Homeಮುಖಪುಟ ಗುಜರಾತ್ ಆರ್‍ಟಿಐ ಕಾರ್ಯಕರ್ತನ ಕೊಲೆ: ಆರೋಪಿ ಮಾಜಿ ಬಿಜೆಪಿ ಎಂಪಿ ಅಪರಾಧಿಯೆಂದು ಸಾಬೀತು

 ಗುಜರಾತ್ ಆರ್‍ಟಿಐ ಕಾರ್ಯಕರ್ತನ ಕೊಲೆ: ಆರೋಪಿ ಮಾಜಿ ಬಿಜೆಪಿ ಎಂಪಿ ಅಪರಾಧಿಯೆಂದು ಸಾಬೀತು

- Advertisement -
- Advertisement -

2010ರಲ್ಲಿ ನಡೆದ ಆರ್‍ಟಿಐ ಕಾರ್ಯಕರ್ತರೊಬ್ಬರ ಕೊಲೆಗೆ ಸಂಬಂಧಿಸಿದಂತೆ ತೀರ್ಪ ನೀಡಿರುವ ಗುಜರಾತಿನ ಸಿಬಿಐ ವಿಶೇಷ ನ್ಯಾಯಾಲಯ ಬಿಜೆಪಿ ಮಾಜಿ ಎಂಪಿ ದಿನು ಸೋಳಂಕಿ ಮತ್ತು ಇತರ ಆರು ಜನರನ್ನು ಅಪರಾಧಿಗಳೆಂದು ಶಿಕ್ಷಿಸಿ ತೀರ್ಪು ನೀಡಿದ್ದು ಜುಲೈ 11ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ.

ಗುಜರಾತಿನ ಗಿರ್ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆಯನ್ನು ಬಯಲು ಮಾಡಲು ಹೊರಟಿದ್ದ ಆರ್‍ಟಿಐ ಕಾರ್ಯಕರ್ತ ಅಮಿತ್ ಜೆಥ್ವಾ ಅವರನ್ನು 2010ರಲ್ಲಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಗುಜರಾತ್ ಸರ್ಕಾರದ ಅಪರಾಧಿ ತನಿಖಾ ವಿಭಾಗವು ಮಾಜಿ ಸಂಸದ ಸೋಲಂಕಿ ಅವರಿಗೆ ನಿರಪರಾಧಿ ಎಂದು ಕ್ಲೀನ್‍ಚಿಟ್ ನೀಡಿದ ನಂತರ ಗುಜರಾತ್ ಹೈಕೋರ್ಟ್ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು.

ಶನಿವಾರ ಸಿಬಿಐ ವಿಶೇಚ ನ್ಯಾಯಲಯದ ನ್ಯಾಯಾಧೀಶ ಕೆ.ಎಂ. ದಾವೆಯವರು, 2009-14ರ ಅವಧಿಯಲ್ಲಿ ಜುನಾಗಡ್ ಕ್ಷೇತ್ರವನ್ನು ಸಂಸತ್‍ನಲ್ಲಿ ಪ್ರತಿನಿಧಿಸಿದ್ದ ದಿನು ಸೋಲಂಕಿ, ಅವರ ಕಸಿನ್ ಶಿವಾ ಸೋಲಂಕಿ ಮತ್ತು ಇತರ ಐವರನ್ನು ಐಪಿಸಿ ಕಲಂ ಅಡಿ ಕೊಲೆ ಮತ್ತು ಕ್ರಿನಿಲ್ ಸಂಚು ಆರೋಗಳಡಿ ದೋಷಿಗಳೆಂದು ತೀರ್ಪ ನೀಡಿದ್ದಾರೆ.

ದಿನು ಸೋಲಂಕಿ

ಆರ್‍ಟಿಐ ಅರ್ಜಿಗಳ ನೆರವಿನಿಂದ ದಿನು ಸೋಲಂಕಿ ಅವರ ಅಕ್ರಮ ಗಣಿಗಾರಿಕೆಯನ್ನು ಬಯಲು ಮಾಡಲು ಯತ್ನಿಸುತ್ತಿದ್ದ ಅಮಿತ್ ಜೆಥ್ವಾ ಅವರನ್ನು ಗುಜರಾತ್ ಹೈಕೋರ್ಟ್ ಎದುರೇ ಜುಲೈ 20, 2010ರಂದು ಹತ್ಯೆ ಮಾಡಲಾಗಿತ್ತು. ಏಷ್ಯಾ ಹಲಿಗಳ ತಾಣವಾಗಿರುವ ಗಿರ್ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗರಿಕೆ ವಿರುದ್ಧ ಜೆಥ್ವಾ ಅವರು ಹೈಕೋರ್ಟಿನಲ್ಲಿ ಸಾರ್ವಜನಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
2016ರ ಮೇನಲ್ಲಿ ದಿನು ಸೋಲಂಕಿ ಮತ್ತು ಇತರ ಆರು ಜನರ ಮೇಲೆ ಕೊಲೆ ಮತ್ತು ಅಪರಾಧಿ ಸಂಚು ಆರೋಪಗಳನ್ನು ಹೊರಿಸಿ ದೂರು ದಾಖಲಿಸಲಾಗಿತ್ತು.

ಶೈಲೇಶ್ ಪಾಂಡ್ಯ, ಬಹದೂರ್‍ಸಿನ್ಹಾ ವಡೇರ್, ಪಾಂಚನ್ ದೇಸಾಯಿ, ಸಂಜಯ್ ಚೌಹಾಣ ಮತ್ತು ಉದಾಜಿ ಠಾಕೋರ್ ಶಿಕ್ಷೆಗೊಳಗಾದ ಇತರ ಆರೋಪಿಗಳು. ಒತ್ತಡ ಮತ್ತು ಬೆದರಿಕೆಯ ಕಾರಣದಿಂದ 105 ಸಾಕ್ಷಿಗಳು ತಿರುಗಿ ಬಿದ್ದಿದ್ದಾರೆಂದು ಜೆಥ್ವಾ ತಂದೆ ಹೈಕೋರ್ಟ್ ಮೊರೆ ಹೋಗಿದ್ದರಿಂದ ಹೈಕೋರ್ಟ್ ಮತ್ತೆ ವಿಚಾರಣಗೆ ಆದೇಶಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...