Homeಮುಖಪುಟಗುಜರಾತ್: ಚರ್ಚಾ ಸ್ಪರ್ಧೆಯಲ್ಲಿ ಮಕ್ಕಳಿಗೆ ’ನನ್ನ ಆದರ್ಶ ಗೋಡ್ಸೆ’ ವಿಷಯ, ವ್ಯಾಪಕ ಖಂಡನೆ

ಗುಜರಾತ್: ಚರ್ಚಾ ಸ್ಪರ್ಧೆಯಲ್ಲಿ ಮಕ್ಕಳಿಗೆ ’ನನ್ನ ಆದರ್ಶ ಗೋಡ್ಸೆ’ ವಿಷಯ, ವ್ಯಾಪಕ ಖಂಡನೆ

- Advertisement -
- Advertisement -

ದೇಶದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಹಂತಕ ನಾಥೂರಾಂ ಗೋಡ್ಸೆಯನ್ನು ನಾಯಕ, ದೇಶಪ್ರೇಮಿ ಎಂದು ಬಿಂಬಿಸುವ ಪ್ರಯತ್ನಗಳು ನಡೆಯುತ್ತಲೇ ಇದೆ. ಆದರೆ, ಈ ಬಾರಿ ಆಘಾತಕಾರಿ ವಿಷಯವೆಂದರೆ ಗುಜರಾತ್‌ನ ಶಾಲೆಯೊಂದರಲ್ಲಿ ಗೋಡ್ಸೆ ನನ್ನ ಆದರ್ಶ ಎನ್ನುವ ವಿಷಯವನ್ನು ಪುಟ್ಟ ಮಕ್ಕಳ ತಲೆಯಲ್ಲಿ ತುಂಬಲು ಪ್ರಯತ್ನಿಸಲಾಗಿದೆ.

ಸೋಮವಾರ (ಫೆ.14) ವಲ್ಸಾದ್ ನಗರದ ಕುಸುಮ್ ವಿದ್ಯಾಲಯ ಶಾಲೆಯಲ್ಲಿ ‘ನನ್ನ ಆದರ್ಶ ನಾಥೂರಾಂ ಗೋಡ್ಸೆ’ ಎಂಬ ವಿಷಯದ ಕುರಿತು ಚರ್ಚಾ ಸ್ಪರ್ಧೆಯನ್ನು ನಡೆಸಲಾಗಿತ್ತು. 5ನೇ ತರಗತಿಯಿಂದ 8ನೇ ತರಗತಿವರೆಗಿನ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ತಿಳಿಸಲಾಗಿತ್ತು. ಬಳಿಕ ಈ ವಿಚಾರ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಒಂದು ಮಗುವಿಗೆ ಪ್ರಥಮ ಬಹುಮಾನ ನೀಡಲಾಯಿತು. ಈಗ ಈ ಸ್ಪರ್ಧೆಯ ಬಗ್ಗೆ ಸಾಕಷ್ಟು ಘರ್ಷಣೆ ಪ್ರಾರಂಭವಾಗಿದೆ. ಇದರಲ್ಲೂ 7 ರಿಂದ 12 ವರ್ಷದ ಪ್ರಾಥಮಿಕ ಶಾಲಾ ಮಕ್ಕಳಿಗೆ ಈ ವಿಷಯವನ್ನು ಸ್ಥಳೀಯ ಮಟ್ಟದಲ್ಲಿ ಸರ್ಕಾರಿ ಅಧಿಕಾರಿಗಳು ಆಯ್ಕೆ ಮಾಡಿದ್ದಾರೆ ಎಂಬುದೇ ಆಘಾತಕಾರಿಯಾಗಿದೆ. ಅಹಿಂಸೆಯ ಬೋಧಕ ಗಾಂಧೀಜಿಯವರನ್ನು ಹತ್ಯೆ ಮಾಡಿದವರು ಹೇಗೆ ಆದರ್ಶರಾಗುತ್ತಾರೆ..? ಎಂದು ಗಾಂಧಿವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗಾಂಧಿ ಅಂದಿಗೂ ಇಂದಿಗೂ ಒಬ್ಬಂಟಿ. ಗೋಡ್ಸೆ ಅಂದಿಗೂ ಒಬ್ಬಂಟಿಯಲ್ಲ, ಇಂದಿಗೂ..

