Homeಮುಖಪುಟಗುಜರಾತ್‌ | ಸಂಕ್ರಾಂತಿಯ ಆಚರಣೆಯ ವೇಳೆ ಗಾಳಿಪಟದ ದಾರಕ್ಕೆ ಸಿಲುಕಿ 6 ಮಂದಿ ಸಾವು, ನೂರಾರು...

ಗುಜರಾತ್‌ | ಸಂಕ್ರಾಂತಿಯ ಆಚರಣೆಯ ವೇಳೆ ಗಾಳಿಪಟದ ದಾರಕ್ಕೆ ಸಿಲುಕಿ 6 ಮಂದಿ ಸಾವು, ನೂರಾರು ಮಂದಿಗೆ ಗಾಯ

- Advertisement -
- Advertisement -

ಗುಜರಾತ್‌ನಲ್ಲಿ ಜನವರಿ 14 ರಂದು ಸಂಕ್ರಾಂತಿ ಆಚರಿಸುವ ವೇಳೆ ದುರಂತ ಸಂಭವಿಸಿದ್ದು, ಆರು ಜನರು ಗಾಳಿಪಟ ದಾರಕ್ಕೆ ಬಲಿಯಾಗಿದ್ದಾರೆ. ಹರಿತವಾದ, ಗಾಜಿನಿಂದ ಲೇಪಿತವಾದ ದಾರಗಳಿಂದ ತೀವ್ರ ಗಾಯಗಳಾಗಿದ್ದು, ಗಂಟಲು ಕತ್ತರಿಸಲ್ಪಟ್ಟ ಅನೇಕ ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಗುಜರಾತ್‌

ಹಬ್ಬದ ದಿನದಂದು, ರಾಜ್ಯದ ತುರ್ತು ಸೇವೆಗಳು ದುರ್ಬಲಗೊಂಡಿದ್ದವು ಎಂದು TNIE ವರದಿ ಮಾಡಿದೆ. ರಾಜ್ಯದಾದ್ಯಂತ ವಿವಿಧ ನಗರಗಳಿಂದ ಬಂದ ತುರ್ತು ಕರೆಗಳಿಗೆ ಪ್ರತಿಕ್ರಿಯೆಯಾಗಿ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿತ್ತು ಎಂದು ವರದಿಯಾಗಿದೆ. ಜನವರಿ 14 ರಂದು ರಾತ್ರಿ 9 ಗಂಟೆಯ ಹೊತ್ತಿಗೆ, 108 ತುರ್ತು ಸಹಾಯವಾಣಿಗೆ 4,256 ಕರೆಗಳು ಬಂದಿದ್ದವು ಎಂದು ವರದಿ ಹೇಳಿದ್ದು, ಇದು ಹಬ್ಬದ ಸಂಭ್ರಮದ ನಡುವೆ ಬಿಕ್ಕಟ್ಟಿನ ಪ್ರಮಾಣವನ್ನು ಎತ್ತಿ ತೋರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜ್‌ಕೋಟ್‌ನಲ್ಲಿ, ಗಾಳಿಪಟ ದಾರವು ಗಂಟಲಿಗೆ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿದ್ದು, ಅದೇ ರೀತಿ, ಸುರೇಂದ್ರನಗರದ ಓಡು ಗ್ರಾಮದಲ್ಲಿ, ಈಶ್ವರಭಾಯಿ ಠಾಕೋರ್ ಎಂಬವರು ಕೂಡ ಗಾಳಿಪಟ ದಾರದ ಗಾಯದಿಂದ ಸಾವನ್ನಪ್ಪಿದ್ದಾರೆ. ಮತ್ತೊಂದು ಘಟನೆಯಲ್ಲಿ, ಹಲೋಲ್‌ನ ರಹತ್ಲಾವ್ ಗ್ರಾಮದ 5 ವರ್ಷದ ಕುನಾಲ್ ತನ್ನ ತಂದೆಯೊಂದಿಗೆ ಪ್ರಯಾಣ ಮಾಡುತ್ತಿದ್ದಾಗ ಗಾಳಿಪಟದ ದಾರವು ಗಂಟಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಅವರನ್ನು ಉಪ-ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದರೂ, ಚಿಕಿತ್ಸೆ ಆರಂಭವಾದ ಸ್ವಲ್ಪ ಸಮಯದ ನಂತರ ಕುನಾಲ್ ಸಾವನ್ನಪ್ಪಿದ್ದಾರೆ.

