Homeಮುಖಪುಟಪತ್ರಿಕಾ ನೀತಿ ಧಿಕ್ಕರಿಸಿ ಮೃತದೇಹದ ಚಿತ್ರ ಪ್ರಕಟಣೆ ಸಮರ್ಥಿಸಿಕೊಂಡ ’ಗುಜರಾತ್ ಸಮಾಚಾರ್‌’

ಪತ್ರಿಕಾ ನೀತಿ ಧಿಕ್ಕರಿಸಿ ಮೃತದೇಹದ ಚಿತ್ರ ಪ್ರಕಟಣೆ ಸಮರ್ಥಿಸಿಕೊಂಡ ’ಗುಜರಾತ್ ಸಮಾಚಾರ್‌’

- Advertisement -
- Advertisement -

ಭಾನುವಾರ ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮೃತದೇಹದ ಚಿತ್ರವನ್ನು”ಗುಜರಾತ್ ಸಮಾಚಾರ್’‌ ಪತ್ರಿಕೆಯು ತನ್ನ ಮುಖಪುಟದಲ್ಲಿ ಹಾಕಿದ್ದಲ್ಲದೇ ಆ ಕ್ರಮವನ್ನು ಸಮರ್ಥಿಸಿಕೊಂಡಿದೆ.

ದಿನಪತ್ರಿಕೆಯು ತನ್ನ ಮೊದಲ ಪುಟದಲ್ಲಿ ಸುಶಾಂತ್ ಸಿಂಗ್ ಅವರ ಮೃತ ದೇಹ ಹಾಸಿಗೆಯ ಮೇಲೆ ಮಲಗಿರುವ ಗಾಬರಿಗೊಳಿಸುವಂತಹ ಚಿತ್ರವನ್ನು ಪ್ರಕಟಿಸಿ “ಸುಶಾಂತ್ ಖಿನ್ನತೆಯಿಂದ ಬಳಲುತ್ತಿದ್ದು, ಕಳೆದ ಆರು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂಬ ಉಪಶೀರ್ಷಿಕೆಯೊಂದಿಗೆ ವರದಿಯೊಂದನ್ನು ಅದು ಪ್ರಕಟಿಸಿದೆ.

ನಟನ ದೇಹದ ಗಾಬರಿಗೊಳಿಸುವಂತಹ ಚಿತ್ರಗಳನ್ನು ಪ್ರಸಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಮಹಾರಾಷ್ಟ್ರ ಪೊಲೀಸರು ಎಚ್ಚರಿಕೆ ನೀಡಿದ್ದರು. ಅಲ್ಲದೆ ಅತಂಹ ಚಿತ್ರಗಳನ್ನು ಪ್ರಕಟಿಸಬಾರದು ಎಂದು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಮಾರ್ಗಸೂಚಿಗಳನ್ನು ಉಲ್ಲೇಖಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ’ಗುಜರಾತ್ ಸಮಾಚಾರ್‌’ನ ವ್ಯವಸ್ಥಾಪಕ ಸಂಪಾದಕ ಶ್ರೇಯಾನ್ಶ್ ಷಾ, “ಇಂತವುಗಳಲ್ಲಿ ಅಭಿಪ್ರಾಯದ ವ್ಯತ್ಯಾಸವಿದೆ ಆದರೆ ನಾವು ಸರಿಯಾದ ದಾರಿಯಲ್ಲಿದ್ದೇವೆ. ಕೆಲವು ಓದುಗರು ಅದು ಸರಿ ಎಂದು ಭಾವಿಸಿದರೆ, ಇತರರು ಅದು ಅಗತ್ಯವಿಲ್ಲ ಎಂದು ಭಾವಿಸುತ್ತಾರೆ. ಈ ವಿಷಯದ ಬಗ್ಗೆ ಮತ್ತಷ್ಟು ಚರ್ಚಿಸಲು ಬಯಸುವುದಿಲ್ಲ. ನಾವು ಅಂತಹ ಚಿತ್ರಗಳನ್ನು ಪ್ರಕಟಿಸಬೇಕೇ ಅಥವಾ ಬೇಡವೇ ಎಂದು ಸಂಪಾದಕೀಯ ತಂಡವು ನಿರ್ಧರಿಸುತ್ತದೆ” ಎಂದು ಹೇಳಿದ್ದಾರೆ.

ಮುಂಬೈಯ ವಕೀಲರಾದ ರೋಹನ್ ನಹರ್ ಅವರು “ಈ ಎಲ್ಲಾ ಫೋಟೋಗಳನ್ನು ಪೊಲೀಸರು ಹೊರಗಡೆಗೆ ಸೋರಿಕೆ ಮಾಡಿದ್ದಾರೆ. ಅವರ ವಿರುದ್ದ ವಿಚಾರಣೆ ಆರಂಭಿಸಬೇಕು. ಇಂತಹಾ ಚಿತ್ರಗಳನ್ನು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಡುವುದು ನಿಜಕ್ಕೂ ಭಯಾನಕವಾಗಿದೆ, ಅಲ್ಲದೆ ತನಿಖೆಗೆ ಕೂಡಾ ಅಡ್ಡಿಯಾಗುತ್ತದೆ. ಭಾರತದಲ್ಲಿ ಅನೇಕ ಆತ್ಮಹತ್ಯೆ ನಡೆಯುತ್ತದೆ, ಆದರೆ ಸಾರ್ವಜನಿಕ ವ್ಯಕ್ತಿಗಳ ಪ್ರಕರಣದಲ್ಲಿ ಇಂತಹ ತಪ್ಪುಗಳು ನಡೆಯುತ್ತದೆ. ಇದೊಂದು ಪ್ರಮುಖ ಸಮಸ್ಯೆಯಾಗಿದೆ” ಎಂದು ಹೇಳಿದ್ದಾರೆ.


ಓದಿ: ಆತ್ಮಹತ್ಯೆಯೊಂದರ ಅನಾಥ ಕಥನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...