Homeಮುಖಪುಟಪಹಲ್ಗಾಮ್ ದಾಳಿಯಲ್ಲಿ ಭದ್ರತಾ ವೈಪಲ್ಯ ಎತ್ತಿತೋರಿಸಿದ್ದ 'ಗುಜರಾತ್ ಸಮಾಚಾರ್' ಪತ್ರಿಕೆಯ ಮಾಲೀಕ ಬಾಹುಬಲಿ ಶಾ ಇಡಿ...

ಪಹಲ್ಗಾಮ್ ದಾಳಿಯಲ್ಲಿ ಭದ್ರತಾ ವೈಪಲ್ಯ ಎತ್ತಿತೋರಿಸಿದ್ದ ‘ಗುಜರಾತ್ ಸಮಾಚಾರ್’ ಪತ್ರಿಕೆಯ ಮಾಲೀಕ ಬಾಹುಬಲಿ ಶಾ ಇಡಿ ವಶಕ್ಕೆ

- Advertisement -
- Advertisement -

ಪ್ರಮುಖ ಗುಜರಾತಿ ಪತ್ರಿಕೆ, ಕೇಂದ್ರ ಸರ್ಕಾರದ ವಿರುದ್ಧ ಟೀಕಾತ್ಮಕ ಲೇಖನಗಳನ್ನು ಪ್ರಕಟಿಸುವ ‘ಗುಜರಾತ್ ಸಮಾಚಾರ್’ನ ಮಾಲೀಕರಲ್ಲಿ ಒಬ್ಬರಾದ ಬಾಹುಬಲಿ ಶಾ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ. ಬಾಹುಬಲಿ ಶಾ ಅವರು ಗುಜರಾತ್ ಸಮಾಚಾರ್ ಅನ್ನು ಹೊಂದಿರುವ ಲೋಕ ಪ್ರಕಾಶನ್ ಲಿಮಿಟೆಡ್‌ನ ನಿರ್ದೇಶಕರಲ್ಲಿ ಒಬ್ಬರು. ಗುಜರಾತ್ ಸಮಾಚಾರ್ ಗುಜರಾತಿನ ಅತಿದೊಡ್ಡ ಮತ್ತು ಪ್ರಭಾವಿ ಗುಜರಾತಿ ದಿನಪತ್ರಿಕೆಯಾಗಿದ್ದು, ತನ್ನ ಸ್ವತಂತ್ರ ಸಂಪಾದಕೀಯ ನಿಲುವಿಗೆ ಹೆಸರುವಾಸಿಯಾಗಿದೆ.  ಪಹಲ್ಗಾಮ್ ದಾಳಿಯಲ್ಲಿ

ಅವರ ಹಿರಿಯ ಸಹೋದರ ಶ್ರೇಯಂಶ್ ಶಾ ಅವರು ದಿನಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾಗಿದ್ದಾರೆ. ಶ್ರೇಯಂಶ್ ಶಾ ನಡೆಸುತ್ತಿರುವ ಗುಜರಾತಿ ಸುದ್ದಿ ವಾಹಿನಿ ಜಿಎಸ್‌ಟಿವಿಯ ಡಿಜಿಟಲ್ ಸೇವೆಗಳ ಮುಖ್ಯಸ್ಥ ತುಷಾರ್ ದೇವ್, ಶುಕ್ರವಾರ ಮುಂಜಾನೆ ಬಾಹುಬಲಿ ಶಾ ಅವರನ್ನು ಇಡಿ ಬಂಧಿಸಿದೆ ಎಂದು ಹೇಳಿದ್ದಾರೆ.

ಫೇಸ್‌ಬುಕ್ ಪೋಸ್ಟ್‌ನಲ್ಲಿ ಮಾಹಿತಿ ನೀಡಿರುವ ದೇವ್ ಅವರು, ಬಾಹುಬಲಿ ಶಾ ಅವರನ್ನು ಮೊದಲು ವಿಎಸ್ ಆಸ್ಪತ್ರೆಗೆ ಇಡಿ ಕರೆದೊಯ್ಯಿತು. ಮತ್ತು ನಂತರ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ನಂತರ ನಗರದ ಜೈಡಸ್ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಅವರು ಹೇಳಿದ್ದಾರೆ.

ತನ್ನ ಕ್ರಮದ ಹಿಂದಿನ ಕಾರಣಗಳ ಬಗ್ಗೆ ಇಡಿ ಯಾವುದೇ ಹೇಳಿಕೆಯನ್ನು ನೀಡಿಲ್ಲ ಎಂದು ವರದಿಗಳು ಉಲ್ಲೇಖಿಸಿವೆ. ಶುಕ್ರವಾರ ಮುಂಜಾನೆ ಇಡಿ ಬಾಹುಬಲಿ ಶಾ ಅವರನ್ನು ಬಂಧಿಸಿದೆ ಮತ್ತು ಅವರು ಆಸ್ಪತ್ರೆಯಲ್ಲಿದ್ದಾರೆ ಎಂದು ಗುಜರಾತ್ ಸಮಾಚಾರ್ ಉದ್ಯೋಗಿಯೊಬ್ಬರು ಹೇಳಿದ್ದಾರೆ.