ಕಾಡಿಯ ಕಸ್ಬಾ ಪ್ರದೇಶದಲ್ಲಿ, ವಿದ್ಯುತ್ ತಂತಿಯಲ್ಲಿ ಸಿಲುಕಿಕೊಂಡಿದ್ದ ಗಾಳಿಪಟ ದಾರವನ್ನು ತೆಗೆಯುವ ಸಂದರ್ಭ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾಗಿದ್ದು, ಈ ವೇಳೆ ಅವರ ಸಹೋದರ ಕೂಡ ಅವರನ್ನು ಉಳಿಸಲು ಪ್ರಯತ್ನಿಸುವಾಗ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ.

ಸಂಕ್ರಾಂತಿ ಆಚರಣೆ ವೇಳೆ ಮೆಹ್ಸಾನಾ ಜಿಲ್ಲೆಯಲ್ಲಿ ಮತ್ತೊಂದು ದುರಂತ ಘಟನೆ ಸಂಭವಿಸಿದ್ದು, ವಡ್ನಗರ ತಾಲೂಕಿನ ವಡ್ಬಾರ್ ಗ್ರಾಮದ 35 ವರ್ಷದ ಮನ್ಸಾಜಿ ರಗುಂಜಿ ಠಾಕೋರ್ ಗಾಳಿಪಟದ ದಾರದಿಂದ ಸಾವನ್ನಪ್ಪಿದ್ದಾರೆ. ಮಧ್ಯಾಹ್ನ ಕೆಲಸ ಮುಗಿಸಿ ಮನ್ಸಾಜಿ ತನ್ನ ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಗಾಳಿಪಟದ ದಾರವೊಂದು ಇದ್ದಕ್ಕಿದ್ದಂತೆ ಅವರ ಕುತ್ತಿಗೆಗೆ ಸಿಲುಕಿದೆ. ತೀವ್ರ ಗಾಯಗಳೊಂದಿಗೆ ಅವರನ್ನು ವಡ್ನಗರ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯಕೀಯ ಪ್ರಯತ್ನಗಳ ಹೊರತಾಗಿಯೂ, ಚಿಕಿತ್ಸೆಯ ಸಮಯದಲ್ಲಿ ಅವರು ಸಾವನ್ನಪ್ಪಿದ್ದಾರೆ.

ಹಬ್ಬದ ಸಂದರ್ಭದಲ್ಲಿ ವಡೋದರಾ ನಗರದಲ್ಲಿ ಆರು ಜನರಿಗೆ ಗಾಳಿಪಟದ ದಾರಗಳಿಂದ ಗಾಯಗಳಾಗಿದ್ದು, ಪ್ರಸ್ತುತ ಐದು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಛಾನಿಯಾದ 35 ವರ್ಷದ ಮಾಧುರಿ ಕೌಶಿಕ್‌ಭಾಯ್ ಪಟೇಲ್ ಸಾವನ್ನಪ್ಪಿದ್ದಾರೆ. ಗುಜರಾತ್‌

ಅದೇ ರೀತಿ ಹಬ್ಬದ ಸಮಯದಲ್ಲಿ ಪ್ರಾಣಿಗಳು, ಪಕ್ಷಿಗಳು ಮತ್ತು ಜನರಿಗೆ ಹೆಚ್ಚಿನ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ. ಸಂಜೆ 6 ಗಂಟೆಯ ಹೊತ್ತಿಗೆ, ಕರುಣಾ ಅನಿಮಲ್ ಆಂಬ್ಯುಲೆನ್ಸ್ 1,402 ತುರ್ತು ಕರೆಗಳನ್ನು ಸ್ವೀಕರಿಸಿದೆ ಎಂದು ವರದಿಯಾಗಿದೆ. ಇದರಲ್ಲಿ ಪ್ರಾಣಿಗಳಿಗೆ 758 ಮತ್ತು ಪಕ್ಷಿಗಳಿಗೆ 644 ಗಾಯಗಳಾಗಿವೆ ಎಂದು ವರದಿಯಾಗಿದೆ.

