Homeಮುಖಪುಟಗುಜರಾತ್: ಚರ್ಚಾ ಸ್ಪರ್ಧೆಯಲ್ಲಿ ಮಕ್ಕಳಿಗೆ ’ನನ್ನ ಆದರ್ಶ ಗೋಡ್ಸೆ’ ವಿಷಯ, ವ್ಯಾಪಕ ಖಂಡನೆ

ಗುಜರಾತ್: ಚರ್ಚಾ ಸ್ಪರ್ಧೆಯಲ್ಲಿ ಮಕ್ಕಳಿಗೆ ’ನನ್ನ ಆದರ್ಶ ಗೋಡ್ಸೆ’ ವಿಷಯ, ವ್ಯಾಪಕ ಖಂಡನೆ

- Advertisement -
- Advertisement -

ದೇಶದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಹಂತಕ ನಾಥೂರಾಂ ಗೋಡ್ಸೆಯನ್ನು ನಾಯಕ, ದೇಶಪ್ರೇಮಿ ಎಂದು ಬಿಂಬಿಸುವ ಪ್ರಯತ್ನಗಳು ನಡೆಯುತ್ತಲೇ ಇದೆ. ಆದರೆ, ಈ ಬಾರಿ ಆಘಾತಕಾರಿ ವಿಷಯವೆಂದರೆ ಗುಜರಾತ್‌ನ ಶಾಲೆಯೊಂದರಲ್ಲಿ ಗೋಡ್ಸೆ ನನ್ನ ಆದರ್ಶ ಎನ್ನುವ ವಿಷಯವನ್ನು ಪುಟ್ಟ ಮಕ್ಕಳ ತಲೆಯಲ್ಲಿ ತುಂಬಲು ಪ್ರಯತ್ನಿಸಲಾಗಿದೆ.

ಸೋಮವಾರ (ಫೆ.14) ವಲ್ಸಾದ್ ನಗರದ ಕುಸುಮ್ ವಿದ್ಯಾಲಯ ಶಾಲೆಯಲ್ಲಿ ‘ನನ್ನ ಆದರ್ಶ ನಾಥೂರಾಂ ಗೋಡ್ಸೆ’ ಎಂಬ ವಿಷಯದ ಕುರಿತು ಚರ್ಚಾ ಸ್ಪರ್ಧೆಯನ್ನು ನಡೆಸಲಾಗಿತ್ತು. 5ನೇ ತರಗತಿಯಿಂದ 8ನೇ ತರಗತಿವರೆಗಿನ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ತಿಳಿಸಲಾಗಿತ್ತು. ಬಳಿಕ ಈ ವಿಚಾರ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಒಂದು ಮಗುವಿಗೆ ಪ್ರಥಮ ಬಹುಮಾನ ನೀಡಲಾಯಿತು. ಈಗ ಈ ಸ್ಪರ್ಧೆಯ ಬಗ್ಗೆ ಸಾಕಷ್ಟು ಘರ್ಷಣೆ ಪ್ರಾರಂಭವಾಗಿದೆ. ಇದರಲ್ಲೂ 7 ರಿಂದ 12 ವರ್ಷದ ಪ್ರಾಥಮಿಕ ಶಾಲಾ ಮಕ್ಕಳಿಗೆ ಈ ವಿಷಯವನ್ನು ಸ್ಥಳೀಯ ಮಟ್ಟದಲ್ಲಿ ಸರ್ಕಾರಿ ಅಧಿಕಾರಿಗಳು ಆಯ್ಕೆ ಮಾಡಿದ್ದಾರೆ ಎಂಬುದೇ ಆಘಾತಕಾರಿಯಾಗಿದೆ. ಅಹಿಂಸೆಯ ಬೋಧಕ ಗಾಂಧೀಜಿಯವರನ್ನು ಹತ್ಯೆ ಮಾಡಿದವರು ಹೇಗೆ ಆದರ್ಶರಾಗುತ್ತಾರೆ..? ಎಂದು ಗಾಂಧಿವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗಾಂಧಿ ಅಂದಿಗೂ ಇಂದಿಗೂ ಒಬ್ಬಂಟಿ. ಗೋಡ್ಸೆ ಅಂದಿಗೂ ಒಬ್ಬಂಟಿಯಲ್ಲ, ಇಂದಿಗೂ..

