Homeಮುಖಪುಟಗುಜರಾತ್‌: ಲೈಂಗಿಕ ದೌರ್ಜನ್ಯ ವಿರೋಧಿಸಿದ ಶಾಲಾ ವಿದ್ಯಾರ್ಥಿನಿ ಹತ್ಯೆ, ಪ್ರಾಂಶುಪಾಲನ ಬಂಧನ

ಗುಜರಾತ್‌: ಲೈಂಗಿಕ ದೌರ್ಜನ್ಯ ವಿರೋಧಿಸಿದ ಶಾಲಾ ವಿದ್ಯಾರ್ಥಿನಿ ಹತ್ಯೆ, ಪ್ರಾಂಶುಪಾಲನ ಬಂಧನ

- Advertisement -
- Advertisement -

ಗುಜರಾತ್‌ನ ದಾಹೋದ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಹಿಂಬದಿಯಲ್ಲಿ ಆರು ವರ್ಷದ ವಿದ್ಯಾರ್ಥಿನಿಯ ಶವ ಪತ್ತೆಯಾದ ಮೂರು ದಿನಗಳ ನಂತರ, ಪೊಲೀಸರು ಭಾನುವಾರ ಶಾಲೆಯ ಪ್ರಾಂಶುಪಾಲರನ್ನು ಕೊಲೆ ಆರೋಪದ ಮೇಲೆ ಬಂಧಿಸಿದ್ದಾರೆ.

ಶಾಲೆಗೆ ಹೋಗುವ ದಾರಿಯಲ್ಲಿ 1ನೇ ತರಗತಿಯ ವಿದ್ಯಾರ್ಥಿನಿಯನ್ನು ಪ್ರಾಂಶುಪಾಲರು ತನ್ನ ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುವ ಪ್ರಯತ್ನ ನಡೆಸಿದ್ದು, ಬಾಲಕಿ ಅದನ್ನು ವಿರೋಧಿಸಿದಾಗ ಆಕೆಯನ್ನು ಥಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಗುರುವಾರ ಬೆಳಿಗ್ಗೆ ಬಾಲಕಿಯ ಗ್ರಾಮದಿಂದ ಶಾಲೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಮಗುವಿನ ತಾಯಿ ಬಾಲಕಿಯನ್ನು ಪ್ರಾಂಶುಪಾಳರ ಜತೆ ಕಳುಹಿಸಿದರು.

ವಿಚಾರಣೆ ಬಳಿಕ. ಮಗು ಗುರುವಾರ ಶಾಲೆಗೆ ಗೈರುಹಾಜರಾಗಿರುವುದು ಮತ್ತು ಶಾಲಾ ಆವರಣದಿಂದ ಹೊರಡುವ ಅವರ ಸಮಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಎದುರಿಸಿದ ನಂತರ ಪ್ರಾಂಶುಪಾಲರು ತಪ್ಪೊಪ್ಪಿಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಂಶುಪಾಲರು ಶಾಲಾ ಅವಧಿಯ ನಂತರ ಶವವನ್ನು ಶಾಲೆಯ ಹಿಂದೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ಇಡೀ ದಿನ ಸತ್ತ ಬಾಲಕಿಯ ಶವವನ್ನು ತಮ್ಮ ಕಾರಿನಲ್ಲಿ ಬಚ್ಚಿಟ್ಟಿದ್ದರು.

ಬಾಲಕಿಯ ಸಹಪಾಠಿಗಳು, ಶಿಕ್ಷಕರು ಮತ್ತು ಗ್ರಾಮಸ್ಥರ ಮಾಃಇತಿ ಸಂಗ್ರಹಿಸಿದ 10 ವಿವಿಧ ಅಧಿಕಾರಿಗಳ ತಂಡವು ವಿವರವಾದ ತನಿಖೆ ನಡೆಸಿದೆ. ಬಳಿಕ, ಈ ಪ್ರಗತಿಯು ಹೊರಹೊಮ್ಮಿದೆ ಎಂದು ದಾಹೋದ್ ಪೊಲೀಸ್ ವರಿಷ್ಠಾಧಿಕಾರಿ ರಾಜ್‌ದೀಪ್‌ಸಿನ್ಹ್ ಝಾಲಾ ಹೇಳಿದ್ದಾರೆ.

“ವಿವರವಾದ ತನಿಖೆಯ ನಂತರ, ಮಗು ಕೊನೆಯದಾಗಿ ಶಾಲೆಯ ಪ್ರಾಂಶುಪಾಲರೊಂದಿಗೆ ಕಾಣಿಸಿಕೊಂಡಿರುವುದು ಖಚಿತವಾಯಿತು. ಆಕೆಯ ತಾಯಿ ಆಕೆಯನ್ನು ಬೆಳಿಗ್ಗೆ 10.20 ರ ಸುಮಾರಿಗೆ ತಮ್ಮ ಹಳ್ಳಿಯಲ್ಲಿ ಪ್ರಾಂಶುಪಾಲರಿಗೆ ಒಪ್ಪಿಸಿದರು. ಅವರು ತಮ್ಮ ವಾಹನದಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದರು. ಇತರ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಹೇಳಿಕೆ ಬಳಿಕ ನಾವು ಅದನ್ನು ಖಚಿತಪಡಿಸಿಕೊಂಡಿದ್ದೇವೆ; ಮಗು ಗುರುವಾರ ಶಾಲೆಗೆ ಹೋಗಲಿಲ್ಲ ಎಂದು ಹೇಳಿದ್ದಾರೆ.

