Homeಮುಖಪುಟಗುಜರಾತ್‌ | ಸಂಕ್ರಾಂತಿಯ ಆಚರಣೆಯ ವೇಳೆ ಗಾಳಿಪಟದ ದಾರಕ್ಕೆ ಸಿಲುಕಿ 6 ಮಂದಿ ಸಾವು, ನೂರಾರು...

ಗುಜರಾತ್‌ | ಸಂಕ್ರಾಂತಿಯ ಆಚರಣೆಯ ವೇಳೆ ಗಾಳಿಪಟದ ದಾರಕ್ಕೆ ಸಿಲುಕಿ 6 ಮಂದಿ ಸಾವು, ನೂರಾರು ಮಂದಿಗೆ ಗಾಯ

- Advertisement -
- Advertisement -

ಗುಜರಾತ್‌ನಲ್ಲಿ ಜನವರಿ 14 ರಂದು ಸಂಕ್ರಾಂತಿ ಆಚರಿಸುವ ವೇಳೆ ದುರಂತ ಸಂಭವಿಸಿದ್ದು, ಆರು ಜನರು ಗಾಳಿಪಟ ದಾರಕ್ಕೆ ಬಲಿಯಾಗಿದ್ದಾರೆ. ಹರಿತವಾದ, ಗಾಜಿನಿಂದ ಲೇಪಿತವಾದ ದಾರಗಳಿಂದ ತೀವ್ರ ಗಾಯಗಳಾಗಿದ್ದು, ಗಂಟಲು ಕತ್ತರಿಸಲ್ಪಟ್ಟ ಅನೇಕ ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಗುಜರಾತ್‌

ಹಬ್ಬದ ದಿನದಂದು, ರಾಜ್ಯದ ತುರ್ತು ಸೇವೆಗಳು ದುರ್ಬಲಗೊಂಡಿದ್ದವು ಎಂದು TNIE ವರದಿ ಮಾಡಿದೆ. ರಾಜ್ಯದಾದ್ಯಂತ ವಿವಿಧ ನಗರಗಳಿಂದ ಬಂದ ತುರ್ತು ಕರೆಗಳಿಗೆ ಪ್ರತಿಕ್ರಿಯೆಯಾಗಿ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿತ್ತು ಎಂದು ವರದಿಯಾಗಿದೆ. ಜನವರಿ 14 ರಂದು ರಾತ್ರಿ 9 ಗಂಟೆಯ ಹೊತ್ತಿಗೆ, 108 ತುರ್ತು ಸಹಾಯವಾಣಿಗೆ 4,256 ಕರೆಗಳು ಬಂದಿದ್ದವು ಎಂದು ವರದಿ ಹೇಳಿದ್ದು, ಇದು ಹಬ್ಬದ ಸಂಭ್ರಮದ ನಡುವೆ ಬಿಕ್ಕಟ್ಟಿನ ಪ್ರಮಾಣವನ್ನು ಎತ್ತಿ ತೋರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜ್‌ಕೋಟ್‌ನಲ್ಲಿ, ಗಾಳಿಪಟ ದಾರವು ಗಂಟಲಿಗೆ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿದ್ದು, ಅದೇ ರೀತಿ, ಸುರೇಂದ್ರನಗರದ ಓಡು ಗ್ರಾಮದಲ್ಲಿ, ಈಶ್ವರಭಾಯಿ ಠಾಕೋರ್ ಎಂಬವರು ಕೂಡ ಗಾಳಿಪಟ ದಾರದ ಗಾಯದಿಂದ ಸಾವನ್ನಪ್ಪಿದ್ದಾರೆ. ಮತ್ತೊಂದು ಘಟನೆಯಲ್ಲಿ, ಹಲೋಲ್‌ನ ರಹತ್ಲಾವ್ ಗ್ರಾಮದ 5 ವರ್ಷದ ಕುನಾಲ್ ತನ್ನ ತಂದೆಯೊಂದಿಗೆ ಪ್ರಯಾಣ ಮಾಡುತ್ತಿದ್ದಾಗ ಗಾಳಿಪಟದ ದಾರವು ಗಂಟಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಅವರನ್ನು ಉಪ-ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದರೂ, ಚಿಕಿತ್ಸೆ ಆರಂಭವಾದ ಸ್ವಲ್ಪ ಸಮಯದ ನಂತರ ಕುನಾಲ್ ಸಾವನ್ನಪ್ಪಿದ್ದಾರೆ.

