Homeದಲಿತ್ ಫೈಲ್ಸ್ಗುಜರಾತ್‌: ದಲಿತ ಮಹಿಳೆ ತಯಾರಿಸಿದ ಮಧ್ಯಾಹ್ನದ ಬಿಸಿಯೂಟ ನಿರಾಕರಿಸಿದ ಒಬಿಸಿ ಮಕ್ಕಳು!

ಗುಜರಾತ್‌: ದಲಿತ ಮಹಿಳೆ ತಯಾರಿಸಿದ ಮಧ್ಯಾಹ್ನದ ಬಿಸಿಯೂಟ ನಿರಾಕರಿಸಿದ ಒಬಿಸಿ ಮಕ್ಕಳು!

- Advertisement -
- Advertisement -

ಗುಜರಾತ್‌ನ ಮೊರ್ಬಿ ಜಿಲ್ಲೆಯ ಶ್ರೀಸೋಖ್ದಾ ಪ್ರಾಥಮಿಕ ಶಾಲೆಯಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯಗಳಿಗೆ ಸೇರಿದ 153 ವಿದ್ಯಾರ್ಥಿಗಳ ಪೈಕಿ 147 ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟವನ್ನು ನಿರಾಕರಿಸಿದ್ದು, ದಲಿತ ಮಹಿಳೆ ಅಡುಗೆ ಮಾಡುತ್ತಿರುವುದೇ ಇದಕ್ಕೆ ಕಾರಣ ಎಂದು ವರದಿಯಾಗಿದೆ.

ಮಧ್ಯಾಹ್ನದ ಬಿಸಿಯೂಟ ಮಾಡುವ ಕೆಲಸವನ್ನು ಕಳೆದ ಜೂನ್‌ನಲ್ಲಿ ದಲಿತ ಮಹಿಳೆ ಧಾರಾ ಮಕ್ವಾನಾ ಅವರಿಗೆ ಶಾಲಾ ಅಧಿಕಾರಿಗಳು ಗುತ್ತಿಗೆ ನೀಡಿದರು. ಆ ನಂತರದಲ್ಲಿ ವಿದ್ಯಾರ್ಥಿಗಳ ಪೋಷಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ತಮ್ಮ ಮಕ್ಕಳು ಮಧ್ಯಾಹ್ನದ ಬಿಸಿಯೂಟ ಮಾಡದಂತೆ ತಡೆದಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವಿದ್ಯಾರ್ಥಿಗಳು ಊಟಕ್ಕೆ ಬರುತ್ತಿರಲಿಲ್ಲ. ನಂತರ ಪೋಷಕರನ್ನು ಪ್ರಶ್ನಿಸಲಾಯಿತು. ದಲಿತ ಮಹಿಳೆ ಬೇಯಿಸಿದ ಆಹಾರವನ್ನು ನಮ್ಮ ಮಕ್ಕಳು ತಿನ್ನಲು ಬಿಡುವುದಿಲ್ಲ ಎಂದು ಹೇಳಿದರು” ಎಂದು ಎಂದು ದಲಿತ ಮಹಿಳೆಯ ಪತಿ ಗೋಪಿ ಪ್ರತಿಕ್ರಿಯೆ ನೀಡಿದ್ದಾರೆ. ಮಾರ್ಕ್ವಾನಾ ತಯಾರಿಸಿದ ದೊಡ್ಡ ಪ್ರಮಾಣದ ಆಹಾರ ವ್ಯರ್ಥವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಘಟನೆಯ ನಂತರ, ಗೋಪಿ ಪೊಲೀಸರಿಗೆ ದೂರು ನೀಡಿದ್ದು, ಅದನ್ನು ಪೊಲೀಸ್ ಉಪಾಧೀಕ್ಷಕರಿಗೆ ವರ್ಗಾಯಿಸಲಾಗಿದೆ. “ಆದರೆ, ಇದು ಶಾಲಾ ಅಧಿಕಾರಿಗಳು ಮತ್ತು ಜಿಲ್ಲಾಡಳಿತದ ನಡುವಿನ ವಿಷಯವಾಗಿರುವುದರಿಂದ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ” ಎಂದು ಪೊಲೀಸ್ ಅಧಿಕಾರಿಗಳು ಹೇಳಿರುವುದಾಗಿ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ಶಾಲೆಯ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳ ಪೋಷಕರ ನಡುವೆ ಈ ವಿಷಯದ ಬಗ್ಗೆ ಎರಡು ಭಾರಿ ಸಭೆಗಳನ್ನು ನಡೆಸಲಾಗಿದೆ. ಆದರೆ ತಮ್ಮ ನಿಲುವನ್ನು ಬದಲಾಯಿಸಲು ಪೋಷಕರು ನಿರಾಕರಿಸಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರು ಪ್ರತಿಕ್ರಿಯೆ ನೀಡಿದ್ದಾರೆ.

