾಷೆಯಾಗಿ ರಾಜ್ಯ ಸರ್ಕಾರವನ್ನು ಆಯ್ಕೆ ಮಾಡಲು ಬಿಟ್ಟಿದೆ.

ಇದಲ್ಲದೆ, ಬ್ಯಾಚುಲರ್ ಆಫ್ ಆಯುರ್ವೇದಿಕ್ ಮೆಡಿಸಿನ್ ಮತ್ತು ಸರ್ಜರಿ (BAMS) ಕಾರ್ಯಕ್ರಮಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ 11 ಮತ್ತು 12 ನೇ ತರಗತಿಗಳಲ್ಲಿ ಸಂಸ್ಕೃತವನ್ನು ಕಡ್ಡಾಯಗೊಳಿಸಲು ಪ್ರಯತ್ನಿಸಿದೆ.

ಶಿಕ್ಷಣದಲ್ಲಿ ಸಂಸ್ಕೃತದ ಪಾತ್ರದ ಬಗ್ಗೆ ಎನ್‌ಇಪಿ ಅಸ್ಪಷ್ಟವಾಗಿದೆ ಮತ್ತು ಆದ್ದರಿಂದ ಈ ವಿಷಯದ ಬಗ್ಗೆ ಸಮಾಲೋಚನೆ ಅಗತ್ಯವಿದೆ ಎಂದು ಆರೆಸ್ಸೆಸ್‌‌ ಅಂಗಸಂಸ್ಥೆ ಸಂಸ್ಕೃತ ಭಾರತಿಯ ಸದಸ್ಯರೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದು, ‘‘ಇದಲ್ಲದೆ, ಯಾವುದೇ ಭಾಷೆಯನ್ನು ಕಡ್ಡಾಯಗೊಳಿಸುವುದಿಲ್ಲ ಎಂದು NEP ಹೇಳಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕಲಿಸಲಾಗುತ್ತದೆ” ಎಂದು ಸದಸ್ಯರು ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ 2020: ಪ್ರಭುತ್ವ ಹಿತಾಸಕ್ತಿ v/s ಸಾರ್ವಜನಿಕ ಹಿತಾಸಕ್ತಿ

ಈ ವರ್ಷ ಜುಲೈನಲ್ಲಿ ಕೂಡಾ ಆರ್‌ಎಸ್‌ಎಸ್ ಮತ್ತು ರಾಜ್ಯ ಸರ್ಕಾರದ ನಡುವೆ ಎನ್‌ಇಪಿ ಕುರಿತ ಮುಂದಿನ ಸಭೆ ನಡೆಯಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಿರುವ ಮೂಲಗಳು ಹೇಳಿಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...