Homeಮುಖಪುಟಗುಜರಾತ್‌: ಲೈಂಗಿಕ ದೌರ್ಜನ್ಯ ವಿರೋಧಿಸಿದ ಶಾಲಾ ವಿದ್ಯಾರ್ಥಿನಿ ಹತ್ಯೆ, ಪ್ರಾಂಶುಪಾಲನ ಬಂಧನ

ಗುಜರಾತ್‌: ಲೈಂಗಿಕ ದೌರ್ಜನ್ಯ ವಿರೋಧಿಸಿದ ಶಾಲಾ ವಿದ್ಯಾರ್ಥಿನಿ ಹತ್ಯೆ, ಪ್ರಾಂಶುಪಾಲನ ಬಂಧನ

- Advertisement -
- Advertisement -

ಗುಜರಾತ್‌ನ ದಾಹೋದ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಹಿಂಬದಿಯಲ್ಲಿ ಆರು ವರ್ಷದ ವಿದ್ಯಾರ್ಥಿನಿಯ ಶವ ಪತ್ತೆಯಾದ ಮೂರು ದಿನಗಳ ನಂತರ, ಪೊಲೀಸರು ಭಾನುವಾರ ಶಾಲೆಯ ಪ್ರಾಂಶುಪಾಲರನ್ನು ಕೊಲೆ ಆರೋಪದ ಮೇಲೆ ಬಂಧಿಸಿದ್ದಾರೆ.

ಶಾಲೆಗೆ ಹೋಗುವ ದಾರಿಯಲ್ಲಿ 1ನೇ ತರಗತಿಯ ವಿದ್ಯಾರ್ಥಿನಿಯನ್ನು ಪ್ರಾಂಶುಪಾಲರು ತನ್ನ ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುವ ಪ್ರಯತ್ನ ನಡೆಸಿದ್ದು, ಬಾಲಕಿ ಅದನ್ನು ವಿರೋಧಿಸಿದಾಗ ಆಕೆಯನ್ನು ಥಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಗುರುವಾರ ಬೆಳಿಗ್ಗೆ ಬಾಲಕಿಯ ಗ್ರಾಮದಿಂದ ಶಾಲೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಮಗುವಿನ ತಾಯಿ ಬಾಲಕಿಯನ್ನು ಪ್ರಾಂಶುಪಾಳರ ಜತೆ ಕಳುಹಿಸಿದರು.

ವಿಚಾರಣೆ ಬಳಿಕ. ಮಗು ಗುರುವಾರ ಶಾಲೆಗೆ ಗೈರುಹಾಜರಾಗಿರುವುದು ಮತ್ತು ಶಾಲಾ ಆವರಣದಿಂದ ಹೊರಡುವ ಅವರ ಸಮಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಎದುರಿಸಿದ ನಂತರ ಪ್ರಾಂಶುಪಾಲರು ತಪ್ಪೊಪ್ಪಿಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಂಶುಪಾಲರು ಶಾಲಾ ಅವಧಿಯ ನಂತರ ಶವವನ್ನು ಶಾಲೆಯ ಹಿಂದೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ಇಡೀ ದಿನ ಸತ್ತ ಬಾಲಕಿಯ ಶವವನ್ನು ತಮ್ಮ ಕಾರಿನಲ್ಲಿ ಬಚ್ಚಿಟ್ಟಿದ್ದರು.

ಬಾಲಕಿಯ ಸಹಪಾಠಿಗಳು, ಶಿಕ್ಷಕರು ಮತ್ತು ಗ್ರಾಮಸ್ಥರ ಮಾಃಇತಿ ಸಂಗ್ರಹಿಸಿದ 10 ವಿವಿಧ ಅಧಿಕಾರಿಗಳ ತಂಡವು ವಿವರವಾದ ತನಿಖೆ ನಡೆಸಿದೆ. ಬಳಿಕ, ಈ ಪ್ರಗತಿಯು ಹೊರಹೊಮ್ಮಿದೆ ಎಂದು ದಾಹೋದ್ ಪೊಲೀಸ್ ವರಿಷ್ಠಾಧಿಕಾರಿ ರಾಜ್‌ದೀಪ್‌ಸಿನ್ಹ್ ಝಾಲಾ ಹೇಳಿದ್ದಾರೆ.

“ವಿವರವಾದ ತನಿಖೆಯ ನಂತರ, ಮಗು ಕೊನೆಯದಾಗಿ ಶಾಲೆಯ ಪ್ರಾಂಶುಪಾಲರೊಂದಿಗೆ ಕಾಣಿಸಿಕೊಂಡಿರುವುದು ಖಚಿತವಾಯಿತು. ಆಕೆಯ ತಾಯಿ ಆಕೆಯನ್ನು ಬೆಳಿಗ್ಗೆ 10.20 ರ ಸುಮಾರಿಗೆ ತಮ್ಮ ಹಳ್ಳಿಯಲ್ಲಿ ಪ್ರಾಂಶುಪಾಲರಿಗೆ ಒಪ್ಪಿಸಿದರು. ಅವರು ತಮ್ಮ ವಾಹನದಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದರು. ಇತರ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಹೇಳಿಕೆ ಬಳಿಕ ನಾವು ಅದನ್ನು ಖಚಿತಪಡಿಸಿಕೊಂಡಿದ್ದೇವೆ; ಮಗು ಗುರುವಾರ ಶಾಲೆಗೆ ಹೋಗಲಿಲ್ಲ ಎಂದು ಹೇಳಿದ್ದಾರೆ.