ಕಾಡಿಯ ಕಸ್ಬಾ ಪ್ರದೇಶದಲ್ಲಿ, ವಿದ್ಯುತ್ ತಂತಿಯಲ್ಲಿ ಸಿಲುಕಿಕೊಂಡಿದ್ದ ಗಾಳಿಪಟ ದಾರವನ್ನು ತೆಗೆಯುವ ಸಂದರ್ಭ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾಗಿದ್ದು, ಈ ವೇಳೆ ಅವರ ಸಹೋದರ ಕೂಡ ಅವರನ್ನು ಉಳಿಸಲು ಪ್ರಯತ್ನಿಸುವಾಗ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ.

ಸಂಕ್ರಾಂತಿ ಆಚರಣೆ ವೇಳೆ ಮೆಹ್ಸಾನಾ ಜಿಲ್ಲೆಯಲ್ಲಿ ಮತ್ತೊಂದು ದುರಂತ ಘಟನೆ ಸಂಭವಿಸಿದ್ದು, ವಡ್ನಗರ ತಾಲೂಕಿನ ವಡ್ಬಾರ್ ಗ್ರಾಮದ 35 ವರ್ಷದ ಮನ್ಸಾಜಿ ರಗುಂಜಿ ಠಾಕೋರ್ ಗಾಳಿಪಟದ ದಾರದಿಂದ ಸಾವನ್ನಪ್ಪಿದ್ದಾರೆ. ಮಧ್ಯಾಹ್ನ ಕೆಲಸ ಮುಗಿಸಿ ಮನ್ಸಾಜಿ ತನ್ನ ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಗಾಳಿಪಟದ ದಾರವೊಂದು ಇದ್ದಕ್ಕಿದ್ದಂತೆ ಅವರ ಕುತ್ತಿಗೆಗೆ ಸಿಲುಕಿದೆ. ತೀವ್ರ ಗಾಯಗಳೊಂದಿಗೆ ಅವರನ್ನು ವಡ್ನಗರ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯಕೀಯ ಪ್ರಯತ್ನಗಳ ಹೊರತಾಗಿಯೂ, ಚಿಕಿತ್ಸೆಯ ಸಮಯದಲ್ಲಿ ಅವರು ಸಾವನ್ನಪ್ಪಿದ್ದಾರೆ.

ಹಬ್ಬದ ಸಂದರ್ಭದಲ್ಲಿ ವಡೋದರಾ ನಗರದಲ್ಲಿ ಆರು ಜನರಿಗೆ ಗಾಳಿಪಟದ ದಾರಗಳಿಂದ ಗಾಯಗಳಾಗಿದ್ದು, ಪ್ರಸ್ತುತ ಐದು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಛಾನಿಯಾದ 35 ವರ್ಷದ ಮಾಧುರಿ ಕೌಶಿಕ್‌ಭಾಯ್ ಪಟೇಲ್ ಸಾವನ್ನಪ್ಪಿದ್ದಾರೆ. ಗುಜರಾತ್‌

ಅದೇ ರೀತಿ ಹಬ್ಬದ ಸಮಯದಲ್ಲಿ ಪ್ರಾಣಿಗಳು, ಪಕ್ಷಿಗಳು ಮತ್ತು ಜನರಿಗೆ ಹೆಚ್ಚಿನ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ. ಸಂಜೆ 6 ಗಂಟೆಯ ಹೊತ್ತಿಗೆ, ಕರುಣಾ ಅನಿಮಲ್ ಆಂಬ್ಯುಲೆನ್ಸ್ 1,402 ತುರ್ತು ಕರೆಗಳನ್ನು ಸ್ವೀಕರಿಸಿದೆ ಎಂದು ವರದಿಯಾಗಿದೆ. ಇದರಲ್ಲಿ ಪ್ರಾಣಿಗಳಿಗೆ 758 ಮತ್ತು ಪಕ್ಷಿಗಳಿಗೆ 644 ಗಾಯಗಳಾಗಿವೆ ಎಂದು ವರದಿಯಾಗಿದೆ.

