Homeಮುಖಪುಟಪಹಲ್ಗಾಮ್ ದಾಳಿಯಲ್ಲಿ ಭದ್ರತಾ ವೈಪಲ್ಯ ಎತ್ತಿತೋರಿಸಿದ್ದ 'ಗುಜರಾತ್ ಸಮಾಚಾರ್' ಪತ್ರಿಕೆಯ ಮಾಲೀಕ ಬಾಹುಬಲಿ ಶಾ ಇಡಿ...

ಪಹಲ್ಗಾಮ್ ದಾಳಿಯಲ್ಲಿ ಭದ್ರತಾ ವೈಪಲ್ಯ ಎತ್ತಿತೋರಿಸಿದ್ದ ‘ಗುಜರಾತ್ ಸಮಾಚಾರ್’ ಪತ್ರಿಕೆಯ ಮಾಲೀಕ ಬಾಹುಬಲಿ ಶಾ ಇಡಿ ವಶಕ್ಕೆ

- Advertisement -
- Advertisement -

ಪ್ರಮುಖ ಗುಜರಾತಿ ಪತ್ರಿಕೆ, ಕೇಂದ್ರ ಸರ್ಕಾರದ ವಿರುದ್ಧ ಟೀಕಾತ್ಮಕ ಲೇಖನಗಳನ್ನು ಪ್ರಕಟಿಸುವ ‘ಗುಜರಾತ್ ಸಮಾಚಾರ್’ನ ಮಾಲೀಕರಲ್ಲಿ ಒಬ್ಬರಾದ ಬಾಹುಬಲಿ ಶಾ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ. ಬಾಹುಬಲಿ ಶಾ ಅವರು ಗುಜರಾತ್ ಸಮಾಚಾರ್ ಅನ್ನು ಹೊಂದಿರುವ ಲೋಕ ಪ್ರಕಾಶನ್ ಲಿಮಿಟೆಡ್‌ನ ನಿರ್ದೇಶಕರಲ್ಲಿ ಒಬ್ಬರು. ಗುಜರಾತ್ ಸಮಾಚಾರ್ ಗುಜರಾತಿನ ಅತಿದೊಡ್ಡ ಮತ್ತು ಪ್ರಭಾವಿ ಗುಜರಾತಿ ದಿನಪತ್ರಿಕೆಯಾಗಿದ್ದು, ತನ್ನ ಸ್ವತಂತ್ರ ಸಂಪಾದಕೀಯ ನಿಲುವಿಗೆ ಹೆಸರುವಾಸಿಯಾಗಿದೆ.  ಪಹಲ್ಗಾಮ್ ದಾಳಿಯಲ್ಲಿ

ಅವರ ಹಿರಿಯ ಸಹೋದರ ಶ್ರೇಯಂಶ್ ಶಾ ಅವರು ದಿನಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾಗಿದ್ದಾರೆ. ಶ್ರೇಯಂಶ್ ಶಾ ನಡೆಸುತ್ತಿರುವ ಗುಜರಾತಿ ಸುದ್ದಿ ವಾಹಿನಿ ಜಿಎಸ್‌ಟಿವಿಯ ಡಿಜಿಟಲ್ ಸೇವೆಗಳ ಮುಖ್ಯಸ್ಥ ತುಷಾರ್ ದೇವ್, ಶುಕ್ರವಾರ ಮುಂಜಾನೆ ಬಾಹುಬಲಿ ಶಾ ಅವರನ್ನು ಇಡಿ ಬಂಧಿಸಿದೆ ಎಂದು ಹೇಳಿದ್ದಾರೆ.

ಫೇಸ್‌ಬುಕ್ ಪೋಸ್ಟ್‌ನಲ್ಲಿ ಮಾಹಿತಿ ನೀಡಿರುವ ದೇವ್ ಅವರು, ಬಾಹುಬಲಿ ಶಾ ಅವರನ್ನು ಮೊದಲು ವಿಎಸ್ ಆಸ್ಪತ್ರೆಗೆ ಇಡಿ ಕರೆದೊಯ್ಯಿತು. ಮತ್ತು ನಂತರ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ನಂತರ ನಗರದ ಜೈಡಸ್ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಅವರು ಹೇಳಿದ್ದಾರೆ.

ತನ್ನ ಕ್ರಮದ ಹಿಂದಿನ ಕಾರಣಗಳ ಬಗ್ಗೆ ಇಡಿ ಯಾವುದೇ ಹೇಳಿಕೆಯನ್ನು ನೀಡಿಲ್ಲ ಎಂದು ವರದಿಗಳು ಉಲ್ಲೇಖಿಸಿವೆ. ಶುಕ್ರವಾರ ಮುಂಜಾನೆ ಇಡಿ ಬಾಹುಬಲಿ ಶಾ ಅವರನ್ನು ಬಂಧಿಸಿದೆ ಮತ್ತು ಅವರು ಆಸ್ಪತ್ರೆಯಲ್ಲಿದ್ದಾರೆ ಎಂದು ಗುಜರಾತ್ ಸಮಾಚಾರ್ ಉದ್ಯೋಗಿಯೊಬ್ಬರು ಹೇಳಿದ್ದಾರೆ.

