Homeಮುಖಪುಟಗುಜರಾತ್‌ | ಸಂಕ್ರಾಂತಿಯ ಆಚರಣೆಯ ವೇಳೆ ಗಾಳಿಪಟದ ದಾರಕ್ಕೆ ಸಿಲುಕಿ 6 ಮಂದಿ ಸಾವು, ನೂರಾರು...

ಗುಜರಾತ್‌ | ಸಂಕ್ರಾಂತಿಯ ಆಚರಣೆಯ ವೇಳೆ ಗಾಳಿಪಟದ ದಾರಕ್ಕೆ ಸಿಲುಕಿ 6 ಮಂದಿ ಸಾವು, ನೂರಾರು ಮಂದಿಗೆ ಗಾಯ

- Advertisement -
- Advertisement -

ಗುಜರಾತ್‌ನಲ್ಲಿ ಜನವರಿ 14 ರಂದು ಸಂಕ್ರಾಂತಿ ಆಚರಿಸುವ ವೇಳೆ ದುರಂತ ಸಂಭವಿಸಿದ್ದು, ಆರು ಜನರು ಗಾಳಿಪಟ ದಾರಕ್ಕೆ ಬಲಿಯಾಗಿದ್ದಾರೆ. ಹರಿತವಾದ, ಗಾಜಿನಿಂದ ಲೇಪಿತವಾದ ದಾರಗಳಿಂದ ತೀವ್ರ ಗಾಯಗಳಾಗಿದ್ದು, ಗಂಟಲು ಕತ್ತರಿಸಲ್ಪಟ್ಟ ಅನೇಕ ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಗುಜರಾತ್‌

ಹಬ್ಬದ ದಿನದಂದು, ರಾಜ್ಯದ ತುರ್ತು ಸೇವೆಗಳು ದುರ್ಬಲಗೊಂಡಿದ್ದವು ಎಂದು TNIE ವರದಿ ಮಾಡಿದೆ. ರಾಜ್ಯದಾದ್ಯಂತ ವಿವಿಧ ನಗರಗಳಿಂದ ಬಂದ ತುರ್ತು ಕರೆಗಳಿಗೆ ಪ್ರತಿಕ್ರಿಯೆಯಾಗಿ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿತ್ತು ಎಂದು ವರದಿಯಾಗಿದೆ. ಜನವರಿ 14 ರಂದು ರಾತ್ರಿ 9 ಗಂಟೆಯ ಹೊತ್ತಿಗೆ, 108 ತುರ್ತು ಸಹಾಯವಾಣಿಗೆ 4,256 ಕರೆಗಳು ಬಂದಿದ್ದವು ಎಂದು ವರದಿ ಹೇಳಿದ್ದು, ಇದು ಹಬ್ಬದ ಸಂಭ್ರಮದ ನಡುವೆ ಬಿಕ್ಕಟ್ಟಿನ ಪ್ರಮಾಣವನ್ನು ಎತ್ತಿ ತೋರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜ್‌ಕೋಟ್‌ನಲ್ಲಿ, ಗಾಳಿಪಟ ದಾರವು ಗಂಟಲಿಗೆ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿದ್ದು, ಅದೇ ರೀತಿ, ಸುರೇಂದ್ರನಗರದ ಓಡು ಗ್ರಾಮದಲ್ಲಿ, ಈಶ್ವರಭಾಯಿ ಠಾಕೋರ್ ಎಂಬವರು ಕೂಡ ಗಾಳಿಪಟ ದಾರದ ಗಾಯದಿಂದ ಸಾವನ್ನಪ್ಪಿದ್ದಾರೆ. ಮತ್ತೊಂದು ಘಟನೆಯಲ್ಲಿ, ಹಲೋಲ್‌ನ ರಹತ್ಲಾವ್ ಗ್ರಾಮದ 5 ವರ್ಷದ ಕುನಾಲ್ ತನ್ನ ತಂದೆಯೊಂದಿಗೆ ಪ್ರಯಾಣ ಮಾಡುತ್ತಿದ್ದಾಗ ಗಾಳಿಪಟದ ದಾರವು ಗಂಟಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಅವರನ್ನು ಉಪ-ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದರೂ, ಚಿಕಿತ್ಸೆ ಆರಂಭವಾದ ಸ್ವಲ್ಪ ಸಮಯದ ನಂತರ ಕುನಾಲ್ ಸಾವನ್ನಪ್ಪಿದ್ದಾರೆ.

