Homeಮುಖಪುಟಗುಜರಾತ್‌ | ಸಂಕ್ರಾಂತಿಯ ಆಚರಣೆಯ ವೇಳೆ ಗಾಳಿಪಟದ ದಾರಕ್ಕೆ ಸಿಲುಕಿ 6 ಮಂದಿ ಸಾವು, ನೂರಾರು...

ಗುಜರಾತ್‌ | ಸಂಕ್ರಾಂತಿಯ ಆಚರಣೆಯ ವೇಳೆ ಗಾಳಿಪಟದ ದಾರಕ್ಕೆ ಸಿಲುಕಿ 6 ಮಂದಿ ಸಾವು, ನೂರಾರು ಮಂದಿಗೆ ಗಾಯ

- Advertisement -
- Advertisement -

ಗುಜರಾತ್‌ನಲ್ಲಿ ಜನವರಿ 14 ರಂದು ಸಂಕ್ರಾಂತಿ ಆಚರಿಸುವ ವೇಳೆ ದುರಂತ ಸಂಭವಿಸಿದ್ದು, ಆರು ಜನರು ಗಾಳಿಪಟ ದಾರಕ್ಕೆ ಬಲಿಯಾಗಿದ್ದಾರೆ. ಹರಿತವಾದ, ಗಾಜಿನಿಂದ ಲೇಪಿತವಾದ ದಾರಗಳಿಂದ ತೀವ್ರ ಗಾಯಗಳಾಗಿದ್ದು, ಗಂಟಲು ಕತ್ತರಿಸಲ್ಪಟ್ಟ ಅನೇಕ ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಗುಜರಾತ್‌

ಹಬ್ಬದ ದಿನದಂದು, ರಾಜ್ಯದ ತುರ್ತು ಸೇವೆಗಳು ದುರ್ಬಲಗೊಂಡಿದ್ದವು ಎಂದು TNIE ವರದಿ ಮಾಡಿದೆ. ರಾಜ್ಯದಾದ್ಯಂತ ವಿವಿಧ ನಗರಗಳಿಂದ ಬಂದ ತುರ್ತು ಕರೆಗಳಿಗೆ ಪ್ರತಿಕ್ರಿಯೆಯಾಗಿ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿತ್ತು ಎಂದು ವರದಿಯಾಗಿದೆ. ಜನವರಿ 14 ರಂದು ರಾತ್ರಿ 9 ಗಂಟೆಯ ಹೊತ್ತಿಗೆ, 108 ತುರ್ತು ಸಹಾಯವಾಣಿಗೆ 4,256 ಕರೆಗಳು ಬಂದಿದ್ದವು ಎಂದು ವರದಿ ಹೇಳಿದ್ದು, ಇದು ಹಬ್ಬದ ಸಂಭ್ರಮದ ನಡುವೆ ಬಿಕ್ಕಟ್ಟಿನ ಪ್ರಮಾಣವನ್ನು ಎತ್ತಿ ತೋರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜ್‌ಕೋಟ್‌ನಲ್ಲಿ, ಗಾಳಿಪಟ ದಾರವು ಗಂಟಲಿಗೆ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿದ್ದು, ಅದೇ ರೀತಿ, ಸುರೇಂದ್ರನಗರದ ಓಡು ಗ್ರಾಮದಲ್ಲಿ, ಈಶ್ವರಭಾಯಿ ಠಾಕೋರ್ ಎಂಬವರು ಕೂಡ ಗಾಳಿಪಟ ದಾರದ ಗಾಯದಿಂದ ಸಾವನ್ನಪ್ಪಿದ್ದಾರೆ. ಮತ್ತೊಂದು ಘಟನೆಯಲ್ಲಿ, ಹಲೋಲ್‌ನ ರಹತ್ಲಾವ್ ಗ್ರಾಮದ 5 ವರ್ಷದ ಕುನಾಲ್ ತನ್ನ ತಂದೆಯೊಂದಿಗೆ ಪ್ರಯಾಣ ಮಾಡುತ್ತಿದ್ದಾಗ ಗಾಳಿಪಟದ ದಾರವು ಗಂಟಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಅವರನ್ನು ಉಪ-ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದರೂ, ಚಿಕಿತ್ಸೆ ಆರಂಭವಾದ ಸ್ವಲ್ಪ ಸಮಯದ ನಂತರ ಕುನಾಲ್ ಸಾವನ್ನಪ್ಪಿದ್ದಾರೆ.

