Homeಮುಖಪುಟಗುಜರಾತ್: ಚರ್ಚಾ ಸ್ಪರ್ಧೆಯಲ್ಲಿ ಮಕ್ಕಳಿಗೆ ’ನನ್ನ ಆದರ್ಶ ಗೋಡ್ಸೆ’ ವಿಷಯ, ವ್ಯಾಪಕ ಖಂಡನೆ

ಗುಜರಾತ್: ಚರ್ಚಾ ಸ್ಪರ್ಧೆಯಲ್ಲಿ ಮಕ್ಕಳಿಗೆ ’ನನ್ನ ಆದರ್ಶ ಗೋಡ್ಸೆ’ ವಿಷಯ, ವ್ಯಾಪಕ ಖಂಡನೆ

- Advertisement -
- Advertisement -

ದೇಶದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಹಂತಕ ನಾಥೂರಾಂ ಗೋಡ್ಸೆಯನ್ನು ನಾಯಕ, ದೇಶಪ್ರೇಮಿ ಎಂದು ಬಿಂಬಿಸುವ ಪ್ರಯತ್ನಗಳು ನಡೆಯುತ್ತಲೇ ಇದೆ. ಆದರೆ, ಈ ಬಾರಿ ಆಘಾತಕಾರಿ ವಿಷಯವೆಂದರೆ ಗುಜರಾತ್‌ನ ಶಾಲೆಯೊಂದರಲ್ಲಿ ಗೋಡ್ಸೆ ನನ್ನ ಆದರ್ಶ ಎನ್ನುವ ವಿಷಯವನ್ನು ಪುಟ್ಟ ಮಕ್ಕಳ ತಲೆಯಲ್ಲಿ ತುಂಬಲು ಪ್ರಯತ್ನಿಸಲಾಗಿದೆ.

ಸೋಮವಾರ (ಫೆ.14) ವಲ್ಸಾದ್ ನಗರದ ಕುಸುಮ್ ವಿದ್ಯಾಲಯ ಶಾಲೆಯಲ್ಲಿ ‘ನನ್ನ ಆದರ್ಶ ನಾಥೂರಾಂ ಗೋಡ್ಸೆ’ ಎಂಬ ವಿಷಯದ ಕುರಿತು ಚರ್ಚಾ ಸ್ಪರ್ಧೆಯನ್ನು ನಡೆಸಲಾಗಿತ್ತು. 5ನೇ ತರಗತಿಯಿಂದ 8ನೇ ತರಗತಿವರೆಗಿನ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ತಿಳಿಸಲಾಗಿತ್ತು. ಬಳಿಕ ಈ ವಿಚಾರ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಒಂದು ಮಗುವಿಗೆ ಪ್ರಥಮ ಬಹುಮಾನ ನೀಡಲಾಯಿತು. ಈಗ ಈ ಸ್ಪರ್ಧೆಯ ಬಗ್ಗೆ ಸಾಕಷ್ಟು ಘರ್ಷಣೆ ಪ್ರಾರಂಭವಾಗಿದೆ. ಇದರಲ್ಲೂ 7 ರಿಂದ 12 ವರ್ಷದ ಪ್ರಾಥಮಿಕ ಶಾಲಾ ಮಕ್ಕಳಿಗೆ ಈ ವಿಷಯವನ್ನು ಸ್ಥಳೀಯ ಮಟ್ಟದಲ್ಲಿ ಸರ್ಕಾರಿ ಅಧಿಕಾರಿಗಳು ಆಯ್ಕೆ ಮಾಡಿದ್ದಾರೆ ಎಂಬುದೇ ಆಘಾತಕಾರಿಯಾಗಿದೆ. ಅಹಿಂಸೆಯ ಬೋಧಕ ಗಾಂಧೀಜಿಯವರನ್ನು ಹತ್ಯೆ ಮಾಡಿದವರು ಹೇಗೆ ಆದರ್ಶರಾಗುತ್ತಾರೆ..? ಎಂದು ಗಾಂಧಿವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗಾಂಧಿ ಅಂದಿಗೂ ಇಂದಿಗೂ ಒಬ್ಬಂಟಿ. ಗೋಡ್ಸೆ ಅಂದಿಗೂ ಒಬ್ಬಂಟಿಯಲ್ಲ, ಇಂದಿಗೂ..