ಈ ನಡುವೆ ಇಂದೋರ್ ಮತ್ತು ನಾಗ್ಪುರದಾದ್ಯಂತ ಹರಿತವಾದ ಗಾಳಿಪಟ ದಾರಗಳು ಜೀವಗಳನ್ನು ಬಲಿ ಪಡೆದಿವೆ ಮತ್ತು ಅನೇಕರಿಗೆ ಗಾಯಗಳನ್ನುಂಟುಮಾಡಿವೆ. ಇಂದೋರ್‌ನಲ್ಲಿ, 20 ವರ್ಷದ ಕಾಲೇಜು ವಿದ್ಯಾರ್ಥಿ ಹಿಮಾಂಶು ಸೋಲಂಕಿ ಫೂಟಿ ಕೋಥಿ ಪ್ರದೇಶದ ಫ್ಲೈಓವರ್‌ನಲ್ಲಿ ಬೈಕ್‌ನಲ್ಲಿ ಪ್ರಯಾಣಿಸುವ ವೇಳೆ ಗಾಳಿಪಟ ದಾರದಿಂದ ಸಿಲುಕಿ ಸಾವನ್ನಪ್ಪಿದ್ದಾರೆ. ನಿಷೇಧಿತ ‘ಚೈನೀಸ್ ಮಾಂಜಾ’ ಬಳಕೆಯ ಕಾರಣಕ್ಕೆ ಇದು ಸಂಭವಿಸಿದೆ ಎಂದು ಅವರ ಕುಟುಂಬ ಆರೋಪಿಸಿದೆ.

ಈ ನಡುವೆ, ನಾಗ್ಪುರದಲ್ಲಿ, 22 ವರ್ಷದ ಸೋಹೆಲ್ ಖಾನ್ ಸಲೀಂ ಖಾನ್ ಎಂಬ ವ್ಯಕ್ತಿ ಗಾಳಿಪಟ ಹಾರಿಸುವಾಗ ಛಾವಣಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಗಾಳಿಪಟ ದಾರಗಳಿಂದ ಇತರ ಮೂವರು ಗಾಯಗೊಂಡಿದ್ದು, ಇದರಲ್ಲಿ ಒಬ್ಬ ಮಹಿಳೆ ಮುಖ ವಿರೂಪಗೊಂಡಿದ್ದು, ಮತ್ತೊಬ್ಬ ಮಹಿಳೆಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ. ಮತ್ತೊಂದು ಘಟನೆಯಲ್ಲಿ 22 ವರ್ಷದ ವ್ಯಕ್ತಿಯೊಬ್ಬ ತನ್ನ ಬೈಕ್‌ನಲ್ಲಿ ಪ್ರಯಾಣಿಸುವ ವೇಳೆ ಗಾಳಿಪಟ ದಾರಕ್ಕೆ ಸಿಲುಕಿ ಗಾಯಗೊಂಡಿದ್ದಾರೆ. ಎರಡೂ ನಗರಗಳಲ್ಲಿ ತನಿಖೆಗಳು ನಡೆಯುತ್ತಿವೆ.

ಇದನ್ನೂಓದಿ:  ಚುನಾವಣಾ ನಿಯಮಗಳ ತಿದ್ದುಪಡಿ : ಕೇಂದ್ರ ಸರ್ಕಾರ, ಚು.ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಚುನಾವಣಾ ನಿಯಮಗಳ ತಿದ್ದುಪಡಿ : ಕೇಂದ್ರ ಸರ್ಕಾರ, ಚು.ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...