Homeದಲಿತ್ ಫೈಲ್ಸ್ಗುಜರಾತ್‌: ದಲಿತ ಮಹಿಳೆ ತಯಾರಿಸಿದ ಮಧ್ಯಾಹ್ನದ ಬಿಸಿಯೂಟ ನಿರಾಕರಿಸಿದ ಒಬಿಸಿ ಮಕ್ಕಳು!

ಗುಜರಾತ್‌: ದಲಿತ ಮಹಿಳೆ ತಯಾರಿಸಿದ ಮಧ್ಯಾಹ್ನದ ಬಿಸಿಯೂಟ ನಿರಾಕರಿಸಿದ ಒಬಿಸಿ ಮಕ್ಕಳು!

- Advertisement -
- Advertisement -

ಗುಜರಾತ್‌ನ ಮೊರ್ಬಿ ಜಿಲ್ಲೆಯ ಶ್ರೀಸೋಖ್ದಾ ಪ್ರಾಥಮಿಕ ಶಾಲೆಯಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯಗಳಿಗೆ ಸೇರಿದ 153 ವಿದ್ಯಾರ್ಥಿಗಳ ಪೈಕಿ 147 ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟವನ್ನು ನಿರಾಕರಿಸಿದ್ದು, ದಲಿತ ಮಹಿಳೆ ಅಡುಗೆ ಮಾಡುತ್ತಿರುವುದೇ ಇದಕ್ಕೆ ಕಾರಣ ಎಂದು ವರದಿಯಾಗಿದೆ.

ಮಧ್ಯಾಹ್ನದ ಬಿಸಿಯೂಟ ಮಾಡುವ ಕೆಲಸವನ್ನು ಕಳೆದ ಜೂನ್‌ನಲ್ಲಿ ದಲಿತ ಮಹಿಳೆ ಧಾರಾ ಮಕ್ವಾನಾ ಅವರಿಗೆ ಶಾಲಾ ಅಧಿಕಾರಿಗಳು ಗುತ್ತಿಗೆ ನೀಡಿದರು. ಆ ನಂತರದಲ್ಲಿ ವಿದ್ಯಾರ್ಥಿಗಳ ಪೋಷಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ತಮ್ಮ ಮಕ್ಕಳು ಮಧ್ಯಾಹ್ನದ ಬಿಸಿಯೂಟ ಮಾಡದಂತೆ ತಡೆದಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವಿದ್ಯಾರ್ಥಿಗಳು ಊಟಕ್ಕೆ ಬರುತ್ತಿರಲಿಲ್ಲ. ನಂತರ ಪೋಷಕರನ್ನು ಪ್ರಶ್ನಿಸಲಾಯಿತು. ದಲಿತ ಮಹಿಳೆ ಬೇಯಿಸಿದ ಆಹಾರವನ್ನು ನಮ್ಮ ಮಕ್ಕಳು ತಿನ್ನಲು ಬಿಡುವುದಿಲ್ಲ ಎಂದು ಹೇಳಿದರು” ಎಂದು ಎಂದು ದಲಿತ ಮಹಿಳೆಯ ಪತಿ ಗೋಪಿ ಪ್ರತಿಕ್ರಿಯೆ ನೀಡಿದ್ದಾರೆ. ಮಾರ್ಕ್ವಾನಾ ತಯಾರಿಸಿದ ದೊಡ್ಡ ಪ್ರಮಾಣದ ಆಹಾರ ವ್ಯರ್ಥವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಘಟನೆಯ ನಂತರ, ಗೋಪಿ ಪೊಲೀಸರಿಗೆ ದೂರು ನೀಡಿದ್ದು, ಅದನ್ನು ಪೊಲೀಸ್ ಉಪಾಧೀಕ್ಷಕರಿಗೆ ವರ್ಗಾಯಿಸಲಾಗಿದೆ. “ಆದರೆ, ಇದು ಶಾಲಾ ಅಧಿಕಾರಿಗಳು ಮತ್ತು ಜಿಲ್ಲಾಡಳಿತದ ನಡುವಿನ ವಿಷಯವಾಗಿರುವುದರಿಂದ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ” ಎಂದು ಪೊಲೀಸ್ ಅಧಿಕಾರಿಗಳು ಹೇಳಿರುವುದಾಗಿ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ಶಾಲೆಯ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳ ಪೋಷಕರ ನಡುವೆ ಈ ವಿಷಯದ ಬಗ್ಗೆ ಎರಡು ಭಾರಿ ಸಭೆಗಳನ್ನು ನಡೆಸಲಾಗಿದೆ. ಆದರೆ ತಮ್ಮ ನಿಲುವನ್ನು ಬದಲಾಯಿಸಲು ಪೋಷಕರು ನಿರಾಕರಿಸಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರು ಪ್ರತಿಕ್ರಿಯೆ ನೀಡಿದ್ದಾರೆ.