ಕಾಡಿಯ ಕಸ್ಬಾ ಪ್ರದೇಶದಲ್ಲಿ, ವಿದ್ಯುತ್ ತಂತಿಯಲ್ಲಿ ಸಿಲುಕಿಕೊಂಡಿದ್ದ ಗಾಳಿಪಟ ದಾರವನ್ನು ತೆಗೆಯುವ ಸಂದರ್ಭ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾಗಿದ್ದು, ಈ ವೇಳೆ ಅವರ ಸಹೋದರ ಕೂಡ ಅವರನ್ನು ಉಳಿಸಲು ಪ್ರಯತ್ನಿಸುವಾಗ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ.

ಸಂಕ್ರಾಂತಿ ಆಚರಣೆ ವೇಳೆ ಮೆಹ್ಸಾನಾ ಜಿಲ್ಲೆಯಲ್ಲಿ ಮತ್ತೊಂದು ದುರಂತ ಘಟನೆ ಸಂಭವಿಸಿದ್ದು, ವಡ್ನಗರ ತಾಲೂಕಿನ ವಡ್ಬಾರ್ ಗ್ರಾಮದ 35 ವರ್ಷದ ಮನ್ಸಾಜಿ ರಗುಂಜಿ ಠಾಕೋರ್ ಗಾಳಿಪಟದ ದಾರದಿಂದ ಸಾವನ್ನಪ್ಪಿದ್ದಾರೆ. ಮಧ್ಯಾಹ್ನ ಕೆಲಸ ಮುಗಿಸಿ ಮನ್ಸಾಜಿ ತನ್ನ ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಗಾಳಿಪಟದ ದಾರವೊಂದು ಇದ್ದಕ್ಕಿದ್ದಂತೆ ಅವರ ಕುತ್ತಿಗೆಗೆ ಸಿಲುಕಿದೆ. ತೀವ್ರ ಗಾಯಗಳೊಂದಿಗೆ ಅವರನ್ನು ವಡ್ನಗರ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯಕೀಯ ಪ್ರಯತ್ನಗಳ ಹೊರತಾಗಿಯೂ, ಚಿಕಿತ್ಸೆಯ ಸಮಯದಲ್ಲಿ ಅವರು ಸಾವನ್ನಪ್ಪಿದ್ದಾರೆ.

ಹಬ್ಬದ ಸಂದರ್ಭದಲ್ಲಿ ವಡೋದರಾ ನಗರದಲ್ಲಿ ಆರು ಜನರಿಗೆ ಗಾಳಿಪಟದ ದಾರಗಳಿಂದ ಗಾಯಗಳಾಗಿದ್ದು, ಪ್ರಸ್ತುತ ಐದು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಛಾನಿಯಾದ 35 ವರ್ಷದ ಮಾಧುರಿ ಕೌಶಿಕ್‌ಭಾಯ್ ಪಟೇಲ್ ಸಾವನ್ನಪ್ಪಿದ್ದಾರೆ. ಗುಜರಾತ್‌

ಅದೇ ರೀತಿ ಹಬ್ಬದ ಸಮಯದಲ್ಲಿ ಪ್ರಾಣಿಗಳು, ಪಕ್ಷಿಗಳು ಮತ್ತು ಜನರಿಗೆ ಹೆಚ್ಚಿನ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ. ಸಂಜೆ 6 ಗಂಟೆಯ ಹೊತ್ತಿಗೆ, ಕರುಣಾ ಅನಿಮಲ್ ಆಂಬ್ಯುಲೆನ್ಸ್ 1,402 ತುರ್ತು ಕರೆಗಳನ್ನು ಸ್ವೀಕರಿಸಿದೆ ಎಂದು ವರದಿಯಾಗಿದೆ. ಇದರಲ್ಲಿ ಪ್ರಾಣಿಗಳಿಗೆ 758 ಮತ್ತು ಪಕ್ಷಿಗಳಿಗೆ 644 ಗಾಯಗಳಾಗಿವೆ ಎಂದು ವರದಿಯಾಗಿದೆ.