ಈ ನಡುವೆ ಇಂದೋರ್ ಮತ್ತು ನಾಗ್ಪುರದಾದ್ಯಂತ ಹರಿತವಾದ ಗಾಳಿಪಟ ದಾರಗಳು ಜೀವಗಳನ್ನು ಬಲಿ ಪಡೆದಿವೆ ಮತ್ತು ಅನೇಕರಿಗೆ ಗಾಯಗಳನ್ನುಂಟುಮಾಡಿವೆ. ಇಂದೋರ್‌ನಲ್ಲಿ, 20 ವರ್ಷದ ಕಾಲೇಜು ವಿದ್ಯಾರ್ಥಿ ಹಿಮಾಂಶು ಸೋಲಂಕಿ ಫೂಟಿ ಕೋಥಿ ಪ್ರದೇಶದ ಫ್ಲೈಓವರ್‌ನಲ್ಲಿ ಬೈಕ್‌ನಲ್ಲಿ ಪ್ರಯಾಣಿಸುವ ವೇಳೆ ಗಾಳಿಪಟ ದಾರದಿಂದ ಸಿಲುಕಿ ಸಾವನ್ನಪ್ಪಿದ್ದಾರೆ. ನಿಷೇಧಿತ ‘ಚೈನೀಸ್ ಮಾಂಜಾ’ ಬಳಕೆಯ ಕಾರಣಕ್ಕೆ ಇದು ಸಂಭವಿಸಿದೆ ಎಂದು ಅವರ ಕುಟುಂಬ ಆರೋಪಿಸಿದೆ.

ಈ ನಡುವೆ, ನಾಗ್ಪುರದಲ್ಲಿ, 22 ವರ್ಷದ ಸೋಹೆಲ್ ಖಾನ್ ಸಲೀಂ ಖಾನ್ ಎಂಬ ವ್ಯಕ್ತಿ ಗಾಳಿಪಟ ಹಾರಿಸುವಾಗ ಛಾವಣಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಗಾಳಿಪಟ ದಾರಗಳಿಂದ ಇತರ ಮೂವರು ಗಾಯಗೊಂಡಿದ್ದು, ಇದರಲ್ಲಿ ಒಬ್ಬ ಮಹಿಳೆ ಮುಖ ವಿರೂಪಗೊಂಡಿದ್ದು, ಮತ್ತೊಬ್ಬ ಮಹಿಳೆಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ. ಮತ್ತೊಂದು ಘಟನೆಯಲ್ಲಿ 22 ವರ್ಷದ ವ್ಯಕ್ತಿಯೊಬ್ಬ ತನ್ನ ಬೈಕ್‌ನಲ್ಲಿ ಪ್ರಯಾಣಿಸುವ ವೇಳೆ ಗಾಳಿಪಟ ದಾರಕ್ಕೆ ಸಿಲುಕಿ ಗಾಯಗೊಂಡಿದ್ದಾರೆ. ಎರಡೂ ನಗರಗಳಲ್ಲಿ ತನಿಖೆಗಳು ನಡೆಯುತ್ತಿವೆ.

ಇದನ್ನೂಓದಿ:  ಚುನಾವಣಾ ನಿಯಮಗಳ ತಿದ್ದುಪಡಿ : ಕೇಂದ್ರ ಸರ್ಕಾರ, ಚು.ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಚುನಾವಣಾ ನಿಯಮಗಳ ತಿದ್ದುಪಡಿ : ಕೇಂದ್ರ ಸರ್ಕಾರ, ಚು.ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...