ಆರಂಭದಲ್ಲಿ ಮಗುವನ್ನು ಶಾಲೆಗೆ ಬಿಟ್ಟ ನಂತರ ಮಗು ಎಲ್ಲಿಗೋ ಹೋಗಿದೆ ಎಂದು ಪ್ರಿನ್ಸಿಪಾಲ್ ಹೇಳಿದ್ದರು. ಆದರೆ, ನಂತರ ತಪ್ಪೊಪ್ಪಿಕೊಂಡರು ಎಂದು ಝಾಲಾ ಹೇಳಿದರು.

ಪೊಲೀಸರ ಪ್ರಕಾರ, “ತನಗೆ ತರಗತಿ ಶಿಕ್ಷಕರಿಂದ ಸಂಜೆ ಫೋನ್ ಕರೆ ಬಂದಿತ್ತು, ಮಗು ಕಾಣೆಯಾಗಿದೆ ಎಂದು ಹೇಳುವ ಮೂಲಕ ಪ್ರಾಂಶುಪಾಲರು ತನಿಖಾ ಅಧಿಕಾರಿಗಳನ್ನು ದಾರಿತಪ್ಪಿಸಲು ಪ್ರಯತ್ನಿಸಿದರು. ಅವರು ಪೊಲೀಸರಿಗೆ ಈ ಬಗ್ಗೆ ಮನವರಿಕೆ ಮಾಡಲು ಸಾಧ್ಯವಾಗದ ಕಾರಣ, ಅವರ ಮೊಬೈಲ್ ಫೋನ್ ಸ್ಥಳದ ಬಗ್ಗೆ ತಾಂತ್ರಿಕ ತನಿಖೆಯನ್ನು ಪ್ರಾರಂಭಿಸಲಾಯಿತು ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

“ಅವರು ತಡವಾಗಿ ಶಾಲೆಯನ್ನು ತೊರೆದ ಸಮಯದಿಂದ, ಏನೋ ತಪ್ಪಾಗಿದೆ ಎಂಬ ಸುಳಿವು ನಮಗೆ ಸಿಕ್ಕಿತು. ವಿಚಾರಣೆಯ ಸಮಯದಲ್ಲಿ, ತನ್ನ ಕಾರಿನಲ್ಲಿ ಶಾಲೆಗೆ ಹೋಗುವ ದಾರಿಯಲ್ಲಿ ಬಲಿಪಶುವಿಗೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದ್ದಾಗಿ ಒಪ್ಪಿಕೊಂಡನು. ಆದರೆ, ಬಾಲಕಿ ಪ್ರತಿರೋಧ ವ್ಯಕ್ತಪಡಿಸಿ ಕಿರುಚಲು ಆರಂಭಿಸಿದ್ದಳು. ಹುಡುಗಿಯನ್ನು ಮೌನಗೊಳಿಸಲು, ಅವನು ಆಕೆಯನ್ನು ಹೊಡೆದನು” ಎಂದು ಝಾಲಾ ಹೇಳಿದರು.

“ಕೊಲೆ ಬಳಿಕ ಪ್ರಾಂಶುಪಾಲರು ಎಂದಿನಂತೆ ಶಾಲೆಯಲ್ಲಿ ತಮ್ಮ ದಿನವನ್ನು ಕಳೆದರು. ಇಡೀ ದಿನ ಹುಡುಗಿಯ ದೇಹವನ್ನು ಕಾರಿನಲ್ಲಿ ಇರಿಸಿದರು. ಶಾಲೆಯಿಂದ ಎಲ್ಲರೂ ತೆರಳಿದ ನಂತರ, ಆತ ತನ್ನ ಕಾರಿನಿಂದ ಶವವನ್ನು ಹೊರತೆಗೆದು ಹಿತ್ತಲಿನಲ್ಲಿ ಎಸೆದನು. ಅವನು ತನ್ನ ಕಾರಿನಿಂದ ಅವಳ ಚಪ್ಪಲಿಗಳನ್ನು ಹೊರತೆಗೆದು, ಅವುಗಳನ್ನು ತರಗತಿಯ ಹೊರಗೆ ಇಟ್ಟಿದ್ದಾನೆ. ಅವಳ ಬ್ಯಾಗ್ ಅನ್ನು ತರಗತಿಯಲ್ಲಿಯೇ ಇರಿಸಿದ್ದನು” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಾಂಶುಪಾಲರ ಮೊಬೈಲ್ ಫೋನ್‌ನ ತಾಂತ್ರಿಕ ತನಿಖೆ ನಡೆಸಲಾಗಿದ್ದು, ಅವರು ಗುರುವಾರ ಬೆಳಿಗ್ಗೆ ಶಾಲೆಗೆ ತಲುಪಲು “ಸಾಮಾನ್ಯಕ್ಕಿಂತ ಹೆಚ್ಚು ಸಮಯ” ತೆಗೆದುಕೊಂಡಿದ್ದಾರೆ ಎಂದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಸಹಪಾಠಿಗಳು ಹಾಗೂ ಶಿಕ್ಷಕರಿಂದ ಪೊಲೀಸರು ಆಕೆ ಶಾಲೆಗೆ ಬಂದಿಲ್ಲ, ಶಾಲಾ ಸಮಯದಲ್ಲಿ ಹಿತ್ತಲಲ್ಲಿ ಆಕೆಯ ಶವ ಕಾಣಿಸಿಲ್ಲ ಎಂದು ತಿಳಿದು ಬಂದಿದೆ. “ಇದಲ್ಲದೆ, ಬಲಿಪಶುವಿನ ಪಾದರಕ್ಷೆಗಳು ಮತ್ತು ಬ್ಯಾಗ್ ಸಹ ದಿನವಿಡೀ ತರಗತಿಯಲ್ಲಿ ಇರಲಿಲ್ಲ ಎಂದು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹೇಳಿದರು’ ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ; ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...