ಆದಾಯ ತೆರಿಗೆ ಇಲಾಖೆಯು ಅಹಮದಾಬಾದ್‌ನಲ್ಲಿರುವ GSTV ಆವರಣವನ್ನು ಸುಮಾರು 36 ಗಂಟೆಗಳ ಕಾಲ ಶೋಧಿಸಿದೆ. ಐಟಿ ಅಧಿಕಾರಿಗಳು ಹೋದ ಕೂಡಲೇ ಗುರುವಾರ ಸಂಜೆ ಇಡಿ ಆವರಣದ ಮೇಲೆ ದಾಳಿ ನಡೆಸಿತು ಎಂದು ದೇವ್ ಮತ್ತೊಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್‌ನ ರಾಹುಲ್ ಗಾಂಧಿ, ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಮತ್ತು ಇತರ ವಿರೋಧ ಪಕ್ಷದ ನಾಯಕರು ಇದನ್ನು ಸರ್ಕಾರದಿಂದ ಪತ್ರಿಕಾ ಸ್ವಾತಂತ್ರ್ಯವನ್ನು ದಮನಿಸುವ ಪ್ರಯತ್ನವೆಂದು ಖಂಡಿಸಿದ್ದಾರೆ. ಗುಜರಾತ್ ಸಮಾಚಾರ್‌ನ ಟೀಕಾತ್ಮಕ ವರದಿಗಳಿಗೆ ಸರ್ಕಾರದಿಂದ ಸೇಡು ತೀರಿಸಿಕೊಳ್ಳುವ ಕ್ರಮವೆಂದು ಅವರು ಆರೋಪಿಸಿದ್ದಾರೆ.

ಗುಜರಾತ್ ಶಾಸಕ ಮತ್ತು ಕಾಂಗ್ರೆಸ್ ರಾಜ್ಯ ಕಾರ್ಯಾಧ್ಯಕ್ಷ ಜಿಗ್ನೇಶ್ ಮೇವಾನಿ ಅವರು ಇಡಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಳೆದ 25 ವರ್ಷಗಳಿಂದ ಗುಜರಾತ್ ಸಮಾಚಾರ್ ಪತ್ರಿಕೆ ಕೇಂದ್ರ ಸರ್ಕಾರವನ್ನು ಟೀಕಿಸುವ ವರದಿಗಳನ್ನು ಪ್ರಕಟಿಸುತ್ತಿರುವುದರಿಂದ ಗುಜರಾತ್ ಸಮಾಚಾರ್ ಮತ್ತು ಅದರ ಮಾಲೀಕರನ್ನು ಗುರಿಯಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಟೀಕಾತ್ಮಕ ಲೇಖನಗಳನ್ನು ಪ್ರಕಟಿಸುವ ಗುಜರಾತ್ ಸಮಾಚಾರ್, ವಿಶೇಷವಾಗಿ ಇತ್ತೀಚೆಗೆ ಭಾರತ-ಪಾಕಿಸ್ತಾನ ಒಡಂಬಡಿಕೆ, ಪೆಹಲ್ಗಾಮ್ ಮತ್ತು ಪುಲ್ವಾಮಾ ದಾಳಿಯಂತಹ ಘಟನೆಗಳ ಸಂದರ್ಭದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಿ ಬರೆದಿತ್ತು.

ಅದರಲ್ಲೂ ಪಹಲ್ಗಾಮ್ ಭಯೋತ್ಪಾದಕ ದಾಳಿಯ (ಏಪ್ರಿಲ್ 22, 2025) ಕುರಿತಾದ ವರದಿಗಳು ಸರ್ಕಾರದ ಭದ್ರತಾ ವೈಫಲ್ಯಗಳನ್ನು ತೀವ್ರವಾಗಿ ಟೀಕಿಸುವ ನಿಲುವನ್ನು ಪತ್ರಿಕೆ ತೆಗೆದುಕೊಂಡಿತ್ತು. ಪತ್ರಿಕೆಯು ಕೇಂದ್ರ ಸರ್ಕಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಆಡಳಿತವನ್ನು ಭಯೋತ್ಪಾದಕ ದಾಳಿಗಳನ್ನು ತಡೆಯುವಲ್ಲಿ ವಿಫಲವಾದದ್ದಕ್ಕಾಗಿ ಹೊಣೆಹೊರುವಂತೆ ಕೇಳಿತ್ತು. ಅಲ್ಲದೆ, ಕೇಂದ್ರ ಸರ್ಕಾರದ ಭಯೋತ್ಪಾದನೆ-ವಿರೋಧಿ ಕಾರ್ಯತಂತ್ರಗಳು ಮತ್ತು ಗುಪ್ತಚರ ವೈಫಲ್ಯಗಳನ್ನು ಪ್ರಶ್ನಿಸಿತ್ತು. ಈ ಘಟನೆಯನ್ನು 2019ರ ಪುಲ್ವಾಮಾ ದಾಳಿಯೊಂದಿಗೆ ಹೋಲಿಕೆ ಮಾಡಿ, ಭದ್ರತಾ ವ್ಯವಸ್ಥೆಯಲ್ಲಿನ ನಿರಂತರ ಕೊರತೆಗಳನ್ನು ಎತ್ತಿ ತೋರಿಸಿತ್ತು.

2019ರಲ್ಲಿ, ಗುಜರಾತ್ ಸಮಾಚಾರ್‌ನ ಬ್ಯಾನರ್‌ ಹೆಡ್‌ಲೈನ್‌ “56 ನಿ ಛಾತಿನಿ ಕಾಯರ್ತಾ: ಆತಂಕಿಯೋ ಬೆಫಾಮ್, 44 ಜವಾನ್ ಶಹೀದ್” (56 ಇಂಚಿನ ಎದೆಯ ಕಾಯರತೆ: ಭಯೋತ್ಪಾದಕರಿಗೆ ಮುಕ್ತ ಕೈ, 44 ಯೋಧರು ಹುತಾತ್ಮರಾದರು) ಎಂಬ ಶೀರ್ಷಿಕೆಯು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಟೀಕಿಸಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಪಹಲ್ಗಾಮ್ ದಾಳಿಯಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...