Homeಮುಖಪುಟಗುಜರಾತ್‌ | ಸಂಕ್ರಾಂತಿಯ ಆಚರಣೆಯ ವೇಳೆ ಗಾಳಿಪಟದ ದಾರಕ್ಕೆ ಸಿಲುಕಿ 6 ಮಂದಿ ಸಾವು, ನೂರಾರು...

ಗುಜರಾತ್‌ | ಸಂಕ್ರಾಂತಿಯ ಆಚರಣೆಯ ವೇಳೆ ಗಾಳಿಪಟದ ದಾರಕ್ಕೆ ಸಿಲುಕಿ 6 ಮಂದಿ ಸಾವು, ನೂರಾರು ಮಂದಿಗೆ ಗಾಯ

- Advertisement -
- Advertisement -

ಗುಜರಾತ್‌ನಲ್ಲಿ ಜನವರಿ 14 ರಂದು ಸಂಕ್ರಾಂತಿ ಆಚರಿಸುವ ವೇಳೆ ದುರಂತ ಸಂಭವಿಸಿದ್ದು, ಆರು ಜನರು ಗಾಳಿಪಟ ದಾರಕ್ಕೆ ಬಲಿಯಾಗಿದ್ದಾರೆ. ಹರಿತವಾದ, ಗಾಜಿನಿಂದ ಲೇಪಿತವಾದ ದಾರಗಳಿಂದ ತೀವ್ರ ಗಾಯಗಳಾಗಿದ್ದು, ಗಂಟಲು ಕತ್ತರಿಸಲ್ಪಟ್ಟ ಅನೇಕ ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಗುಜರಾತ್‌

ಹಬ್ಬದ ದಿನದಂದು, ರಾಜ್ಯದ ತುರ್ತು ಸೇವೆಗಳು ದುರ್ಬಲಗೊಂಡಿದ್ದವು ಎಂದು TNIE ವರದಿ ಮಾಡಿದೆ. ರಾಜ್ಯದಾದ್ಯಂತ ವಿವಿಧ ನಗರಗಳಿಂದ ಬಂದ ತುರ್ತು ಕರೆಗಳಿಗೆ ಪ್ರತಿಕ್ರಿಯೆಯಾಗಿ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿತ್ತು ಎಂದು ವರದಿಯಾಗಿದೆ. ಜನವರಿ 14 ರಂದು ರಾತ್ರಿ 9 ಗಂಟೆಯ ಹೊತ್ತಿಗೆ, 108 ತುರ್ತು ಸಹಾಯವಾಣಿಗೆ 4,256 ಕರೆಗಳು ಬಂದಿದ್ದವು ಎಂದು ವರದಿ ಹೇಳಿದ್ದು, ಇದು ಹಬ್ಬದ ಸಂಭ್ರಮದ ನಡುವೆ ಬಿಕ್ಕಟ್ಟಿನ ಪ್ರಮಾಣವನ್ನು ಎತ್ತಿ ತೋರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜ್‌ಕೋಟ್‌ನಲ್ಲಿ, ಗಾಳಿಪಟ ದಾರವು ಗಂಟಲಿಗೆ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿದ್ದು, ಅದೇ ರೀತಿ, ಸುರೇಂದ್ರನಗರದ ಓಡು ಗ್ರಾಮದಲ್ಲಿ, ಈಶ್ವರಭಾಯಿ ಠಾಕೋರ್ ಎಂಬವರು ಕೂಡ ಗಾಳಿಪಟ ದಾರದ ಗಾಯದಿಂದ ಸಾವನ್ನಪ್ಪಿದ್ದಾರೆ. ಮತ್ತೊಂದು ಘಟನೆಯಲ್ಲಿ, ಹಲೋಲ್‌ನ ರಹತ್ಲಾವ್ ಗ್ರಾಮದ 5 ವರ್ಷದ ಕುನಾಲ್ ತನ್ನ ತಂದೆಯೊಂದಿಗೆ ಪ್ರಯಾಣ ಮಾಡುತ್ತಿದ್ದಾಗ ಗಾಳಿಪಟದ ದಾರವು ಗಂಟಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಅವರನ್ನು ಉಪ-ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದರೂ, ಚಿಕಿತ್ಸೆ ಆರಂಭವಾದ ಸ್ವಲ್ಪ ಸಮಯದ ನಂತರ ಕುನಾಲ್ ಸಾವನ್ನಪ್ಪಿದ್ದಾರೆ.

ಕಾಡಿಯ ಕಸ್ಬಾ ಪ್ರದೇಶದಲ್ಲಿ, ವಿದ್ಯುತ್ ತಂತಿಯಲ್ಲಿ ಸಿಲುಕಿಕೊಂಡಿದ್ದ ಗಾಳಿಪಟ ದಾರವನ್ನು ತೆಗೆಯುವ ಸಂದರ್ಭ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾಗಿದ್ದು, ಈ ವೇಳೆ ಅವರ ಸಹೋದರ ಕೂಡ ಅವರನ್ನು ಉಳಿಸಲು ಪ್ರಯತ್ನಿಸುವಾಗ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ.