“ಜಾತಿವಾದಿ ಧೋರಣೆ ಬೇಡ. ಎಲ್ಲರೂ ಸಮಾನರು. ಯಾರೂ ಅಸ್ಪೃಶ್ಯರಲ್ಲ ಎಂದು ನಾವು ಮಕ್ಕಳಿಗೆ ಕಲಿಸಬಹುದು. ದುಃಖಕರವೆಂದರೆ, ನಾವು ಅವರ ಪೋಷಕರನ್ನು ಮನವೊಲಿಸಲು ಸಾಧ್ಯವಿಲ್ಲ” ಎಂದು ಪ್ರಾಂಶುಪಾಲರು ವಿಷಾದಿಸಿದ್ದಾರೆ.

ಇದನ್ನೂ ಓದಿರಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

ದಲಿತ ಮಹಿಳೆ ತಯಾರಿಸಿ ಊಟವನ್ನು ನಿರಾಕರಿಸಿದ ಪ್ರಕರಣಗಳು ಈ ಹಿಂದೆಯೂ ನಡೆದಿವೆ. ದಲಿತ ಭೋಜನ್ಮಾತಾ (ಬಿಸಿಯೂಟದ ಸಿಬ್ಬಂದಿ) ಸುನಿತಾ ದೇವಿ ಅವರು ಬೇಯಿಸಿದ ಮಧ್ಯಾಹ್ನದ ಊಟವನ್ನು ಕೆಲವು ಮೇಲ್ಜಾತಿಯ ವಿದ್ಯಾರ್ಥಿಗಳು ನಿರಾಕರಿಸಿದ ಪ್ರಕರಣ ನಡೆದು ಆರು ತಿಂಗಳಾಯಿತು. ಆದರೆ ಇಷ್ಟು ದಿನದ ನಂತರವೂ ಉತ್ತರಖಾಂಡ್‌ನ ಚಂಪಾವತ್‌ನ ಸುಖಿದಂಗ್ ಸರ್ಕಾರಿ ಅಂತರ ಕಾಲೇಜಿನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸವರ್ಣೀಯ ಜಾತಿಯ ಮಕ್ಕಳು ಅಸ್ಪೃಶ್ಯತೆ ಆಚರಿಸುವುದನ್ನು ಮುಂದುರಿಸಿದ್ದಾರೆ ಎಂದು ಇತ್ತೀಚೆಗೆ ವರದಿಯಾಗಿದೆ.

‘ಟೈಮ್ಸ್ ಆಫ್‌ ಇಂಡಿಯಾ’ ಜೊತೆ ಮಾತನಾಡಿದ್ದ ಸುನೀತಾ, “ನಾನು ತಯಾರಿಸಿದ ಊಟವನ್ನು ಡಿಎಂ ಕೋರಿಕೆಯ ನಂತರವೂ ಅವರು ತಿನ್ನಲು ಸಿದ್ಧರಿಲ್ಲ. ಆದರೆ, ಇತರ ಭೋಜನ್ಮಾತಾ ವಿಷಯದಲ್ಲಿ ಹೀಗಾಗಿಲ್ಲ. ನನ್ನ ಬಗೆಗೆ ಇರುವ ತಾರತಮ್ಯದ ಮನೋಭಾವವನ್ನು ಅಧಿಕಾರಿಗಳಿಂದ ಬದಲಾಯಿಸಲು ಸಾಧ್ಯವಾಗದಿದ್ದಾಗ, ಇನ್ಯಾರೂ ಸರಿಪಡಿಸಬಲ್ಲರು?” ಎಂದು ಪ್ರಶ್ನಿಸಿದ್ದರು.

“ನಾನು ಅಡುಗೆ ಕೆಲಸ ಬಿಟ್ಟು ಕೂಲಿ ಕೆಲಸ ಮಾಡಬೇಕೆಂದು ಮಕ್ಕಳು ಬಯಸುತ್ತಾರೆ” ಎಂದು ಸುನಿತಾ ದುಃಖ ತೋಡಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ವಿಚಾರದಲ್ಲಿ ಮಕ್ಕಳಿಗಿಂತಲೂ ಪೋಷಕರುಗಳಿಗೆ ಜಾತಿ ವ್ಯವಸ್ಥೆಯ ಅನಿಷ್ಟತೆಯ ಬಗ್ಗೆ ಮನವರಿಕೆ ಮಾಡಿಕೊಡಬೇಕು, ಎಳೆ ವಯಸ್ಸಿನ ಮಕ್ಕಳಲ್ಲಿ ಈಗ ಬಗ್ಗೆ ಜಾಗ್ರತಿ ಮೂಡಿಸಬೇಕು, ಆದರೆ ಇಡೀ ವ್ಯವಸ್ಥೆಯೇ ಜಾತಿ ಆಧಾರಿತ ಆಗಿರುವಾಗ ಅರಿವು ಮೂಡಿಸುವವರು ಯಾರು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...