स्कूल द्वारा आयोजित बाल प्रतिभा स्पर्धा का प्रेस-नोट।

ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿವಾದದ ಹಿನ್ನೆಲೆಯಲ್ಲಿ ವಲ್ಸಾದ್ ಜಿಲ್ಲಾ ಕ್ರೀಡಾ ಅಧಿಕಾರಿ ಮಿತಾಬೆನ್ ಗಾವ್ಲಿ ಅವರನ್ನು ಅಮಾನತುಗೊಳಿಸಲಾಗಿದೆ. ಇದರೊಂದಿಗೆ ಗೃಹ ಸಚಿವ ಹರ್ಷ ಸಾಂಘ್ವಿ ಅವರು ಇಡೀ ಪ್ರಕರಣದ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಮತ್ತು ಹೊಣೆಗಾರರ ​​ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ವಿವಾದ ಭುಗಿಲೆದ್ದ ಹಿನ್ನೆಲೆಯಲ್ಲಿ ದೈನಿಕ್ ಭಾಸ್ಕರ್‌ ಜೊತೆಗೆ ಮಾತನಾಡಿರುವ ಕುಸುಮ ವಿದ್ಯಾಲಯದ ನಿರ್ದೇಶಕಿ ಅರ್ಚನಾಬೆನ್ ದೇಸಾಯಿ, “ಬಾಲಪ್ರತಿಭೆ ಸಂಶೋಧನಾ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಈ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯ ಸಂಪೂರ್ಣ ಯೋಜನೆಯನ್ನು ಸರ್ಕಾರಿ ಕಾರ್ಯಾಲಯದಿಂದ ಸಿದ್ಧಪಡಿಸಲಾಗಿತ್ತು. ಹೀಗಾಗಿ ನಮ್ಮ ಶಾಲೆಯು ಸ್ಪರ್ಧೆ ನಡೆಸಲು ಸ್ಥಳವನ್ನು ಮಾತ್ರ ನೀಡಿತ್ತು. ಈ ಮೂಲಕ ವಲ್ಸಾದ್ ಸರ್ಕಾರಿ ಕಚೇರಿಯ ಆದೇಶವನ್ನು ಪಾಳಿಸಿದೆ. ಸ್ಪರ್ಧೆ ಪ್ರಾರಂಭದ ಮೊದಲು ಅದರಲ್ಲಿರುವ ವಿಷಯಗಳ ಬಗ್ಗೆ ನಮಗೆ ತಿಳಿದಿರಲಿಲ್ಲ” ಎಂದಿದ್ದಾರೆ.

“ಈ ಸ್ಪರ್ಧೆಯಲ್ಲಿ ‘ನನ್ನ ಆದರ್ಶ ನಾಥೂರಾಂ ಗೋಡ್ಸೆ’, ‘ಆಕಾಶದಲ್ಲಿ ಹಾರಾಡುವ ಹಕ್ಕಿಗಳು ನನಗೆ ಇಷ್ಟ’ ಮತ್ತು ‘ವಿಜ್ಞಾನಿಯಾದ ನಂತರವೂ ನಾನು ಅಮೆರಿಕಕ್ಕೆ ಹೋಗುವುದಿಲ್ಲ’ ಎಂಬ ಮೂರು ವಿಷಯಗಳನ್ನು ನೀಡಲಾಗಿತ್ತು. ಈ ಮೂರು ವಿಷಯಗಳ ಬಗ್ಗೆ ಮಕ್ಕಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು” ಎಂದಿದ್ದಾರೆ.

ಕಳೆದ ವರ್ಷ ನವೆಂಬರ್ 15 ರಂದು ಜಾಮ್‌ನಗರದಲ್ಲಿ ನಾಥೂರಾಂ ಗೋಡ್ಸೆ ಪ್ರತಿಮೆ ಸ್ಥಾಪನೆ ವಿಚಾರದಲ್ಲಿ ಸಾಕಷ್ಟು ವಿವಾದ ಉಂಟಾಗಿತ್ತು. ಜಾಮ್‌ನಗರದ ಹನುಮಾನ್ ಆಶ್ರಮದಲ್ಲಿ ಹಿಂದೂ ಸೇನೆ ಗೋಡ್ಸೆ ವಿಗ್ರಹವನ್ನು ಸ್ಥಾಪಿಸಿತ್ತು. ಸುದ್ದಿ ತಿಳಿದ ಕಾಂಗ್ರೆಸ್ ಮುಖಂಡರು, ನಗರಸಭೆ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಅಲ್ಲಿಗೆ ಆಗಮಿಸಿ ಪ್ರತಿಮೆ ಧ್ವಂಸಗೊಳಿಸಿದರು. ಬಳಿಕ ಉಭಯ ನಾಯಕರ ಮೇಲೆ ಪೊಲೀಸ್ ದೂರು ದಾಖಲಾಗಿತ್ತು.


ಇದನ್ನೂ ಓದಿ: ಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು ಗಾಂಧಿ ಭಾರತವನ್ನು, ಗೋಡ್ಸೆ ಭಾರತವನ್ನಾಗಿ ಪರಿವರ್ತನೆ ಮಾಡಲು ನಾಂದಿ ಹಾಡಿದ್ದಾರೆ. ಈ ದೇಶದ ಪ್ರಜ್ಞಾವಂತ ಜನರು, ಇದನ್ನು ತಡೆಯದಿದ್ದಲ್ಲಿ, ನಮ್ಮ ದೇಶಕ್ಕೆ ಕರಾಳ ಬವಿಶ್ಯ ಕಟ್ಟಿಟ್ಟ ಬುತ್ತಿ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...