ಈ ನಡುವೆ ಇಂದೋರ್ ಮತ್ತು ನಾಗ್ಪುರದಾದ್ಯಂತ ಹರಿತವಾದ ಗಾಳಿಪಟ ದಾರಗಳು ಜೀವಗಳನ್ನು ಬಲಿ ಪಡೆದಿವೆ ಮತ್ತು ಅನೇಕರಿಗೆ ಗಾಯಗಳನ್ನುಂಟುಮಾಡಿವೆ. ಇಂದೋರ್‌ನಲ್ಲಿ, 20 ವರ್ಷದ ಕಾಲೇಜು ವಿದ್ಯಾರ್ಥಿ ಹಿಮಾಂಶು ಸೋಲಂಕಿ ಫೂಟಿ ಕೋಥಿ ಪ್ರದೇಶದ ಫ್ಲೈಓವರ್‌ನಲ್ಲಿ ಬೈಕ್‌ನಲ್ಲಿ ಪ್ರಯಾಣಿಸುವ ವೇಳೆ ಗಾಳಿಪಟ ದಾರದಿಂದ ಸಿಲುಕಿ ಸಾವನ್ನಪ್ಪಿದ್ದಾರೆ. ನಿಷೇಧಿತ ‘ಚೈನೀಸ್ ಮಾಂಜಾ’ ಬಳಕೆಯ ಕಾರಣಕ್ಕೆ ಇದು ಸಂಭವಿಸಿದೆ ಎಂದು ಅವರ ಕುಟುಂಬ ಆರೋಪಿಸಿದೆ.

ಈ ನಡುವೆ, ನಾಗ್ಪುರದಲ್ಲಿ, 22 ವರ್ಷದ ಸೋಹೆಲ್ ಖಾನ್ ಸಲೀಂ ಖಾನ್ ಎಂಬ ವ್ಯಕ್ತಿ ಗಾಳಿಪಟ ಹಾರಿಸುವಾಗ ಛಾವಣಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಗಾಳಿಪಟ ದಾರಗಳಿಂದ ಇತರ ಮೂವರು ಗಾಯಗೊಂಡಿದ್ದು, ಇದರಲ್ಲಿ ಒಬ್ಬ ಮಹಿಳೆ ಮುಖ ವಿರೂಪಗೊಂಡಿದ್ದು, ಮತ್ತೊಬ್ಬ ಮಹಿಳೆಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ. ಮತ್ತೊಂದು ಘಟನೆಯಲ್ಲಿ 22 ವರ್ಷದ ವ್ಯಕ್ತಿಯೊಬ್ಬ ತನ್ನ ಬೈಕ್‌ನಲ್ಲಿ ಪ್ರಯಾಣಿಸುವ ವೇಳೆ ಗಾಳಿಪಟ ದಾರಕ್ಕೆ ಸಿಲುಕಿ ಗಾಯಗೊಂಡಿದ್ದಾರೆ. ಎರಡೂ ನಗರಗಳಲ್ಲಿ ತನಿಖೆಗಳು ನಡೆಯುತ್ತಿವೆ.

ಇದನ್ನೂಓದಿ:  ಚುನಾವಣಾ ನಿಯಮಗಳ ತಿದ್ದುಪಡಿ : ಕೇಂದ್ರ ಸರ್ಕಾರ, ಚು.ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಚುನಾವಣಾ ನಿಯಮಗಳ ತಿದ್ದುಪಡಿ : ಕೇಂದ್ರ ಸರ್ಕಾರ, ಚು.ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...