ಆದಾಯ ತೆರಿಗೆ ಇಲಾಖೆಯು ಅಹಮದಾಬಾದ್‌ನಲ್ಲಿರುವ GSTV ಆವರಣವನ್ನು ಸುಮಾರು 36 ಗಂಟೆಗಳ ಕಾಲ ಶೋಧಿಸಿದೆ. ಐಟಿ ಅಧಿಕಾರಿಗಳು ಹೋದ ಕೂಡಲೇ ಗುರುವಾರ ಸಂಜೆ ಇಡಿ ಆವರಣದ ಮೇಲೆ ದಾಳಿ ನಡೆಸಿತು ಎಂದು ದೇವ್ ಮತ್ತೊಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್‌ನ ರಾಹುಲ್ ಗಾಂಧಿ, ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಮತ್ತು ಇತರ ವಿರೋಧ ಪಕ್ಷದ ನಾಯಕರು ಇದನ್ನು ಸರ್ಕಾರದಿಂದ ಪತ್ರಿಕಾ ಸ್ವಾತಂತ್ರ್ಯವನ್ನು ದಮನಿಸುವ ಪ್ರಯತ್ನವೆಂದು ಖಂಡಿಸಿದ್ದಾರೆ. ಗುಜರಾತ್ ಸಮಾಚಾರ್‌ನ ಟೀಕಾತ್ಮಕ ವರದಿಗಳಿಗೆ ಸರ್ಕಾರದಿಂದ ಸೇಡು ತೀರಿಸಿಕೊಳ್ಳುವ ಕ್ರಮವೆಂದು ಅವರು ಆರೋಪಿಸಿದ್ದಾರೆ.

ಗುಜರಾತ್ ಶಾಸಕ ಮತ್ತು ಕಾಂಗ್ರೆಸ್ ರಾಜ್ಯ ಕಾರ್ಯಾಧ್ಯಕ್ಷ ಜಿಗ್ನೇಶ್ ಮೇವಾನಿ ಅವರು ಇಡಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಳೆದ 25 ವರ್ಷಗಳಿಂದ ಗುಜರಾತ್ ಸಮಾಚಾರ್ ಪತ್ರಿಕೆ ಕೇಂದ್ರ ಸರ್ಕಾರವನ್ನು ಟೀಕಿಸುವ ವರದಿಗಳನ್ನು ಪ್ರಕಟಿಸುತ್ತಿರುವುದರಿಂದ ಗುಜರಾತ್ ಸಮಾಚಾರ್ ಮತ್ತು ಅದರ ಮಾಲೀಕರನ್ನು ಗುರಿಯಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಟೀಕಾತ್ಮಕ ಲೇಖನಗಳನ್ನು ಪ್ರಕಟಿಸುವ ಗುಜರಾತ್ ಸಮಾಚಾರ್, ವಿಶೇಷವಾಗಿ ಇತ್ತೀಚೆಗೆ ಭಾರತ-ಪಾಕಿಸ್ತಾನ ಒಡಂಬಡಿಕೆ, ಪೆಹಲ್ಗಾಮ್ ಮತ್ತು ಪುಲ್ವಾಮಾ ದಾಳಿಯಂತಹ ಘಟನೆಗಳ ಸಂದರ್ಭದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಿ ಬರೆದಿತ್ತು.

ಅದರಲ್ಲೂ ಪಹಲ್ಗಾಮ್ ಭಯೋತ್ಪಾದಕ ದಾಳಿಯ (ಏಪ್ರಿಲ್ 22, 2025) ಕುರಿತಾದ ವರದಿಗಳು ಸರ್ಕಾರದ ಭದ್ರತಾ ವೈಫಲ್ಯಗಳನ್ನು ತೀವ್ರವಾಗಿ ಟೀಕಿಸುವ ನಿಲುವನ್ನು ಪತ್ರಿಕೆ ತೆಗೆದುಕೊಂಡಿತ್ತು. ಪತ್ರಿಕೆಯು ಕೇಂದ್ರ ಸರ್ಕಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಆಡಳಿತವನ್ನು ಭಯೋತ್ಪಾದಕ ದಾಳಿಗಳನ್ನು ತಡೆಯುವಲ್ಲಿ ವಿಫಲವಾದದ್ದಕ್ಕಾಗಿ ಹೊಣೆಹೊರುವಂತೆ ಕೇಳಿತ್ತು. ಅಲ್ಲದೆ, ಕೇಂದ್ರ ಸರ್ಕಾರದ ಭಯೋತ್ಪಾದನೆ-ವಿರೋಧಿ ಕಾರ್ಯತಂತ್ರಗಳು ಮತ್ತು ಗುಪ್ತಚರ ವೈಫಲ್ಯಗಳನ್ನು ಪ್ರಶ್ನಿಸಿತ್ತು. ಈ ಘಟನೆಯನ್ನು 2019ರ ಪುಲ್ವಾಮಾ ದಾಳಿಯೊಂದಿಗೆ ಹೋಲಿಕೆ ಮಾಡಿ, ಭದ್ರತಾ ವ್ಯವಸ್ಥೆಯಲ್ಲಿನ ನಿರಂತರ ಕೊರತೆಗಳನ್ನು ಎತ್ತಿ ತೋರಿಸಿತ್ತು.

2019ರಲ್ಲಿ, ಗುಜರಾತ್ ಸಮಾಚಾರ್‌ನ ಬ್ಯಾನರ್‌ ಹೆಡ್‌ಲೈನ್‌ “56 ನಿ ಛಾತಿನಿ ಕಾಯರ್ತಾ: ಆತಂಕಿಯೋ ಬೆಫಾಮ್, 44 ಜವಾನ್ ಶಹೀದ್” (56 ಇಂಚಿನ ಎದೆಯ ಕಾಯರತೆ: ಭಯೋತ್ಪಾದಕರಿಗೆ ಮುಕ್ತ ಕೈ, 44 ಯೋಧರು ಹುತಾತ್ಮರಾದರು) ಎಂಬ ಶೀರ್ಷಿಕೆಯು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಟೀಕಿಸಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಪಹಲ್ಗಾಮ್ ದಾಳಿಯಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...