Homeಮುಖಪುಟಪಹಲ್ಗಾಮ್ ದಾಳಿಯಲ್ಲಿ ಭದ್ರತಾ ವೈಪಲ್ಯ ಎತ್ತಿತೋರಿಸಿದ್ದ 'ಗುಜರಾತ್ ಸಮಾಚಾರ್' ಪತ್ರಿಕೆಯ ಮಾಲೀಕ ಬಾಹುಬಲಿ ಶಾ ಇಡಿ...

ಪಹಲ್ಗಾಮ್ ದಾಳಿಯಲ್ಲಿ ಭದ್ರತಾ ವೈಪಲ್ಯ ಎತ್ತಿತೋರಿಸಿದ್ದ ‘ಗುಜರಾತ್ ಸಮಾಚಾರ್’ ಪತ್ರಿಕೆಯ ಮಾಲೀಕ ಬಾಹುಬಲಿ ಶಾ ಇಡಿ ವಶಕ್ಕೆ

- Advertisement -
- Advertisement -

ಪ್ರಮುಖ ಗುಜರಾತಿ ಪತ್ರಿಕೆ, ಕೇಂದ್ರ ಸರ್ಕಾರದ ವಿರುದ್ಧ ಟೀಕಾತ್ಮಕ ಲೇಖನಗಳನ್ನು ಪ್ರಕಟಿಸುವ ‘ಗುಜರಾತ್ ಸಮಾಚಾರ್’ನ ಮಾಲೀಕರಲ್ಲಿ ಒಬ್ಬರಾದ ಬಾಹುಬಲಿ ಶಾ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ. ಬಾಹುಬಲಿ ಶಾ ಅವರು ಗುಜರಾತ್ ಸಮಾಚಾರ್ ಅನ್ನು ಹೊಂದಿರುವ ಲೋಕ ಪ್ರಕಾಶನ್ ಲಿಮಿಟೆಡ್‌ನ ನಿರ್ದೇಶಕರಲ್ಲಿ ಒಬ್ಬರು. ಗುಜರಾತ್ ಸಮಾಚಾರ್ ಗುಜರಾತಿನ ಅತಿದೊಡ್ಡ ಮತ್ತು ಪ್ರಭಾವಿ ಗುಜರಾತಿ ದಿನಪತ್ರಿಕೆಯಾಗಿದ್ದು, ತನ್ನ ಸ್ವತಂತ್ರ ಸಂಪಾದಕೀಯ ನಿಲುವಿಗೆ ಹೆಸರುವಾಸಿಯಾಗಿದೆ.  ಪಹಲ್ಗಾಮ್ ದಾಳಿಯಲ್ಲಿ

ಅವರ ಹಿರಿಯ ಸಹೋದರ ಶ್ರೇಯಂಶ್ ಶಾ ಅವರು ದಿನಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾಗಿದ್ದಾರೆ. ಶ್ರೇಯಂಶ್ ಶಾ ನಡೆಸುತ್ತಿರುವ ಗುಜರಾತಿ ಸುದ್ದಿ ವಾಹಿನಿ ಜಿಎಸ್‌ಟಿವಿಯ ಡಿಜಿಟಲ್ ಸೇವೆಗಳ ಮುಖ್ಯಸ್ಥ ತುಷಾರ್ ದೇವ್, ಶುಕ್ರವಾರ ಮುಂಜಾನೆ ಬಾಹುಬಲಿ ಶಾ ಅವರನ್ನು ಇಡಿ ಬಂಧಿಸಿದೆ ಎಂದು ಹೇಳಿದ್ದಾರೆ.

ಫೇಸ್‌ಬುಕ್ ಪೋಸ್ಟ್‌ನಲ್ಲಿ ಮಾಹಿತಿ ನೀಡಿರುವ ದೇವ್ ಅವರು, ಬಾಹುಬಲಿ ಶಾ ಅವರನ್ನು ಮೊದಲು ವಿಎಸ್ ಆಸ್ಪತ್ರೆಗೆ ಇಡಿ ಕರೆದೊಯ್ಯಿತು. ಮತ್ತು ನಂತರ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ನಂತರ ನಗರದ ಜೈಡಸ್ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಅವರು ಹೇಳಿದ್ದಾರೆ.

ತನ್ನ ಕ್ರಮದ ಹಿಂದಿನ ಕಾರಣಗಳ ಬಗ್ಗೆ ಇಡಿ ಯಾವುದೇ ಹೇಳಿಕೆಯನ್ನು ನೀಡಿಲ್ಲ ಎಂದು ವರದಿಗಳು ಉಲ್ಲೇಖಿಸಿವೆ. ಶುಕ್ರವಾರ ಮುಂಜಾನೆ ಇಡಿ ಬಾಹುಬಲಿ ಶಾ ಅವರನ್ನು ಬಂಧಿಸಿದೆ ಮತ್ತು ಅವರು ಆಸ್ಪತ್ರೆಯಲ್ಲಿದ್ದಾರೆ ಎಂದು ಗುಜರಾತ್ ಸಮಾಚಾರ್ ಉದ್ಯೋಗಿಯೊಬ್ಬರು ಹೇಳಿದ್ದಾರೆ.