ಕಾಡಿಯ ಕಸ್ಬಾ ಪ್ರದೇಶದಲ್ಲಿ, ವಿದ್ಯುತ್ ತಂತಿಯಲ್ಲಿ ಸಿಲುಕಿಕೊಂಡಿದ್ದ ಗಾಳಿಪಟ ದಾರವನ್ನು ತೆಗೆಯುವ ಸಂದರ್ಭ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾಗಿದ್ದು, ಈ ವೇಳೆ ಅವರ ಸಹೋದರ ಕೂಡ ಅವರನ್ನು ಉಳಿಸಲು ಪ್ರಯತ್ನಿಸುವಾಗ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ.

ಸಂಕ್ರಾಂತಿ ಆಚರಣೆ ವೇಳೆ ಮೆಹ್ಸಾನಾ ಜಿಲ್ಲೆಯಲ್ಲಿ ಮತ್ತೊಂದು ದುರಂತ ಘಟನೆ ಸಂಭವಿಸಿದ್ದು, ವಡ್ನಗರ ತಾಲೂಕಿನ ವಡ್ಬಾರ್ ಗ್ರಾಮದ 35 ವರ್ಷದ ಮನ್ಸಾಜಿ ರಗುಂಜಿ ಠಾಕೋರ್ ಗಾಳಿಪಟದ ದಾರದಿಂದ ಸಾವನ್ನಪ್ಪಿದ್ದಾರೆ. ಮಧ್ಯಾಹ್ನ ಕೆಲಸ ಮುಗಿಸಿ ಮನ್ಸಾಜಿ ತನ್ನ ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಗಾಳಿಪಟದ ದಾರವೊಂದು ಇದ್ದಕ್ಕಿದ್ದಂತೆ ಅವರ ಕುತ್ತಿಗೆಗೆ ಸಿಲುಕಿದೆ. ತೀವ್ರ ಗಾಯಗಳೊಂದಿಗೆ ಅವರನ್ನು ವಡ್ನಗರ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯಕೀಯ ಪ್ರಯತ್ನಗಳ ಹೊರತಾಗಿಯೂ, ಚಿಕಿತ್ಸೆಯ ಸಮಯದಲ್ಲಿ ಅವರು ಸಾವನ್ನಪ್ಪಿದ್ದಾರೆ.

ಹಬ್ಬದ ಸಂದರ್ಭದಲ್ಲಿ ವಡೋದರಾ ನಗರದಲ್ಲಿ ಆರು ಜನರಿಗೆ ಗಾಳಿಪಟದ ದಾರಗಳಿಂದ ಗಾಯಗಳಾಗಿದ್ದು, ಪ್ರಸ್ತುತ ಐದು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಛಾನಿಯಾದ 35 ವರ್ಷದ ಮಾಧುರಿ ಕೌಶಿಕ್‌ಭಾಯ್ ಪಟೇಲ್ ಸಾವನ್ನಪ್ಪಿದ್ದಾರೆ. ಗುಜರಾತ್‌

ಅದೇ ರೀತಿ ಹಬ್ಬದ ಸಮಯದಲ್ಲಿ ಪ್ರಾಣಿಗಳು, ಪಕ್ಷಿಗಳು ಮತ್ತು ಜನರಿಗೆ ಹೆಚ್ಚಿನ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ. ಸಂಜೆ 6 ಗಂಟೆಯ ಹೊತ್ತಿಗೆ, ಕರುಣಾ ಅನಿಮಲ್ ಆಂಬ್ಯುಲೆನ್ಸ್ 1,402 ತುರ್ತು ಕರೆಗಳನ್ನು ಸ್ವೀಕರಿಸಿದೆ ಎಂದು ವರದಿಯಾಗಿದೆ. ಇದರಲ್ಲಿ ಪ್ರಾಣಿಗಳಿಗೆ 758 ಮತ್ತು ಪಕ್ಷಿಗಳಿಗೆ 644 ಗಾಯಗಳಾಗಿವೆ ಎಂದು ವರದಿಯಾಗಿದೆ.