स्कूल द्वारा आयोजित बाल प्रतिभा स्पर्धा का प्रेस-नोट।

ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿವಾದದ ಹಿನ್ನೆಲೆಯಲ್ಲಿ ವಲ್ಸಾದ್ ಜಿಲ್ಲಾ ಕ್ರೀಡಾ ಅಧಿಕಾರಿ ಮಿತಾಬೆನ್ ಗಾವ್ಲಿ ಅವರನ್ನು ಅಮಾನತುಗೊಳಿಸಲಾಗಿದೆ. ಇದರೊಂದಿಗೆ ಗೃಹ ಸಚಿವ ಹರ್ಷ ಸಾಂಘ್ವಿ ಅವರು ಇಡೀ ಪ್ರಕರಣದ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಮತ್ತು ಹೊಣೆಗಾರರ ​​ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ವಿವಾದ ಭುಗಿಲೆದ್ದ ಹಿನ್ನೆಲೆಯಲ್ಲಿ ದೈನಿಕ್ ಭಾಸ್ಕರ್‌ ಜೊತೆಗೆ ಮಾತನಾಡಿರುವ ಕುಸುಮ ವಿದ್ಯಾಲಯದ ನಿರ್ದೇಶಕಿ ಅರ್ಚನಾಬೆನ್ ದೇಸಾಯಿ, “ಬಾಲಪ್ರತಿಭೆ ಸಂಶೋಧನಾ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಈ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯ ಸಂಪೂರ್ಣ ಯೋಜನೆಯನ್ನು ಸರ್ಕಾರಿ ಕಾರ್ಯಾಲಯದಿಂದ ಸಿದ್ಧಪಡಿಸಲಾಗಿತ್ತು. ಹೀಗಾಗಿ ನಮ್ಮ ಶಾಲೆಯು ಸ್ಪರ್ಧೆ ನಡೆಸಲು ಸ್ಥಳವನ್ನು ಮಾತ್ರ ನೀಡಿತ್ತು. ಈ ಮೂಲಕ ವಲ್ಸಾದ್ ಸರ್ಕಾರಿ ಕಚೇರಿಯ ಆದೇಶವನ್ನು ಪಾಳಿಸಿದೆ. ಸ್ಪರ್ಧೆ ಪ್ರಾರಂಭದ ಮೊದಲು ಅದರಲ್ಲಿರುವ ವಿಷಯಗಳ ಬಗ್ಗೆ ನಮಗೆ ತಿಳಿದಿರಲಿಲ್ಲ” ಎಂದಿದ್ದಾರೆ.

“ಈ ಸ್ಪರ್ಧೆಯಲ್ಲಿ ‘ನನ್ನ ಆದರ್ಶ ನಾಥೂರಾಂ ಗೋಡ್ಸೆ’, ‘ಆಕಾಶದಲ್ಲಿ ಹಾರಾಡುವ ಹಕ್ಕಿಗಳು ನನಗೆ ಇಷ್ಟ’ ಮತ್ತು ‘ವಿಜ್ಞಾನಿಯಾದ ನಂತರವೂ ನಾನು ಅಮೆರಿಕಕ್ಕೆ ಹೋಗುವುದಿಲ್ಲ’ ಎಂಬ ಮೂರು ವಿಷಯಗಳನ್ನು ನೀಡಲಾಗಿತ್ತು. ಈ ಮೂರು ವಿಷಯಗಳ ಬಗ್ಗೆ ಮಕ್ಕಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು” ಎಂದಿದ್ದಾರೆ.

ಕಳೆದ ವರ್ಷ ನವೆಂಬರ್ 15 ರಂದು ಜಾಮ್‌ನಗರದಲ್ಲಿ ನಾಥೂರಾಂ ಗೋಡ್ಸೆ ಪ್ರತಿಮೆ ಸ್ಥಾಪನೆ ವಿಚಾರದಲ್ಲಿ ಸಾಕಷ್ಟು ವಿವಾದ ಉಂಟಾಗಿತ್ತು. ಜಾಮ್‌ನಗರದ ಹನುಮಾನ್ ಆಶ್ರಮದಲ್ಲಿ ಹಿಂದೂ ಸೇನೆ ಗೋಡ್ಸೆ ವಿಗ್ರಹವನ್ನು ಸ್ಥಾಪಿಸಿತ್ತು. ಸುದ್ದಿ ತಿಳಿದ ಕಾಂಗ್ರೆಸ್ ಮುಖಂಡರು, ನಗರಸಭೆ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಅಲ್ಲಿಗೆ ಆಗಮಿಸಿ ಪ್ರತಿಮೆ ಧ್ವಂಸಗೊಳಿಸಿದರು. ಬಳಿಕ ಉಭಯ ನಾಯಕರ ಮೇಲೆ ಪೊಲೀಸ್ ದೂರು ದಾಖಲಾಗಿತ್ತು.


ಇದನ್ನೂ ಓದಿ: ಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು ಗಾಂಧಿ ಭಾರತವನ್ನು, ಗೋಡ್ಸೆ ಭಾರತವನ್ನಾಗಿ ಪರಿವರ್ತನೆ ಮಾಡಲು ನಾಂದಿ ಹಾಡಿದ್ದಾರೆ. ಈ ದೇಶದ ಪ್ರಜ್ಞಾವಂತ ಜನರು, ಇದನ್ನು ತಡೆಯದಿದ್ದಲ್ಲಿ, ನಮ್ಮ ದೇಶಕ್ಕೆ ಕರಾಳ ಬವಿಶ್ಯ ಕಟ್ಟಿಟ್ಟ ಬುತ್ತಿ.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...