ಸಂಕ್ರಾಂತಿ ಆಚರಣೆ ವೇಳೆ ಮೆಹ್ಸಾನಾ ಜಿಲ್ಲೆಯಲ್ಲಿ ಮತ್ತೊಂದು ದುರಂತ ಘಟನೆ ಸಂಭವಿಸಿದ್ದು, ವಡ್ನಗರ ತಾಲೂಕಿನ ವಡ್ಬಾರ್ ಗ್ರಾಮದ 35 ವರ್ಷದ ಮನ್ಸಾಜಿ ರಗುಂಜಿ ಠಾಕೋರ್ ಗಾಳಿಪಟದ ದಾರದಿಂದ ಸಾವನ್ನಪ್ಪಿದ್ದಾರೆ. ಮಧ್ಯಾಹ್ನ ಕೆಲಸ ಮುಗಿಸಿ ಮನ್ಸಾಜಿ ತನ್ನ ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಗಾಳಿಪಟದ ದಾರವೊಂದು ಇದ್ದಕ್ಕಿದ್ದಂತೆ ಅವರ ಕುತ್ತಿಗೆಗೆ ಸಿಲುಕಿದೆ. ತೀವ್ರ ಗಾಯಗಳೊಂದಿಗೆ ಅವರನ್ನು ವಡ್ನಗರ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯಕೀಯ ಪ್ರಯತ್ನಗಳ ಹೊರತಾಗಿಯೂ, ಚಿಕಿತ್ಸೆಯ ಸಮಯದಲ್ಲಿ ಅವರು ಸಾವನ್ನಪ್ಪಿದ್ದಾರೆ.

ಹಬ್ಬದ ಸಂದರ್ಭದಲ್ಲಿ ವಡೋದರಾ ನಗರದಲ್ಲಿ ಆರು ಜನರಿಗೆ ಗಾಳಿಪಟದ ದಾರಗಳಿಂದ ಗಾಯಗಳಾಗಿದ್ದು, ಪ್ರಸ್ತುತ ಐದು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಛಾನಿಯಾದ 35 ವರ್ಷದ ಮಾಧುರಿ ಕೌಶಿಕ್‌ಭಾಯ್ ಪಟೇಲ್ ಸಾವನ್ನಪ್ಪಿದ್ದಾರೆ. ಗುಜರಾತ್‌

ಅದೇ ರೀತಿ ಹಬ್ಬದ ಸಮಯದಲ್ಲಿ ಪ್ರಾಣಿಗಳು, ಪಕ್ಷಿಗಳು ಮತ್ತು ಜನರಿಗೆ ಹೆಚ್ಚಿನ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ. ಸಂಜೆ 6 ಗಂಟೆಯ ಹೊತ್ತಿಗೆ, ಕರುಣಾ ಅನಿಮಲ್ ಆಂಬ್ಯುಲೆನ್ಸ್ 1,402 ತುರ್ತು ಕರೆಗಳನ್ನು ಸ್ವೀಕರಿಸಿದೆ ಎಂದು ವರದಿಯಾಗಿದೆ. ಇದರಲ್ಲಿ ಪ್ರಾಣಿಗಳಿಗೆ 758 ಮತ್ತು ಪಕ್ಷಿಗಳಿಗೆ 644 ಗಾಯಗಳಾಗಿವೆ ಎಂದು ವರದಿಯಾಗಿದೆ.

ಈ ನಡುವೆ ಇಂದೋರ್ ಮತ್ತು ನಾಗ್ಪುರದಾದ್ಯಂತ ಹರಿತವಾದ ಗಾಳಿಪಟ ದಾರಗಳು ಜೀವಗಳನ್ನು ಬಲಿ ಪಡೆದಿವೆ ಮತ್ತು ಅನೇಕರಿಗೆ ಗಾಯಗಳನ್ನುಂಟುಮಾಡಿವೆ. ಇಂದೋರ್‌ನಲ್ಲಿ, 20 ವರ್ಷದ ಕಾಲೇಜು ವಿದ್ಯಾರ್ಥಿ ಹಿಮಾಂಶು ಸೋಲಂಕಿ ಫೂಟಿ ಕೋಥಿ ಪ್ರದೇಶದ ಫ್ಲೈಓವರ್‌ನಲ್ಲಿ ಬೈಕ್‌ನಲ್ಲಿ ಪ್ರಯಾಣಿಸುವ ವೇಳೆ ಗಾಳಿಪಟ ದಾರದಿಂದ ಸಿಲುಕಿ ಸಾವನ್ನಪ್ಪಿದ್ದಾರೆ. ನಿಷೇಧಿತ ‘ಚೈನೀಸ್ ಮಾಂಜಾ’ ಬಳಕೆಯ ಕಾರಣಕ್ಕೆ ಇದು ಸಂಭವಿಸಿದೆ ಎಂದು ಅವರ ಕುಟುಂಬ ಆರೋಪಿಸಿದೆ.