ಈ ನಡುವೆ ಇಂದೋರ್ ಮತ್ತು ನಾಗ್ಪುರದಾದ್ಯಂತ ಹರಿತವಾದ ಗಾಳಿಪಟ ದಾರಗಳು ಜೀವಗಳನ್ನು ಬಲಿ ಪಡೆದಿವೆ ಮತ್ತು ಅನೇಕರಿಗೆ ಗಾಯಗಳನ್ನುಂಟುಮಾಡಿವೆ. ಇಂದೋರ್‌ನಲ್ಲಿ, 20 ವರ್ಷದ ಕಾಲೇಜು ವಿದ್ಯಾರ್ಥಿ ಹಿಮಾಂಶು ಸೋಲಂಕಿ ಫೂಟಿ ಕೋಥಿ ಪ್ರದೇಶದ ಫ್ಲೈಓವರ್‌ನಲ್ಲಿ ಬೈಕ್‌ನಲ್ಲಿ ಪ್ರಯಾಣಿಸುವ ವೇಳೆ ಗಾಳಿಪಟ ದಾರದಿಂದ ಸಿಲುಕಿ ಸಾವನ್ನಪ್ಪಿದ್ದಾರೆ. ನಿಷೇಧಿತ ‘ಚೈನೀಸ್ ಮಾಂಜಾ’ ಬಳಕೆಯ ಕಾರಣಕ್ಕೆ ಇದು ಸಂಭವಿಸಿದೆ ಎಂದು ಅವರ ಕುಟುಂಬ ಆರೋಪಿಸಿದೆ.

ಈ ನಡುವೆ, ನಾಗ್ಪುರದಲ್ಲಿ, 22 ವರ್ಷದ ಸೋಹೆಲ್ ಖಾನ್ ಸಲೀಂ ಖಾನ್ ಎಂಬ ವ್ಯಕ್ತಿ ಗಾಳಿಪಟ ಹಾರಿಸುವಾಗ ಛಾವಣಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಗಾಳಿಪಟ ದಾರಗಳಿಂದ ಇತರ ಮೂವರು ಗಾಯಗೊಂಡಿದ್ದು, ಇದರಲ್ಲಿ ಒಬ್ಬ ಮಹಿಳೆ ಮುಖ ವಿರೂಪಗೊಂಡಿದ್ದು, ಮತ್ತೊಬ್ಬ ಮಹಿಳೆಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ. ಮತ್ತೊಂದು ಘಟನೆಯಲ್ಲಿ 22 ವರ್ಷದ ವ್ಯಕ್ತಿಯೊಬ್ಬ ತನ್ನ ಬೈಕ್‌ನಲ್ಲಿ ಪ್ರಯಾಣಿಸುವ ವೇಳೆ ಗಾಳಿಪಟ ದಾರಕ್ಕೆ ಸಿಲುಕಿ ಗಾಯಗೊಂಡಿದ್ದಾರೆ. ಎರಡೂ ನಗರಗಳಲ್ಲಿ ತನಿಖೆಗಳು ನಡೆಯುತ್ತಿವೆ.

ಇದನ್ನೂಓದಿ:  ಚುನಾವಣಾ ನಿಯಮಗಳ ತಿದ್ದುಪಡಿ : ಕೇಂದ್ರ ಸರ್ಕಾರ, ಚು.ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಚುನಾವಣಾ ನಿಯಮಗಳ ತಿದ್ದುಪಡಿ : ಕೇಂದ್ರ ಸರ್ಕಾರ, ಚು.ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...