स्कूल द्वारा आयोजित बाल प्रतिभा स्पर्धा का प्रेस-नोट।

ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿವಾದದ ಹಿನ್ನೆಲೆಯಲ್ಲಿ ವಲ್ಸಾದ್ ಜಿಲ್ಲಾ ಕ್ರೀಡಾ ಅಧಿಕಾರಿ ಮಿತಾಬೆನ್ ಗಾವ್ಲಿ ಅವರನ್ನು ಅಮಾನತುಗೊಳಿಸಲಾಗಿದೆ. ಇದರೊಂದಿಗೆ ಗೃಹ ಸಚಿವ ಹರ್ಷ ಸಾಂಘ್ವಿ ಅವರು ಇಡೀ ಪ್ರಕರಣದ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಮತ್ತು ಹೊಣೆಗಾರರ ​​ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ವಿವಾದ ಭುಗಿಲೆದ್ದ ಹಿನ್ನೆಲೆಯಲ್ಲಿ ದೈನಿಕ್ ಭಾಸ್ಕರ್‌ ಜೊತೆಗೆ ಮಾತನಾಡಿರುವ ಕುಸುಮ ವಿದ್ಯಾಲಯದ ನಿರ್ದೇಶಕಿ ಅರ್ಚನಾಬೆನ್ ದೇಸಾಯಿ, “ಬಾಲಪ್ರತಿಭೆ ಸಂಶೋಧನಾ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಈ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯ ಸಂಪೂರ್ಣ ಯೋಜನೆಯನ್ನು ಸರ್ಕಾರಿ ಕಾರ್ಯಾಲಯದಿಂದ ಸಿದ್ಧಪಡಿಸಲಾಗಿತ್ತು. ಹೀಗಾಗಿ ನಮ್ಮ ಶಾಲೆಯು ಸ್ಪರ್ಧೆ ನಡೆಸಲು ಸ್ಥಳವನ್ನು ಮಾತ್ರ ನೀಡಿತ್ತು. ಈ ಮೂಲಕ ವಲ್ಸಾದ್ ಸರ್ಕಾರಿ ಕಚೇರಿಯ ಆದೇಶವನ್ನು ಪಾಳಿಸಿದೆ. ಸ್ಪರ್ಧೆ ಪ್ರಾರಂಭದ ಮೊದಲು ಅದರಲ್ಲಿರುವ ವಿಷಯಗಳ ಬಗ್ಗೆ ನಮಗೆ ತಿಳಿದಿರಲಿಲ್ಲ” ಎಂದಿದ್ದಾರೆ.

“ಈ ಸ್ಪರ್ಧೆಯಲ್ಲಿ ‘ನನ್ನ ಆದರ್ಶ ನಾಥೂರಾಂ ಗೋಡ್ಸೆ’, ‘ಆಕಾಶದಲ್ಲಿ ಹಾರಾಡುವ ಹಕ್ಕಿಗಳು ನನಗೆ ಇಷ್ಟ’ ಮತ್ತು ‘ವಿಜ್ಞಾನಿಯಾದ ನಂತರವೂ ನಾನು ಅಮೆರಿಕಕ್ಕೆ ಹೋಗುವುದಿಲ್ಲ’ ಎಂಬ ಮೂರು ವಿಷಯಗಳನ್ನು ನೀಡಲಾಗಿತ್ತು. ಈ ಮೂರು ವಿಷಯಗಳ ಬಗ್ಗೆ ಮಕ್ಕಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು” ಎಂದಿದ್ದಾರೆ.

ಕಳೆದ ವರ್ಷ ನವೆಂಬರ್ 15 ರಂದು ಜಾಮ್‌ನಗರದಲ್ಲಿ ನಾಥೂರಾಂ ಗೋಡ್ಸೆ ಪ್ರತಿಮೆ ಸ್ಥಾಪನೆ ವಿಚಾರದಲ್ಲಿ ಸಾಕಷ್ಟು ವಿವಾದ ಉಂಟಾಗಿತ್ತು. ಜಾಮ್‌ನಗರದ ಹನುಮಾನ್ ಆಶ್ರಮದಲ್ಲಿ ಹಿಂದೂ ಸೇನೆ ಗೋಡ್ಸೆ ವಿಗ್ರಹವನ್ನು ಸ್ಥಾಪಿಸಿತ್ತು. ಸುದ್ದಿ ತಿಳಿದ ಕಾಂಗ್ರೆಸ್ ಮುಖಂಡರು, ನಗರಸಭೆ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಅಲ್ಲಿಗೆ ಆಗಮಿಸಿ ಪ್ರತಿಮೆ ಧ್ವಂಸಗೊಳಿಸಿದರು. ಬಳಿಕ ಉಭಯ ನಾಯಕರ ಮೇಲೆ ಪೊಲೀಸ್ ದೂರು ದಾಖಲಾಗಿತ್ತು.


ಇದನ್ನೂ ಓದಿ: ಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು ಗಾಂಧಿ ಭಾರತವನ್ನು, ಗೋಡ್ಸೆ ಭಾರತವನ್ನಾಗಿ ಪರಿವರ್ತನೆ ಮಾಡಲು ನಾಂದಿ ಹಾಡಿದ್ದಾರೆ. ಈ ದೇಶದ ಪ್ರಜ್ಞಾವಂತ ಜನರು, ಇದನ್ನು ತಡೆಯದಿದ್ದಲ್ಲಿ, ನಮ್ಮ ದೇಶಕ್ಕೆ ಕರಾಳ ಬವಿಶ್ಯ ಕಟ್ಟಿಟ್ಟ ಬುತ್ತಿ.

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...