ಈ ನಡುವೆ, ನಾಗ್ಪುರದಲ್ಲಿ, 22 ವರ್ಷದ ಸೋಹೆಲ್ ಖಾನ್ ಸಲೀಂ ಖಾನ್ ಎಂಬ ವ್ಯಕ್ತಿ ಗಾಳಿಪಟ ಹಾರಿಸುವಾಗ ಛಾವಣಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಗಾಳಿಪಟ ದಾರಗಳಿಂದ ಇತರ ಮೂವರು ಗಾಯಗೊಂಡಿದ್ದು, ಇದರಲ್ಲಿ ಒಬ್ಬ ಮಹಿಳೆ ಮುಖ ವಿರೂಪಗೊಂಡಿದ್ದು, ಮತ್ತೊಬ್ಬ ಮಹಿಳೆಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ. ಮತ್ತೊಂದು ಘಟನೆಯಲ್ಲಿ 22 ವರ್ಷದ ವ್ಯಕ್ತಿಯೊಬ್ಬ ತನ್ನ ಬೈಕ್‌ನಲ್ಲಿ ಪ್ರಯಾಣಿಸುವ ವೇಳೆ ಗಾಳಿಪಟ ದಾರಕ್ಕೆ ಸಿಲುಕಿ ಗಾಯಗೊಂಡಿದ್ದಾರೆ. ಎರಡೂ ನಗರಗಳಲ್ಲಿ ತನಿಖೆಗಳು ನಡೆಯುತ್ತಿವೆ.

ಇದನ್ನೂಓದಿ:  ಚುನಾವಣಾ ನಿಯಮಗಳ ತಿದ್ದುಪಡಿ : ಕೇಂದ್ರ ಸರ್ಕಾರ, ಚು.ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಚುನಾವಣಾ ನಿಯಮಗಳ ತಿದ್ದುಪಡಿ : ಕೇಂದ್ರ ಸರ್ಕಾರ, ಚು.ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...

ಮಾದಕವಸ್ತು ತನಿಖೆಗೆ ಸಹಾಯಕವಾಗಿ AI ಆಧಾರಿತ ಅಪ್ಲಿಕೇಶನ್ ಆರಂಭಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್: ಮಾದಕವಸ್ತು ಪ್ರಕರಣಗಳ ತನಿಖೆಯನ್ನು ಸುಲಭವಾಗಿಸಲು ಮತ್ತು ವಿಚಾರಣೆಯ ಸಮಯದಲ್ಲಿ ಅವುಗಳನ್ನು ಬಲಪಡಿಸಲು, ಇದರಿಂದಾಗಿ ಶಿಕ್ಷೆಯ ಪ್ರಮಾಣ ಸುಧಾರಿಸಲು ಗುಜರಾತ್ ಪೊಲೀಸರು ಶುಕ್ರವಾರ ಕೃತಕ ಬುದ್ಧಿಮತ್ತೆ (AI) ಆಧಾರಿತ ಅಪ್ಲಿಕೇಶನ್ "NARIT AI"...

ಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ ಇರಾನ್

ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸುವಾಗ, ಅಮೆರಿಕ-ಇಸ್ರೇಲ್‌ನ ಬಾಂಬ್‌ ದಾಳಿ ನಡೆಸಿ ಹತ್ಯೆಗೈದ ಮಕ್ಕಳ ಫೋಟೋ, ರಕ್ತಸಿಕ್ತ ಬ್ಯಾಗ್ ಮತ್ತು ಶೂಗಳನ್ನು ವಿಮಾನದಲ್ಲಿ ಹೊತ್ತು ತರುವ ಮೂಲಕ ಇರಾನ್‌ ಜಗತ್ತಿನ ಗಮನಸೆಳೆದಿದೆ. ಸಾಮಾಜಿಕ ಜಾಲತಾಣ...

ಮಣಿಪುರ: ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳೊಂದಿಗೆ ಇಬ್ಬರನ್ನು ಬಂಧಿಸಿದ ಭದ್ರತಾ ಪಡೆ

ಇಂಫಾಲ: ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳನ್ನು(ಪಾಪಿ ಸೀಡ್ಸ್) ವಶಪಡಿಸಿಕೊಂಡ ನಂತರ ಭದ್ರತಾ ಪಡೆಗಳು ಅವರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುರಾಚಂದ್‌ಪುರ ಪೊಲೀಸ್ ಠಾಣೆ...