“ಜಾತಿವಾದಿ ಧೋರಣೆ ಬೇಡ. ಎಲ್ಲರೂ ಸಮಾನರು. ಯಾರೂ ಅಸ್ಪೃಶ್ಯರಲ್ಲ ಎಂದು ನಾವು ಮಕ್ಕಳಿಗೆ ಕಲಿಸಬಹುದು. ದುಃಖಕರವೆಂದರೆ, ನಾವು ಅವರ ಪೋಷಕರನ್ನು ಮನವೊಲಿಸಲು ಸಾಧ್ಯವಿಲ್ಲ” ಎಂದು ಪ್ರಾಂಶುಪಾಲರು ವಿಷಾದಿಸಿದ್ದಾರೆ.

ಇದನ್ನೂ ಓದಿರಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

ದಲಿತ ಮಹಿಳೆ ತಯಾರಿಸಿ ಊಟವನ್ನು ನಿರಾಕರಿಸಿದ ಪ್ರಕರಣಗಳು ಈ ಹಿಂದೆಯೂ ನಡೆದಿವೆ. ದಲಿತ ಭೋಜನ್ಮಾತಾ (ಬಿಸಿಯೂಟದ ಸಿಬ್ಬಂದಿ) ಸುನಿತಾ ದೇವಿ ಅವರು ಬೇಯಿಸಿದ ಮಧ್ಯಾಹ್ನದ ಊಟವನ್ನು ಕೆಲವು ಮೇಲ್ಜಾತಿಯ ವಿದ್ಯಾರ್ಥಿಗಳು ನಿರಾಕರಿಸಿದ ಪ್ರಕರಣ ನಡೆದು ಆರು ತಿಂಗಳಾಯಿತು. ಆದರೆ ಇಷ್ಟು ದಿನದ ನಂತರವೂ ಉತ್ತರಖಾಂಡ್‌ನ ಚಂಪಾವತ್‌ನ ಸುಖಿದಂಗ್ ಸರ್ಕಾರಿ ಅಂತರ ಕಾಲೇಜಿನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸವರ್ಣೀಯ ಜಾತಿಯ ಮಕ್ಕಳು ಅಸ್ಪೃಶ್ಯತೆ ಆಚರಿಸುವುದನ್ನು ಮುಂದುರಿಸಿದ್ದಾರೆ ಎಂದು ಇತ್ತೀಚೆಗೆ ವರದಿಯಾಗಿದೆ.

‘ಟೈಮ್ಸ್ ಆಫ್‌ ಇಂಡಿಯಾ’ ಜೊತೆ ಮಾತನಾಡಿದ್ದ ಸುನೀತಾ, “ನಾನು ತಯಾರಿಸಿದ ಊಟವನ್ನು ಡಿಎಂ ಕೋರಿಕೆಯ ನಂತರವೂ ಅವರು ತಿನ್ನಲು ಸಿದ್ಧರಿಲ್ಲ. ಆದರೆ, ಇತರ ಭೋಜನ್ಮಾತಾ ವಿಷಯದಲ್ಲಿ ಹೀಗಾಗಿಲ್ಲ. ನನ್ನ ಬಗೆಗೆ ಇರುವ ತಾರತಮ್ಯದ ಮನೋಭಾವವನ್ನು ಅಧಿಕಾರಿಗಳಿಂದ ಬದಲಾಯಿಸಲು ಸಾಧ್ಯವಾಗದಿದ್ದಾಗ, ಇನ್ಯಾರೂ ಸರಿಪಡಿಸಬಲ್ಲರು?” ಎಂದು ಪ್ರಶ್ನಿಸಿದ್ದರು.

“ನಾನು ಅಡುಗೆ ಕೆಲಸ ಬಿಟ್ಟು ಕೂಲಿ ಕೆಲಸ ಮಾಡಬೇಕೆಂದು ಮಕ್ಕಳು ಬಯಸುತ್ತಾರೆ” ಎಂದು ಸುನಿತಾ ದುಃಖ ತೋಡಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ವಿಚಾರದಲ್ಲಿ ಮಕ್ಕಳಿಗಿಂತಲೂ ಪೋಷಕರುಗಳಿಗೆ ಜಾತಿ ವ್ಯವಸ್ಥೆಯ ಅನಿಷ್ಟತೆಯ ಬಗ್ಗೆ ಮನವರಿಕೆ ಮಾಡಿಕೊಡಬೇಕು, ಎಳೆ ವಯಸ್ಸಿನ ಮಕ್ಕಳಲ್ಲಿ ಈಗ ಬಗ್ಗೆ ಜಾಗ್ರತಿ ಮೂಡಿಸಬೇಕು, ಆದರೆ ಇಡೀ ವ್ಯವಸ್ಥೆಯೇ ಜಾತಿ ಆಧಾರಿತ ಆಗಿರುವಾಗ ಅರಿವು ಮೂಡಿಸುವವರು ಯಾರು.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...