Homeಮುಖಪುಟಪಹಲ್ಗಾಮ್ ದಾಳಿಯಲ್ಲಿ ಭದ್ರತಾ ವೈಪಲ್ಯ ಎತ್ತಿತೋರಿಸಿದ್ದ 'ಗುಜರಾತ್ ಸಮಾಚಾರ್' ಪತ್ರಿಕೆಯ ಮಾಲೀಕ ಬಾಹುಬಲಿ ಶಾ ಇಡಿ...

ಪಹಲ್ಗಾಮ್ ದಾಳಿಯಲ್ಲಿ ಭದ್ರತಾ ವೈಪಲ್ಯ ಎತ್ತಿತೋರಿಸಿದ್ದ ‘ಗುಜರಾತ್ ಸಮಾಚಾರ್’ ಪತ್ರಿಕೆಯ ಮಾಲೀಕ ಬಾಹುಬಲಿ ಶಾ ಇಡಿ ವಶಕ್ಕೆ

- Advertisement -
- Advertisement -

ಪ್ರಮುಖ ಗುಜರಾತಿ ಪತ್ರಿಕೆ, ಕೇಂದ್ರ ಸರ್ಕಾರದ ವಿರುದ್ಧ ಟೀಕಾತ್ಮಕ ಲೇಖನಗಳನ್ನು ಪ್ರಕಟಿಸುವ ‘ಗುಜರಾತ್ ಸಮಾಚಾರ್’ನ ಮಾಲೀಕರಲ್ಲಿ ಒಬ್ಬರಾದ ಬಾಹುಬಲಿ ಶಾ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ. ಬಾಹುಬಲಿ ಶಾ ಅವರು ಗುಜರಾತ್ ಸಮಾಚಾರ್ ಅನ್ನು ಹೊಂದಿರುವ ಲೋಕ ಪ್ರಕಾಶನ್ ಲಿಮಿಟೆಡ್‌ನ ನಿರ್ದೇಶಕರಲ್ಲಿ ಒಬ್ಬರು. ಗುಜರಾತ್ ಸಮಾಚಾರ್ ಗುಜರಾತಿನ ಅತಿದೊಡ್ಡ ಮತ್ತು ಪ್ರಭಾವಿ ಗುಜರಾತಿ ದಿನಪತ್ರಿಕೆಯಾಗಿದ್ದು, ತನ್ನ ಸ್ವತಂತ್ರ ಸಂಪಾದಕೀಯ ನಿಲುವಿಗೆ ಹೆಸರುವಾಸಿಯಾಗಿದೆ.  ಪಹಲ್ಗಾಮ್ ದಾಳಿಯಲ್ಲಿ

ಅವರ ಹಿರಿಯ ಸಹೋದರ ಶ್ರೇಯಂಶ್ ಶಾ ಅವರು ದಿನಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾಗಿದ್ದಾರೆ. ಶ್ರೇಯಂಶ್ ಶಾ ನಡೆಸುತ್ತಿರುವ ಗುಜರಾತಿ ಸುದ್ದಿ ವಾಹಿನಿ ಜಿಎಸ್‌ಟಿವಿಯ ಡಿಜಿಟಲ್ ಸೇವೆಗಳ ಮುಖ್ಯಸ್ಥ ತುಷಾರ್ ದೇವ್, ಶುಕ್ರವಾರ ಮುಂಜಾನೆ ಬಾಹುಬಲಿ ಶಾ ಅವರನ್ನು ಇಡಿ ಬಂಧಿಸಿದೆ ಎಂದು ಹೇಳಿದ್ದಾರೆ.

ಫೇಸ್‌ಬುಕ್ ಪೋಸ್ಟ್‌ನಲ್ಲಿ ಮಾಹಿತಿ ನೀಡಿರುವ ದೇವ್ ಅವರು, ಬಾಹುಬಲಿ ಶಾ ಅವರನ್ನು ಮೊದಲು ವಿಎಸ್ ಆಸ್ಪತ್ರೆಗೆ ಇಡಿ ಕರೆದೊಯ್ಯಿತು. ಮತ್ತು ನಂತರ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ನಂತರ ನಗರದ ಜೈಡಸ್ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಅವರು ಹೇಳಿದ್ದಾರೆ.

ತನ್ನ ಕ್ರಮದ ಹಿಂದಿನ ಕಾರಣಗಳ ಬಗ್ಗೆ ಇಡಿ ಯಾವುದೇ ಹೇಳಿಕೆಯನ್ನು ನೀಡಿಲ್ಲ ಎಂದು ವರದಿಗಳು ಉಲ್ಲೇಖಿಸಿವೆ. ಶುಕ್ರವಾರ ಮುಂಜಾನೆ ಇಡಿ ಬಾಹುಬಲಿ ಶಾ ಅವರನ್ನು ಬಂಧಿಸಿದೆ ಮತ್ತು ಅವರು ಆಸ್ಪತ್ರೆಯಲ್ಲಿದ್ದಾರೆ ಎಂದು ಗುಜರಾತ್ ಸಮಾಚಾರ್ ಉದ್ಯೋಗಿಯೊಬ್ಬರು ಹೇಳಿದ್ದಾರೆ.