ಆದಾಯ ತೆರಿಗೆ ಇಲಾಖೆಯು ಅಹಮದಾಬಾದ್‌ನಲ್ಲಿರುವ GSTV ಆವರಣವನ್ನು ಸುಮಾರು 36 ಗಂಟೆಗಳ ಕಾಲ ಶೋಧಿಸಿದೆ. ಐಟಿ ಅಧಿಕಾರಿಗಳು ಹೋದ ಕೂಡಲೇ ಗುರುವಾರ ಸಂಜೆ ಇಡಿ ಆವರಣದ ಮೇಲೆ ದಾಳಿ ನಡೆಸಿತು ಎಂದು ದೇವ್ ಮತ್ತೊಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್‌ನ ರಾಹುಲ್ ಗಾಂಧಿ, ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಮತ್ತು ಇತರ ವಿರೋಧ ಪಕ್ಷದ ನಾಯಕರು ಇದನ್ನು ಸರ್ಕಾರದಿಂದ ಪತ್ರಿಕಾ ಸ್ವಾತಂತ್ರ್ಯವನ್ನು ದಮನಿಸುವ ಪ್ರಯತ್ನವೆಂದು ಖಂಡಿಸಿದ್ದಾರೆ. ಗುಜರಾತ್ ಸಮಾಚಾರ್‌ನ ಟೀಕಾತ್ಮಕ ವರದಿಗಳಿಗೆ ಸರ್ಕಾರದಿಂದ ಸೇಡು ತೀರಿಸಿಕೊಳ್ಳುವ ಕ್ರಮವೆಂದು ಅವರು ಆರೋಪಿಸಿದ್ದಾರೆ.

ಗುಜರಾತ್ ಶಾಸಕ ಮತ್ತು ಕಾಂಗ್ರೆಸ್ ರಾಜ್ಯ ಕಾರ್ಯಾಧ್ಯಕ್ಷ ಜಿಗ್ನೇಶ್ ಮೇವಾನಿ ಅವರು ಇಡಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಳೆದ 25 ವರ್ಷಗಳಿಂದ ಗುಜರಾತ್ ಸಮಾಚಾರ್ ಪತ್ರಿಕೆ ಕೇಂದ್ರ ಸರ್ಕಾರವನ್ನು ಟೀಕಿಸುವ ವರದಿಗಳನ್ನು ಪ್ರಕಟಿಸುತ್ತಿರುವುದರಿಂದ ಗುಜರಾತ್ ಸಮಾಚಾರ್ ಮತ್ತು ಅದರ ಮಾಲೀಕರನ್ನು ಗುರಿಯಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಟೀಕಾತ್ಮಕ ಲೇಖನಗಳನ್ನು ಪ್ರಕಟಿಸುವ ಗುಜರಾತ್ ಸಮಾಚಾರ್, ವಿಶೇಷವಾಗಿ ಇತ್ತೀಚೆಗೆ ಭಾರತ-ಪಾಕಿಸ್ತಾನ ಒಡಂಬಡಿಕೆ, ಪೆಹಲ್ಗಾಮ್ ಮತ್ತು ಪುಲ್ವಾಮಾ ದಾಳಿಯಂತಹ ಘಟನೆಗಳ ಸಂದರ್ಭದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಿ ಬರೆದಿತ್ತು.

ಅದರಲ್ಲೂ ಪಹಲ್ಗಾಮ್ ಭಯೋತ್ಪಾದಕ ದಾಳಿಯ (ಏಪ್ರಿಲ್ 22, 2025) ಕುರಿತಾದ ವರದಿಗಳು ಸರ್ಕಾರದ ಭದ್ರತಾ ವೈಫಲ್ಯಗಳನ್ನು ತೀವ್ರವಾಗಿ ಟೀಕಿಸುವ ನಿಲುವನ್ನು ಪತ್ರಿಕೆ ತೆಗೆದುಕೊಂಡಿತ್ತು. ಪತ್ರಿಕೆಯು ಕೇಂದ್ರ ಸರ್ಕಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಆಡಳಿತವನ್ನು ಭಯೋತ್ಪಾದಕ ದಾಳಿಗಳನ್ನು ತಡೆಯುವಲ್ಲಿ ವಿಫಲವಾದದ್ದಕ್ಕಾಗಿ ಹೊಣೆಹೊರುವಂತೆ ಕೇಳಿತ್ತು. ಅಲ್ಲದೆ, ಕೇಂದ್ರ ಸರ್ಕಾರದ ಭಯೋತ್ಪಾದನೆ-ವಿರೋಧಿ ಕಾರ್ಯತಂತ್ರಗಳು ಮತ್ತು ಗುಪ್ತಚರ ವೈಫಲ್ಯಗಳನ್ನು ಪ್ರಶ್ನಿಸಿತ್ತು. ಈ ಘಟನೆಯನ್ನು 2019ರ ಪುಲ್ವಾಮಾ ದಾಳಿಯೊಂದಿಗೆ ಹೋಲಿಕೆ ಮಾಡಿ, ಭದ್ರತಾ ವ್ಯವಸ್ಥೆಯಲ್ಲಿನ ನಿರಂತರ ಕೊರತೆಗಳನ್ನು ಎತ್ತಿ ತೋರಿಸಿತ್ತು.

2019ರಲ್ಲಿ, ಗುಜರಾತ್ ಸಮಾಚಾರ್‌ನ ಬ್ಯಾನರ್‌ ಹೆಡ್‌ಲೈನ್‌ “56 ನಿ ಛಾತಿನಿ ಕಾಯರ್ತಾ: ಆತಂಕಿಯೋ ಬೆಫಾಮ್, 44 ಜವಾನ್ ಶಹೀದ್” (56 ಇಂಚಿನ ಎದೆಯ ಕಾಯರತೆ: ಭಯೋತ್ಪಾದಕರಿಗೆ ಮುಕ್ತ ಕೈ, 44 ಯೋಧರು ಹುತಾತ್ಮರಾದರು) ಎಂಬ ಶೀರ್ಷಿಕೆಯು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಟೀಕಿಸಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಪಹಲ್ಗಾಮ್ ದಾಳಿಯಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...