ಆರಂಭದಲ್ಲಿ ಮಗುವನ್ನು ಶಾಲೆಗೆ ಬಿಟ್ಟ ನಂತರ ಮಗು ಎಲ್ಲಿಗೋ ಹೋಗಿದೆ ಎಂದು ಪ್ರಿನ್ಸಿಪಾಲ್ ಹೇಳಿದ್ದರು. ಆದರೆ, ನಂತರ ತಪ್ಪೊಪ್ಪಿಕೊಂಡರು ಎಂದು ಝಾಲಾ ಹೇಳಿದರು.

ಪೊಲೀಸರ ಪ್ರಕಾರ, “ತನಗೆ ತರಗತಿ ಶಿಕ್ಷಕರಿಂದ ಸಂಜೆ ಫೋನ್ ಕರೆ ಬಂದಿತ್ತು, ಮಗು ಕಾಣೆಯಾಗಿದೆ ಎಂದು ಹೇಳುವ ಮೂಲಕ ಪ್ರಾಂಶುಪಾಲರು ತನಿಖಾ ಅಧಿಕಾರಿಗಳನ್ನು ದಾರಿತಪ್ಪಿಸಲು ಪ್ರಯತ್ನಿಸಿದರು. ಅವರು ಪೊಲೀಸರಿಗೆ ಈ ಬಗ್ಗೆ ಮನವರಿಕೆ ಮಾಡಲು ಸಾಧ್ಯವಾಗದ ಕಾರಣ, ಅವರ ಮೊಬೈಲ್ ಫೋನ್ ಸ್ಥಳದ ಬಗ್ಗೆ ತಾಂತ್ರಿಕ ತನಿಖೆಯನ್ನು ಪ್ರಾರಂಭಿಸಲಾಯಿತು ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

“ಅವರು ತಡವಾಗಿ ಶಾಲೆಯನ್ನು ತೊರೆದ ಸಮಯದಿಂದ, ಏನೋ ತಪ್ಪಾಗಿದೆ ಎಂಬ ಸುಳಿವು ನಮಗೆ ಸಿಕ್ಕಿತು. ವಿಚಾರಣೆಯ ಸಮಯದಲ್ಲಿ, ತನ್ನ ಕಾರಿನಲ್ಲಿ ಶಾಲೆಗೆ ಹೋಗುವ ದಾರಿಯಲ್ಲಿ ಬಲಿಪಶುವಿಗೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದ್ದಾಗಿ ಒಪ್ಪಿಕೊಂಡನು. ಆದರೆ, ಬಾಲಕಿ ಪ್ರತಿರೋಧ ವ್ಯಕ್ತಪಡಿಸಿ ಕಿರುಚಲು ಆರಂಭಿಸಿದ್ದಳು. ಹುಡುಗಿಯನ್ನು ಮೌನಗೊಳಿಸಲು, ಅವನು ಆಕೆಯನ್ನು ಹೊಡೆದನು” ಎಂದು ಝಾಲಾ ಹೇಳಿದರು.

“ಕೊಲೆ ಬಳಿಕ ಪ್ರಾಂಶುಪಾಲರು ಎಂದಿನಂತೆ ಶಾಲೆಯಲ್ಲಿ ತಮ್ಮ ದಿನವನ್ನು ಕಳೆದರು. ಇಡೀ ದಿನ ಹುಡುಗಿಯ ದೇಹವನ್ನು ಕಾರಿನಲ್ಲಿ ಇರಿಸಿದರು. ಶಾಲೆಯಿಂದ ಎಲ್ಲರೂ ತೆರಳಿದ ನಂತರ, ಆತ ತನ್ನ ಕಾರಿನಿಂದ ಶವವನ್ನು ಹೊರತೆಗೆದು ಹಿತ್ತಲಿನಲ್ಲಿ ಎಸೆದನು. ಅವನು ತನ್ನ ಕಾರಿನಿಂದ ಅವಳ ಚಪ್ಪಲಿಗಳನ್ನು ಹೊರತೆಗೆದು, ಅವುಗಳನ್ನು ತರಗತಿಯ ಹೊರಗೆ ಇಟ್ಟಿದ್ದಾನೆ. ಅವಳ ಬ್ಯಾಗ್ ಅನ್ನು ತರಗತಿಯಲ್ಲಿಯೇ ಇರಿಸಿದ್ದನು” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಾಂಶುಪಾಲರ ಮೊಬೈಲ್ ಫೋನ್‌ನ ತಾಂತ್ರಿಕ ತನಿಖೆ ನಡೆಸಲಾಗಿದ್ದು, ಅವರು ಗುರುವಾರ ಬೆಳಿಗ್ಗೆ ಶಾಲೆಗೆ ತಲುಪಲು “ಸಾಮಾನ್ಯಕ್ಕಿಂತ ಹೆಚ್ಚು ಸಮಯ” ತೆಗೆದುಕೊಂಡಿದ್ದಾರೆ ಎಂದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಸಹಪಾಠಿಗಳು ಹಾಗೂ ಶಿಕ್ಷಕರಿಂದ ಪೊಲೀಸರು ಆಕೆ ಶಾಲೆಗೆ ಬಂದಿಲ್ಲ, ಶಾಲಾ ಸಮಯದಲ್ಲಿ ಹಿತ್ತಲಲ್ಲಿ ಆಕೆಯ ಶವ ಕಾಣಿಸಿಲ್ಲ ಎಂದು ತಿಳಿದು ಬಂದಿದೆ. “ಇದಲ್ಲದೆ, ಬಲಿಪಶುವಿನ ಪಾದರಕ್ಷೆಗಳು ಮತ್ತು ಬ್ಯಾಗ್ ಸಹ ದಿನವಿಡೀ ತರಗತಿಯಲ್ಲಿ ಇರಲಿಲ್ಲ ಎಂದು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹೇಳಿದರು’ ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ; ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...