ಆದಾಯ ತೆರಿಗೆ ಇಲಾಖೆಯು ಅಹಮದಾಬಾದ್‌ನಲ್ಲಿರುವ GSTV ಆವರಣವನ್ನು ಸುಮಾರು 36 ಗಂಟೆಗಳ ಕಾಲ ಶೋಧಿಸಿದೆ. ಐಟಿ ಅಧಿಕಾರಿಗಳು ಹೋದ ಕೂಡಲೇ ಗುರುವಾರ ಸಂಜೆ ಇಡಿ ಆವರಣದ ಮೇಲೆ ದಾಳಿ ನಡೆಸಿತು ಎಂದು ದೇವ್ ಮತ್ತೊಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್‌ನ ರಾಹುಲ್ ಗಾಂಧಿ, ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಮತ್ತು ಇತರ ವಿರೋಧ ಪಕ್ಷದ ನಾಯಕರು ಇದನ್ನು ಸರ್ಕಾರದಿಂದ ಪತ್ರಿಕಾ ಸ್ವಾತಂತ್ರ್ಯವನ್ನು ದಮನಿಸುವ ಪ್ರಯತ್ನವೆಂದು ಖಂಡಿಸಿದ್ದಾರೆ. ಗುಜರಾತ್ ಸಮಾಚಾರ್‌ನ ಟೀಕಾತ್ಮಕ ವರದಿಗಳಿಗೆ ಸರ್ಕಾರದಿಂದ ಸೇಡು ತೀರಿಸಿಕೊಳ್ಳುವ ಕ್ರಮವೆಂದು ಅವರು ಆರೋಪಿಸಿದ್ದಾರೆ.

ಗುಜರಾತ್ ಶಾಸಕ ಮತ್ತು ಕಾಂಗ್ರೆಸ್ ರಾಜ್ಯ ಕಾರ್ಯಾಧ್ಯಕ್ಷ ಜಿಗ್ನೇಶ್ ಮೇವಾನಿ ಅವರು ಇಡಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಳೆದ 25 ವರ್ಷಗಳಿಂದ ಗುಜರಾತ್ ಸಮಾಚಾರ್ ಪತ್ರಿಕೆ ಕೇಂದ್ರ ಸರ್ಕಾರವನ್ನು ಟೀಕಿಸುವ ವರದಿಗಳನ್ನು ಪ್ರಕಟಿಸುತ್ತಿರುವುದರಿಂದ ಗುಜರಾತ್ ಸಮಾಚಾರ್ ಮತ್ತು ಅದರ ಮಾಲೀಕರನ್ನು ಗುರಿಯಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಟೀಕಾತ್ಮಕ ಲೇಖನಗಳನ್ನು ಪ್ರಕಟಿಸುವ ಗುಜರಾತ್ ಸಮಾಚಾರ್, ವಿಶೇಷವಾಗಿ ಇತ್ತೀಚೆಗೆ ಭಾರತ-ಪಾಕಿಸ್ತಾನ ಒಡಂಬಡಿಕೆ, ಪೆಹಲ್ಗಾಮ್ ಮತ್ತು ಪುಲ್ವಾಮಾ ದಾಳಿಯಂತಹ ಘಟನೆಗಳ ಸಂದರ್ಭದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಿ ಬರೆದಿತ್ತು.

ಅದರಲ್ಲೂ ಪಹಲ್ಗಾಮ್ ಭಯೋತ್ಪಾದಕ ದಾಳಿಯ (ಏಪ್ರಿಲ್ 22, 2025) ಕುರಿತಾದ ವರದಿಗಳು ಸರ್ಕಾರದ ಭದ್ರತಾ ವೈಫಲ್ಯಗಳನ್ನು ತೀವ್ರವಾಗಿ ಟೀಕಿಸುವ ನಿಲುವನ್ನು ಪತ್ರಿಕೆ ತೆಗೆದುಕೊಂಡಿತ್ತು. ಪತ್ರಿಕೆಯು ಕೇಂದ್ರ ಸರ್ಕಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಆಡಳಿತವನ್ನು ಭಯೋತ್ಪಾದಕ ದಾಳಿಗಳನ್ನು ತಡೆಯುವಲ್ಲಿ ವಿಫಲವಾದದ್ದಕ್ಕಾಗಿ ಹೊಣೆಹೊರುವಂತೆ ಕೇಳಿತ್ತು. ಅಲ್ಲದೆ, ಕೇಂದ್ರ ಸರ್ಕಾರದ ಭಯೋತ್ಪಾದನೆ-ವಿರೋಧಿ ಕಾರ್ಯತಂತ್ರಗಳು ಮತ್ತು ಗುಪ್ತಚರ ವೈಫಲ್ಯಗಳನ್ನು ಪ್ರಶ್ನಿಸಿತ್ತು. ಈ ಘಟನೆಯನ್ನು 2019ರ ಪುಲ್ವಾಮಾ ದಾಳಿಯೊಂದಿಗೆ ಹೋಲಿಕೆ ಮಾಡಿ, ಭದ್ರತಾ ವ್ಯವಸ್ಥೆಯಲ್ಲಿನ ನಿರಂತರ ಕೊರತೆಗಳನ್ನು ಎತ್ತಿ ತೋರಿಸಿತ್ತು.

2019ರಲ್ಲಿ, ಗುಜರಾತ್ ಸಮಾಚಾರ್‌ನ ಬ್ಯಾನರ್‌ ಹೆಡ್‌ಲೈನ್‌ “56 ನಿ ಛಾತಿನಿ ಕಾಯರ್ತಾ: ಆತಂಕಿಯೋ ಬೆಫಾಮ್, 44 ಜವಾನ್ ಶಹೀದ್” (56 ಇಂಚಿನ ಎದೆಯ ಕಾಯರತೆ: ಭಯೋತ್ಪಾದಕರಿಗೆ ಮುಕ್ತ ಕೈ, 44 ಯೋಧರು ಹುತಾತ್ಮರಾದರು) ಎಂಬ ಶೀರ್ಷಿಕೆಯು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಟೀಕಿಸಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಪಹಲ್ಗಾಮ್ ದಾಳಿಯಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...